Homeಕರ್ನಾಟಕವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು...!

ವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು…!

- Advertisement -
|  ಶಿವಾ |
ನೀರು, ನೆರಳಿಲ್ಲದ ಬರದ ಜಿಲ್ಲೆ ವಿಜಯಪುರದಲ್ಲಿ ರಾಜಕೀಯ ನಿಗೂಢ ಬೇರು ತುಂಬಾ ಆಳವಾದದ್ದು. ಇಲ್ಲಿ ಯಾರ ‘ಕೈ’ ಯಾರ ಜೇಬೊಳಗೋ ?, ಯಾರ ಜೇಬು ಯಾರ ಕೈಯಲ್ಲೋ ? ಎನ್ನುವುದು ಜನ ಸಾಮಾನ್ಯರ ತಲೆಗೆ ಹತ್ತದ ಮಾತು. ಇಲ್ಲಿ ಏನಿದ್ದರೂ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು !
ಈ ಹಿಂದೆ ಎರಡು ಬಾರಿಯ ವಿಜಯಪುರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ವಿರುದ್ಧ ಬಂಜಾರಾ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ರಾಠೋಡ ಸ್ಪರ್ಧೆ ಮಾಡಿ ಸೋಲು ಕಂಡಿದ್ದಾರೆ. ಆದರೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟಿದ್ದರಿಂದ, ಜೆಡಿಎಸ್ ಅಭ್ಯರ್ಥಿಯಾಗಿ ನಾಗಠಾಣ ಮೀಸಲು ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಅವರ ಧರ್ಮಪತ್ನಿ ಸುನೀತಾ ಚವ್ಹಾಣ ಸ್ಪರ್ಧಿಸಿದ್ದರೆ. ಬಿಜೆಪಿಯಿಂದ ಮತ್ತೆ ರಮೇಶ ಜಿಗಜಿಣಗಿ ಕಣಕ್ಕಿಳಿದಿದ್ದರೆ, ಬಿಎಸ್‍ಪಿಯಿಂದ ಯುವ ಹೋರಾಟಗಾರ ಶ್ರೀನಿವಾಸ ಪೂಜಾರಿ ಆಯ್ಕೆ ಬಯಸಿದ್ದಾರೆ.
ವಿಜಯಪುರ ರಾಜಕಾರಣದ ಚಿತ್ರಣವೇ ಬೇರೆ. ಇಲ್ಲಿ ಪಕ್ಷ, ವ್ಯಕ್ತಿಗಳಿಗಿಂತಲೂ ರಾಜಕಾರಣಿಗಳು ತಮ್ಮ ಅನುಕೂಲ ಸಿಂದುತ್ವದಡಿಯಲ್ಲಿ ರಾಜಕೀಯ ದಾಳ ಉರುಳಿಸುತ್ತಾರೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಹಿಂದಿನ ಫಲಿತಾಂಶಗಳು ಕೂಡ ಅದನ್ನೇ ಸೂಚಿಸುತ್ತವೆ.
ಈ ಹಿಂದಿನ ಲೋಕಸಭೆ ಚುನಾವಣೆ ವೇಳೆ, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರದ ಪೈಕಿ 7 ಮತಕ್ಷೇತ್ರದಲ್ಲೂ ಕಾಂಗ್ರೆಸ್ ನಾಯಕರೆ ವಿಧಾನಸಭೆ ಸದಸ್ಯರಾಗಿದ್ದರು. ಇಂತಹ ಸಂದರ್ಭ ತಮ್ಮದೇ ಪಕ್ಷದ ಪ್ರಕಾಶ ರಾಠೋಡ ಅವರನ್ನು ಗೆಲ್ಲಿಸಲಾಗಲಿಲ್ಲ. ಎರಡು ಬಾರಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆಯ್ಕೆಯಾಗಿರುವುದಕ್ಕೆ ಕಾಣದ ‘ಕೈ’ಗಳೇ ಕೆಲಸ ಮಾಡಿವೆ ಎನ್ನುವ ಆರೋಪಗಳು ಇಂದಿಗೂ ಕೇಳಿ ಬರುತ್ತಿವೆ. ಈ ಬಾರಿಯೂ ಮೂರು ಬಿಜೆಪಿ ಎಂಎಲ್‍ಎಗಳನ್ನು ಹೊಂದಿರುವ ಬಿಜೆಪಿ ಅದೇ ಜಯದ ನಿರೀಕ್ಷೆಯಲ್ಲಿದೆ.
ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಈ ಬಾರಿ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಫೈಟ್ ಕೊಡಬಹದು ಎನ್ನುತ್ತಿದ್ದಾರೆ. ಕಳೆದ ಬಾರಿಯ ಮೋದಿ ಅಲೆ ಈ ಬಾರಿ ಇಲ್ಲದಿರುವುದರಿಂದಲೂ ಇವರ ಪಾಲಿಗೆ ಪ್ಲಸ್ ಪಾಯಿಂಟ್. ಬಿಎಸ್‍ಪಿಯ ಶ್ರೀನಿವಾಸ ಪೂಜಾರಿ ಪ್ರಕಾರ ಮೋದಿ ಅಲೆ ಇಲ್ಲ, ಜೆಡಿಎಸ್ ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿಯೇ ಇಲ್ಲ ಹಾಗಾಗಿ ಇದು ನಮಗೆ ವರದಾನವಾಗಲಿದೆ ಎಂದಿದ್ದಾರೆ.
ಇಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಎನ್ನುವ ಪಕ್ಷಗಳು ಕೇವಲ ನೆಪಕ್ಕೆ ಮಾತ್ರ. ಆದರೆ ಅಸಲಿಯತ್ತು, ಒಳ ರಾಜಕಾರಣದ ಹೂರಣವೇ ಇಲ್ಲಿ ಕೆಲಸ ಮಾಡುವುದು ಎನ್ನುವ ಮಾತೂ ಕೇಳಿ ಬರುತ್ತಿದೆ.
ಕಾಂಗ್ರೆಸ್ ಪಕ್ಷದ ಗೃಹ ಸಚಿವ ಎಂ.ಬಿ. ಪಾಟೀಲ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸಚಿವ ಶಿವಾನಂದ ಪಾಟೀಲ, ನಿಗಮ ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹಾಗೂ ಜೆಡಿಎಸ್‍ನ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮತ್ತು ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ದೇವಾನಂದ ಚವ್ಹಾಣ ಅವರು ರಾಜ್ಯ ಸರ್ಕಾರದ ಪ್ರಮುಖ ಖಾತೆ ಹೊಂದಿದವರು. ಇದರಿಂದ ಜಿಲ್ಲೆಯಲ್ಲಿನ ಬಿಜೆಪಿ ಬಲಕ್ಕೆ ಹೋಲಿಸಿದರೆ, ಕಾಂಗ್ರೆಸ್- ಜೆಡಿಎಸ್‍ನ ಬಲ ಹೆಚ್ಚಿಗಿರುವುದು ನಿಚ್ಚಳವಾಗಿ ಕಂಡು ಬರುತ್ತದೆ. ಆದರೆ ಮೇಲ್ನೋಟಕ್ಕೆ ಮೂರು ಪಕ್ಷದ ಮುಖಂಡರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅಂತಿಮ ಹಂತದಲ್ಲಿ ಇಲ್ಲಿನ ಮತದಾರರ ನಿಲುವು, ನಿಗೂಢ ನಡೆ ಯಾರ ಕಡೆಗೆ ಒಲಿಯಲಿದೆ ಎನ್ನುವುದು ಸದ್ಯ ಹೇಳಲಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...