Homeಕರ್ನಾಟಕವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು...!

ವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು…!

- Advertisement -
|  ಶಿವಾ |
ನೀರು, ನೆರಳಿಲ್ಲದ ಬರದ ಜಿಲ್ಲೆ ವಿಜಯಪುರದಲ್ಲಿ ರಾಜಕೀಯ ನಿಗೂಢ ಬೇರು ತುಂಬಾ ಆಳವಾದದ್ದು. ಇಲ್ಲಿ ಯಾರ ‘ಕೈ’ ಯಾರ ಜೇಬೊಳಗೋ ?, ಯಾರ ಜೇಬು ಯಾರ ಕೈಯಲ್ಲೋ ? ಎನ್ನುವುದು ಜನ ಸಾಮಾನ್ಯರ ತಲೆಗೆ ಹತ್ತದ ಮಾತು. ಇಲ್ಲಿ ಏನಿದ್ದರೂ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು !
ಈ ಹಿಂದೆ ಎರಡು ಬಾರಿಯ ವಿಜಯಪುರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ವಿರುದ್ಧ ಬಂಜಾರಾ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ರಾಠೋಡ ಸ್ಪರ್ಧೆ ಮಾಡಿ ಸೋಲು ಕಂಡಿದ್ದಾರೆ. ಆದರೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟಿದ್ದರಿಂದ, ಜೆಡಿಎಸ್ ಅಭ್ಯರ್ಥಿಯಾಗಿ ನಾಗಠಾಣ ಮೀಸಲು ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಅವರ ಧರ್ಮಪತ್ನಿ ಸುನೀತಾ ಚವ್ಹಾಣ ಸ್ಪರ್ಧಿಸಿದ್ದರೆ. ಬಿಜೆಪಿಯಿಂದ ಮತ್ತೆ ರಮೇಶ ಜಿಗಜಿಣಗಿ ಕಣಕ್ಕಿಳಿದಿದ್ದರೆ, ಬಿಎಸ್‍ಪಿಯಿಂದ ಯುವ ಹೋರಾಟಗಾರ ಶ್ರೀನಿವಾಸ ಪೂಜಾರಿ ಆಯ್ಕೆ ಬಯಸಿದ್ದಾರೆ.
ವಿಜಯಪುರ ರಾಜಕಾರಣದ ಚಿತ್ರಣವೇ ಬೇರೆ. ಇಲ್ಲಿ ಪಕ್ಷ, ವ್ಯಕ್ತಿಗಳಿಗಿಂತಲೂ ರಾಜಕಾರಣಿಗಳು ತಮ್ಮ ಅನುಕೂಲ ಸಿಂದುತ್ವದಡಿಯಲ್ಲಿ ರಾಜಕೀಯ ದಾಳ ಉರುಳಿಸುತ್ತಾರೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಹಿಂದಿನ ಫಲಿತಾಂಶಗಳು ಕೂಡ ಅದನ್ನೇ ಸೂಚಿಸುತ್ತವೆ.
ಈ ಹಿಂದಿನ ಲೋಕಸಭೆ ಚುನಾವಣೆ ವೇಳೆ, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರದ ಪೈಕಿ 7 ಮತಕ್ಷೇತ್ರದಲ್ಲೂ ಕಾಂಗ್ರೆಸ್ ನಾಯಕರೆ ವಿಧಾನಸಭೆ ಸದಸ್ಯರಾಗಿದ್ದರು. ಇಂತಹ ಸಂದರ್ಭ ತಮ್ಮದೇ ಪಕ್ಷದ ಪ್ರಕಾಶ ರಾಠೋಡ ಅವರನ್ನು ಗೆಲ್ಲಿಸಲಾಗಲಿಲ್ಲ. ಎರಡು ಬಾರಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆಯ್ಕೆಯಾಗಿರುವುದಕ್ಕೆ ಕಾಣದ ‘ಕೈ’ಗಳೇ ಕೆಲಸ ಮಾಡಿವೆ ಎನ್ನುವ ಆರೋಪಗಳು ಇಂದಿಗೂ ಕೇಳಿ ಬರುತ್ತಿವೆ. ಈ ಬಾರಿಯೂ ಮೂರು ಬಿಜೆಪಿ ಎಂಎಲ್‍ಎಗಳನ್ನು ಹೊಂದಿರುವ ಬಿಜೆಪಿ ಅದೇ ಜಯದ ನಿರೀಕ್ಷೆಯಲ್ಲಿದೆ.
ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಈ ಬಾರಿ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಫೈಟ್ ಕೊಡಬಹದು ಎನ್ನುತ್ತಿದ್ದಾರೆ. ಕಳೆದ ಬಾರಿಯ ಮೋದಿ ಅಲೆ ಈ ಬಾರಿ ಇಲ್ಲದಿರುವುದರಿಂದಲೂ ಇವರ ಪಾಲಿಗೆ ಪ್ಲಸ್ ಪಾಯಿಂಟ್. ಬಿಎಸ್‍ಪಿಯ ಶ್ರೀನಿವಾಸ ಪೂಜಾರಿ ಪ್ರಕಾರ ಮೋದಿ ಅಲೆ ಇಲ್ಲ, ಜೆಡಿಎಸ್ ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿಯೇ ಇಲ್ಲ ಹಾಗಾಗಿ ಇದು ನಮಗೆ ವರದಾನವಾಗಲಿದೆ ಎಂದಿದ್ದಾರೆ.
ಇಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಎನ್ನುವ ಪಕ್ಷಗಳು ಕೇವಲ ನೆಪಕ್ಕೆ ಮಾತ್ರ. ಆದರೆ ಅಸಲಿಯತ್ತು, ಒಳ ರಾಜಕಾರಣದ ಹೂರಣವೇ ಇಲ್ಲಿ ಕೆಲಸ ಮಾಡುವುದು ಎನ್ನುವ ಮಾತೂ ಕೇಳಿ ಬರುತ್ತಿದೆ.
ಕಾಂಗ್ರೆಸ್ ಪಕ್ಷದ ಗೃಹ ಸಚಿವ ಎಂ.ಬಿ. ಪಾಟೀಲ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸಚಿವ ಶಿವಾನಂದ ಪಾಟೀಲ, ನಿಗಮ ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹಾಗೂ ಜೆಡಿಎಸ್‍ನ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮತ್ತು ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ದೇವಾನಂದ ಚವ್ಹಾಣ ಅವರು ರಾಜ್ಯ ಸರ್ಕಾರದ ಪ್ರಮುಖ ಖಾತೆ ಹೊಂದಿದವರು. ಇದರಿಂದ ಜಿಲ್ಲೆಯಲ್ಲಿನ ಬಿಜೆಪಿ ಬಲಕ್ಕೆ ಹೋಲಿಸಿದರೆ, ಕಾಂಗ್ರೆಸ್- ಜೆಡಿಎಸ್‍ನ ಬಲ ಹೆಚ್ಚಿಗಿರುವುದು ನಿಚ್ಚಳವಾಗಿ ಕಂಡು ಬರುತ್ತದೆ. ಆದರೆ ಮೇಲ್ನೋಟಕ್ಕೆ ಮೂರು ಪಕ್ಷದ ಮುಖಂಡರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅಂತಿಮ ಹಂತದಲ್ಲಿ ಇಲ್ಲಿನ ಮತದಾರರ ನಿಲುವು, ನಿಗೂಢ ನಡೆ ಯಾರ ಕಡೆಗೆ ಒಲಿಯಲಿದೆ ಎನ್ನುವುದು ಸದ್ಯ ಹೇಳಲಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...