Homeಕರ್ನಾಟಕವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು...!

ವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು…!

- Advertisement -
|  ಶಿವಾ |
ನೀರು, ನೆರಳಿಲ್ಲದ ಬರದ ಜಿಲ್ಲೆ ವಿಜಯಪುರದಲ್ಲಿ ರಾಜಕೀಯ ನಿಗೂಢ ಬೇರು ತುಂಬಾ ಆಳವಾದದ್ದು. ಇಲ್ಲಿ ಯಾರ ‘ಕೈ’ ಯಾರ ಜೇಬೊಳಗೋ ?, ಯಾರ ಜೇಬು ಯಾರ ಕೈಯಲ್ಲೋ ? ಎನ್ನುವುದು ಜನ ಸಾಮಾನ್ಯರ ತಲೆಗೆ ಹತ್ತದ ಮಾತು. ಇಲ್ಲಿ ಏನಿದ್ದರೂ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು !
ಈ ಹಿಂದೆ ಎರಡು ಬಾರಿಯ ವಿಜಯಪುರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ವಿರುದ್ಧ ಬಂಜಾರಾ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ರಾಠೋಡ ಸ್ಪರ್ಧೆ ಮಾಡಿ ಸೋಲು ಕಂಡಿದ್ದಾರೆ. ಆದರೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟಿದ್ದರಿಂದ, ಜೆಡಿಎಸ್ ಅಭ್ಯರ್ಥಿಯಾಗಿ ನಾಗಠಾಣ ಮೀಸಲು ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಅವರ ಧರ್ಮಪತ್ನಿ ಸುನೀತಾ ಚವ್ಹಾಣ ಸ್ಪರ್ಧಿಸಿದ್ದರೆ. ಬಿಜೆಪಿಯಿಂದ ಮತ್ತೆ ರಮೇಶ ಜಿಗಜಿಣಗಿ ಕಣಕ್ಕಿಳಿದಿದ್ದರೆ, ಬಿಎಸ್‍ಪಿಯಿಂದ ಯುವ ಹೋರಾಟಗಾರ ಶ್ರೀನಿವಾಸ ಪೂಜಾರಿ ಆಯ್ಕೆ ಬಯಸಿದ್ದಾರೆ.
ವಿಜಯಪುರ ರಾಜಕಾರಣದ ಚಿತ್ರಣವೇ ಬೇರೆ. ಇಲ್ಲಿ ಪಕ್ಷ, ವ್ಯಕ್ತಿಗಳಿಗಿಂತಲೂ ರಾಜಕಾರಣಿಗಳು ತಮ್ಮ ಅನುಕೂಲ ಸಿಂದುತ್ವದಡಿಯಲ್ಲಿ ರಾಜಕೀಯ ದಾಳ ಉರುಳಿಸುತ್ತಾರೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಹಿಂದಿನ ಫಲಿತಾಂಶಗಳು ಕೂಡ ಅದನ್ನೇ ಸೂಚಿಸುತ್ತವೆ.
ಈ ಹಿಂದಿನ ಲೋಕಸಭೆ ಚುನಾವಣೆ ವೇಳೆ, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರದ ಪೈಕಿ 7 ಮತಕ್ಷೇತ್ರದಲ್ಲೂ ಕಾಂಗ್ರೆಸ್ ನಾಯಕರೆ ವಿಧಾನಸಭೆ ಸದಸ್ಯರಾಗಿದ್ದರು. ಇಂತಹ ಸಂದರ್ಭ ತಮ್ಮದೇ ಪಕ್ಷದ ಪ್ರಕಾಶ ರಾಠೋಡ ಅವರನ್ನು ಗೆಲ್ಲಿಸಲಾಗಲಿಲ್ಲ. ಎರಡು ಬಾರಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆಯ್ಕೆಯಾಗಿರುವುದಕ್ಕೆ ಕಾಣದ ‘ಕೈ’ಗಳೇ ಕೆಲಸ ಮಾಡಿವೆ ಎನ್ನುವ ಆರೋಪಗಳು ಇಂದಿಗೂ ಕೇಳಿ ಬರುತ್ತಿವೆ. ಈ ಬಾರಿಯೂ ಮೂರು ಬಿಜೆಪಿ ಎಂಎಲ್‍ಎಗಳನ್ನು ಹೊಂದಿರುವ ಬಿಜೆಪಿ ಅದೇ ಜಯದ ನಿರೀಕ್ಷೆಯಲ್ಲಿದೆ.
ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಈ ಬಾರಿ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಫೈಟ್ ಕೊಡಬಹದು ಎನ್ನುತ್ತಿದ್ದಾರೆ. ಕಳೆದ ಬಾರಿಯ ಮೋದಿ ಅಲೆ ಈ ಬಾರಿ ಇಲ್ಲದಿರುವುದರಿಂದಲೂ ಇವರ ಪಾಲಿಗೆ ಪ್ಲಸ್ ಪಾಯಿಂಟ್. ಬಿಎಸ್‍ಪಿಯ ಶ್ರೀನಿವಾಸ ಪೂಜಾರಿ ಪ್ರಕಾರ ಮೋದಿ ಅಲೆ ಇಲ್ಲ, ಜೆಡಿಎಸ್ ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿಯೇ ಇಲ್ಲ ಹಾಗಾಗಿ ಇದು ನಮಗೆ ವರದಾನವಾಗಲಿದೆ ಎಂದಿದ್ದಾರೆ.
ಇಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಎನ್ನುವ ಪಕ್ಷಗಳು ಕೇವಲ ನೆಪಕ್ಕೆ ಮಾತ್ರ. ಆದರೆ ಅಸಲಿಯತ್ತು, ಒಳ ರಾಜಕಾರಣದ ಹೂರಣವೇ ಇಲ್ಲಿ ಕೆಲಸ ಮಾಡುವುದು ಎನ್ನುವ ಮಾತೂ ಕೇಳಿ ಬರುತ್ತಿದೆ.
ಕಾಂಗ್ರೆಸ್ ಪಕ್ಷದ ಗೃಹ ಸಚಿವ ಎಂ.ಬಿ. ಪಾಟೀಲ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸಚಿವ ಶಿವಾನಂದ ಪಾಟೀಲ, ನಿಗಮ ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹಾಗೂ ಜೆಡಿಎಸ್‍ನ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮತ್ತು ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ದೇವಾನಂದ ಚವ್ಹಾಣ ಅವರು ರಾಜ್ಯ ಸರ್ಕಾರದ ಪ್ರಮುಖ ಖಾತೆ ಹೊಂದಿದವರು. ಇದರಿಂದ ಜಿಲ್ಲೆಯಲ್ಲಿನ ಬಿಜೆಪಿ ಬಲಕ್ಕೆ ಹೋಲಿಸಿದರೆ, ಕಾಂಗ್ರೆಸ್- ಜೆಡಿಎಸ್‍ನ ಬಲ ಹೆಚ್ಚಿಗಿರುವುದು ನಿಚ್ಚಳವಾಗಿ ಕಂಡು ಬರುತ್ತದೆ. ಆದರೆ ಮೇಲ್ನೋಟಕ್ಕೆ ಮೂರು ಪಕ್ಷದ ಮುಖಂಡರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅಂತಿಮ ಹಂತದಲ್ಲಿ ಇಲ್ಲಿನ ಮತದಾರರ ನಿಲುವು, ನಿಗೂಢ ನಡೆ ಯಾರ ಕಡೆಗೆ ಒಲಿಯಲಿದೆ ಎನ್ನುವುದು ಸದ್ಯ ಹೇಳಲಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...