Homeಕರ್ನಾಟಕವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು...!

ವಿಜಯಪುರ ಚುನಾವಣೆಯಲ್ಲಿ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು…!

- Advertisement -
|  ಶಿವಾ |
ನೀರು, ನೆರಳಿಲ್ಲದ ಬರದ ಜಿಲ್ಲೆ ವಿಜಯಪುರದಲ್ಲಿ ರಾಜಕೀಯ ನಿಗೂಢ ಬೇರು ತುಂಬಾ ಆಳವಾದದ್ದು. ಇಲ್ಲಿ ಯಾರ ‘ಕೈ’ ಯಾರ ಜೇಬೊಳಗೋ ?, ಯಾರ ಜೇಬು ಯಾರ ಕೈಯಲ್ಲೋ ? ಎನ್ನುವುದು ಜನ ಸಾಮಾನ್ಯರ ತಲೆಗೆ ಹತ್ತದ ಮಾತು. ಇಲ್ಲಿ ಏನಿದ್ದರೂ ಒಳ ರಾಜಕಾರಣದ್ದೇ ಗರ್ದಿಗಮ್ಮತ್ತು !
ಈ ಹಿಂದೆ ಎರಡು ಬಾರಿಯ ವಿಜಯಪುರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ವಿರುದ್ಧ ಬಂಜಾರಾ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ರಾಠೋಡ ಸ್ಪರ್ಧೆ ಮಾಡಿ ಸೋಲು ಕಂಡಿದ್ದಾರೆ. ಆದರೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟಿದ್ದರಿಂದ, ಜೆಡಿಎಸ್ ಅಭ್ಯರ್ಥಿಯಾಗಿ ನಾಗಠಾಣ ಮೀಸಲು ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಅವರ ಧರ್ಮಪತ್ನಿ ಸುನೀತಾ ಚವ್ಹಾಣ ಸ್ಪರ್ಧಿಸಿದ್ದರೆ. ಬಿಜೆಪಿಯಿಂದ ಮತ್ತೆ ರಮೇಶ ಜಿಗಜಿಣಗಿ ಕಣಕ್ಕಿಳಿದಿದ್ದರೆ, ಬಿಎಸ್‍ಪಿಯಿಂದ ಯುವ ಹೋರಾಟಗಾರ ಶ್ರೀನಿವಾಸ ಪೂಜಾರಿ ಆಯ್ಕೆ ಬಯಸಿದ್ದಾರೆ.
ವಿಜಯಪುರ ರಾಜಕಾರಣದ ಚಿತ್ರಣವೇ ಬೇರೆ. ಇಲ್ಲಿ ಪಕ್ಷ, ವ್ಯಕ್ತಿಗಳಿಗಿಂತಲೂ ರಾಜಕಾರಣಿಗಳು ತಮ್ಮ ಅನುಕೂಲ ಸಿಂದುತ್ವದಡಿಯಲ್ಲಿ ರಾಜಕೀಯ ದಾಳ ಉರುಳಿಸುತ್ತಾರೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. ಹಿಂದಿನ ಫಲಿತಾಂಶಗಳು ಕೂಡ ಅದನ್ನೇ ಸೂಚಿಸುತ್ತವೆ.
ಈ ಹಿಂದಿನ ಲೋಕಸಭೆ ಚುನಾವಣೆ ವೇಳೆ, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರದ ಪೈಕಿ 7 ಮತಕ್ಷೇತ್ರದಲ್ಲೂ ಕಾಂಗ್ರೆಸ್ ನಾಯಕರೆ ವಿಧಾನಸಭೆ ಸದಸ್ಯರಾಗಿದ್ದರು. ಇಂತಹ ಸಂದರ್ಭ ತಮ್ಮದೇ ಪಕ್ಷದ ಪ್ರಕಾಶ ರಾಠೋಡ ಅವರನ್ನು ಗೆಲ್ಲಿಸಲಾಗಲಿಲ್ಲ. ಎರಡು ಬಾರಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆಯ್ಕೆಯಾಗಿರುವುದಕ್ಕೆ ಕಾಣದ ‘ಕೈ’ಗಳೇ ಕೆಲಸ ಮಾಡಿವೆ ಎನ್ನುವ ಆರೋಪಗಳು ಇಂದಿಗೂ ಕೇಳಿ ಬರುತ್ತಿವೆ. ಈ ಬಾರಿಯೂ ಮೂರು ಬಿಜೆಪಿ ಎಂಎಲ್‍ಎಗಳನ್ನು ಹೊಂದಿರುವ ಬಿಜೆಪಿ ಅದೇ ಜಯದ ನಿರೀಕ್ಷೆಯಲ್ಲಿದೆ.
ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಈ ಬಾರಿ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಫೈಟ್ ಕೊಡಬಹದು ಎನ್ನುತ್ತಿದ್ದಾರೆ. ಕಳೆದ ಬಾರಿಯ ಮೋದಿ ಅಲೆ ಈ ಬಾರಿ ಇಲ್ಲದಿರುವುದರಿಂದಲೂ ಇವರ ಪಾಲಿಗೆ ಪ್ಲಸ್ ಪಾಯಿಂಟ್. ಬಿಎಸ್‍ಪಿಯ ಶ್ರೀನಿವಾಸ ಪೂಜಾರಿ ಪ್ರಕಾರ ಮೋದಿ ಅಲೆ ಇಲ್ಲ, ಜೆಡಿಎಸ್ ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿಯೇ ಇಲ್ಲ ಹಾಗಾಗಿ ಇದು ನಮಗೆ ವರದಾನವಾಗಲಿದೆ ಎಂದಿದ್ದಾರೆ.
ಇಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಎನ್ನುವ ಪಕ್ಷಗಳು ಕೇವಲ ನೆಪಕ್ಕೆ ಮಾತ್ರ. ಆದರೆ ಅಸಲಿಯತ್ತು, ಒಳ ರಾಜಕಾರಣದ ಹೂರಣವೇ ಇಲ್ಲಿ ಕೆಲಸ ಮಾಡುವುದು ಎನ್ನುವ ಮಾತೂ ಕೇಳಿ ಬರುತ್ತಿದೆ.
ಕಾಂಗ್ರೆಸ್ ಪಕ್ಷದ ಗೃಹ ಸಚಿವ ಎಂ.ಬಿ. ಪಾಟೀಲ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸಚಿವ ಶಿವಾನಂದ ಪಾಟೀಲ, ನಿಗಮ ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹಾಗೂ ಜೆಡಿಎಸ್‍ನ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮತ್ತು ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ದೇವಾನಂದ ಚವ್ಹಾಣ ಅವರು ರಾಜ್ಯ ಸರ್ಕಾರದ ಪ್ರಮುಖ ಖಾತೆ ಹೊಂದಿದವರು. ಇದರಿಂದ ಜಿಲ್ಲೆಯಲ್ಲಿನ ಬಿಜೆಪಿ ಬಲಕ್ಕೆ ಹೋಲಿಸಿದರೆ, ಕಾಂಗ್ರೆಸ್- ಜೆಡಿಎಸ್‍ನ ಬಲ ಹೆಚ್ಚಿಗಿರುವುದು ನಿಚ್ಚಳವಾಗಿ ಕಂಡು ಬರುತ್ತದೆ. ಆದರೆ ಮೇಲ್ನೋಟಕ್ಕೆ ಮೂರು ಪಕ್ಷದ ಮುಖಂಡರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅಂತಿಮ ಹಂತದಲ್ಲಿ ಇಲ್ಲಿನ ಮತದಾರರ ನಿಲುವು, ನಿಗೂಢ ನಡೆ ಯಾರ ಕಡೆಗೆ ಒಲಿಯಲಿದೆ ಎನ್ನುವುದು ಸದ್ಯ ಹೇಳಲಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...