Homeಮುಖಪುಟಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು...

ಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧ ನಿರ್ಣಯ

- Advertisement -
- Advertisement -

ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಜಾತಿ ಗಣತಿಯನ್ನು ವಿಳಂಬ ಮಾಡುತ್ತಿರುವ ತಮಿಳುನಾಡು ಸರ್ಕಾರದ ವಿರುದ್ದ ಅಸಮಧಾನ ವ್ಯಕ್ತಪಡಿಸಿದೆ. ನವೆಂಬರ್ 3 ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮತ್ತು ಒಂದು ರಾಷ್ಟ್ರ ಒಂದು ಚುನಾವಣಾ ಯೋಜನೆಯ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿದೆ ಮತ್ತು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕೆಂದು ಒತ್ತಾಯಿಸಿದೆ. ಸಭೆಯಲ್ಲಿ ಒಟ್ಟು 26 ನಿರ್ಣಯಗಳನ್ನು ಅಂಗೀಕರಿಸಿದೆ.

ಚೆನ್ನೈನ ಪನಾಯೂರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಟಿವಿಕೆ ಹೈಕಮಾಂಡ್‌ನಿಂದ ಪಕ್ಷದ ಮುಖ್ಯಸ್ಥ, ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ರಾಷ್ಟ್ರ ಮತ್ತು ರಾಜ್ಯದಲ್ಲಿ ಜಾತಿಗಣತಿ ನಡೆಸಬೇಕೆಂದು ಬಲವಾಗಿ ಪ್ರತಿಪಾದಿಸಿರುವ ಟಿವಿಕೆ, ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತಿದ್ದೇವೆ ಎಂದು ಹೇಳಿಕೊಳ್ಳುವ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಅನ್ನು ಜನರು ನಂಬುವುದಿಲ್ಲ. ಏಕೆಂದರೆ, ಸಾಮಾಜಿಕ ನ್ಯಾಯವನ್ನು ತರುವ ಸಲುವಾಗಿ ಅವರು ಜಾತಿಗಣತಿ ನಡೆಸುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆ ಎಂದು ಟಿವಿಕೆ ತನ್ನ ನಿರ್ಣಯದಲ್ಲಿ ಹೇಳಿದೆ.

ಏಕಕಾಲದಲ್ಲಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳನ್ನು ನಡೆಸುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾಪವನ್ನು ಕಠುವಾಗಿ ವಿರೋಧಿಸಿರುವ ಟಿವಿಕೆ, ಈ ಯೋಜನೆ ಪ್ರಜಾಪ್ರಭುತ್ವ ವಿರೋಧಿ ಎಂದು ಕರೆದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ರಹಸ್ಯವಾಗಿ ಮತ್ತು ನೇರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಸಾರ್ವಜನಿಕರ ನೈಜ ಸಮಸ್ಯೆಗಳನ್ನು ಮುಂದಿಡುವುದು ಮತ್ತು ಜನವಿರೋಧಿ ನೀತಿಗಳನ್ನು ವಿರೋಧಿಸುವುದು ವಿರೋಧ ಪಕ್ಷಗಳ ಕರ್ತವ್ಯ ಮಾತ್ರವಲ್ಲದೆ ಹಕ್ಕು. ಆ ಹಕ್ಕನ್ನು ಹಿಮ್ಮೆಟ್ಟಿಸುವುದು, ಮಾಧ್ಯಮಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡದಿರುವುದು, ವ್ಯಕ್ತಿಗಳ ಮೇಲೆ ಸಾಮಾಜಿಕ ಮಾಧ್ಯಮಗಳ ದಾಳಿ ನಡೆಸುವುದು ಸರ್ಕಾರದ ಜನವಿರೋಧಿ ನೀತಿಗಳಾಗಿವೆ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಸೇರಿದಂತೆ ಯಾರೇ ಈ ರೀತಿಯ ಜನ ವಿರೋಧಿ ರಾಜಕೀಯ ಮಾಡಿದರೂ ನಾವು ಖಂಡಿಸುತ್ತೇವೆ” ಎಂದು ಟಿವಿಕೆ ಹೇಳಿದೆ.

ಪ್ರಸ್ತುತ ಭಾರೀ ಚರ್ಚೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನೂ ಟಿವಿಕೆ ವಿರೋಧಿಸಿದ್ದು, ತಿದ್ದುಪಡಿ ಮಸೂದೆ ‘ಮುಸ್ಲಿಮರ ಹಕ್ಕುಗಳಿಗೆ ವಿರುದ್ಧವಾಗಿದೆ’ ಎಂದು ಹೇಳುವ ಮೂಲಕ ಅದನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.

ಕೇಂದ್ರ ಸರ್ಕಾರವು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ. ಇದು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲು ನಡೆಸುವ ವಿವಾದಾತ್ಮಕ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ ಎಂದಿದೆ. ಹಿಂದಿ ಹೇರಿಕೆ, ಇತ್ತೀಚೆಗೆ ತಮಿಳು ನಾಡಗೀತೆಯಿಂದ ದ್ರಾವಿಡ ಪದ ಕೈಬಿಟ್ಟು ಹಾಡಿರುವುದು ಸೇರಿದಂತೆ ಇತರ ವಿಚಾರಗಳನ್ನು ಟಿವಿಕೆ ಖಂಡಿಸಿದೆ.

ಇದಲ್ಲದೆ, ಪರಂಧೂರ್‌ನಲ್ಲಿ ಎರಡನೇ ವಿಮಾನ ನಿಲ್ದಾಣದ ನಿರ್ಮಾಣ ಮತ್ತು ನೇವೇಲಿ ಲಿಗ್ನೈಟ್ ಕಾರ್ಪೊರೇಶನ್‌ನ ವಿಸ್ತರಣೆಯನ್ನು ಟಿವಿಕೆ ಖಂಡಿಸಿದೆ. ಇವೆರಡನ್ನೂ ರೈತರು ಮತ್ತು ಪರಿಸರವಾದಿಗಳು ವಿರೋಧಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಕಠಿಣ ಕಾನೂನುಗಳನ್ನು ತರಬೇಕು ಮತ್ತು ತಪ್ಪಿತಸ್ಥರಿಗೆ ‘ಗರಿಷ್ಠ ಶಿಕ್ಷೆ’ ವಿಧಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ.

ಕೆ ಕಾಮರಾಜ್, ಡಾ. ಬಿಆರ್ ಅಂಬೇಡ್ಕರ್ ಮತ್ತು ಪೆರಿಯಾರ್ ಅವರ ಹೆಜ್ಜೆಗಳನ್ನು ಅನುಸರಿಸುವುದು, ಕೊಯಮತ್ತೂರಿಗೆ ಮೆಟ್ರೋ ರೈಲು, ಶ್ರೀಲಂಕಾ ತಮಿಳರು ಮತ್ತು ಮೀನುಗಾರರ ಹಕ್ಕುಗಳ ರಕ್ಷಣೆ, ಮದ್ಯ ನಿಷೇಧ, ವಿದ್ಯುತ್ ದರಗಳಲ್ಲಿ ಏರಿಕೆಗೆ ಖಂಡನೆ ಸೇರಿದಂತೆ ಹಲವು ವಿಷಯಗಳ ಸಂಬಂಧ ಟಿವಿಕೆ ನಿರ್ಣಯ ಅಂಗೀಕರಿಸಿದೆ. ಪಕ್ಷವು ‘ಜಾತ್ಯತೀತ ಸಾಮಾಜಿಕ ನ್ಯಾಯ’ ತಮ್ಮ ಸೈದ್ಧಾಂತಿಕ ನಿಲುವು ಎಂದು ಪುನರುಚ್ಚರಿಸಿದೆ. ಅಕ್ಟೋಬರ್ 27 ರಂದು ನಡೆದ ಮೊದಲ ರಾಜ್ಯದ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಧನ್ಯವಾದ ಹೇಳಿದೆ.

ಇದನ್ನೂ ಓದಿ : ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...