Homeಮುಖಪುಟಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು...

ಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧ ನಿರ್ಣಯ

- Advertisement -
- Advertisement -

ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಜಾತಿ ಗಣತಿಯನ್ನು ವಿಳಂಬ ಮಾಡುತ್ತಿರುವ ತಮಿಳುನಾಡು ಸರ್ಕಾರದ ವಿರುದ್ದ ಅಸಮಧಾನ ವ್ಯಕ್ತಪಡಿಸಿದೆ. ನವೆಂಬರ್ 3 ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮತ್ತು ಒಂದು ರಾಷ್ಟ್ರ ಒಂದು ಚುನಾವಣಾ ಯೋಜನೆಯ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿದೆ ಮತ್ತು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕೆಂದು ಒತ್ತಾಯಿಸಿದೆ. ಸಭೆಯಲ್ಲಿ ಒಟ್ಟು 26 ನಿರ್ಣಯಗಳನ್ನು ಅಂಗೀಕರಿಸಿದೆ.

ಚೆನ್ನೈನ ಪನಾಯೂರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಟಿವಿಕೆ ಹೈಕಮಾಂಡ್‌ನಿಂದ ಪಕ್ಷದ ಮುಖ್ಯಸ್ಥ, ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ರಾಷ್ಟ್ರ ಮತ್ತು ರಾಜ್ಯದಲ್ಲಿ ಜಾತಿಗಣತಿ ನಡೆಸಬೇಕೆಂದು ಬಲವಾಗಿ ಪ್ರತಿಪಾದಿಸಿರುವ ಟಿವಿಕೆ, ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತಿದ್ದೇವೆ ಎಂದು ಹೇಳಿಕೊಳ್ಳುವ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಅನ್ನು ಜನರು ನಂಬುವುದಿಲ್ಲ. ಏಕೆಂದರೆ, ಸಾಮಾಜಿಕ ನ್ಯಾಯವನ್ನು ತರುವ ಸಲುವಾಗಿ ಅವರು ಜಾತಿಗಣತಿ ನಡೆಸುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆ ಎಂದು ಟಿವಿಕೆ ತನ್ನ ನಿರ್ಣಯದಲ್ಲಿ ಹೇಳಿದೆ.

ಏಕಕಾಲದಲ್ಲಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳನ್ನು ನಡೆಸುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾಪವನ್ನು ಕಠುವಾಗಿ ವಿರೋಧಿಸಿರುವ ಟಿವಿಕೆ, ಈ ಯೋಜನೆ ಪ್ರಜಾಪ್ರಭುತ್ವ ವಿರೋಧಿ ಎಂದು ಕರೆದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ರಹಸ್ಯವಾಗಿ ಮತ್ತು ನೇರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಸಾರ್ವಜನಿಕರ ನೈಜ ಸಮಸ್ಯೆಗಳನ್ನು ಮುಂದಿಡುವುದು ಮತ್ತು ಜನವಿರೋಧಿ ನೀತಿಗಳನ್ನು ವಿರೋಧಿಸುವುದು ವಿರೋಧ ಪಕ್ಷಗಳ ಕರ್ತವ್ಯ ಮಾತ್ರವಲ್ಲದೆ ಹಕ್ಕು. ಆ ಹಕ್ಕನ್ನು ಹಿಮ್ಮೆಟ್ಟಿಸುವುದು, ಮಾಧ್ಯಮಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡದಿರುವುದು, ವ್ಯಕ್ತಿಗಳ ಮೇಲೆ ಸಾಮಾಜಿಕ ಮಾಧ್ಯಮಗಳ ದಾಳಿ ನಡೆಸುವುದು ಸರ್ಕಾರದ ಜನವಿರೋಧಿ ನೀತಿಗಳಾಗಿವೆ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಸೇರಿದಂತೆ ಯಾರೇ ಈ ರೀತಿಯ ಜನ ವಿರೋಧಿ ರಾಜಕೀಯ ಮಾಡಿದರೂ ನಾವು ಖಂಡಿಸುತ್ತೇವೆ” ಎಂದು ಟಿವಿಕೆ ಹೇಳಿದೆ.

ಪ್ರಸ್ತುತ ಭಾರೀ ಚರ್ಚೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನೂ ಟಿವಿಕೆ ವಿರೋಧಿಸಿದ್ದು, ತಿದ್ದುಪಡಿ ಮಸೂದೆ ‘ಮುಸ್ಲಿಮರ ಹಕ್ಕುಗಳಿಗೆ ವಿರುದ್ಧವಾಗಿದೆ’ ಎಂದು ಹೇಳುವ ಮೂಲಕ ಅದನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.

ಕೇಂದ್ರ ಸರ್ಕಾರವು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ. ಇದು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲು ನಡೆಸುವ ವಿವಾದಾತ್ಮಕ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ ಎಂದಿದೆ. ಹಿಂದಿ ಹೇರಿಕೆ, ಇತ್ತೀಚೆಗೆ ತಮಿಳು ನಾಡಗೀತೆಯಿಂದ ದ್ರಾವಿಡ ಪದ ಕೈಬಿಟ್ಟು ಹಾಡಿರುವುದು ಸೇರಿದಂತೆ ಇತರ ವಿಚಾರಗಳನ್ನು ಟಿವಿಕೆ ಖಂಡಿಸಿದೆ.

ಇದಲ್ಲದೆ, ಪರಂಧೂರ್‌ನಲ್ಲಿ ಎರಡನೇ ವಿಮಾನ ನಿಲ್ದಾಣದ ನಿರ್ಮಾಣ ಮತ್ತು ನೇವೇಲಿ ಲಿಗ್ನೈಟ್ ಕಾರ್ಪೊರೇಶನ್‌ನ ವಿಸ್ತರಣೆಯನ್ನು ಟಿವಿಕೆ ಖಂಡಿಸಿದೆ. ಇವೆರಡನ್ನೂ ರೈತರು ಮತ್ತು ಪರಿಸರವಾದಿಗಳು ವಿರೋಧಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಕಠಿಣ ಕಾನೂನುಗಳನ್ನು ತರಬೇಕು ಮತ್ತು ತಪ್ಪಿತಸ್ಥರಿಗೆ ‘ಗರಿಷ್ಠ ಶಿಕ್ಷೆ’ ವಿಧಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ.

ಕೆ ಕಾಮರಾಜ್, ಡಾ. ಬಿಆರ್ ಅಂಬೇಡ್ಕರ್ ಮತ್ತು ಪೆರಿಯಾರ್ ಅವರ ಹೆಜ್ಜೆಗಳನ್ನು ಅನುಸರಿಸುವುದು, ಕೊಯಮತ್ತೂರಿಗೆ ಮೆಟ್ರೋ ರೈಲು, ಶ್ರೀಲಂಕಾ ತಮಿಳರು ಮತ್ತು ಮೀನುಗಾರರ ಹಕ್ಕುಗಳ ರಕ್ಷಣೆ, ಮದ್ಯ ನಿಷೇಧ, ವಿದ್ಯುತ್ ದರಗಳಲ್ಲಿ ಏರಿಕೆಗೆ ಖಂಡನೆ ಸೇರಿದಂತೆ ಹಲವು ವಿಷಯಗಳ ಸಂಬಂಧ ಟಿವಿಕೆ ನಿರ್ಣಯ ಅಂಗೀಕರಿಸಿದೆ. ಪಕ್ಷವು ‘ಜಾತ್ಯತೀತ ಸಾಮಾಜಿಕ ನ್ಯಾಯ’ ತಮ್ಮ ಸೈದ್ಧಾಂತಿಕ ನಿಲುವು ಎಂದು ಪುನರುಚ್ಚರಿಸಿದೆ. ಅಕ್ಟೋಬರ್ 27 ರಂದು ನಡೆದ ಮೊದಲ ರಾಜ್ಯದ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಧನ್ಯವಾದ ಹೇಳಿದೆ.

ಇದನ್ನೂ ಓದಿ : ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ’: ‘ದಿ ಕೇರಳ ಸ್ಟೋರಿ 2’ ಸಿನಿಮಾ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

ಬಜರಂಗದಳ ದೂರು; ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳದ ಪಾದ್ರಿಯನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

ಬಜರಂಗದಳ ಸದಸ್ಯರ ದೂರಿನ ನಂತರ ಕಾನೂನುಬಾಹಿರ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತಿರುವನಂತಪುರಂ ಮೂಲದ ಮತ್ತು ಪ್ರಸ್ತುತ ಬಿಹಾರದ ಪಾಟ್ನಾದಲ್ಲಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...