Homeಮುಖಪುಟಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು...

ಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧ ನಿರ್ಣಯ

- Advertisement -
- Advertisement -

ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಜಾತಿ ಗಣತಿಯನ್ನು ವಿಳಂಬ ಮಾಡುತ್ತಿರುವ ತಮಿಳುನಾಡು ಸರ್ಕಾರದ ವಿರುದ್ದ ಅಸಮಧಾನ ವ್ಯಕ್ತಪಡಿಸಿದೆ. ನವೆಂಬರ್ 3 ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮತ್ತು ಒಂದು ರಾಷ್ಟ್ರ ಒಂದು ಚುನಾವಣಾ ಯೋಜನೆಯ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿದೆ ಮತ್ತು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕೆಂದು ಒತ್ತಾಯಿಸಿದೆ. ಸಭೆಯಲ್ಲಿ ಒಟ್ಟು 26 ನಿರ್ಣಯಗಳನ್ನು ಅಂಗೀಕರಿಸಿದೆ.

ಚೆನ್ನೈನ ಪನಾಯೂರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಟಿವಿಕೆ ಹೈಕಮಾಂಡ್‌ನಿಂದ ಪಕ್ಷದ ಮುಖ್ಯಸ್ಥ, ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ರಾಷ್ಟ್ರ ಮತ್ತು ರಾಜ್ಯದಲ್ಲಿ ಜಾತಿಗಣತಿ ನಡೆಸಬೇಕೆಂದು ಬಲವಾಗಿ ಪ್ರತಿಪಾದಿಸಿರುವ ಟಿವಿಕೆ, ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತಿದ್ದೇವೆ ಎಂದು ಹೇಳಿಕೊಳ್ಳುವ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಅನ್ನು ಜನರು ನಂಬುವುದಿಲ್ಲ. ಏಕೆಂದರೆ, ಸಾಮಾಜಿಕ ನ್ಯಾಯವನ್ನು ತರುವ ಸಲುವಾಗಿ ಅವರು ಜಾತಿಗಣತಿ ನಡೆಸುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆ ಎಂದು ಟಿವಿಕೆ ತನ್ನ ನಿರ್ಣಯದಲ್ಲಿ ಹೇಳಿದೆ.

ಏಕಕಾಲದಲ್ಲಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳನ್ನು ನಡೆಸುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾಪವನ್ನು ಕಠುವಾಗಿ ವಿರೋಧಿಸಿರುವ ಟಿವಿಕೆ, ಈ ಯೋಜನೆ ಪ್ರಜಾಪ್ರಭುತ್ವ ವಿರೋಧಿ ಎಂದು ಕರೆದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ರಹಸ್ಯವಾಗಿ ಮತ್ತು ನೇರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಸಾರ್ವಜನಿಕರ ನೈಜ ಸಮಸ್ಯೆಗಳನ್ನು ಮುಂದಿಡುವುದು ಮತ್ತು ಜನವಿರೋಧಿ ನೀತಿಗಳನ್ನು ವಿರೋಧಿಸುವುದು ವಿರೋಧ ಪಕ್ಷಗಳ ಕರ್ತವ್ಯ ಮಾತ್ರವಲ್ಲದೆ ಹಕ್ಕು. ಆ ಹಕ್ಕನ್ನು ಹಿಮ್ಮೆಟ್ಟಿಸುವುದು, ಮಾಧ್ಯಮಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡದಿರುವುದು, ವ್ಯಕ್ತಿಗಳ ಮೇಲೆ ಸಾಮಾಜಿಕ ಮಾಧ್ಯಮಗಳ ದಾಳಿ ನಡೆಸುವುದು ಸರ್ಕಾರದ ಜನವಿರೋಧಿ ನೀತಿಗಳಾಗಿವೆ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಸೇರಿದಂತೆ ಯಾರೇ ಈ ರೀತಿಯ ಜನ ವಿರೋಧಿ ರಾಜಕೀಯ ಮಾಡಿದರೂ ನಾವು ಖಂಡಿಸುತ್ತೇವೆ” ಎಂದು ಟಿವಿಕೆ ಹೇಳಿದೆ.

ಪ್ರಸ್ತುತ ಭಾರೀ ಚರ್ಚೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನೂ ಟಿವಿಕೆ ವಿರೋಧಿಸಿದ್ದು, ತಿದ್ದುಪಡಿ ಮಸೂದೆ ‘ಮುಸ್ಲಿಮರ ಹಕ್ಕುಗಳಿಗೆ ವಿರುದ್ಧವಾಗಿದೆ’ ಎಂದು ಹೇಳುವ ಮೂಲಕ ಅದನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.

ಕೇಂದ್ರ ಸರ್ಕಾರವು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ. ಇದು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲು ನಡೆಸುವ ವಿವಾದಾತ್ಮಕ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ ಎಂದಿದೆ. ಹಿಂದಿ ಹೇರಿಕೆ, ಇತ್ತೀಚೆಗೆ ತಮಿಳು ನಾಡಗೀತೆಯಿಂದ ದ್ರಾವಿಡ ಪದ ಕೈಬಿಟ್ಟು ಹಾಡಿರುವುದು ಸೇರಿದಂತೆ ಇತರ ವಿಚಾರಗಳನ್ನು ಟಿವಿಕೆ ಖಂಡಿಸಿದೆ.

ಇದಲ್ಲದೆ, ಪರಂಧೂರ್‌ನಲ್ಲಿ ಎರಡನೇ ವಿಮಾನ ನಿಲ್ದಾಣದ ನಿರ್ಮಾಣ ಮತ್ತು ನೇವೇಲಿ ಲಿಗ್ನೈಟ್ ಕಾರ್ಪೊರೇಶನ್‌ನ ವಿಸ್ತರಣೆಯನ್ನು ಟಿವಿಕೆ ಖಂಡಿಸಿದೆ. ಇವೆರಡನ್ನೂ ರೈತರು ಮತ್ತು ಪರಿಸರವಾದಿಗಳು ವಿರೋಧಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಕಠಿಣ ಕಾನೂನುಗಳನ್ನು ತರಬೇಕು ಮತ್ತು ತಪ್ಪಿತಸ್ಥರಿಗೆ ‘ಗರಿಷ್ಠ ಶಿಕ್ಷೆ’ ವಿಧಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ.

ಕೆ ಕಾಮರಾಜ್, ಡಾ. ಬಿಆರ್ ಅಂಬೇಡ್ಕರ್ ಮತ್ತು ಪೆರಿಯಾರ್ ಅವರ ಹೆಜ್ಜೆಗಳನ್ನು ಅನುಸರಿಸುವುದು, ಕೊಯಮತ್ತೂರಿಗೆ ಮೆಟ್ರೋ ರೈಲು, ಶ್ರೀಲಂಕಾ ತಮಿಳರು ಮತ್ತು ಮೀನುಗಾರರ ಹಕ್ಕುಗಳ ರಕ್ಷಣೆ, ಮದ್ಯ ನಿಷೇಧ, ವಿದ್ಯುತ್ ದರಗಳಲ್ಲಿ ಏರಿಕೆಗೆ ಖಂಡನೆ ಸೇರಿದಂತೆ ಹಲವು ವಿಷಯಗಳ ಸಂಬಂಧ ಟಿವಿಕೆ ನಿರ್ಣಯ ಅಂಗೀಕರಿಸಿದೆ. ಪಕ್ಷವು ‘ಜಾತ್ಯತೀತ ಸಾಮಾಜಿಕ ನ್ಯಾಯ’ ತಮ್ಮ ಸೈದ್ಧಾಂತಿಕ ನಿಲುವು ಎಂದು ಪುನರುಚ್ಚರಿಸಿದೆ. ಅಕ್ಟೋಬರ್ 27 ರಂದು ನಡೆದ ಮೊದಲ ರಾಜ್ಯದ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಧನ್ಯವಾದ ಹೇಳಿದೆ.

ಇದನ್ನೂ ಓದಿ : ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...