Homeಮುಖಪುಟಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು...

ಜಾತಿಗಣತಿಗೆ ಆಗ್ರಹಿಸಿದ ನಟ ವಿಜಯ್ ಪಕ್ಷ ಟಿವಿಕೆ : ವಕ್ಫ್ ಮಸೂದೆ, ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧ ನಿರ್ಣಯ

- Advertisement -
- Advertisement -

ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಜಾತಿ ಗಣತಿಯನ್ನು ವಿಳಂಬ ಮಾಡುತ್ತಿರುವ ತಮಿಳುನಾಡು ಸರ್ಕಾರದ ವಿರುದ್ದ ಅಸಮಧಾನ ವ್ಯಕ್ತಪಡಿಸಿದೆ. ನವೆಂಬರ್ 3 ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮತ್ತು ಒಂದು ರಾಷ್ಟ್ರ ಒಂದು ಚುನಾವಣಾ ಯೋಜನೆಯ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿದೆ ಮತ್ತು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕೆಂದು ಒತ್ತಾಯಿಸಿದೆ. ಸಭೆಯಲ್ಲಿ ಒಟ್ಟು 26 ನಿರ್ಣಯಗಳನ್ನು ಅಂಗೀಕರಿಸಿದೆ.

ಚೆನ್ನೈನ ಪನಾಯೂರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಟಿವಿಕೆ ಹೈಕಮಾಂಡ್‌ನಿಂದ ಪಕ್ಷದ ಮುಖ್ಯಸ್ಥ, ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ರಾಷ್ಟ್ರ ಮತ್ತು ರಾಜ್ಯದಲ್ಲಿ ಜಾತಿಗಣತಿ ನಡೆಸಬೇಕೆಂದು ಬಲವಾಗಿ ಪ್ರತಿಪಾದಿಸಿರುವ ಟಿವಿಕೆ, ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತಿದ್ದೇವೆ ಎಂದು ಹೇಳಿಕೊಳ್ಳುವ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಅನ್ನು ಜನರು ನಂಬುವುದಿಲ್ಲ. ಏಕೆಂದರೆ, ಸಾಮಾಜಿಕ ನ್ಯಾಯವನ್ನು ತರುವ ಸಲುವಾಗಿ ಅವರು ಜಾತಿಗಣತಿ ನಡೆಸುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆ ಎಂದು ಟಿವಿಕೆ ತನ್ನ ನಿರ್ಣಯದಲ್ಲಿ ಹೇಳಿದೆ.

ಏಕಕಾಲದಲ್ಲಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳನ್ನು ನಡೆಸುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾಪವನ್ನು ಕಠುವಾಗಿ ವಿರೋಧಿಸಿರುವ ಟಿವಿಕೆ, ಈ ಯೋಜನೆ ಪ್ರಜಾಪ್ರಭುತ್ವ ವಿರೋಧಿ ಎಂದು ಕರೆದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ರಹಸ್ಯವಾಗಿ ಮತ್ತು ನೇರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಸಾರ್ವಜನಿಕರ ನೈಜ ಸಮಸ್ಯೆಗಳನ್ನು ಮುಂದಿಡುವುದು ಮತ್ತು ಜನವಿರೋಧಿ ನೀತಿಗಳನ್ನು ವಿರೋಧಿಸುವುದು ವಿರೋಧ ಪಕ್ಷಗಳ ಕರ್ತವ್ಯ ಮಾತ್ರವಲ್ಲದೆ ಹಕ್ಕು. ಆ ಹಕ್ಕನ್ನು ಹಿಮ್ಮೆಟ್ಟಿಸುವುದು, ಮಾಧ್ಯಮಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡದಿರುವುದು, ವ್ಯಕ್ತಿಗಳ ಮೇಲೆ ಸಾಮಾಜಿಕ ಮಾಧ್ಯಮಗಳ ದಾಳಿ ನಡೆಸುವುದು ಸರ್ಕಾರದ ಜನವಿರೋಧಿ ನೀತಿಗಳಾಗಿವೆ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಸೇರಿದಂತೆ ಯಾರೇ ಈ ರೀತಿಯ ಜನ ವಿರೋಧಿ ರಾಜಕೀಯ ಮಾಡಿದರೂ ನಾವು ಖಂಡಿಸುತ್ತೇವೆ” ಎಂದು ಟಿವಿಕೆ ಹೇಳಿದೆ.

ಪ್ರಸ್ತುತ ಭಾರೀ ಚರ್ಚೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನೂ ಟಿವಿಕೆ ವಿರೋಧಿಸಿದ್ದು, ತಿದ್ದುಪಡಿ ಮಸೂದೆ ‘ಮುಸ್ಲಿಮರ ಹಕ್ಕುಗಳಿಗೆ ವಿರುದ್ಧವಾಗಿದೆ’ ಎಂದು ಹೇಳುವ ಮೂಲಕ ಅದನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.

ಕೇಂದ್ರ ಸರ್ಕಾರವು ಶಿಕ್ಷಣವನ್ನು ಸಮಾನಂತರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ. ಇದು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲು ನಡೆಸುವ ವಿವಾದಾತ್ಮಕ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ ಎಂದಿದೆ. ಹಿಂದಿ ಹೇರಿಕೆ, ಇತ್ತೀಚೆಗೆ ತಮಿಳು ನಾಡಗೀತೆಯಿಂದ ದ್ರಾವಿಡ ಪದ ಕೈಬಿಟ್ಟು ಹಾಡಿರುವುದು ಸೇರಿದಂತೆ ಇತರ ವಿಚಾರಗಳನ್ನು ಟಿವಿಕೆ ಖಂಡಿಸಿದೆ.

ಇದಲ್ಲದೆ, ಪರಂಧೂರ್‌ನಲ್ಲಿ ಎರಡನೇ ವಿಮಾನ ನಿಲ್ದಾಣದ ನಿರ್ಮಾಣ ಮತ್ತು ನೇವೇಲಿ ಲಿಗ್ನೈಟ್ ಕಾರ್ಪೊರೇಶನ್‌ನ ವಿಸ್ತರಣೆಯನ್ನು ಟಿವಿಕೆ ಖಂಡಿಸಿದೆ. ಇವೆರಡನ್ನೂ ರೈತರು ಮತ್ತು ಪರಿಸರವಾದಿಗಳು ವಿರೋಧಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಕಠಿಣ ಕಾನೂನುಗಳನ್ನು ತರಬೇಕು ಮತ್ತು ತಪ್ಪಿತಸ್ಥರಿಗೆ ‘ಗರಿಷ್ಠ ಶಿಕ್ಷೆ’ ವಿಧಿಸಬೇಕು ಎಂದು ಟಿವಿಕೆ ಒತ್ತಾಯಿಸಿದೆ.

ಕೆ ಕಾಮರಾಜ್, ಡಾ. ಬಿಆರ್ ಅಂಬೇಡ್ಕರ್ ಮತ್ತು ಪೆರಿಯಾರ್ ಅವರ ಹೆಜ್ಜೆಗಳನ್ನು ಅನುಸರಿಸುವುದು, ಕೊಯಮತ್ತೂರಿಗೆ ಮೆಟ್ರೋ ರೈಲು, ಶ್ರೀಲಂಕಾ ತಮಿಳರು ಮತ್ತು ಮೀನುಗಾರರ ಹಕ್ಕುಗಳ ರಕ್ಷಣೆ, ಮದ್ಯ ನಿಷೇಧ, ವಿದ್ಯುತ್ ದರಗಳಲ್ಲಿ ಏರಿಕೆಗೆ ಖಂಡನೆ ಸೇರಿದಂತೆ ಹಲವು ವಿಷಯಗಳ ಸಂಬಂಧ ಟಿವಿಕೆ ನಿರ್ಣಯ ಅಂಗೀಕರಿಸಿದೆ. ಪಕ್ಷವು ‘ಜಾತ್ಯತೀತ ಸಾಮಾಜಿಕ ನ್ಯಾಯ’ ತಮ್ಮ ಸೈದ್ಧಾಂತಿಕ ನಿಲುವು ಎಂದು ಪುನರುಚ್ಚರಿಸಿದೆ. ಅಕ್ಟೋಬರ್ 27 ರಂದು ನಡೆದ ಮೊದಲ ರಾಜ್ಯದ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಧನ್ಯವಾದ ಹೇಳಿದೆ.

ಇದನ್ನೂ ಓದಿ : ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...