Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ರಾಜ್ಯಪಾಲರ ಹುದ್ದೆ ರದ್ದು, ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ದ್ವಿಭಾಷಾ ನೀತಿ ಅಳವಡಿಕೆ ಭರವಸೆ ಕೊಟ್ಟ ನಟ ವಿಜಯ್

- Advertisement -
- Advertisement -

ತಮಿಳುನಾಡು ವಿಧಾನಸಭೆಗೆ 2026ರಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ನಟ ಹಾಗೂ ರಾಜಕಾರಣಿ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಮೊದಲ ರಾಜ್ಯ ಸಮ್ಮೇಳನ ಅಕ್ಟೋಬರ್ 27 ಭಾನುವಾರ ವಿಲ್ಲುಪುರಂ ಜಿಲ್ಲೆಯ ವಿಕ್ರವಂಡಿಯಲ್ಲಿ ನಡೆದಿದೆ.

ಮೊದಲ ಸಮ್ಮೇಳನದಲ್ಲೇ ಸುಮಾರು 3 ಲಕ್ಷದಷ್ಟು ಜನರನ್ನು ಸೇರಿಸುವ ಮೂಲಕ ವಿಜಯ್ ದೇಶದ ಗಮನ ಸೆಳೆದಿದ್ದಾರೆ. ಚೊಚ್ಚಲ ಸಮ್ಮೇಳನದಲ್ಲಿ ವಿಜಯ್ ತಮಿಳು ಜನತೆಗೆ ನೀಡಿರುವ ಪ್ರಮುಖ ಭರವಸೆಗಳು ಕೂಡ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸುವುದು, ಜಾತಿ ಗಣತಿ ನಡೆಸುವುದು, ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವುದು ಮತ್ತು ಕಾಮರಾಜರ ಮಾದರಿ ಶಾಲೆಗಳನ್ನು ಸ್ಥಾಪಿಸುವ ಭರವಸೆಗಳನ್ನು ವಿಜಯ್ ನೀಡಿದ್ದಾರೆ.

ಟಿವಿಕೆ ಪಕ್ಷದ ಸಿದ್ಧಾಂತವು ಜಾತ್ಯತೀತ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅದರ ಸೈದ್ಧಾಂತಿಕ ಶತ್ರು ಮತ್ತು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜಕೀಯ ಶತ್ರು ಎಂದು ವಿಜಯ್ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಕ್ರಮಗಳು ಸಂವಿಧಾನಕ್ಕೆ ವಿರುದ್ಧವಾಗಿರುವುದರಿಂದ, ರಾಜ್ಯಪಾಲರ ಹುದ್ದೆಯನ್ನೇ ರದ್ದುಪಡಿಸಲು ಪಕ್ಷ ಪ್ರತಿಜ್ಞೆ ಮಾಡಿದೆ ಎಂದು ಟಿವಿಕೆ ಕಾರ್ಯಾಧ್ಯಕ್ಷೆ ಕ್ಯಾಥರೀನ್ ಪಾಂಡಿಯನ್ ಸಮ್ಮೇಳನದಲ್ಲಿ ಹೇಳಿದ್ದಾರೆ. ತಮಿಳು ಆಡಳಿತದ ಪ್ರಾಥಮಿಕ ಭಾಷೆಯಾಗಿರುವ ದ್ವಿಭಾಷಾ ನೀತಿಗೆ [ತಮಿಳು ಮತ್ತು ಇಂಗ್ಲಿಷ್] ಬದ್ಧವಾಗಿರಲು ಪಕ್ಷವು ಭರವಸೆ ನೀಡಿದೆ. ಜಾತಿ ಮತ್ತು ವರ್ಗ ಭೇದವನ್ನು ಹೋಗಲಾಡಿಸಲು ಮಧ್ಯಾಹ್ನದ ಊಟ ಮತ್ತು ಉಚಿತ ಸಮವಸ್ತ್ರವನ್ನು ನೀಡುವ ಕಾಮರಾಜರ ಮಾದರಿ ಶಾಲೆಗಳ ನಿರ್ಮಾಣಕ್ಕೆ ಒತ್ತು ನೀಡಲು ಪಕ್ಷವು ವಾಗ್ದಾನ ಮಾಡಿದೆ.

ಪಕ್ಷದ ಹೆಚ್ಚಿನ ಭರವಸೆಗಳು ಕಲ್ಯಾಣ ಪರ ಮತ್ತು ದ್ರಾವಿಡ ರಾಜಕೀಯಕ್ಕೆ ಅನುಗುಣವಾಗಿದ್ದರೂ, ಮೀಸಲಾತಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟೀಕರಿಸಿಲ್ಲ. ಸಮಾವೇಶದಲ್ಲಿ ಮಾತನಾಡಿದ ವಿಜಯ್, ರಾಜಕೀಯ ಮತ್ತು ಆರ್ಥಿಕ ಸಮಾನತೆ ಪಡೆಯಲು ಜನ ಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ ಜಾರಿಯಾಗಬೇಕು. ಅದಕ್ಕಾಗಿ ಜಾತಿ ಗಣತಿ ನಡೆಸಬೇಕೆಂಬ ಬಹುದಿನಗಳಿಂದ ಬಾಕಿ ಉಳಿದಿರುವ ಮನವಿಯನ್ನು ಪೂರೈಸಬೇಕು. ಈ ಮೂಲಕ ಎಲ್ಲರಿಗೂ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದಿದ್ದಾರೆ.

ಪಕ್ಷವು ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟವನ್ನು ಸುಧಾರಿಸುವ ಮತ್ತು ಜಾತಿ, ಧರ್ಮ, ಲಿಂಗ ಆಧಾರಿತ ತಾರತಮ್ಯ ಮಾಡದೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಒದಗಿಸುವ ಭರವಸೆ ನೀಡಿದೆ. ಇದಲ್ಲದೆ, ಮರಳು ಗಣಿಗಾರಿಕೆ, ಅಂತರ್ಜಲ ಮತ್ತು ಖನಿಜ ಸಂಪನ್ಮೂಲಗಳ ಅಕ್ರಮ ಬಳಕೆ ಕೊನೆಗೊಳಿಸಲು ಹೊಸ ನೀತಿಗಳನ್ನು ಅಳವಡಿಸಿಕೊಳ್ಳುವುದು, ಕೃಷಿ ಭೂಮಿ ಮತ್ತು ಜವುಗು ಪ್ರದೇಶಗಳ ಅತಿಕ್ರಮಣಗಳನ್ನು ತೆಗೆದು ಹಾಕುವುದು ಸೇರಿದಂತೆ ಹಲವು ಭರವೆಸಗಳನ್ನು ನೀಡಿದೆ.

ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ವಿಧಾನಸಭಾ ಸ್ಥಾನಗಳನ್ನು ಮೀಸಲಿಡುವುದಾಗಿ ಪಕ್ಷವು ವಾಗ್ದಾನ ಮಾಡಿದೆ. ನಿಧಾನವಾಗಿ, ಮೀಸಲಾತಿಯು 50% ವರೆಗೆ ಏರಿಸಲಾಗುವುದು ಎಂದು ಕ್ಯಾಥರೀನ್ ಘೋಷಿಸಿದ್ದಾರೆ. ಸರ್ಕಾರ ಮತ್ತು ಜನರ ನಡುವಿನ ಸಂಪರ್ಕ ಸುಲಭವಾಗಿಸಲು ಪಕ್ಷವು ಮಧುರೈನಲ್ಲಿ ರಾಜ್ಯ ಸೆಕ್ರೆಟ್ರೀಯೇಟ್ ಶಾಖೆಯನ್ನು ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಸಮಾವೇಶದಲ್ಲಿ ವಿಜಯ್ ಅವರು ಟಿವಿಕೆ 2026ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಬಹುಮತದ ಪಕ್ಷವಾಗಿ ಹೊರಹೊಮ್ಮುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿಗೂ ಮುಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....