Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ರಾಜ್ಯಪಾಲರ ಹುದ್ದೆ ರದ್ದು, ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ದ್ವಿಭಾಷಾ ನೀತಿ ಅಳವಡಿಕೆ ಭರವಸೆ ಕೊಟ್ಟ ನಟ ವಿಜಯ್

- Advertisement -
- Advertisement -

ತಮಿಳುನಾಡು ವಿಧಾನಸಭೆಗೆ 2026ರಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ನಟ ಹಾಗೂ ರಾಜಕಾರಣಿ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಮೊದಲ ರಾಜ್ಯ ಸಮ್ಮೇಳನ ಅಕ್ಟೋಬರ್ 27 ಭಾನುವಾರ ವಿಲ್ಲುಪುರಂ ಜಿಲ್ಲೆಯ ವಿಕ್ರವಂಡಿಯಲ್ಲಿ ನಡೆದಿದೆ.

ಮೊದಲ ಸಮ್ಮೇಳನದಲ್ಲೇ ಸುಮಾರು 3 ಲಕ್ಷದಷ್ಟು ಜನರನ್ನು ಸೇರಿಸುವ ಮೂಲಕ ವಿಜಯ್ ದೇಶದ ಗಮನ ಸೆಳೆದಿದ್ದಾರೆ. ಚೊಚ್ಚಲ ಸಮ್ಮೇಳನದಲ್ಲಿ ವಿಜಯ್ ತಮಿಳು ಜನತೆಗೆ ನೀಡಿರುವ ಪ್ರಮುಖ ಭರವಸೆಗಳು ಕೂಡ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸುವುದು, ಜಾತಿ ಗಣತಿ ನಡೆಸುವುದು, ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವುದು ಮತ್ತು ಕಾಮರಾಜರ ಮಾದರಿ ಶಾಲೆಗಳನ್ನು ಸ್ಥಾಪಿಸುವ ಭರವಸೆಗಳನ್ನು ವಿಜಯ್ ನೀಡಿದ್ದಾರೆ.

ಟಿವಿಕೆ ಪಕ್ಷದ ಸಿದ್ಧಾಂತವು ಜಾತ್ಯತೀತ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅದರ ಸೈದ್ಧಾಂತಿಕ ಶತ್ರು ಮತ್ತು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜಕೀಯ ಶತ್ರು ಎಂದು ವಿಜಯ್ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಕ್ರಮಗಳು ಸಂವಿಧಾನಕ್ಕೆ ವಿರುದ್ಧವಾಗಿರುವುದರಿಂದ, ರಾಜ್ಯಪಾಲರ ಹುದ್ದೆಯನ್ನೇ ರದ್ದುಪಡಿಸಲು ಪಕ್ಷ ಪ್ರತಿಜ್ಞೆ ಮಾಡಿದೆ ಎಂದು ಟಿವಿಕೆ ಕಾರ್ಯಾಧ್ಯಕ್ಷೆ ಕ್ಯಾಥರೀನ್ ಪಾಂಡಿಯನ್ ಸಮ್ಮೇಳನದಲ್ಲಿ ಹೇಳಿದ್ದಾರೆ. ತಮಿಳು ಆಡಳಿತದ ಪ್ರಾಥಮಿಕ ಭಾಷೆಯಾಗಿರುವ ದ್ವಿಭಾಷಾ ನೀತಿಗೆ [ತಮಿಳು ಮತ್ತು ಇಂಗ್ಲಿಷ್] ಬದ್ಧವಾಗಿರಲು ಪಕ್ಷವು ಭರವಸೆ ನೀಡಿದೆ. ಜಾತಿ ಮತ್ತು ವರ್ಗ ಭೇದವನ್ನು ಹೋಗಲಾಡಿಸಲು ಮಧ್ಯಾಹ್ನದ ಊಟ ಮತ್ತು ಉಚಿತ ಸಮವಸ್ತ್ರವನ್ನು ನೀಡುವ ಕಾಮರಾಜರ ಮಾದರಿ ಶಾಲೆಗಳ ನಿರ್ಮಾಣಕ್ಕೆ ಒತ್ತು ನೀಡಲು ಪಕ್ಷವು ವಾಗ್ದಾನ ಮಾಡಿದೆ.

ಪಕ್ಷದ ಹೆಚ್ಚಿನ ಭರವಸೆಗಳು ಕಲ್ಯಾಣ ಪರ ಮತ್ತು ದ್ರಾವಿಡ ರಾಜಕೀಯಕ್ಕೆ ಅನುಗುಣವಾಗಿದ್ದರೂ, ಮೀಸಲಾತಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟೀಕರಿಸಿಲ್ಲ. ಸಮಾವೇಶದಲ್ಲಿ ಮಾತನಾಡಿದ ವಿಜಯ್, ರಾಜಕೀಯ ಮತ್ತು ಆರ್ಥಿಕ ಸಮಾನತೆ ಪಡೆಯಲು ಜನ ಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ ಜಾರಿಯಾಗಬೇಕು. ಅದಕ್ಕಾಗಿ ಜಾತಿ ಗಣತಿ ನಡೆಸಬೇಕೆಂಬ ಬಹುದಿನಗಳಿಂದ ಬಾಕಿ ಉಳಿದಿರುವ ಮನವಿಯನ್ನು ಪೂರೈಸಬೇಕು. ಈ ಮೂಲಕ ಎಲ್ಲರಿಗೂ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದಿದ್ದಾರೆ.

ಪಕ್ಷವು ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟವನ್ನು ಸುಧಾರಿಸುವ ಮತ್ತು ಜಾತಿ, ಧರ್ಮ, ಲಿಂಗ ಆಧಾರಿತ ತಾರತಮ್ಯ ಮಾಡದೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಒದಗಿಸುವ ಭರವಸೆ ನೀಡಿದೆ. ಇದಲ್ಲದೆ, ಮರಳು ಗಣಿಗಾರಿಕೆ, ಅಂತರ್ಜಲ ಮತ್ತು ಖನಿಜ ಸಂಪನ್ಮೂಲಗಳ ಅಕ್ರಮ ಬಳಕೆ ಕೊನೆಗೊಳಿಸಲು ಹೊಸ ನೀತಿಗಳನ್ನು ಅಳವಡಿಸಿಕೊಳ್ಳುವುದು, ಕೃಷಿ ಭೂಮಿ ಮತ್ತು ಜವುಗು ಪ್ರದೇಶಗಳ ಅತಿಕ್ರಮಣಗಳನ್ನು ತೆಗೆದು ಹಾಕುವುದು ಸೇರಿದಂತೆ ಹಲವು ಭರವೆಸಗಳನ್ನು ನೀಡಿದೆ.

ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ವಿಧಾನಸಭಾ ಸ್ಥಾನಗಳನ್ನು ಮೀಸಲಿಡುವುದಾಗಿ ಪಕ್ಷವು ವಾಗ್ದಾನ ಮಾಡಿದೆ. ನಿಧಾನವಾಗಿ, ಮೀಸಲಾತಿಯು 50% ವರೆಗೆ ಏರಿಸಲಾಗುವುದು ಎಂದು ಕ್ಯಾಥರೀನ್ ಘೋಷಿಸಿದ್ದಾರೆ. ಸರ್ಕಾರ ಮತ್ತು ಜನರ ನಡುವಿನ ಸಂಪರ್ಕ ಸುಲಭವಾಗಿಸಲು ಪಕ್ಷವು ಮಧುರೈನಲ್ಲಿ ರಾಜ್ಯ ಸೆಕ್ರೆಟ್ರೀಯೇಟ್ ಶಾಖೆಯನ್ನು ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಸಮಾವೇಶದಲ್ಲಿ ವಿಜಯ್ ಅವರು ಟಿವಿಕೆ 2026ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಬಹುಮತದ ಪಕ್ಷವಾಗಿ ಹೊರಹೊಮ್ಮುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿಗೂ ಮುಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...