Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ರಾಜ್ಯಪಾಲರ ಹುದ್ದೆ ರದ್ದು, ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ದ್ವಿಭಾಷಾ ನೀತಿ ಅಳವಡಿಕೆ ಭರವಸೆ ಕೊಟ್ಟ ನಟ ವಿಜಯ್

- Advertisement -
- Advertisement -

ತಮಿಳುನಾಡು ವಿಧಾನಸಭೆಗೆ 2026ರಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ನಟ ಹಾಗೂ ರಾಜಕಾರಣಿ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಮೊದಲ ರಾಜ್ಯ ಸಮ್ಮೇಳನ ಅಕ್ಟೋಬರ್ 27 ಭಾನುವಾರ ವಿಲ್ಲುಪುರಂ ಜಿಲ್ಲೆಯ ವಿಕ್ರವಂಡಿಯಲ್ಲಿ ನಡೆದಿದೆ.

ಮೊದಲ ಸಮ್ಮೇಳನದಲ್ಲೇ ಸುಮಾರು 3 ಲಕ್ಷದಷ್ಟು ಜನರನ್ನು ಸೇರಿಸುವ ಮೂಲಕ ವಿಜಯ್ ದೇಶದ ಗಮನ ಸೆಳೆದಿದ್ದಾರೆ. ಚೊಚ್ಚಲ ಸಮ್ಮೇಳನದಲ್ಲಿ ವಿಜಯ್ ತಮಿಳು ಜನತೆಗೆ ನೀಡಿರುವ ಪ್ರಮುಖ ಭರವಸೆಗಳು ಕೂಡ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸುವುದು, ಜಾತಿ ಗಣತಿ ನಡೆಸುವುದು, ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವುದು ಮತ್ತು ಕಾಮರಾಜರ ಮಾದರಿ ಶಾಲೆಗಳನ್ನು ಸ್ಥಾಪಿಸುವ ಭರವಸೆಗಳನ್ನು ವಿಜಯ್ ನೀಡಿದ್ದಾರೆ.

ಟಿವಿಕೆ ಪಕ್ಷದ ಸಿದ್ಧಾಂತವು ಜಾತ್ಯತೀತ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅದರ ಸೈದ್ಧಾಂತಿಕ ಶತ್ರು ಮತ್ತು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜಕೀಯ ಶತ್ರು ಎಂದು ವಿಜಯ್ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಕ್ರಮಗಳು ಸಂವಿಧಾನಕ್ಕೆ ವಿರುದ್ಧವಾಗಿರುವುದರಿಂದ, ರಾಜ್ಯಪಾಲರ ಹುದ್ದೆಯನ್ನೇ ರದ್ದುಪಡಿಸಲು ಪಕ್ಷ ಪ್ರತಿಜ್ಞೆ ಮಾಡಿದೆ ಎಂದು ಟಿವಿಕೆ ಕಾರ್ಯಾಧ್ಯಕ್ಷೆ ಕ್ಯಾಥರೀನ್ ಪಾಂಡಿಯನ್ ಸಮ್ಮೇಳನದಲ್ಲಿ ಹೇಳಿದ್ದಾರೆ. ತಮಿಳು ಆಡಳಿತದ ಪ್ರಾಥಮಿಕ ಭಾಷೆಯಾಗಿರುವ ದ್ವಿಭಾಷಾ ನೀತಿಗೆ [ತಮಿಳು ಮತ್ತು ಇಂಗ್ಲಿಷ್] ಬದ್ಧವಾಗಿರಲು ಪಕ್ಷವು ಭರವಸೆ ನೀಡಿದೆ. ಜಾತಿ ಮತ್ತು ವರ್ಗ ಭೇದವನ್ನು ಹೋಗಲಾಡಿಸಲು ಮಧ್ಯಾಹ್ನದ ಊಟ ಮತ್ತು ಉಚಿತ ಸಮವಸ್ತ್ರವನ್ನು ನೀಡುವ ಕಾಮರಾಜರ ಮಾದರಿ ಶಾಲೆಗಳ ನಿರ್ಮಾಣಕ್ಕೆ ಒತ್ತು ನೀಡಲು ಪಕ್ಷವು ವಾಗ್ದಾನ ಮಾಡಿದೆ.

ಪಕ್ಷದ ಹೆಚ್ಚಿನ ಭರವಸೆಗಳು ಕಲ್ಯಾಣ ಪರ ಮತ್ತು ದ್ರಾವಿಡ ರಾಜಕೀಯಕ್ಕೆ ಅನುಗುಣವಾಗಿದ್ದರೂ, ಮೀಸಲಾತಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟೀಕರಿಸಿಲ್ಲ. ಸಮಾವೇಶದಲ್ಲಿ ಮಾತನಾಡಿದ ವಿಜಯ್, ರಾಜಕೀಯ ಮತ್ತು ಆರ್ಥಿಕ ಸಮಾನತೆ ಪಡೆಯಲು ಜನ ಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ ಜಾರಿಯಾಗಬೇಕು. ಅದಕ್ಕಾಗಿ ಜಾತಿ ಗಣತಿ ನಡೆಸಬೇಕೆಂಬ ಬಹುದಿನಗಳಿಂದ ಬಾಕಿ ಉಳಿದಿರುವ ಮನವಿಯನ್ನು ಪೂರೈಸಬೇಕು. ಈ ಮೂಲಕ ಎಲ್ಲರಿಗೂ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದಿದ್ದಾರೆ.

ಪಕ್ಷವು ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟವನ್ನು ಸುಧಾರಿಸುವ ಮತ್ತು ಜಾತಿ, ಧರ್ಮ, ಲಿಂಗ ಆಧಾರಿತ ತಾರತಮ್ಯ ಮಾಡದೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಒದಗಿಸುವ ಭರವಸೆ ನೀಡಿದೆ. ಇದಲ್ಲದೆ, ಮರಳು ಗಣಿಗಾರಿಕೆ, ಅಂತರ್ಜಲ ಮತ್ತು ಖನಿಜ ಸಂಪನ್ಮೂಲಗಳ ಅಕ್ರಮ ಬಳಕೆ ಕೊನೆಗೊಳಿಸಲು ಹೊಸ ನೀತಿಗಳನ್ನು ಅಳವಡಿಸಿಕೊಳ್ಳುವುದು, ಕೃಷಿ ಭೂಮಿ ಮತ್ತು ಜವುಗು ಪ್ರದೇಶಗಳ ಅತಿಕ್ರಮಣಗಳನ್ನು ತೆಗೆದು ಹಾಕುವುದು ಸೇರಿದಂತೆ ಹಲವು ಭರವೆಸಗಳನ್ನು ನೀಡಿದೆ.

ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ವಿಧಾನಸಭಾ ಸ್ಥಾನಗಳನ್ನು ಮೀಸಲಿಡುವುದಾಗಿ ಪಕ್ಷವು ವಾಗ್ದಾನ ಮಾಡಿದೆ. ನಿಧಾನವಾಗಿ, ಮೀಸಲಾತಿಯು 50% ವರೆಗೆ ಏರಿಸಲಾಗುವುದು ಎಂದು ಕ್ಯಾಥರೀನ್ ಘೋಷಿಸಿದ್ದಾರೆ. ಸರ್ಕಾರ ಮತ್ತು ಜನರ ನಡುವಿನ ಸಂಪರ್ಕ ಸುಲಭವಾಗಿಸಲು ಪಕ್ಷವು ಮಧುರೈನಲ್ಲಿ ರಾಜ್ಯ ಸೆಕ್ರೆಟ್ರೀಯೇಟ್ ಶಾಖೆಯನ್ನು ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಸಮಾವೇಶದಲ್ಲಿ ವಿಜಯ್ ಅವರು ಟಿವಿಕೆ 2026ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಬಹುಮತದ ಪಕ್ಷವಾಗಿ ಹೊರಹೊಮ್ಮುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿಗೂ ಮುಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...