Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ರಾಜ್ಯಪಾಲರ ಹುದ್ದೆ ರದ್ದು, ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ದ್ವಿಭಾಷಾ ನೀತಿ ಅಳವಡಿಕೆ ಭರವಸೆ ಕೊಟ್ಟ ನಟ ವಿಜಯ್

- Advertisement -
- Advertisement -

ತಮಿಳುನಾಡು ವಿಧಾನಸಭೆಗೆ 2026ರಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ನಟ ಹಾಗೂ ರಾಜಕಾರಣಿ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಮೊದಲ ರಾಜ್ಯ ಸಮ್ಮೇಳನ ಅಕ್ಟೋಬರ್ 27 ಭಾನುವಾರ ವಿಲ್ಲುಪುರಂ ಜಿಲ್ಲೆಯ ವಿಕ್ರವಂಡಿಯಲ್ಲಿ ನಡೆದಿದೆ.

ಮೊದಲ ಸಮ್ಮೇಳನದಲ್ಲೇ ಸುಮಾರು 3 ಲಕ್ಷದಷ್ಟು ಜನರನ್ನು ಸೇರಿಸುವ ಮೂಲಕ ವಿಜಯ್ ದೇಶದ ಗಮನ ಸೆಳೆದಿದ್ದಾರೆ. ಚೊಚ್ಚಲ ಸಮ್ಮೇಳನದಲ್ಲಿ ವಿಜಯ್ ತಮಿಳು ಜನತೆಗೆ ನೀಡಿರುವ ಪ್ರಮುಖ ಭರವಸೆಗಳು ಕೂಡ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸುವುದು, ಜಾತಿ ಗಣತಿ ನಡೆಸುವುದು, ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವುದು ಮತ್ತು ಕಾಮರಾಜರ ಮಾದರಿ ಶಾಲೆಗಳನ್ನು ಸ್ಥಾಪಿಸುವ ಭರವಸೆಗಳನ್ನು ವಿಜಯ್ ನೀಡಿದ್ದಾರೆ.

ಟಿವಿಕೆ ಪಕ್ಷದ ಸಿದ್ಧಾಂತವು ಜಾತ್ಯತೀತ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅದರ ಸೈದ್ಧಾಂತಿಕ ಶತ್ರು ಮತ್ತು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜಕೀಯ ಶತ್ರು ಎಂದು ವಿಜಯ್ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಕ್ರಮಗಳು ಸಂವಿಧಾನಕ್ಕೆ ವಿರುದ್ಧವಾಗಿರುವುದರಿಂದ, ರಾಜ್ಯಪಾಲರ ಹುದ್ದೆಯನ್ನೇ ರದ್ದುಪಡಿಸಲು ಪಕ್ಷ ಪ್ರತಿಜ್ಞೆ ಮಾಡಿದೆ ಎಂದು ಟಿವಿಕೆ ಕಾರ್ಯಾಧ್ಯಕ್ಷೆ ಕ್ಯಾಥರೀನ್ ಪಾಂಡಿಯನ್ ಸಮ್ಮೇಳನದಲ್ಲಿ ಹೇಳಿದ್ದಾರೆ. ತಮಿಳು ಆಡಳಿತದ ಪ್ರಾಥಮಿಕ ಭಾಷೆಯಾಗಿರುವ ದ್ವಿಭಾಷಾ ನೀತಿಗೆ [ತಮಿಳು ಮತ್ತು ಇಂಗ್ಲಿಷ್] ಬದ್ಧವಾಗಿರಲು ಪಕ್ಷವು ಭರವಸೆ ನೀಡಿದೆ. ಜಾತಿ ಮತ್ತು ವರ್ಗ ಭೇದವನ್ನು ಹೋಗಲಾಡಿಸಲು ಮಧ್ಯಾಹ್ನದ ಊಟ ಮತ್ತು ಉಚಿತ ಸಮವಸ್ತ್ರವನ್ನು ನೀಡುವ ಕಾಮರಾಜರ ಮಾದರಿ ಶಾಲೆಗಳ ನಿರ್ಮಾಣಕ್ಕೆ ಒತ್ತು ನೀಡಲು ಪಕ್ಷವು ವಾಗ್ದಾನ ಮಾಡಿದೆ.

ಪಕ್ಷದ ಹೆಚ್ಚಿನ ಭರವಸೆಗಳು ಕಲ್ಯಾಣ ಪರ ಮತ್ತು ದ್ರಾವಿಡ ರಾಜಕೀಯಕ್ಕೆ ಅನುಗುಣವಾಗಿದ್ದರೂ, ಮೀಸಲಾತಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟೀಕರಿಸಿಲ್ಲ. ಸಮಾವೇಶದಲ್ಲಿ ಮಾತನಾಡಿದ ವಿಜಯ್, ರಾಜಕೀಯ ಮತ್ತು ಆರ್ಥಿಕ ಸಮಾನತೆ ಪಡೆಯಲು ಜನ ಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ ಜಾರಿಯಾಗಬೇಕು. ಅದಕ್ಕಾಗಿ ಜಾತಿ ಗಣತಿ ನಡೆಸಬೇಕೆಂಬ ಬಹುದಿನಗಳಿಂದ ಬಾಕಿ ಉಳಿದಿರುವ ಮನವಿಯನ್ನು ಪೂರೈಸಬೇಕು. ಈ ಮೂಲಕ ಎಲ್ಲರಿಗೂ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದಿದ್ದಾರೆ.

ಪಕ್ಷವು ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟವನ್ನು ಸುಧಾರಿಸುವ ಮತ್ತು ಜಾತಿ, ಧರ್ಮ, ಲಿಂಗ ಆಧಾರಿತ ತಾರತಮ್ಯ ಮಾಡದೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಒದಗಿಸುವ ಭರವಸೆ ನೀಡಿದೆ. ಇದಲ್ಲದೆ, ಮರಳು ಗಣಿಗಾರಿಕೆ, ಅಂತರ್ಜಲ ಮತ್ತು ಖನಿಜ ಸಂಪನ್ಮೂಲಗಳ ಅಕ್ರಮ ಬಳಕೆ ಕೊನೆಗೊಳಿಸಲು ಹೊಸ ನೀತಿಗಳನ್ನು ಅಳವಡಿಸಿಕೊಳ್ಳುವುದು, ಕೃಷಿ ಭೂಮಿ ಮತ್ತು ಜವುಗು ಪ್ರದೇಶಗಳ ಅತಿಕ್ರಮಣಗಳನ್ನು ತೆಗೆದು ಹಾಕುವುದು ಸೇರಿದಂತೆ ಹಲವು ಭರವೆಸಗಳನ್ನು ನೀಡಿದೆ.

ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ವಿಧಾನಸಭಾ ಸ್ಥಾನಗಳನ್ನು ಮೀಸಲಿಡುವುದಾಗಿ ಪಕ್ಷವು ವಾಗ್ದಾನ ಮಾಡಿದೆ. ನಿಧಾನವಾಗಿ, ಮೀಸಲಾತಿಯು 50% ವರೆಗೆ ಏರಿಸಲಾಗುವುದು ಎಂದು ಕ್ಯಾಥರೀನ್ ಘೋಷಿಸಿದ್ದಾರೆ. ಸರ್ಕಾರ ಮತ್ತು ಜನರ ನಡುವಿನ ಸಂಪರ್ಕ ಸುಲಭವಾಗಿಸಲು ಪಕ್ಷವು ಮಧುರೈನಲ್ಲಿ ರಾಜ್ಯ ಸೆಕ್ರೆಟ್ರೀಯೇಟ್ ಶಾಖೆಯನ್ನು ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಸಮಾವೇಶದಲ್ಲಿ ವಿಜಯ್ ಅವರು ಟಿವಿಕೆ 2026ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಬಹುಮತದ ಪಕ್ಷವಾಗಿ ಹೊರಹೊಮ್ಮುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿಗೂ ಮುಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...