Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ಸಮಾನತೆ-ಸಾಮಾಜಿಕ ನ್ಯಾಯಕ್ಕೆ ಒತ್ತು, ಜಾತಿಗಣತಿ ಭರವಸೆ : ಸಂಚಲನ ಸೃಷ್ಟಿಸಿದ ಹೊಸ ಪಕ್ಷ ಟಿವಿಕೆ

ರಾಜ್ಯಪಾಲರ ಹುದ್ದೆ ರದ್ದು, ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ದ್ವಿಭಾಷಾ ನೀತಿ ಅಳವಡಿಕೆ ಭರವಸೆ ಕೊಟ್ಟ ನಟ ವಿಜಯ್

- Advertisement -
- Advertisement -

ತಮಿಳುನಾಡು ವಿಧಾನಸಭೆಗೆ 2026ರಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ನಟ ಹಾಗೂ ರಾಜಕಾರಣಿ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಮೊದಲ ರಾಜ್ಯ ಸಮ್ಮೇಳನ ಅಕ್ಟೋಬರ್ 27 ಭಾನುವಾರ ವಿಲ್ಲುಪುರಂ ಜಿಲ್ಲೆಯ ವಿಕ್ರವಂಡಿಯಲ್ಲಿ ನಡೆದಿದೆ.

ಮೊದಲ ಸಮ್ಮೇಳನದಲ್ಲೇ ಸುಮಾರು 3 ಲಕ್ಷದಷ್ಟು ಜನರನ್ನು ಸೇರಿಸುವ ಮೂಲಕ ವಿಜಯ್ ದೇಶದ ಗಮನ ಸೆಳೆದಿದ್ದಾರೆ. ಚೊಚ್ಚಲ ಸಮ್ಮೇಳನದಲ್ಲಿ ವಿಜಯ್ ತಮಿಳು ಜನತೆಗೆ ನೀಡಿರುವ ಪ್ರಮುಖ ಭರವಸೆಗಳು ಕೂಡ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಜನಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ, ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸುವುದು, ಜಾತಿ ಗಣತಿ ನಡೆಸುವುದು, ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವುದು ಮತ್ತು ಕಾಮರಾಜರ ಮಾದರಿ ಶಾಲೆಗಳನ್ನು ಸ್ಥಾಪಿಸುವ ಭರವಸೆಗಳನ್ನು ವಿಜಯ್ ನೀಡಿದ್ದಾರೆ.

ಟಿವಿಕೆ ಪಕ್ಷದ ಸಿದ್ಧಾಂತವು ಜಾತ್ಯತೀತ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅದರ ಸೈದ್ಧಾಂತಿಕ ಶತ್ರು ಮತ್ತು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜಕೀಯ ಶತ್ರು ಎಂದು ವಿಜಯ್ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಕ್ರಮಗಳು ಸಂವಿಧಾನಕ್ಕೆ ವಿರುದ್ಧವಾಗಿರುವುದರಿಂದ, ರಾಜ್ಯಪಾಲರ ಹುದ್ದೆಯನ್ನೇ ರದ್ದುಪಡಿಸಲು ಪಕ್ಷ ಪ್ರತಿಜ್ಞೆ ಮಾಡಿದೆ ಎಂದು ಟಿವಿಕೆ ಕಾರ್ಯಾಧ್ಯಕ್ಷೆ ಕ್ಯಾಥರೀನ್ ಪಾಂಡಿಯನ್ ಸಮ್ಮೇಳನದಲ್ಲಿ ಹೇಳಿದ್ದಾರೆ. ತಮಿಳು ಆಡಳಿತದ ಪ್ರಾಥಮಿಕ ಭಾಷೆಯಾಗಿರುವ ದ್ವಿಭಾಷಾ ನೀತಿಗೆ [ತಮಿಳು ಮತ್ತು ಇಂಗ್ಲಿಷ್] ಬದ್ಧವಾಗಿರಲು ಪಕ್ಷವು ಭರವಸೆ ನೀಡಿದೆ. ಜಾತಿ ಮತ್ತು ವರ್ಗ ಭೇದವನ್ನು ಹೋಗಲಾಡಿಸಲು ಮಧ್ಯಾಹ್ನದ ಊಟ ಮತ್ತು ಉಚಿತ ಸಮವಸ್ತ್ರವನ್ನು ನೀಡುವ ಕಾಮರಾಜರ ಮಾದರಿ ಶಾಲೆಗಳ ನಿರ್ಮಾಣಕ್ಕೆ ಒತ್ತು ನೀಡಲು ಪಕ್ಷವು ವಾಗ್ದಾನ ಮಾಡಿದೆ.

ಪಕ್ಷದ ಹೆಚ್ಚಿನ ಭರವಸೆಗಳು ಕಲ್ಯಾಣ ಪರ ಮತ್ತು ದ್ರಾವಿಡ ರಾಜಕೀಯಕ್ಕೆ ಅನುಗುಣವಾಗಿದ್ದರೂ, ಮೀಸಲಾತಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟೀಕರಿಸಿಲ್ಲ. ಸಮಾವೇಶದಲ್ಲಿ ಮಾತನಾಡಿದ ವಿಜಯ್, ರಾಜಕೀಯ ಮತ್ತು ಆರ್ಥಿಕ ಸಮಾನತೆ ಪಡೆಯಲು ಜನ ಸಂಖ್ಯೆಗೆ ಅನುಗುಣ ಪ್ರಾತಿನಿಧ್ಯ ಜಾರಿಯಾಗಬೇಕು. ಅದಕ್ಕಾಗಿ ಜಾತಿ ಗಣತಿ ನಡೆಸಬೇಕೆಂಬ ಬಹುದಿನಗಳಿಂದ ಬಾಕಿ ಉಳಿದಿರುವ ಮನವಿಯನ್ನು ಪೂರೈಸಬೇಕು. ಈ ಮೂಲಕ ಎಲ್ಲರಿಗೂ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದಿದ್ದಾರೆ.

ಪಕ್ಷವು ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟವನ್ನು ಸುಧಾರಿಸುವ ಮತ್ತು ಜಾತಿ, ಧರ್ಮ, ಲಿಂಗ ಆಧಾರಿತ ತಾರತಮ್ಯ ಮಾಡದೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಒದಗಿಸುವ ಭರವಸೆ ನೀಡಿದೆ. ಇದಲ್ಲದೆ, ಮರಳು ಗಣಿಗಾರಿಕೆ, ಅಂತರ್ಜಲ ಮತ್ತು ಖನಿಜ ಸಂಪನ್ಮೂಲಗಳ ಅಕ್ರಮ ಬಳಕೆ ಕೊನೆಗೊಳಿಸಲು ಹೊಸ ನೀತಿಗಳನ್ನು ಅಳವಡಿಸಿಕೊಳ್ಳುವುದು, ಕೃಷಿ ಭೂಮಿ ಮತ್ತು ಜವುಗು ಪ್ರದೇಶಗಳ ಅತಿಕ್ರಮಣಗಳನ್ನು ತೆಗೆದು ಹಾಕುವುದು ಸೇರಿದಂತೆ ಹಲವು ಭರವೆಸಗಳನ್ನು ನೀಡಿದೆ.

ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ವಿಧಾನಸಭಾ ಸ್ಥಾನಗಳನ್ನು ಮೀಸಲಿಡುವುದಾಗಿ ಪಕ್ಷವು ವಾಗ್ದಾನ ಮಾಡಿದೆ. ನಿಧಾನವಾಗಿ, ಮೀಸಲಾತಿಯು 50% ವರೆಗೆ ಏರಿಸಲಾಗುವುದು ಎಂದು ಕ್ಯಾಥರೀನ್ ಘೋಷಿಸಿದ್ದಾರೆ. ಸರ್ಕಾರ ಮತ್ತು ಜನರ ನಡುವಿನ ಸಂಪರ್ಕ ಸುಲಭವಾಗಿಸಲು ಪಕ್ಷವು ಮಧುರೈನಲ್ಲಿ ರಾಜ್ಯ ಸೆಕ್ರೆಟ್ರೀಯೇಟ್ ಶಾಖೆಯನ್ನು ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಸಮಾವೇಶದಲ್ಲಿ ವಿಜಯ್ ಅವರು ಟಿವಿಕೆ 2026ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಬಹುಮತದ ಪಕ್ಷವಾಗಿ ಹೊರಹೊಮ್ಮುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿಗೂ ಮುಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...