Homeಮುಖಪುಟನಾನು ಈಗಲೇ ರಾಜಕೀಯ ಸೇರೊಲ್ಲ: ಜೆಡಿಎಸ್‌ ಬಗೆಗಿನ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ವಿಜೇತಾ ಅನಂತ್ ಕುಮಾರ್

ನಾನು ಈಗಲೇ ರಾಜಕೀಯ ಸೇರೊಲ್ಲ: ಜೆಡಿಎಸ್‌ ಬಗೆಗಿನ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ವಿಜೇತಾ ಅನಂತ್ ಕುಮಾರ್

- Advertisement -
- Advertisement -

ಕರ್ನಾಟಕದ ರಾಜಕೀಯ ಕುತೂಹಲಕರವಾಗಿದೆ ಏಕೆ ಗೊತ್ತೆ…? ಜೆಡಿಎಸ್ ಇನ್ನು ಬಲಿಷ್ಠ ರಾಜಕೀಯ ಶಕ್ತಿಯಾಗಿರುವುದರಿಂದ.. ಎಂದು ಟ್ವೀಟ್ ಮಾಡುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿದ್ದ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್‌ ಕುಮಾರ್ ರವರ ಮಗಳು ವಿಜೇತಾ ಅನಂತ್ ಕುಮಾರ್ ತಮ್ಮ ಹೇಳಿಕೆ ಕುರಿತು ಇಂದು ಸ್ಪಷ್ಟೀಕರಣ ನೀಡಿದ್ದಾರೆ.

ಒಂದು ಸಿದ್ಧಾಂತ ಮತ್ತು ಒಂದು ರಾಜಕೀಯ ವಿಶ್ಲೇಷಣೆ ಅಥವಾ ಅವಲೋಕನವಿರುತ್ತದೆ. ಇವುಗಳು ಸಾಮಾನ್ಯವಾಗಿ ಒಂದೇ ಆಗಿ ಗೊಂದಲಕ್ಕೊಳಗಾಗುತ್ತವೆ. ಒಬ್ಬ ಉತ್ತಮ ಕಲಿಕಾರ್ಥಿಯಾಗಿ ಇದು ನನ್ನ ರಾಜಕೀಯ ಅವಲೋಕನವೇ ಹೊರತು ನನ್ನ ಸೈದ್ಧಾಂತಿಕ ಅನುಮೋದನೆಯಲ್ಲ. ನನ್ನ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ನನ್ನ ಕುಟುಂಬ ಸದಸ್ಯರ ಅನಿಸಿಕೆಗಳೊಂದಿಗೆ ತಳುಕು ಹಾಕುವುದು ಅನ್ಯಾಯವಾಗಿದೆ ಎಂದು ನಿನ್ನೆ ವಿಜೇತಾ ಬರೆದಿದ್ದಾರೆ.

ಪರಸ್ಪರ ಗೌರವವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲಭೂತವಾದುದು ಎಂದು ಅಪ್ಪ ನನಗೆ ಕಲಿಸಿದ್ದಾರೆ. ನನ್ನ ಗೌರವದ ಅಭಿವ್ಯಕ್ತಿಯನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಈಗಲೇ ನಾನು ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ. ಹೆಚ್ಚಿನದನ್ನು ಕಲಿಯಲು ಬಯಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ನನ್ನ ತಂದೆ ಕರ್ನಾಟಕದಲ್ಲಿ 35 ವರ್ಷಗಳ ಅವಧಿಯಲ್ಲಿ ಲಕ್ಷಾಂತರ ಕಾರ್ಯಕರ್ತರೊಂದಿಗೆ ಸೇರಿ ಒಂದೊಂದೆ ಇಟ್ಟಿಗೆ ಜೋಡಿಸುವ ಹಾಗೆ ಬಿಜೆಪಿಯನ್ನು ಕಟ್ಟಿದರು. ಅಮ್ಮ ಹಸಿವು, ಪೋಷಣೆ ಮತ್ತು ಪರಿಸರ ಕ್ಷೇತ್ರದಲ್ಲಿ ಮತ್ತು ಪಕ್ಷಕ್ಕಾಗಿ ಅತ್ಯಂತ ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಹ ಅವರು ಬರೆದಿದ್ದಾರೆ.

ಒಂದು ಪಕ್ಷಕ್ಕೆ ಸೇವೆ ಸಲ್ಲಿಸುವ ಮೂಲಕ ಮತ್ತು ಕಾರ್ಯಕರ್ತನಾಗಿ ಕೆಲಸ ಮಾಡುವ ಮೂಲಕ ರಾಜಕೀಯ ಆರಂಭವಾಗಬೇಕು. ದೇಶಕ್ಕಾಗಿ ಸೇವೆ ಸಲ್ಲಿಸಲು ನಾನಿನ್ನು ಕಲಿಯುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ವಿಜೇತಾ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ‘ಅನಂತಕುಮಾರ್ ಪುತ್ರಿಯವರ ಹೇಳಿಕೆಗೆ ನಾನು ಅಭಿನಂದನೆ ಸಲ್ಲಿಸಿದ್ದೇನೆ. ವಿಜೇತಾ ನನಗೆ ಸಹೋದರಿ ಸಮಾನ. ಅವರ ಮಾತು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ. ವಿಜೇತಾ ಮತ್ತು ಅವರ ತಾಯಿ ತೇಜಸ್ವಿನಿ ಅನಂತಕುಮಾರ್‌ ಪಕ್ಷಕ್ಕೆ ಬಂದರೇ ಸ್ವಾಗತ” ಎಂದಿದ್ದರು.


ಇದನ್ನೂ ಓದಿ; ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ ಎಂದ ಅನಂತಕುಮಾರ್‌ ಮಗಳು, ಪಕ್ಷಕ್ಕೆ ಸ್ವಾಗತ ಎಂದ ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...