Homeಮುಖಪುಟವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

ವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

- Advertisement -
- Advertisement -

ಕಳೆದ ವರ್ಷ ನಡೆದ ದರೋಡೆಕೋರ ವಿಕಾಸ್ ದುಬೆಯ ಎನ್‌ಕೌಂಟರ್‌‌‌ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ತನಿಖಾ ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. ಸಾಕಷ್ಟು ಪುರಾವೆಗಳೊಂದಿಗೆ ಮುಂದೆ ಬರದಿರುವುದಕ್ಕೆ ಸಾರ್ವಜನಿಕರನ್ನು, ಮಾಧ್ಯಮಗಳನ್ನು ಮತ್ತು ಅಪರಾಧಿಯ ಕುಟುಂಬವನ್ನು ತನಿಖಾ ಆಯೋಗವು ದೂಷಿಸಿದೆ ಎಂದು ವರದಿಯಾಗಿದೆ.

ದರೋಡೆಕೋರ ವಿಕಾಸ್ ದುಬೆ ಹಾಗೂ ಸಹಚರರು ಹೊಂಚು ಹಾಕಿ ಎಂಟು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿ ಕೊಂದಿದ್ದರು. ಇದಾದ ನಂತರ ಪರಾರಿಯಾಗಿದ್ದ ದುಬೆಯನ್ನು ಉತ್ತರ ಪ್ರದೇಶದ ಹೊರಗೆ ಬಂಧನ ಮಾಡಲಾಗಿತ್ತು. ಅಲ್ಲಿಂದ ದುಬೆಯನ್ನು ಪೊಲೀಸ್ ಬೆಂಗಾವಲಿನಲ್ಲಿ ಮತ್ತೆ ಯುಪಿಗೆ ಕರೆತರಲಾಗಿತ್ತು.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು 

ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಈ ಸಮಯದಲ್ಲಿ ದುಬೆ ಪೊಲೀಸರ ಬಂದೂಕನ್ನು ಕಿತ್ತು, ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದಕ್ಕೆ ದುಬೆಯನ್ನು ಎನ್‌ಕೌಂಟರ್‌ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಎನ್‌ಕೌಂಟರ್‌‌ ಬಗ್ಗೆ ಪೊಲೀಸ್ ಹೇಳಿಕೆಯ ಆಯಾಮವನ್ನು ಅಲ್ಲಗಳೆಯಲು ಯಾವುದೇ ಪುರಾವೆಗಳಿಲ್ಲ, ಆದರೆ ಅದನ್ನು ಅವರ ಹೇಳಿಕೆಯ ಪರವಾಗಿ ಸಾಕಷ್ಟು ಪುರಾವೆಗಳು ಇವೆ ಎಂದು ಮೂವರು ಸದಸ್ಯರ ವಿಚಾರಣಾ ಸಮಿತಿಯು ಯುಪಿ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ವಿಕಾಸ್ ದುಬೆಯನ್ನು ನಕಲಿ ಎನ್ಕೌಂಟರ್‌ನಲ್ಲಿ ಕೊಲ್ಲಲಾಗಿದೆ, ಆದ್ದರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಕೆಯಾಗಿತ್ತು. ಹಾಗಾಗಿ ಕೋರ್ಟ್ ಪ್ರಕರಣದ ತನಿಖೆಗೆ ನ್ಯಾಯಾಂಗ ಸಮಿತಿಯನ್ನು ರಚಿಸಿತ್ತು.

ಇದನ್ನೂ ಓದಿ:  ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನ್ಯಾಯಮೂರ್ತಿ ಬಿ.ಎಸ್. ಚೌಹಾನ್ ನೇತೃತ್ವದ ವಿಚಾರಣಾ ಆಯೋಗವು ಪೊಲೀಸರ ವಿರುದ್ಧ ಯಾರೂ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಹೇಳಿದ್ದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಸಾಕ್ಷ್ಯಗಳನ್ನು ಸಂಗ್ರಹಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ಅವರ ಆಯಾಮವನ್ನು ನೀಡುವಂತೆ ಕೇಳಿಕೊಂಡಿದ್ದೇವೆ. ಮಾಧ್ಯಮಗಳು ಯುಪಿ ಪೊಲೀಸರ ವಿರುದ್ಧ ಅನೇಕ ‘ಸುದ್ದಿಗಳನ್ನು’ ಬರೆದಿದ್ದವು, ಆದರೆ ಯಾವುದೂ ಯಾವುದೇ ಪುರಾವೆಗಳನ್ನು ನೀಡಿಲ್ಲ” ಎಂದು ಮೂಲಗಳು ತಿಳಿಸಿವೆ.

“ನಾಗರಿಕರು ಮತ್ತು ಮಾಧ್ಯಮಗಳು ತಮಗೆ ಸಹಕಾರ ನೀಡದೆ ಇರುವುದು ವಿಚಾರಣಾ ಆಯೋಗವನ್ನು ರಚಿಸಿರುವ ಉದ್ದೇಶ ಸೋಲುವಂತಾಗಿದೆ” ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ!

ಸಮಿತಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ವಿಕಾಸ್ ದುಬೆ ಅವರ ಪತ್ನಿ ಅಥವಾ ಕುಟುಂಬ ಸದಸ್ಯರು ಕೂಡಾ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯಾಧಾರ ನೀಡುವಂತೆ ಸ್ಥಳೀಯ ಪತ್ರಿಕೆಗಳಲ್ಲಿ ನೋಟಿಸ್ ನೀಡಲಾಗಿತ್ತು ಆದರೆ ಯಾರೂ ಸಾಕ್ಷಿಗಳೊಂದಿಗೆ ಹಾಜರಾಗಲಿಲ್ಲ ಎಂದು ತನಿಖಾ ಆಯೋಗ ಹೇಳಿದೆ.

“ಪ್ರಕರಣದ ಬಗ್ಗೆ ಮಾಧ್ಯಮಗಳು ಪೊಲೀಸರ ವಿರುದ್ದ ಭಾರಿ ಮಾತನಾಡಿತ್ತು. ಆದರೆ ಸಮಿತಿಯ ಕೋರಿಕೆಯ ಹೊರತಾಗಿಯು ಯುಪಿ ಪೊಲೀಸರ ವಿರುದ್ಧ ಸಾಕ್ಷ್ಯ ನೀಡಲು ಮಾಧ್ಯಮಗಳು ಏಕೆ ಮುಂದೆ ಬರಲಿಲ್ಲ?” ಎಂದು ಸಮಿತಿಯು ಪ್ರಶ್ನಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ವಿಡಿಯೊ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...