Homeಮುಖಪುಟವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

ವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

- Advertisement -
- Advertisement -

ಕಳೆದ ವರ್ಷ ನಡೆದ ದರೋಡೆಕೋರ ವಿಕಾಸ್ ದುಬೆಯ ಎನ್‌ಕೌಂಟರ್‌‌‌ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ತನಿಖಾ ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. ಸಾಕಷ್ಟು ಪುರಾವೆಗಳೊಂದಿಗೆ ಮುಂದೆ ಬರದಿರುವುದಕ್ಕೆ ಸಾರ್ವಜನಿಕರನ್ನು, ಮಾಧ್ಯಮಗಳನ್ನು ಮತ್ತು ಅಪರಾಧಿಯ ಕುಟುಂಬವನ್ನು ತನಿಖಾ ಆಯೋಗವು ದೂಷಿಸಿದೆ ಎಂದು ವರದಿಯಾಗಿದೆ.

ದರೋಡೆಕೋರ ವಿಕಾಸ್ ದುಬೆ ಹಾಗೂ ಸಹಚರರು ಹೊಂಚು ಹಾಕಿ ಎಂಟು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿ ಕೊಂದಿದ್ದರು. ಇದಾದ ನಂತರ ಪರಾರಿಯಾಗಿದ್ದ ದುಬೆಯನ್ನು ಉತ್ತರ ಪ್ರದೇಶದ ಹೊರಗೆ ಬಂಧನ ಮಾಡಲಾಗಿತ್ತು. ಅಲ್ಲಿಂದ ದುಬೆಯನ್ನು ಪೊಲೀಸ್ ಬೆಂಗಾವಲಿನಲ್ಲಿ ಮತ್ತೆ ಯುಪಿಗೆ ಕರೆತರಲಾಗಿತ್ತು.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು 

ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಈ ಸಮಯದಲ್ಲಿ ದುಬೆ ಪೊಲೀಸರ ಬಂದೂಕನ್ನು ಕಿತ್ತು, ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದಕ್ಕೆ ದುಬೆಯನ್ನು ಎನ್‌ಕೌಂಟರ್‌ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಎನ್‌ಕೌಂಟರ್‌‌ ಬಗ್ಗೆ ಪೊಲೀಸ್ ಹೇಳಿಕೆಯ ಆಯಾಮವನ್ನು ಅಲ್ಲಗಳೆಯಲು ಯಾವುದೇ ಪುರಾವೆಗಳಿಲ್ಲ, ಆದರೆ ಅದನ್ನು ಅವರ ಹೇಳಿಕೆಯ ಪರವಾಗಿ ಸಾಕಷ್ಟು ಪುರಾವೆಗಳು ಇವೆ ಎಂದು ಮೂವರು ಸದಸ್ಯರ ವಿಚಾರಣಾ ಸಮಿತಿಯು ಯುಪಿ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ವಿಕಾಸ್ ದುಬೆಯನ್ನು ನಕಲಿ ಎನ್ಕೌಂಟರ್‌ನಲ್ಲಿ ಕೊಲ್ಲಲಾಗಿದೆ, ಆದ್ದರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಕೆಯಾಗಿತ್ತು. ಹಾಗಾಗಿ ಕೋರ್ಟ್ ಪ್ರಕರಣದ ತನಿಖೆಗೆ ನ್ಯಾಯಾಂಗ ಸಮಿತಿಯನ್ನು ರಚಿಸಿತ್ತು.

ಇದನ್ನೂ ಓದಿ:  ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನ್ಯಾಯಮೂರ್ತಿ ಬಿ.ಎಸ್. ಚೌಹಾನ್ ನೇತೃತ್ವದ ವಿಚಾರಣಾ ಆಯೋಗವು ಪೊಲೀಸರ ವಿರುದ್ಧ ಯಾರೂ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಹೇಳಿದ್ದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಸಾಕ್ಷ್ಯಗಳನ್ನು ಸಂಗ್ರಹಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ಅವರ ಆಯಾಮವನ್ನು ನೀಡುವಂತೆ ಕೇಳಿಕೊಂಡಿದ್ದೇವೆ. ಮಾಧ್ಯಮಗಳು ಯುಪಿ ಪೊಲೀಸರ ವಿರುದ್ಧ ಅನೇಕ ‘ಸುದ್ದಿಗಳನ್ನು’ ಬರೆದಿದ್ದವು, ಆದರೆ ಯಾವುದೂ ಯಾವುದೇ ಪುರಾವೆಗಳನ್ನು ನೀಡಿಲ್ಲ” ಎಂದು ಮೂಲಗಳು ತಿಳಿಸಿವೆ.

“ನಾಗರಿಕರು ಮತ್ತು ಮಾಧ್ಯಮಗಳು ತಮಗೆ ಸಹಕಾರ ನೀಡದೆ ಇರುವುದು ವಿಚಾರಣಾ ಆಯೋಗವನ್ನು ರಚಿಸಿರುವ ಉದ್ದೇಶ ಸೋಲುವಂತಾಗಿದೆ” ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ!

ಸಮಿತಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ವಿಕಾಸ್ ದುಬೆ ಅವರ ಪತ್ನಿ ಅಥವಾ ಕುಟುಂಬ ಸದಸ್ಯರು ಕೂಡಾ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯಾಧಾರ ನೀಡುವಂತೆ ಸ್ಥಳೀಯ ಪತ್ರಿಕೆಗಳಲ್ಲಿ ನೋಟಿಸ್ ನೀಡಲಾಗಿತ್ತು ಆದರೆ ಯಾರೂ ಸಾಕ್ಷಿಗಳೊಂದಿಗೆ ಹಾಜರಾಗಲಿಲ್ಲ ಎಂದು ತನಿಖಾ ಆಯೋಗ ಹೇಳಿದೆ.

“ಪ್ರಕರಣದ ಬಗ್ಗೆ ಮಾಧ್ಯಮಗಳು ಪೊಲೀಸರ ವಿರುದ್ದ ಭಾರಿ ಮಾತನಾಡಿತ್ತು. ಆದರೆ ಸಮಿತಿಯ ಕೋರಿಕೆಯ ಹೊರತಾಗಿಯು ಯುಪಿ ಪೊಲೀಸರ ವಿರುದ್ಧ ಸಾಕ್ಷ್ಯ ನೀಡಲು ಮಾಧ್ಯಮಗಳು ಏಕೆ ಮುಂದೆ ಬರಲಿಲ್ಲ?” ಎಂದು ಸಮಿತಿಯು ಪ್ರಶ್ನಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ವಿಡಿಯೊ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...