Homeಮುಖಪುಟವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

ವಿಕಾಸ್ ದುಬೆ ಎನ್‌ಕೌಂಟರ್‌; ಯುಪಿ ಪೊಲೀಸ್‌ಗೆ ಕ್ಲೀನ್‌ ಚಿಟ್‌- ಯಾರೂ ಪುರಾವೆ ನೀಡಿಲ್ಲ!

- Advertisement -
- Advertisement -

ಕಳೆದ ವರ್ಷ ನಡೆದ ದರೋಡೆಕೋರ ವಿಕಾಸ್ ದುಬೆಯ ಎನ್‌ಕೌಂಟರ್‌‌‌ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ತನಿಖಾ ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. ಸಾಕಷ್ಟು ಪುರಾವೆಗಳೊಂದಿಗೆ ಮುಂದೆ ಬರದಿರುವುದಕ್ಕೆ ಸಾರ್ವಜನಿಕರನ್ನು, ಮಾಧ್ಯಮಗಳನ್ನು ಮತ್ತು ಅಪರಾಧಿಯ ಕುಟುಂಬವನ್ನು ತನಿಖಾ ಆಯೋಗವು ದೂಷಿಸಿದೆ ಎಂದು ವರದಿಯಾಗಿದೆ.

ದರೋಡೆಕೋರ ವಿಕಾಸ್ ದುಬೆ ಹಾಗೂ ಸಹಚರರು ಹೊಂಚು ಹಾಕಿ ಎಂಟು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿ ಕೊಂದಿದ್ದರು. ಇದಾದ ನಂತರ ಪರಾರಿಯಾಗಿದ್ದ ದುಬೆಯನ್ನು ಉತ್ತರ ಪ್ರದೇಶದ ಹೊರಗೆ ಬಂಧನ ಮಾಡಲಾಗಿತ್ತು. ಅಲ್ಲಿಂದ ದುಬೆಯನ್ನು ಪೊಲೀಸ್ ಬೆಂಗಾವಲಿನಲ್ಲಿ ಮತ್ತೆ ಯುಪಿಗೆ ಕರೆತರಲಾಗಿತ್ತು.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು 

ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಈ ಸಮಯದಲ್ಲಿ ದುಬೆ ಪೊಲೀಸರ ಬಂದೂಕನ್ನು ಕಿತ್ತು, ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದಕ್ಕೆ ದುಬೆಯನ್ನು ಎನ್‌ಕೌಂಟರ್‌ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಎನ್‌ಕೌಂಟರ್‌‌ ಬಗ್ಗೆ ಪೊಲೀಸ್ ಹೇಳಿಕೆಯ ಆಯಾಮವನ್ನು ಅಲ್ಲಗಳೆಯಲು ಯಾವುದೇ ಪುರಾವೆಗಳಿಲ್ಲ, ಆದರೆ ಅದನ್ನು ಅವರ ಹೇಳಿಕೆಯ ಪರವಾಗಿ ಸಾಕಷ್ಟು ಪುರಾವೆಗಳು ಇವೆ ಎಂದು ಮೂವರು ಸದಸ್ಯರ ವಿಚಾರಣಾ ಸಮಿತಿಯು ಯುಪಿ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ವಿಕಾಸ್ ದುಬೆಯನ್ನು ನಕಲಿ ಎನ್ಕೌಂಟರ್‌ನಲ್ಲಿ ಕೊಲ್ಲಲಾಗಿದೆ, ಆದ್ದರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಕೆಯಾಗಿತ್ತು. ಹಾಗಾಗಿ ಕೋರ್ಟ್ ಪ್ರಕರಣದ ತನಿಖೆಗೆ ನ್ಯಾಯಾಂಗ ಸಮಿತಿಯನ್ನು ರಚಿಸಿತ್ತು.

ಇದನ್ನೂ ಓದಿ:  ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನ್ಯಾಯಮೂರ್ತಿ ಬಿ.ಎಸ್. ಚೌಹಾನ್ ನೇತೃತ್ವದ ವಿಚಾರಣಾ ಆಯೋಗವು ಪೊಲೀಸರ ವಿರುದ್ಧ ಯಾರೂ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಹೇಳಿದ್ದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಸಾಕ್ಷ್ಯಗಳನ್ನು ಸಂಗ್ರಹಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ, ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ಅವರ ಆಯಾಮವನ್ನು ನೀಡುವಂತೆ ಕೇಳಿಕೊಂಡಿದ್ದೇವೆ. ಮಾಧ್ಯಮಗಳು ಯುಪಿ ಪೊಲೀಸರ ವಿರುದ್ಧ ಅನೇಕ ‘ಸುದ್ದಿಗಳನ್ನು’ ಬರೆದಿದ್ದವು, ಆದರೆ ಯಾವುದೂ ಯಾವುದೇ ಪುರಾವೆಗಳನ್ನು ನೀಡಿಲ್ಲ” ಎಂದು ಮೂಲಗಳು ತಿಳಿಸಿವೆ.

“ನಾಗರಿಕರು ಮತ್ತು ಮಾಧ್ಯಮಗಳು ತಮಗೆ ಸಹಕಾರ ನೀಡದೆ ಇರುವುದು ವಿಚಾರಣಾ ಆಯೋಗವನ್ನು ರಚಿಸಿರುವ ಉದ್ದೇಶ ಸೋಲುವಂತಾಗಿದೆ” ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ!

ಸಮಿತಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ವಿಕಾಸ್ ದುಬೆ ಅವರ ಪತ್ನಿ ಅಥವಾ ಕುಟುಂಬ ಸದಸ್ಯರು ಕೂಡಾ ಪೊಲೀಸರ ವಿರುದ್ಧ ಯಾವುದೇ ಪುರಾವೆಗಳೊಂದಿಗೆ ಮುಂದೆ ಬರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯಾಧಾರ ನೀಡುವಂತೆ ಸ್ಥಳೀಯ ಪತ್ರಿಕೆಗಳಲ್ಲಿ ನೋಟಿಸ್ ನೀಡಲಾಗಿತ್ತು ಆದರೆ ಯಾರೂ ಸಾಕ್ಷಿಗಳೊಂದಿಗೆ ಹಾಜರಾಗಲಿಲ್ಲ ಎಂದು ತನಿಖಾ ಆಯೋಗ ಹೇಳಿದೆ.

“ಪ್ರಕರಣದ ಬಗ್ಗೆ ಮಾಧ್ಯಮಗಳು ಪೊಲೀಸರ ವಿರುದ್ದ ಭಾರಿ ಮಾತನಾಡಿತ್ತು. ಆದರೆ ಸಮಿತಿಯ ಕೋರಿಕೆಯ ಹೊರತಾಗಿಯು ಯುಪಿ ಪೊಲೀಸರ ವಿರುದ್ಧ ಸಾಕ್ಷ್ಯ ನೀಡಲು ಮಾಧ್ಯಮಗಳು ಏಕೆ ಮುಂದೆ ಬರಲಿಲ್ಲ?” ಎಂದು ಸಮಿತಿಯು ಪ್ರಶ್ನಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ವಿಡಿಯೊ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...