Homeಮುಖಪುಟವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ ಅಲ್ಲಿಂದ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.

- Advertisement -
- Advertisement -

ದರೋಡೆಕೋರ ವಿಕಾಸ್ ದುಬೆಯ ಬಂಧನವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪೂರ್ವ ನಿರ್ಧರಿತ ಎಂದು ಆರೋಪಿಸಿದೆ. ಜುಲೈ 3 ರಂದು ತನ್ನನ್ನು ಬಂಧಿಸಲು ಬಂದ ಎಂಟು ಪೊಲೀಸರನ್ನು ಕೊಂದ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯ ಪೊಲೀಸರು ಇಂದು ಬಂಧಿಸಿ ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದರು.

ದುಬೆಯ ಬಂಧನವನ್ನು ಮಧ್ಯಪ್ರದೇಶ ಸರ್ಕಾರ ತನ್ನ ರಾಜಕೀಯ ಲಾಭಕ್ಕೆ ಪಡೆಯಲು ಮುಂದಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಟ್ವೀಟ್ ಮಾಡಿ “ಮಹಾಕಲ್‌ಗೆ ಹೋಗುವ ಮೂಲಕ ತಮ್ಮ ಪಾಪಗಳು ತೊಳೆಯುತ್ತವೆ ಎಂದು ಭಾವಿಸುವವರು ಭಗವಂತನನ್ನು ಅರ್ಥಮಾಡಿಕೊಂಡಿಲ್ಲ. ನಮ್ಮ ಸರ್ಕಾರ ಯಾವುದೇ ಅಪರಾಧಿಯನ್ನು ಬಿಡುವುದಿಲ್ಲ” ಎಂದು ಬರೆದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿ, ದುಬೆಯ ಬಂಧನವು ಶರಣಾಗತಿಯೆ ಅಥವಾ ಬಂಧನವೇ ಎಂದು ಸ್ಪಷ್ಟಪಡಿಸುವಂತೆ ಸರ್ಕಾರವನ್ನು ಕೇಳಿದ್ದಾರೆ. ದುಬೆಯ ಫೋನ್ ದಾಖಲೆಯನ್ನು ಸಾರ್ವಜನಿಕಗೊಳಿಸಿ ದರೋಡೆ ಕೋರರೊಂದಿಗೆ ಸಹಕರಿಸಿದ ಜನರನ್ನು ಬಹಿರಂಗಪಡಿಸುವಂತೆ ಹೇಳಿದ್ದಾರೆ.

ಉಜ್ಜಯಿನಿ ಪೊಲೀಸರಿಗೆ ಸುಳಿವು ದೊರೆತ ನಂತರ ವಿಕಾಸ್ ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದರು. ಅಷ್ಟೇ ಅಲ್ಲದೆ ಜುಲೈ 3 ರಂದು 650 ಕಿ.ಮೀ ದೂರದ ಕಾನ್ಪುರದಲ್ಲಿ ಘಟನೆ ನಡೆದ ನಂತರ ತಾನು ಪೊಲೀಸರಲ್ಲಿ ಎಚ್ಚರದಲ್ಲಿ ಇರಬೇಕೆಂದು ಮಧ್ಯಪ್ರದೇಶದಾದ್ಯಂತ ಪೊಲೀಸರಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಬಂಧನವು ಯುಪಿ ಪೊಲೀಸರ ಸಂಪೂರ್ಣವಾಗಿ ವಿಫಲತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಎಚ್ಚರಿಕೆಯ ಹೊರತಾಗಿಯೂ, ಉಜ್ಜಯಿನಿಯವರೆಗೂ ತಲುಪಿರುವುದು ಭದ್ರತೆಯಲ್ಲಿನ ವಿಫಲತೆ ಹಾಗೂ ಸಹಭಾಗಿತ್ವವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಕಾನ್ಪುರದ ಸ್ಥಳೀಯ ಪೊಲೀಸ್ ಅಧಿಕಾರಿಗಳು ವಿಕಾಸ್ ದುಬೆ ಹೆಸರನ್ನು ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂಬ ವರದಿಗಳನ್ನು ಪ್ರಿಯಾಂಕ ಗಾಂಧಿ ಉಲ್ಲೇಖಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವಿಕಾಸ್ ದುಬೆ ದೇವಾಲಯದಿಂದ ಬರಿಗಾಲಿನಿಂದ ನಡೆದುಕೊಂಡು ಹೊರಗೆ ಹೋಗುವುದು ಹಾಗೂ ಖಾಸಗಿ ಭದ್ರತಾ ಸಿಬ್ಬಂದಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಕಾಣಬಹುದಾಗಿದೆ.

ಈ ಬಗ್ಗೆ ತೀವ್ರ ದಾಳಿ ಮಾಡಿದ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿ.ವಿ, “ಇದು ಪೂರ್ವ ನಿರ್ಧರಿತ ಘಟನೆ, ಯಾವ ಕೋನದಿಂದ ಭಯೋತ್ಪಾದಕ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಂಡುಬರುತ್ತದೆ?. ಈ ವೀಡಿಯೊ ಇದಕ್ಕೆ ಪುರಾವೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ, ಪೊಲೀಸರು ಎಚ್ಚರಿಕೆಯಿಂದ ಇದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ “ಒಳ್ಳೆಯ ಜೋಕ್” ಎಂದು ಹೇಳಿದ್ದಾರೆ.

ಪೊಲೀಸರು ಎಷ್ಟು ಜಾಗರೂಕರಾಗಿದ್ದರು ಎಂದರೆ ಉತ್ತರ ಪ್ರದೇಶದ ವಿಕಾಸ್ ಮಧ್ಯಪ್ರದೇಶದಲ್ಲಿದ್ದಾನೆ ಎಂದು ಪೊಲೀಸರು ತಿಳಿದಾಗ ಆತನೆ ತನ್ನನ್ನು ತಾನು ಗುರುತಿಸಿಕೊಳ್ಳಲು ಕಿರುಚಿ ಕೊಂಡಿದ್ದಾನೆ, ಎಂದು ಶ್ರೀನಿವಾಸ್ ವ್ಯಂಗ್ಯ ಮಾಡಿದ್ದಾರೆ.

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ, ನಂತರ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ. ಉಜ್ಜಯಿನಿ ತಲುಪಲು ಆತನೇನು ’ಮಿಸ್ಟರ್‌ ಇಂಡಿಯಾ’ ಆಗಿ ಮಾರ್ಪಾಟಾಗಿದ್ದಾನೆಯೆ ಎಂದು ಕಾಂಗ್ರೆಸ್‌ ನಾಯಕ ಪ್ರಶ್ನಿಸಿದ್ದಾರೆ.

ಮಿಸ್ಟರ್‌ ಇಂಡಿಯಾ ಎಂಬುವುದು 1980 ರ ದಶಕದಲ್ಲಿ ಅನಿಲ್ ಕುಮಾರ್ ನಟಿಸಿದ ಚಲನಚಿತ್ರದ ಪಾತ್ರವಾಗಿದೆ. ಅದರಲ್ಲಿರುವ ನಾಯಕ ’ಮಿಸ್ಟರ್‌ ಇಂಡಿಯಾ’ ಇದ್ದಕ್ಕಿಂದತೆ ಪ್ರತ್ಯಕ್ಷ ಹಾಗೂ ಅಪ್ರತ್ಯಕ್ಷನಾಗುತ್ತಾನೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...