Homeಮುಖಪುಟವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ ಅಲ್ಲಿಂದ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.

- Advertisement -
- Advertisement -

ದರೋಡೆಕೋರ ವಿಕಾಸ್ ದುಬೆಯ ಬಂಧನವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪೂರ್ವ ನಿರ್ಧರಿತ ಎಂದು ಆರೋಪಿಸಿದೆ. ಜುಲೈ 3 ರಂದು ತನ್ನನ್ನು ಬಂಧಿಸಲು ಬಂದ ಎಂಟು ಪೊಲೀಸರನ್ನು ಕೊಂದ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯ ಪೊಲೀಸರು ಇಂದು ಬಂಧಿಸಿ ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದರು.

ದುಬೆಯ ಬಂಧನವನ್ನು ಮಧ್ಯಪ್ರದೇಶ ಸರ್ಕಾರ ತನ್ನ ರಾಜಕೀಯ ಲಾಭಕ್ಕೆ ಪಡೆಯಲು ಮುಂದಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಟ್ವೀಟ್ ಮಾಡಿ “ಮಹಾಕಲ್‌ಗೆ ಹೋಗುವ ಮೂಲಕ ತಮ್ಮ ಪಾಪಗಳು ತೊಳೆಯುತ್ತವೆ ಎಂದು ಭಾವಿಸುವವರು ಭಗವಂತನನ್ನು ಅರ್ಥಮಾಡಿಕೊಂಡಿಲ್ಲ. ನಮ್ಮ ಸರ್ಕಾರ ಯಾವುದೇ ಅಪರಾಧಿಯನ್ನು ಬಿಡುವುದಿಲ್ಲ” ಎಂದು ಬರೆದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿ, ದುಬೆಯ ಬಂಧನವು ಶರಣಾಗತಿಯೆ ಅಥವಾ ಬಂಧನವೇ ಎಂದು ಸ್ಪಷ್ಟಪಡಿಸುವಂತೆ ಸರ್ಕಾರವನ್ನು ಕೇಳಿದ್ದಾರೆ. ದುಬೆಯ ಫೋನ್ ದಾಖಲೆಯನ್ನು ಸಾರ್ವಜನಿಕಗೊಳಿಸಿ ದರೋಡೆ ಕೋರರೊಂದಿಗೆ ಸಹಕರಿಸಿದ ಜನರನ್ನು ಬಹಿರಂಗಪಡಿಸುವಂತೆ ಹೇಳಿದ್ದಾರೆ.

ಉಜ್ಜಯಿನಿ ಪೊಲೀಸರಿಗೆ ಸುಳಿವು ದೊರೆತ ನಂತರ ವಿಕಾಸ್ ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದರು. ಅಷ್ಟೇ ಅಲ್ಲದೆ ಜುಲೈ 3 ರಂದು 650 ಕಿ.ಮೀ ದೂರದ ಕಾನ್ಪುರದಲ್ಲಿ ಘಟನೆ ನಡೆದ ನಂತರ ತಾನು ಪೊಲೀಸರಲ್ಲಿ ಎಚ್ಚರದಲ್ಲಿ ಇರಬೇಕೆಂದು ಮಧ್ಯಪ್ರದೇಶದಾದ್ಯಂತ ಪೊಲೀಸರಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಬಂಧನವು ಯುಪಿ ಪೊಲೀಸರ ಸಂಪೂರ್ಣವಾಗಿ ವಿಫಲತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಎಚ್ಚರಿಕೆಯ ಹೊರತಾಗಿಯೂ, ಉಜ್ಜಯಿನಿಯವರೆಗೂ ತಲುಪಿರುವುದು ಭದ್ರತೆಯಲ್ಲಿನ ವಿಫಲತೆ ಹಾಗೂ ಸಹಭಾಗಿತ್ವವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಕಾನ್ಪುರದ ಸ್ಥಳೀಯ ಪೊಲೀಸ್ ಅಧಿಕಾರಿಗಳು ವಿಕಾಸ್ ದುಬೆ ಹೆಸರನ್ನು ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂಬ ವರದಿಗಳನ್ನು ಪ್ರಿಯಾಂಕ ಗಾಂಧಿ ಉಲ್ಲೇಖಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವಿಕಾಸ್ ದುಬೆ ದೇವಾಲಯದಿಂದ ಬರಿಗಾಲಿನಿಂದ ನಡೆದುಕೊಂಡು ಹೊರಗೆ ಹೋಗುವುದು ಹಾಗೂ ಖಾಸಗಿ ಭದ್ರತಾ ಸಿಬ್ಬಂದಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಕಾಣಬಹುದಾಗಿದೆ.

ಈ ಬಗ್ಗೆ ತೀವ್ರ ದಾಳಿ ಮಾಡಿದ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿ.ವಿ, “ಇದು ಪೂರ್ವ ನಿರ್ಧರಿತ ಘಟನೆ, ಯಾವ ಕೋನದಿಂದ ಭಯೋತ್ಪಾದಕ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಂಡುಬರುತ್ತದೆ?. ಈ ವೀಡಿಯೊ ಇದಕ್ಕೆ ಪುರಾವೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ, ಪೊಲೀಸರು ಎಚ್ಚರಿಕೆಯಿಂದ ಇದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ “ಒಳ್ಳೆಯ ಜೋಕ್” ಎಂದು ಹೇಳಿದ್ದಾರೆ.

ಪೊಲೀಸರು ಎಷ್ಟು ಜಾಗರೂಕರಾಗಿದ್ದರು ಎಂದರೆ ಉತ್ತರ ಪ್ರದೇಶದ ವಿಕಾಸ್ ಮಧ್ಯಪ್ರದೇಶದಲ್ಲಿದ್ದಾನೆ ಎಂದು ಪೊಲೀಸರು ತಿಳಿದಾಗ ಆತನೆ ತನ್ನನ್ನು ತಾನು ಗುರುತಿಸಿಕೊಳ್ಳಲು ಕಿರುಚಿ ಕೊಂಡಿದ್ದಾನೆ, ಎಂದು ಶ್ರೀನಿವಾಸ್ ವ್ಯಂಗ್ಯ ಮಾಡಿದ್ದಾರೆ.

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ, ನಂತರ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ. ಉಜ್ಜಯಿನಿ ತಲುಪಲು ಆತನೇನು ’ಮಿಸ್ಟರ್‌ ಇಂಡಿಯಾ’ ಆಗಿ ಮಾರ್ಪಾಟಾಗಿದ್ದಾನೆಯೆ ಎಂದು ಕಾಂಗ್ರೆಸ್‌ ನಾಯಕ ಪ್ರಶ್ನಿಸಿದ್ದಾರೆ.

ಮಿಸ್ಟರ್‌ ಇಂಡಿಯಾ ಎಂಬುವುದು 1980 ರ ದಶಕದಲ್ಲಿ ಅನಿಲ್ ಕುಮಾರ್ ನಟಿಸಿದ ಚಲನಚಿತ್ರದ ಪಾತ್ರವಾಗಿದೆ. ಅದರಲ್ಲಿರುವ ನಾಯಕ ’ಮಿಸ್ಟರ್‌ ಇಂಡಿಯಾ’ ಇದ್ದಕ್ಕಿಂದತೆ ಪ್ರತ್ಯಕ್ಷ ಹಾಗೂ ಅಪ್ರತ್ಯಕ್ಷನಾಗುತ್ತಾನೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...