Homeಮುಖಪುಟವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ ಅಲ್ಲಿಂದ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.

- Advertisement -
- Advertisement -

ದರೋಡೆಕೋರ ವಿಕಾಸ್ ದುಬೆಯ ಬಂಧನವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪೂರ್ವ ನಿರ್ಧರಿತ ಎಂದು ಆರೋಪಿಸಿದೆ. ಜುಲೈ 3 ರಂದು ತನ್ನನ್ನು ಬಂಧಿಸಲು ಬಂದ ಎಂಟು ಪೊಲೀಸರನ್ನು ಕೊಂದ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯ ಪೊಲೀಸರು ಇಂದು ಬಂಧಿಸಿ ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದರು.

ದುಬೆಯ ಬಂಧನವನ್ನು ಮಧ್ಯಪ್ರದೇಶ ಸರ್ಕಾರ ತನ್ನ ರಾಜಕೀಯ ಲಾಭಕ್ಕೆ ಪಡೆಯಲು ಮುಂದಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಟ್ವೀಟ್ ಮಾಡಿ “ಮಹಾಕಲ್‌ಗೆ ಹೋಗುವ ಮೂಲಕ ತಮ್ಮ ಪಾಪಗಳು ತೊಳೆಯುತ್ತವೆ ಎಂದು ಭಾವಿಸುವವರು ಭಗವಂತನನ್ನು ಅರ್ಥಮಾಡಿಕೊಂಡಿಲ್ಲ. ನಮ್ಮ ಸರ್ಕಾರ ಯಾವುದೇ ಅಪರಾಧಿಯನ್ನು ಬಿಡುವುದಿಲ್ಲ” ಎಂದು ಬರೆದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿ, ದುಬೆಯ ಬಂಧನವು ಶರಣಾಗತಿಯೆ ಅಥವಾ ಬಂಧನವೇ ಎಂದು ಸ್ಪಷ್ಟಪಡಿಸುವಂತೆ ಸರ್ಕಾರವನ್ನು ಕೇಳಿದ್ದಾರೆ. ದುಬೆಯ ಫೋನ್ ದಾಖಲೆಯನ್ನು ಸಾರ್ವಜನಿಕಗೊಳಿಸಿ ದರೋಡೆ ಕೋರರೊಂದಿಗೆ ಸಹಕರಿಸಿದ ಜನರನ್ನು ಬಹಿರಂಗಪಡಿಸುವಂತೆ ಹೇಳಿದ್ದಾರೆ.

ಉಜ್ಜಯಿನಿ ಪೊಲೀಸರಿಗೆ ಸುಳಿವು ದೊರೆತ ನಂತರ ವಿಕಾಸ್ ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದರು. ಅಷ್ಟೇ ಅಲ್ಲದೆ ಜುಲೈ 3 ರಂದು 650 ಕಿ.ಮೀ ದೂರದ ಕಾನ್ಪುರದಲ್ಲಿ ಘಟನೆ ನಡೆದ ನಂತರ ತಾನು ಪೊಲೀಸರಲ್ಲಿ ಎಚ್ಚರದಲ್ಲಿ ಇರಬೇಕೆಂದು ಮಧ್ಯಪ್ರದೇಶದಾದ್ಯಂತ ಪೊಲೀಸರಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಬಂಧನವು ಯುಪಿ ಪೊಲೀಸರ ಸಂಪೂರ್ಣವಾಗಿ ವಿಫಲತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಎಚ್ಚರಿಕೆಯ ಹೊರತಾಗಿಯೂ, ಉಜ್ಜಯಿನಿಯವರೆಗೂ ತಲುಪಿರುವುದು ಭದ್ರತೆಯಲ್ಲಿನ ವಿಫಲತೆ ಹಾಗೂ ಸಹಭಾಗಿತ್ವವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಕಾನ್ಪುರದ ಸ್ಥಳೀಯ ಪೊಲೀಸ್ ಅಧಿಕಾರಿಗಳು ವಿಕಾಸ್ ದುಬೆ ಹೆಸರನ್ನು ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂಬ ವರದಿಗಳನ್ನು ಪ್ರಿಯಾಂಕ ಗಾಂಧಿ ಉಲ್ಲೇಖಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವಿಕಾಸ್ ದುಬೆ ದೇವಾಲಯದಿಂದ ಬರಿಗಾಲಿನಿಂದ ನಡೆದುಕೊಂಡು ಹೊರಗೆ ಹೋಗುವುದು ಹಾಗೂ ಖಾಸಗಿ ಭದ್ರತಾ ಸಿಬ್ಬಂದಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಕಾಣಬಹುದಾಗಿದೆ.

ಈ ಬಗ್ಗೆ ತೀವ್ರ ದಾಳಿ ಮಾಡಿದ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿ.ವಿ, “ಇದು ಪೂರ್ವ ನಿರ್ಧರಿತ ಘಟನೆ, ಯಾವ ಕೋನದಿಂದ ಭಯೋತ್ಪಾದಕ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಂಡುಬರುತ್ತದೆ?. ಈ ವೀಡಿಯೊ ಇದಕ್ಕೆ ಪುರಾವೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ, ಪೊಲೀಸರು ಎಚ್ಚರಿಕೆಯಿಂದ ಇದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ “ಒಳ್ಳೆಯ ಜೋಕ್” ಎಂದು ಹೇಳಿದ್ದಾರೆ.

ಪೊಲೀಸರು ಎಷ್ಟು ಜಾಗರೂಕರಾಗಿದ್ದರು ಎಂದರೆ ಉತ್ತರ ಪ್ರದೇಶದ ವಿಕಾಸ್ ಮಧ್ಯಪ್ರದೇಶದಲ್ಲಿದ್ದಾನೆ ಎಂದು ಪೊಲೀಸರು ತಿಳಿದಾಗ ಆತನೆ ತನ್ನನ್ನು ತಾನು ಗುರುತಿಸಿಕೊಳ್ಳಲು ಕಿರುಚಿ ಕೊಂಡಿದ್ದಾನೆ, ಎಂದು ಶ್ರೀನಿವಾಸ್ ವ್ಯಂಗ್ಯ ಮಾಡಿದ್ದಾರೆ.

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ, ನಂತರ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ. ಉಜ್ಜಯಿನಿ ತಲುಪಲು ಆತನೇನು ’ಮಿಸ್ಟರ್‌ ಇಂಡಿಯಾ’ ಆಗಿ ಮಾರ್ಪಾಟಾಗಿದ್ದಾನೆಯೆ ಎಂದು ಕಾಂಗ್ರೆಸ್‌ ನಾಯಕ ಪ್ರಶ್ನಿಸಿದ್ದಾರೆ.

ಮಿಸ್ಟರ್‌ ಇಂಡಿಯಾ ಎಂಬುವುದು 1980 ರ ದಶಕದಲ್ಲಿ ಅನಿಲ್ ಕುಮಾರ್ ನಟಿಸಿದ ಚಲನಚಿತ್ರದ ಪಾತ್ರವಾಗಿದೆ. ಅದರಲ್ಲಿರುವ ನಾಯಕ ’ಮಿಸ್ಟರ್‌ ಇಂಡಿಯಾ’ ಇದ್ದಕ್ಕಿಂದತೆ ಪ್ರತ್ಯಕ್ಷ ಹಾಗೂ ಅಪ್ರತ್ಯಕ್ಷನಾಗುತ್ತಾನೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...