Homeಮುಖಪುಟಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

8 ಪೊಲೀಸರನ್ನೇ ನಿರ್ದಯವಾಗಿ ಕೊಲ್ಲುವ ಮಟ್ಟಕ್ಕೆ ವಿಕಾಸ್ ದುಬೆ ಬೆಳೆದುದ್ದು ಹೇಗೆ ಎಂಬುದನ್ನು ವಿವರಿಸಿದ್ದಾರೆ ಉತ್ತರ ಪ್ರದೇಶ ಮಾಜಿ ಪೊಲೀಸ್ ಮಹಾನಿರ್ದೇಶಕರು..

- Advertisement -
- Advertisement -

ಕಾನ್ಪುರದಲ್ಲಿ ದರೋಡೆಕೋರ, ಕ್ರಿಮಿನಲ್ ವಿಕಾಸ್ ದುಬೆ ಮತ್ತು ಆತನ ಸಹಚರರು ಎಂಟು ಪೊಲೀಸರನ್ನು ಕೊಂದದ್ದು ಪದಗಳಿಗೆ ನಿಲುಕದ ದುರಂತ. ಇದರ ನೋವಿನ ಆಳ ನನಗೆ ಗೊತ್ತಾಗುತ್ತದೆ. ಯಾಕೆಂದರೆ 2017 ಎಪ್ರಿಲ್ ವರೆಗೆ ನಾನು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥನಾಗಿ ಪೊಲೀಸರನ್ನು ಮುನ್ನಡೆಸುವ ಗೌರವ ಪಡೆದಿದ್ದೇನೆ. ನನ್ನ ಮಾಜಿ ಸಹೋದ್ಯೋಗಿಗಳ ಮೇಲಾದ ಗುಂಡಿನ ಸುರಿಮಳೆ ನನ್ನನ್ನು ವಿಚಲಿತನನ್ನಾಗಿಸುತ್ತದೆ. ವಿಕಾಸ್ ದುಬೆ ಯಾಕಾಗಿ ಇದನ್ನು ಮಾಡಿದ?

ವಿಕಾಸ್ ದುಬೆ, ಕಳೆದ ಕೆಲವು ದಶಕಗಳಲ್ಲಿ ಉತ್ತರಪ್ರದೇಶದಲ್ಲಿ ಆಳವಾಗಿ ಬೇರು ಬಿಟ್ಟುಕೊಂಡಿರುವ ಪೊಲೀಸ್-ರಾಜಕೀಯ ಸಂಬಂಧದ ಫಲಾನುಭವಿ. ಏಕಕಾಲದಲ್ಲಿ ಈತ ಕ್ರಿಮಿನಲ್, ಭೂ ಕಬಳಿಕೆದಾರ, ರಾಜಕೀಯ ಶಕ್ತಿಯ ದಲ್ಲಾಳಿ, ಬ್ರಾಹ್ಮಣ ರಾಬಿನ್ ಹುಡ್ ಆಗಲು ಸಾಧ್ಯವಾಗಿದ್ದಾದರೂ ಹೇಗೆ?

ನಾನು ಇದರ ಕುರಿತು ವಿವರಿಸಲು ಪ್ರಯತ್ನಿಸುತ್ತೇನೆ. ವಿಕಾಸ್ ದುಬೆ ಗ್ರಾಮೀಣ ಕಾನ್ಪುರ್ ಪ್ರದೇಶದ ಚೌಬೆಪುರದ ನಿವಾಸಿ. 1990 ರ ದಶಕದ ಆರಂಭದಲ್ಲಿ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿದ ಈತ ಕಾನೂನಿನ ಬಗ್ಗೆ ತಿರಸ್ಕಾರ ಹಾಗೂ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಆ ಸಮಯದಲ್ಲಿ ಆಡಳಿತ ಪಕ್ಷದಲ್ಲಿದ್ದ ಅತ್ಯಂತ ಹಿರಿಯ ಸ್ಥಳೀಯ ರಾಜಕಾರಣಿ ಈತನಿಗೆ ಪ್ರೋತ್ಸಾಹ ನೀಡಿದ್ದರು.

ಇದು ಯುವಕ ದುಬೆಗೆ ನಿರ್ಣಾಯಕವಾಗಿತ್ತು. ದುಬೆ ಸ್ಥಳೀಯ ರಾಜಕೀಯ ಪ್ರವೇಶಿಸಿ ಅವುಗಳ ಚಲನಶೀಲತೆಯನ್ನು ಅರ್ಥಮಾಡಿಕೊಳ್ಳಲು ಪ್ರಾರಂಭಿಸಿದ. ಇದು ಮುಂದಿನ 25-30 ವರ್ಷಗಳಲ್ಲಿ ಅವನು ತನ್ನ ಅನುಕೂಲಕ್ಕೆ ತಕ್ಕಂತೆ ಅವರನ್ನು ಆಡಿಸುವಂತಾಯಿತು. ಈತ 1990 ಮತ್ತು 2000 ರ ದಶಕಗಳಲ್ಲಿ ಒಂದು ರಾಜಕೀಯ ಪಕ್ಷದಿಂದ ಇನ್ನೊಂದಕ್ಕೆ ಹಾರುತ್ತಾ ಕ್ರಿಯಾಶೀಲವಾಗಿದ್ದ. ಅದೇ ಸಮಯದಲ್ಲಿ ವೇಗವಾಗಿ ನಗರೀಕರಣಗೊಳ್ಳುತ್ತಿದ್ದ ಚೌಬೆಪುರ ಪ್ರದೇಶದಲ್ಲಿ ಅಸಹಾಯಕರಿಂದ ಭೂಮಿಯನ್ನು ಕಸಿದುಕೊಳ್ಳುತ್ತಿದ್ದ. ರಾಜಕೀಯ ಪ್ರೋತ್ಸಾಹವು ಪೊಲೀಸ್ ತನಿಖೆಯಿಂದ ದುಬೆಗೆ ರಕ್ಷಣೆ ನೀಡಿತು.

ಪೊಲೀಸ್ ಠಾಣೆಯೊಳಗಡೆ ಕೊಲೆ

ಸ್ಥಳೀಯ ಭಾರತೀಯ ಜನತಾ ಪಕ್ಷದ ಮುಖಂಡ ಸಂತೋಷ್ ಶುಕ್ಲಾ ಸಕ್ರಿಯವಾಗಿರುವವರೆಗೂ ತನ್ನ ರಾಜಕೀಯ ಮಹತ್ವಾಕಾಂಕ್ಷೆಗಳು ಈಡೇರುವುದಿಲ್ಲ ಎಂದು ದುಬೆ ಅರಿತುಕೊಂಡಿದ್ದ. ಶುಕ್ಲಾ ಕೂಡ ಬ್ರಾಹ್ಮಣರಾಗಿದ್ದು, ಈರ್ವರು ಪ್ರಮುಖ ಓಟ್‌ಬ್ಯಾಂಕ್ ಅನ್ನು ಮುನ್ನಡೆಸಲು ಸ್ಪರ್ಧಿಸುತ್ತಿದ್ದರು. ಇದಲ್ಲದೆ, ಶುಕ್ಲಾ ದುಬೆಗಿಂತ ಸೀನಿಯರ್. ಇದರಿಂದ ತನಗಿರುವ ರಾಜಕೀಯ ಬೆಂಬಲದಿಮದ ದುಬೆ 2001 ರಲ್ಲಿ ಶಿವ್ಲಿ ಪೊಲೀಸ್ ಠಾಣೆಯೊಳಗೆ ಸಚಿವ ಮಟ್ಟದ ಕಾರ್ಯಕಾರಿಯಾಗಿದ್ದ ಶುಕ್ಲಾರನ್ನು ಕೊಲೆ ಮಾಡಿದ.

ವಿಕಾಸ್ ದುಬೆಗಿರುವ ಪೊಲೀಸರೊಂದಿಗಿನ ಮೈತ್ರಿಯನ್ನು ಅನೇಕ ಪುಟಗಳಲ್ಲಿ ಬರೆಯಬಹುದು. ಆದರೆ ನಾನು ಶುಕ್ಲಾ ಹತ್ಯೆಯಿಂದ ಪ್ರಾರಂಭಿಸಿ ಬರೆಯುತ್ತೇನೆ. ತನಿಖೆಯು ಆತನನ್ನು ಆರೋಪಿಯೆಂದು ಘೋಷಿಸಿ, ಚಾರ್ಜ್‌ಶೀಟ್ ಸಲ್ಲಿಸಲಾಯಿತು. ಆದರೆ ವಿಚಾರಣೆಯ ಸಮಯದಲ್ಲಿ, ಪ್ರತ್ಯಕ್ಷದರ್ಶಿಗಳು, ಉತ್ತರ ಪ್ರದೇಶ ಪೊಲೀಸ್ ಸಿಬ್ಬಂದಿಗಳು ಪ್ರತಿಕೂಲ ಸಾಕ್ಷ್ಯ ನುಡಿದರು. ಪೊಲೀಸ್ ಠಾಣೆಯೊಳಗೆ ಸರ್ಕಾರಿ ಸಚಿವ ಮಟ್ಟದ ರಾಜಕಾರಣಿಯನ್ನು ಹೊಡೆದುರುಳಿಸಿದರೂ ಸಾಕ್ಷ್ಯಾಧಾರದ ಕೊರತೆಯಿಂದ ಅವನನ್ನು ಖುಲಾಸೆಗೊಳಿಸಲಾಯಿತು.

ಆ ಸಮಯದಲ್ಲಿ ಪ್ರಾಸಿಕ್ಯೂಷನ್ ಏನು ಮಾಡುತ್ತಿತ್ತು? ರಾಜಕೀಯ ನೇಮಕಾತಿಯಾಗಿರುವ ಜಿಲ್ಲಾ ಸರ್ಕಾರಿ ಮಂಡಳಿ ಪ್ರಶ್ನೆ ಎತ್ತ ಬೇಕಿತ್ತು. ಪ್ರಾಸಿಕ್ಯೂಷನ್ ಉಸ್ತುವಾರಿ ಹೊಂದಿರುವ ಜಿಲ್ಲಾಧಿಕಾರಿ ಇದನ್ನು ಕೈಗೈತ್ತಿಕೊಂಡು ವಾದಿಸಬೇಕಿತ್ತು. ಆದರೆ ಇದರ ಬದಲಾಗಿ ಖುಲಾಸೆ ವಿರುದ್ಧ ಯಾವುದೇ ಮೇಲ್ಮನವಿ ಸಲ್ಲಿಸಲಾಗುವುದಿಲ್ಲ ಎಂದು ಜಿಲ್ಲಾಡಳಿತ ನಿರ್ಧರಿಸಿತು.

ಅದರ ನಂತರ, 2000 ರಲ್ಲಿ ಶಾಲಾ ಪ್ರಾಂಶುಪಾಲರ ಹತ್ಯೆ ಪ್ರಕರಣದಲ್ಲಿ ದುಬೆ ಮತ್ತೊಂದು ವಿಚಾರಣೆಯನ್ನು ಎದುರಿಸಬೇಕಾಯಿತು, 2004 ರಲ್ಲಿ ಈ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ಘೋಷಿಸಲಾಯಿತು. ಆದರೆ ಆಶ್ಚರ್ಯವೇನೆಂದರೆ ಅನೇಕ ಕೊಲೆ ಪ್ರಕರಣಗಳು ಮತ್ತು ದರೋಡೆ ಸೇರಿದಂತೆ 60 ಕ್ಕೂ ಹೆಚ್ಚು ಪ್ರಕರಣಗಳ ಅಪರಾಧ ಇತಿಹಾಸ ಹೊಂದಿರುವ ವ್ಯಕ್ತಿಗೆ ಶೀಘ್ರದಲ್ಲೇ ಜಾಮೀನು ನೀಡಲಾಗುತ್ತಿರವುದು. ಮತ್ತೆ ಚೌಬೆಪುರಕ್ಕೆ ಬಂದಾಗ ಆತನಿಗೆ ಪೊಲೀಸ್ ರಕ್ಷಣೆಯನ್ನೂ ನೀಡಲಾಗಿದೆ ಎಂದು ವರದಿಯಾಗಿದೆ. ವಿವಿಧ ಸರ್ಕಾರಗಳ ಅಡಿಯಲ್ಲಿ ಈತನ ಅಪರಾಧಗಳ ವಿರುದ್ಧದ ಕ್ರಮ ಕೈಗೊಳ್ಳಲು ಏಕೆ ಸಾಧ್ಯವಾಗಲಿಲ್ಲ?

ಬಲಶಾಲಿ ಬ್ರಾಹ್ಮಣ 

ಆ ಹೊತ್ತಿಗೆ, ವಿಕಾಸ್ ದುಬೆ ಚೌಬೆಪುರ ಪ್ರದೇಶದಲ್ಲಿ ಎರಡು ಡಜನ್‌ಗೂ ಹೆಚ್ಚು ಬ್ರಾಹ್ಮಣ ಪ್ರಾಬಲ್ಯದ ಗ್ರಾಮಗಳನ್ನು ನಿಯಂತ್ರಿಸುವ ಮಟ್ಟಿಗೆ ಖ್ಯಾತಿ ಪಡೆದಿದ್ದನು. ಅವನು ಹೇಳಿದವರು ಮಾತ್ರ ಈ ಗ್ರಾಮಗಳಲ್ಲಿ ಪ್ರಧಾನ್ ಆಗಲು ಸಾಧ್ಯವಾಗುತ್ತಿತ್ತು. ಈ ಮೂಲಕ ಅನಧಿಕೃತವಾಗಿ ಅಧಿಕಾರ ಅನುಭವಿಸುತ್ತಿದ್ದ. ಆತನ ಪರವಾಗಿ 20 ಪ್ರಧಾನ್‌ಗಳು ಆಯ್ಕೆಯಾದರೆ ಸಾಕು ಶಾಸಕಾಂಗ ಸಭೆ ಸ್ಥಾನವನ್ನು ಗೆಲ್ಲಲು ಮತ್ತು ಸಂಸತ್ತಿನ ಚುನಾವಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಲು ಇದು ಸಾಕಾಗುತ್ತಿತ್ತು.

ಸ್ಥಳೀಯ ರಾಜಕೀಯ ಪುಡಾರಿಗಳ ಆಜ್ಞೆಯ ಮೇರೆಗೆ ಸ್ಟೇಷನ್ ಹೌಸ್ ಅಧಿಕಾರಿಯನ್ನು ವಾಡಿಕೆಯಂತೆ ನಿಯೋಜಿಸಲಾಗುತ್ತಿತ್ತು. ಇದರಿಂದ ಸ್ಥಳೀಯ ಪೊಲೀಸರು ದುಬೆಯನ್ನು ಎದುರು ಹಾಕಿಕೊಳ್ಳಲು ಧೈರ್ಯಮಾಡುತ್ತಾರೆಯೇ? ಅವರು ಬ್ಯಾಲೆನ್ಸ್ ಕಾಪಾಡಿಕೊಳ್ಳಬೇಕಾಗಿತ್ತು. ಪೊಲೀಸರು ಇರುವುದು ಸುವ್ಯವಸ್ಥೆ‌ ಕಾಪಾಡಿಕೊಳ್ಳಲು ಮಾತ್ರ. ಎಲ್ಲಿಯವರೆಗೆ ಅವರು ದುಬೆಗೆ ತೊಂದರೆ ನೀಡಲಿಲ್ಲವೋ, ಅಲ್ಲಿಯವರೆಗೆ ಆತ ಪೊಲೀಸರಿಗೆ ತೊಂದರೆ ನೀಡಲಿಲ್ಲ. ರಾಜ್ಯ ರಾಜಧಾನಿ ಲಕ್ನೋ ಇದನ್ನೆಲ್ಲ ತಿಳಿಯಲು ಅಥವಾ ಕಾಳಜಿ ವಹಿಸಲು ತುಂಬಾ ದೂರದಲ್ಲಿತ್ತು.

ತೀರಾ ಇತ್ತೀಚೆಗೆ, ಸೋದರ ಸಂಬಂಧಿಯನ್ನು ಕೊಲೆ ಮಾಡಿದ್ದಕ್ಕಾಗಿ 2018 ರಲ್ಲಿ ಬಂಧಿಸಲ್ಪಟ್ಟಿದ್ದರೂ ದುಬೆ ಫೆಬ್ರವರಿಯಲ್ಲಿ ಜಾಮೀನು ಪಡೆದಿದ್ದ.

ಈಗ ಸ್ಪಷ್ಟವಾದ ಸಂಗತಿಯೆಂದರೆ, ದುರಂತ ನಡೆದ ಎರಡು – ಮೂರು ದಿನಗಳ ಮೊದಲು, ಹೊಸ ಅಧಿಕಾರಿಯೊಬ್ಬರು ಕಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾದರು. ಅವರು ಪರಾರಿಯಾದ ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟವರಿಗೆ 25 ಸಾವಿರ ರೂ.ಗಳ ಬಹುಮಾನವನ್ನು ಘೋಷಿಸಿದರು. ಬಹುಮಾನದ ಘೋಷಣೆಯು ಅಪರಾಧಿನ್ನು “ಭೀತಿಗೊಳಿಸುವ ಅಂಶ”ವಾಗಿತ್ತು.

ಸರ್ಕಲ್ ಇನ್ಸ್‌ಪೆಕ್ಟರ್ ದೇವೇಂದರ್ ಮಿಶ್ರಾ ನೇತೃತ್ವದ ಪೊಲೀಸ್ ಪಡೆ ಜುಲೈ 1 ರಂದು ವಿಕಾಸ್ ದುಬೆ ಮೇಲೆ ದಾಳಿ ನಡೆಸಲು ಯೋಜಿಸಿದಾಗ, ಕಾನ್ಪುರ್ ಪೊಲೀಸರೇ ಯಾರೋ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದಾರೆ. ಇದರಿಂದ ಶೂಟರ್‌ಗಳನ್ನು ಬಾಡಿಗೆಗೆ ಕರೆತಂದು ಹೊಂಚುಹಾಕಿ ದಾಳಿ ಮಾಡಿರುವುದರಿಂದ ಈ ದುರ್ಘಟನೆ ಜರುಗಿದೆ.

ಜೀವ ಕಳೆದುಕೊಂಡ ನನ್ನ ಸಂಗಾತಿಗಳಿಗಾಗಿ ನಾನು ದುಃಖಿಸುತ್ತೇನೆ. ನಾನು ಈ ವ್ಯವಸ್ಥೆಯ ಬಗ್ಗೆ ವಿಷಾದಿಸುತ್ತೇನೆ ಮತ್ತು ಅದು ಬದಲಾಗಬೇಕೆಂದು ಒತ್ತಾಯಿಸುತ್ತೇನೆ. ಪೊಲೀಸರು ತಮ್ಮ ಕೆಲಸವನ್ನು ವೃತ್ತಪರವಾಗಿ ಮಾಡುತ್ತಾರೆಯೇ ಹೊರತು ದ್ವೇಷ, ಕೋಪದಿಂದಲ್ಲ ಎಂದು ನಾನು ನಂಬುತ್ತೇನೆ. ಆರೋಪಿಗೆ ಶಿಕ್ಷೆಯಾಗುವಂತೆ ಸಾಕ್ಷಿಗಳನ್ನು ಸಂಗ್ರಹಿಸುತ್ತಾರೆ ಎಂದು ನಾನು ನಂಬುತ್ತೇನೆ.

ಕೃಪೆ: ಜಾವೀದ್ ಅಹ್ಮದ್, ಸ್ಕ್ರೋಲ್.ಇನ್

(ಜಾವೀದ್ ಅಹ್ಮದ್, ಉತ್ತರ ಪ್ರದೇಶ ಮಾಜಿ ಪೊಲೀಸ್ ಮಹಾನಿರ್ದೇಶಕರು)


ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...