Homeಮುಖಪುಟವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

- Advertisement -
- Advertisement -

ಶುಕ್ರವಾರ ಬೆಳಿಗ್ಗೆ ಉತ್ತರಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಹತ್ಯೆ ಮಾಡಿದ ನಂತರ, ಪೋಲೀಸರು ಬಿಡುಗಡೆ ಮಾಡಿರುವ ವೀಡಿಯೋ ಸಾಕ್ಷಿಗಳ ಮೇಲೆ 5 ಪ್ರಶ್ನೆಗಳನ್ನು ಸಾರ್ವಜನಿಕರು ಕೇಳಿದ್ದಾರೆ.

ರಸ್ತೆ ಅಪಘಾತದ ನಂತರ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ದರೋಡೆಕೋರ ವಿಕಾಸ್ ದುಬೆಯನ್ನು ಎನ್‌ಕೌಂಟರ್‌ ಮಾಡಲಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಿನ್ನೆ ಬಂಧನಕ್ಕೊಳಗಾದ ನಂತರ ಕಾನ್ಪುರಕ್ಕೆ ಪೋಲಿಸ್ ಬೆಂಗಾವಲಿನಲ್ಲಿ ವಿಕಾಸ್ ದುಬೆಯನ್ನು ಕರೆತರಲಾಗುತ್ತಿತ್ತು. ಕಾನ್ಪುರದಿಂದ ಕೇವಲ 30 ಕಿ.ಮೀ ದೂರದಲ್ಲಿ, ಬೆಂಗಾವಲಿನಲ್ಲಿದ್ದ ಮೂರು ಕಾರುಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅದರಲ್ಲಿದ್ದ ದುಬೆ ಈ ಸಂದರ್ಭದ ಲಾಭ ಪಡೆದು, ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಪೊಲೀಸ್ ಎನ್‌ಕೌಂಟರ್ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ 5 ಪ್ರಶ್ನೆಗಳನ್ನು ಕೇಳಲಾಗಿದೆ. ಅವುಗಳೆಂದರೆ

1. ದುಬೆಯನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದು ಏಕೆ? ಅಪಘಾತಕ್ಕೂ ಮೊದಲು ಬೆಳಿಗ್ಗೆ 4 ಗಂಟೆಗೆ ಟೋಲ್ ಪ್ಲಾಜಾದಲ್ಲಿನ ವಿಡಿಯೋ ತೋರಿಸುವಂತೆ ಪಲ್ಟಿಯಾದ ಕಾರಿನಲ್ಲಿ ದುಬೆ ಇರಲಿಲ್ಲ. ಬದಲಿಗೆ ಬೇರೆ ಕಾರಿನಲ್ಲಿದ್ದ. ಅಂದರೆ ನಂತರ ಆತನನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದಕ್ಕೆ ಕಾರಣಗಳೇನು? ಶಿಫ್ಟ್‌ ಮಾಡುವ ಅಗತ್ಯವಾದರೂ ಏನಿತ್ತು?

2. ಪೊಲೀಸರನ್ನು ಹಿಂಬಾಲಿಸುತ್ತಿದ್ದ ಮೀಡಿಯಾ ತಂಡಗಳನ್ನು ಎನ್ ಕೌಂಟರ್ ನಡೆದ ಸ್ಥಳದಿಂದ 2 ಕಿಮೀ ದೂರದಲ್ಲಿಯೇ ತಡೆದು ನಿಲ್ಲಸಿದ್ದು ಏಕೆ?

3. ಘಟನೆಗೆ ಸಾಕ್ಷಿಯಾದ ಕೆಲವರು ಗುಂಡಿನ ಸಪ್ಪಳ ಕೇಳಿದೆವು ಎನ್ನುತ್ತಿದ್ದಾರೆ ಹೊರತು ಕಾರ ಮಗುಚಿ ಬಿದ್ದ ಅಪಘಾತದ ಬಗ್ಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅದಾಗಲೇ ಪೊಲೀಸರು ಸ್ಥಳೀಯರನ್ನು ಜಾಗ ಖಾಲಿ ಮಾಡಿಸಿದ್ದು ಏಕೆ?

4. ಕೊಲೆ ಸೇರಿ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಒಬ್ಬನಿಗೆ ಕೈಕೋಳ (ಹ್ಯಾಂಡ್ ಕಾಫ್) ಹಾಕಿರಲಿಲ್ಲವೇಕೆ? ಆತ ಗಾಯಗೊಂಡ ಪೊಲೀಸರೊಬ್ಬರ ಬಂದೂಕು ಕಿತ್ತುಕೊಂಡ ಎಂದು ಪೊಲೀಸರೇ ಹೇಳಿದ್ದಾರೆ. ಕೈಕೊಳ ಹಾಕಿದ್ದರು ಕಿತ್ತುಕೊಳ್ಳಲು ಹೇಗೆ ಸಾಧ್ಯ?

5. ಕಾರ್ ಬಿದ್ದ ಜಾಗದಲ್ಲಿ ಯಾವುದೇ ಬ್ಯಾರಿಕೇಡ್ ಇರಲಿಲ್ಲ. ಹೊಲಗಳತ್ತ ಸಾಗುವ ಒಂದು ಅಡ್ಡ ದಾರಿಯಿದೆ. ದುಬೆ ಅದರಲ್ಲೇ ಓಡಿ ಹೋಗಲು ಯತ್ನಿಸಿದ ಎಂಬ ಪೊಲೀಸರ ಹೇಳಿಕೆಯೂ ಅನುಮಾನಾಸ್ಪದವಾಗಿದೆ.

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶರವೇಗದಲ್ಲಿ ಓಡಾಡುತ್ತಿದೆ.

ನಿನ್ನೆಯಷ್ಟೇ ಸುಪ್ರೀಂಕೋರ್ಟಿನಲ್ಲಿ ಸಲ್ಲಿಕೆಯಾದ ಅರ್ಜಿಯಲ್ಲಿ ಕಾನ್ಪುರ್ ತಲುಪುವ ಮೊದಲೇ ದುಬೆಯನ್ನ ಪೊಲೀಸರು ಕೊಲ್ಲಬಹುದಾಗಿದ್ದು, ಆತನನ್ನು ಜೀವಂತ ತರುವಂತೆ ಆದೇಶಿಸಬೇಕು ಎಂದು ಕೇಳಲಾಗಿತ್ತು.


ಇದನ್ನೂ ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...