Homeಮುಖಪುಟವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

- Advertisement -
- Advertisement -

ಶುಕ್ರವಾರ ಬೆಳಿಗ್ಗೆ ಉತ್ತರಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಹತ್ಯೆ ಮಾಡಿದ ನಂತರ, ಪೋಲೀಸರು ಬಿಡುಗಡೆ ಮಾಡಿರುವ ವೀಡಿಯೋ ಸಾಕ್ಷಿಗಳ ಮೇಲೆ 5 ಪ್ರಶ್ನೆಗಳನ್ನು ಸಾರ್ವಜನಿಕರು ಕೇಳಿದ್ದಾರೆ.

ರಸ್ತೆ ಅಪಘಾತದ ನಂತರ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ದರೋಡೆಕೋರ ವಿಕಾಸ್ ದುಬೆಯನ್ನು ಎನ್‌ಕೌಂಟರ್‌ ಮಾಡಲಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಿನ್ನೆ ಬಂಧನಕ್ಕೊಳಗಾದ ನಂತರ ಕಾನ್ಪುರಕ್ಕೆ ಪೋಲಿಸ್ ಬೆಂಗಾವಲಿನಲ್ಲಿ ವಿಕಾಸ್ ದುಬೆಯನ್ನು ಕರೆತರಲಾಗುತ್ತಿತ್ತು. ಕಾನ್ಪುರದಿಂದ ಕೇವಲ 30 ಕಿ.ಮೀ ದೂರದಲ್ಲಿ, ಬೆಂಗಾವಲಿನಲ್ಲಿದ್ದ ಮೂರು ಕಾರುಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅದರಲ್ಲಿದ್ದ ದುಬೆ ಈ ಸಂದರ್ಭದ ಲಾಭ ಪಡೆದು, ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಪೊಲೀಸ್ ಎನ್‌ಕೌಂಟರ್ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ 5 ಪ್ರಶ್ನೆಗಳನ್ನು ಕೇಳಲಾಗಿದೆ. ಅವುಗಳೆಂದರೆ

1. ದುಬೆಯನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದು ಏಕೆ? ಅಪಘಾತಕ್ಕೂ ಮೊದಲು ಬೆಳಿಗ್ಗೆ 4 ಗಂಟೆಗೆ ಟೋಲ್ ಪ್ಲಾಜಾದಲ್ಲಿನ ವಿಡಿಯೋ ತೋರಿಸುವಂತೆ ಪಲ್ಟಿಯಾದ ಕಾರಿನಲ್ಲಿ ದುಬೆ ಇರಲಿಲ್ಲ. ಬದಲಿಗೆ ಬೇರೆ ಕಾರಿನಲ್ಲಿದ್ದ. ಅಂದರೆ ನಂತರ ಆತನನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದಕ್ಕೆ ಕಾರಣಗಳೇನು? ಶಿಫ್ಟ್‌ ಮಾಡುವ ಅಗತ್ಯವಾದರೂ ಏನಿತ್ತು?

2. ಪೊಲೀಸರನ್ನು ಹಿಂಬಾಲಿಸುತ್ತಿದ್ದ ಮೀಡಿಯಾ ತಂಡಗಳನ್ನು ಎನ್ ಕೌಂಟರ್ ನಡೆದ ಸ್ಥಳದಿಂದ 2 ಕಿಮೀ ದೂರದಲ್ಲಿಯೇ ತಡೆದು ನಿಲ್ಲಸಿದ್ದು ಏಕೆ?

3. ಘಟನೆಗೆ ಸಾಕ್ಷಿಯಾದ ಕೆಲವರು ಗುಂಡಿನ ಸಪ್ಪಳ ಕೇಳಿದೆವು ಎನ್ನುತ್ತಿದ್ದಾರೆ ಹೊರತು ಕಾರ ಮಗುಚಿ ಬಿದ್ದ ಅಪಘಾತದ ಬಗ್ಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅದಾಗಲೇ ಪೊಲೀಸರು ಸ್ಥಳೀಯರನ್ನು ಜಾಗ ಖಾಲಿ ಮಾಡಿಸಿದ್ದು ಏಕೆ?

4. ಕೊಲೆ ಸೇರಿ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಒಬ್ಬನಿಗೆ ಕೈಕೋಳ (ಹ್ಯಾಂಡ್ ಕಾಫ್) ಹಾಕಿರಲಿಲ್ಲವೇಕೆ? ಆತ ಗಾಯಗೊಂಡ ಪೊಲೀಸರೊಬ್ಬರ ಬಂದೂಕು ಕಿತ್ತುಕೊಂಡ ಎಂದು ಪೊಲೀಸರೇ ಹೇಳಿದ್ದಾರೆ. ಕೈಕೊಳ ಹಾಕಿದ್ದರು ಕಿತ್ತುಕೊಳ್ಳಲು ಹೇಗೆ ಸಾಧ್ಯ?

5. ಕಾರ್ ಬಿದ್ದ ಜಾಗದಲ್ಲಿ ಯಾವುದೇ ಬ್ಯಾರಿಕೇಡ್ ಇರಲಿಲ್ಲ. ಹೊಲಗಳತ್ತ ಸಾಗುವ ಒಂದು ಅಡ್ಡ ದಾರಿಯಿದೆ. ದುಬೆ ಅದರಲ್ಲೇ ಓಡಿ ಹೋಗಲು ಯತ್ನಿಸಿದ ಎಂಬ ಪೊಲೀಸರ ಹೇಳಿಕೆಯೂ ಅನುಮಾನಾಸ್ಪದವಾಗಿದೆ.

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶರವೇಗದಲ್ಲಿ ಓಡಾಡುತ್ತಿದೆ.

ನಿನ್ನೆಯಷ್ಟೇ ಸುಪ್ರೀಂಕೋರ್ಟಿನಲ್ಲಿ ಸಲ್ಲಿಕೆಯಾದ ಅರ್ಜಿಯಲ್ಲಿ ಕಾನ್ಪುರ್ ತಲುಪುವ ಮೊದಲೇ ದುಬೆಯನ್ನ ಪೊಲೀಸರು ಕೊಲ್ಲಬಹುದಾಗಿದ್ದು, ಆತನನ್ನು ಜೀವಂತ ತರುವಂತೆ ಆದೇಶಿಸಬೇಕು ಎಂದು ಕೇಳಲಾಗಿತ್ತು.


ಇದನ್ನೂ ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...