Homeಮುಖಪುಟವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

- Advertisement -
- Advertisement -

ಶುಕ್ರವಾರ ಬೆಳಿಗ್ಗೆ ಉತ್ತರಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಹತ್ಯೆ ಮಾಡಿದ ನಂತರ, ಪೋಲೀಸರು ಬಿಡುಗಡೆ ಮಾಡಿರುವ ವೀಡಿಯೋ ಸಾಕ್ಷಿಗಳ ಮೇಲೆ 5 ಪ್ರಶ್ನೆಗಳನ್ನು ಸಾರ್ವಜನಿಕರು ಕೇಳಿದ್ದಾರೆ.

ರಸ್ತೆ ಅಪಘಾತದ ನಂತರ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ದರೋಡೆಕೋರ ವಿಕಾಸ್ ದುಬೆಯನ್ನು ಎನ್‌ಕೌಂಟರ್‌ ಮಾಡಲಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಿನ್ನೆ ಬಂಧನಕ್ಕೊಳಗಾದ ನಂತರ ಕಾನ್ಪುರಕ್ಕೆ ಪೋಲಿಸ್ ಬೆಂಗಾವಲಿನಲ್ಲಿ ವಿಕಾಸ್ ದುಬೆಯನ್ನು ಕರೆತರಲಾಗುತ್ತಿತ್ತು. ಕಾನ್ಪುರದಿಂದ ಕೇವಲ 30 ಕಿ.ಮೀ ದೂರದಲ್ಲಿ, ಬೆಂಗಾವಲಿನಲ್ಲಿದ್ದ ಮೂರು ಕಾರುಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅದರಲ್ಲಿದ್ದ ದುಬೆ ಈ ಸಂದರ್ಭದ ಲಾಭ ಪಡೆದು, ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಪೊಲೀಸ್ ಎನ್‌ಕೌಂಟರ್ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ 5 ಪ್ರಶ್ನೆಗಳನ್ನು ಕೇಳಲಾಗಿದೆ. ಅವುಗಳೆಂದರೆ

1. ದುಬೆಯನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದು ಏಕೆ? ಅಪಘಾತಕ್ಕೂ ಮೊದಲು ಬೆಳಿಗ್ಗೆ 4 ಗಂಟೆಗೆ ಟೋಲ್ ಪ್ಲಾಜಾದಲ್ಲಿನ ವಿಡಿಯೋ ತೋರಿಸುವಂತೆ ಪಲ್ಟಿಯಾದ ಕಾರಿನಲ್ಲಿ ದುಬೆ ಇರಲಿಲ್ಲ. ಬದಲಿಗೆ ಬೇರೆ ಕಾರಿನಲ್ಲಿದ್ದ. ಅಂದರೆ ನಂತರ ಆತನನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದಕ್ಕೆ ಕಾರಣಗಳೇನು? ಶಿಫ್ಟ್‌ ಮಾಡುವ ಅಗತ್ಯವಾದರೂ ಏನಿತ್ತು?

2. ಪೊಲೀಸರನ್ನು ಹಿಂಬಾಲಿಸುತ್ತಿದ್ದ ಮೀಡಿಯಾ ತಂಡಗಳನ್ನು ಎನ್ ಕೌಂಟರ್ ನಡೆದ ಸ್ಥಳದಿಂದ 2 ಕಿಮೀ ದೂರದಲ್ಲಿಯೇ ತಡೆದು ನಿಲ್ಲಸಿದ್ದು ಏಕೆ?

3. ಘಟನೆಗೆ ಸಾಕ್ಷಿಯಾದ ಕೆಲವರು ಗುಂಡಿನ ಸಪ್ಪಳ ಕೇಳಿದೆವು ಎನ್ನುತ್ತಿದ್ದಾರೆ ಹೊರತು ಕಾರ ಮಗುಚಿ ಬಿದ್ದ ಅಪಘಾತದ ಬಗ್ಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅದಾಗಲೇ ಪೊಲೀಸರು ಸ್ಥಳೀಯರನ್ನು ಜಾಗ ಖಾಲಿ ಮಾಡಿಸಿದ್ದು ಏಕೆ?

4. ಕೊಲೆ ಸೇರಿ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಒಬ್ಬನಿಗೆ ಕೈಕೋಳ (ಹ್ಯಾಂಡ್ ಕಾಫ್) ಹಾಕಿರಲಿಲ್ಲವೇಕೆ? ಆತ ಗಾಯಗೊಂಡ ಪೊಲೀಸರೊಬ್ಬರ ಬಂದೂಕು ಕಿತ್ತುಕೊಂಡ ಎಂದು ಪೊಲೀಸರೇ ಹೇಳಿದ್ದಾರೆ. ಕೈಕೊಳ ಹಾಕಿದ್ದರು ಕಿತ್ತುಕೊಳ್ಳಲು ಹೇಗೆ ಸಾಧ್ಯ?

5. ಕಾರ್ ಬಿದ್ದ ಜಾಗದಲ್ಲಿ ಯಾವುದೇ ಬ್ಯಾರಿಕೇಡ್ ಇರಲಿಲ್ಲ. ಹೊಲಗಳತ್ತ ಸಾಗುವ ಒಂದು ಅಡ್ಡ ದಾರಿಯಿದೆ. ದುಬೆ ಅದರಲ್ಲೇ ಓಡಿ ಹೋಗಲು ಯತ್ನಿಸಿದ ಎಂಬ ಪೊಲೀಸರ ಹೇಳಿಕೆಯೂ ಅನುಮಾನಾಸ್ಪದವಾಗಿದೆ.

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶರವೇಗದಲ್ಲಿ ಓಡಾಡುತ್ತಿದೆ.

ನಿನ್ನೆಯಷ್ಟೇ ಸುಪ್ರೀಂಕೋರ್ಟಿನಲ್ಲಿ ಸಲ್ಲಿಕೆಯಾದ ಅರ್ಜಿಯಲ್ಲಿ ಕಾನ್ಪುರ್ ತಲುಪುವ ಮೊದಲೇ ದುಬೆಯನ್ನ ಪೊಲೀಸರು ಕೊಲ್ಲಬಹುದಾಗಿದ್ದು, ಆತನನ್ನು ಜೀವಂತ ತರುವಂತೆ ಆದೇಶಿಸಬೇಕು ಎಂದು ಕೇಳಲಾಗಿತ್ತು.


ಇದನ್ನೂ ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...