Homeಮುಖಪುಟವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

- Advertisement -
- Advertisement -

ಶುಕ್ರವಾರ ಬೆಳಿಗ್ಗೆ ಉತ್ತರಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಹತ್ಯೆ ಮಾಡಿದ ನಂತರ, ಪೋಲೀಸರು ಬಿಡುಗಡೆ ಮಾಡಿರುವ ವೀಡಿಯೋ ಸಾಕ್ಷಿಗಳ ಮೇಲೆ 5 ಪ್ರಶ್ನೆಗಳನ್ನು ಸಾರ್ವಜನಿಕರು ಕೇಳಿದ್ದಾರೆ.

ರಸ್ತೆ ಅಪಘಾತದ ನಂತರ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ದರೋಡೆಕೋರ ವಿಕಾಸ್ ದುಬೆಯನ್ನು ಎನ್‌ಕೌಂಟರ್‌ ಮಾಡಲಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಿನ್ನೆ ಬಂಧನಕ್ಕೊಳಗಾದ ನಂತರ ಕಾನ್ಪುರಕ್ಕೆ ಪೋಲಿಸ್ ಬೆಂಗಾವಲಿನಲ್ಲಿ ವಿಕಾಸ್ ದುಬೆಯನ್ನು ಕರೆತರಲಾಗುತ್ತಿತ್ತು. ಕಾನ್ಪುರದಿಂದ ಕೇವಲ 30 ಕಿ.ಮೀ ದೂರದಲ್ಲಿ, ಬೆಂಗಾವಲಿನಲ್ಲಿದ್ದ ಮೂರು ಕಾರುಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅದರಲ್ಲಿದ್ದ ದುಬೆ ಈ ಸಂದರ್ಭದ ಲಾಭ ಪಡೆದು, ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಪೊಲೀಸ್ ಎನ್‌ಕೌಂಟರ್ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ 5 ಪ್ರಶ್ನೆಗಳನ್ನು ಕೇಳಲಾಗಿದೆ. ಅವುಗಳೆಂದರೆ

1. ದುಬೆಯನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದು ಏಕೆ? ಅಪಘಾತಕ್ಕೂ ಮೊದಲು ಬೆಳಿಗ್ಗೆ 4 ಗಂಟೆಗೆ ಟೋಲ್ ಪ್ಲಾಜಾದಲ್ಲಿನ ವಿಡಿಯೋ ತೋರಿಸುವಂತೆ ಪಲ್ಟಿಯಾದ ಕಾರಿನಲ್ಲಿ ದುಬೆ ಇರಲಿಲ್ಲ. ಬದಲಿಗೆ ಬೇರೆ ಕಾರಿನಲ್ಲಿದ್ದ. ಅಂದರೆ ನಂತರ ಆತನನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದಕ್ಕೆ ಕಾರಣಗಳೇನು? ಶಿಫ್ಟ್‌ ಮಾಡುವ ಅಗತ್ಯವಾದರೂ ಏನಿತ್ತು?

2. ಪೊಲೀಸರನ್ನು ಹಿಂಬಾಲಿಸುತ್ತಿದ್ದ ಮೀಡಿಯಾ ತಂಡಗಳನ್ನು ಎನ್ ಕೌಂಟರ್ ನಡೆದ ಸ್ಥಳದಿಂದ 2 ಕಿಮೀ ದೂರದಲ್ಲಿಯೇ ತಡೆದು ನಿಲ್ಲಸಿದ್ದು ಏಕೆ?

3. ಘಟನೆಗೆ ಸಾಕ್ಷಿಯಾದ ಕೆಲವರು ಗುಂಡಿನ ಸಪ್ಪಳ ಕೇಳಿದೆವು ಎನ್ನುತ್ತಿದ್ದಾರೆ ಹೊರತು ಕಾರ ಮಗುಚಿ ಬಿದ್ದ ಅಪಘಾತದ ಬಗ್ಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅದಾಗಲೇ ಪೊಲೀಸರು ಸ್ಥಳೀಯರನ್ನು ಜಾಗ ಖಾಲಿ ಮಾಡಿಸಿದ್ದು ಏಕೆ?

4. ಕೊಲೆ ಸೇರಿ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಒಬ್ಬನಿಗೆ ಕೈಕೋಳ (ಹ್ಯಾಂಡ್ ಕಾಫ್) ಹಾಕಿರಲಿಲ್ಲವೇಕೆ? ಆತ ಗಾಯಗೊಂಡ ಪೊಲೀಸರೊಬ್ಬರ ಬಂದೂಕು ಕಿತ್ತುಕೊಂಡ ಎಂದು ಪೊಲೀಸರೇ ಹೇಳಿದ್ದಾರೆ. ಕೈಕೊಳ ಹಾಕಿದ್ದರು ಕಿತ್ತುಕೊಳ್ಳಲು ಹೇಗೆ ಸಾಧ್ಯ?

5. ಕಾರ್ ಬಿದ್ದ ಜಾಗದಲ್ಲಿ ಯಾವುದೇ ಬ್ಯಾರಿಕೇಡ್ ಇರಲಿಲ್ಲ. ಹೊಲಗಳತ್ತ ಸಾಗುವ ಒಂದು ಅಡ್ಡ ದಾರಿಯಿದೆ. ದುಬೆ ಅದರಲ್ಲೇ ಓಡಿ ಹೋಗಲು ಯತ್ನಿಸಿದ ಎಂಬ ಪೊಲೀಸರ ಹೇಳಿಕೆಯೂ ಅನುಮಾನಾಸ್ಪದವಾಗಿದೆ.

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶರವೇಗದಲ್ಲಿ ಓಡಾಡುತ್ತಿದೆ.

ನಿನ್ನೆಯಷ್ಟೇ ಸುಪ್ರೀಂಕೋರ್ಟಿನಲ್ಲಿ ಸಲ್ಲಿಕೆಯಾದ ಅರ್ಜಿಯಲ್ಲಿ ಕಾನ್ಪುರ್ ತಲುಪುವ ಮೊದಲೇ ದುಬೆಯನ್ನ ಪೊಲೀಸರು ಕೊಲ್ಲಬಹುದಾಗಿದ್ದು, ಆತನನ್ನು ಜೀವಂತ ತರುವಂತೆ ಆದೇಶಿಸಬೇಕು ಎಂದು ಕೇಳಲಾಗಿತ್ತು.


ಇದನ್ನೂ ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...