Homeಮುಖಪುಟವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

- Advertisement -
- Advertisement -

ಶುಕ್ರವಾರ ಬೆಳಿಗ್ಗೆ ಉತ್ತರಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಹತ್ಯೆ ಮಾಡಿದ ನಂತರ, ಪೋಲೀಸರು ಬಿಡುಗಡೆ ಮಾಡಿರುವ ವೀಡಿಯೋ ಸಾಕ್ಷಿಗಳ ಮೇಲೆ 5 ಪ್ರಶ್ನೆಗಳನ್ನು ಸಾರ್ವಜನಿಕರು ಕೇಳಿದ್ದಾರೆ.

ರಸ್ತೆ ಅಪಘಾತದ ನಂತರ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ದರೋಡೆಕೋರ ವಿಕಾಸ್ ದುಬೆಯನ್ನು ಎನ್‌ಕೌಂಟರ್‌ ಮಾಡಲಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಿನ್ನೆ ಬಂಧನಕ್ಕೊಳಗಾದ ನಂತರ ಕಾನ್ಪುರಕ್ಕೆ ಪೋಲಿಸ್ ಬೆಂಗಾವಲಿನಲ್ಲಿ ವಿಕಾಸ್ ದುಬೆಯನ್ನು ಕರೆತರಲಾಗುತ್ತಿತ್ತು. ಕಾನ್ಪುರದಿಂದ ಕೇವಲ 30 ಕಿ.ಮೀ ದೂರದಲ್ಲಿ, ಬೆಂಗಾವಲಿನಲ್ಲಿದ್ದ ಮೂರು ಕಾರುಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅದರಲ್ಲಿದ್ದ ದುಬೆ ಈ ಸಂದರ್ಭದ ಲಾಭ ಪಡೆದು, ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಪೊಲೀಸ್ ಎನ್‌ಕೌಂಟರ್ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ 5 ಪ್ರಶ್ನೆಗಳನ್ನು ಕೇಳಲಾಗಿದೆ. ಅವುಗಳೆಂದರೆ

1. ದುಬೆಯನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದು ಏಕೆ? ಅಪಘಾತಕ್ಕೂ ಮೊದಲು ಬೆಳಿಗ್ಗೆ 4 ಗಂಟೆಗೆ ಟೋಲ್ ಪ್ಲಾಜಾದಲ್ಲಿನ ವಿಡಿಯೋ ತೋರಿಸುವಂತೆ ಪಲ್ಟಿಯಾದ ಕಾರಿನಲ್ಲಿ ದುಬೆ ಇರಲಿಲ್ಲ. ಬದಲಿಗೆ ಬೇರೆ ಕಾರಿನಲ್ಲಿದ್ದ. ಅಂದರೆ ನಂತರ ಆತನನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದಕ್ಕೆ ಕಾರಣಗಳೇನು? ಶಿಫ್ಟ್‌ ಮಾಡುವ ಅಗತ್ಯವಾದರೂ ಏನಿತ್ತು?

2. ಪೊಲೀಸರನ್ನು ಹಿಂಬಾಲಿಸುತ್ತಿದ್ದ ಮೀಡಿಯಾ ತಂಡಗಳನ್ನು ಎನ್ ಕೌಂಟರ್ ನಡೆದ ಸ್ಥಳದಿಂದ 2 ಕಿಮೀ ದೂರದಲ್ಲಿಯೇ ತಡೆದು ನಿಲ್ಲಸಿದ್ದು ಏಕೆ?

3. ಘಟನೆಗೆ ಸಾಕ್ಷಿಯಾದ ಕೆಲವರು ಗುಂಡಿನ ಸಪ್ಪಳ ಕೇಳಿದೆವು ಎನ್ನುತ್ತಿದ್ದಾರೆ ಹೊರತು ಕಾರ ಮಗುಚಿ ಬಿದ್ದ ಅಪಘಾತದ ಬಗ್ಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅದಾಗಲೇ ಪೊಲೀಸರು ಸ್ಥಳೀಯರನ್ನು ಜಾಗ ಖಾಲಿ ಮಾಡಿಸಿದ್ದು ಏಕೆ?

4. ಕೊಲೆ ಸೇರಿ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಒಬ್ಬನಿಗೆ ಕೈಕೋಳ (ಹ್ಯಾಂಡ್ ಕಾಫ್) ಹಾಕಿರಲಿಲ್ಲವೇಕೆ? ಆತ ಗಾಯಗೊಂಡ ಪೊಲೀಸರೊಬ್ಬರ ಬಂದೂಕು ಕಿತ್ತುಕೊಂಡ ಎಂದು ಪೊಲೀಸರೇ ಹೇಳಿದ್ದಾರೆ. ಕೈಕೊಳ ಹಾಕಿದ್ದರು ಕಿತ್ತುಕೊಳ್ಳಲು ಹೇಗೆ ಸಾಧ್ಯ?

5. ಕಾರ್ ಬಿದ್ದ ಜಾಗದಲ್ಲಿ ಯಾವುದೇ ಬ್ಯಾರಿಕೇಡ್ ಇರಲಿಲ್ಲ. ಹೊಲಗಳತ್ತ ಸಾಗುವ ಒಂದು ಅಡ್ಡ ದಾರಿಯಿದೆ. ದುಬೆ ಅದರಲ್ಲೇ ಓಡಿ ಹೋಗಲು ಯತ್ನಿಸಿದ ಎಂಬ ಪೊಲೀಸರ ಹೇಳಿಕೆಯೂ ಅನುಮಾನಾಸ್ಪದವಾಗಿದೆ.

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶರವೇಗದಲ್ಲಿ ಓಡಾಡುತ್ತಿದೆ.

ನಿನ್ನೆಯಷ್ಟೇ ಸುಪ್ರೀಂಕೋರ್ಟಿನಲ್ಲಿ ಸಲ್ಲಿಕೆಯಾದ ಅರ್ಜಿಯಲ್ಲಿ ಕಾನ್ಪುರ್ ತಲುಪುವ ಮೊದಲೇ ದುಬೆಯನ್ನ ಪೊಲೀಸರು ಕೊಲ್ಲಬಹುದಾಗಿದ್ದು, ಆತನನ್ನು ಜೀವಂತ ತರುವಂತೆ ಆದೇಶಿಸಬೇಕು ಎಂದು ಕೇಳಲಾಗಿತ್ತು.


ಇದನ್ನೂ ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...