Homeಮುಖಪುಟ2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.

- Advertisement -
- Advertisement -

‘ನನ್ನ ಮೊಮ್ಮಗನಿಗೆ ಹೇಗೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿದ್ದೇನೆ; ನೀನು ಅವನಿಗೆ ಯಾಕೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿಕೊಡು’. ಇದು ಮಲೆಯಾಳಂನ ಖ್ಯಾತ ಸಿನೆಮಾ ಉಸ್ತಾದ್ ಹೋಟೆಲ್ ನಲ್ಲಿ ಬರುವ ಸಂಭಾಷಣೆ… ಜಗತ್ತಿನಲ್ಲಿ ಇಂದಿಗೂ ಲಕ್ಷಾಂತರ ಜನ ಹಸಿವಿನಿಂದ ಸಾಯುತ್ತಿರುವಾಗ ಈ ಸಂಭಾಷಣೆಗೆ ತನ್ನದೇ ಆದ ಮಹತ್ವವಿದೆ.

ನಿಜ ಜೀವನದಲ್ಲಿ ಹೇಗೆ ಅಡುಗೆ ಮಾಡಬೇಕು ಎಂಬುದರ ಜೊತೆಗೆ ಏಕೆ ಅಡುಗೆ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟವರು ಭಾರತದ ಪ್ರಖ್ಯಾತ ಬಾಣಸಿಗರಾದ ವಿಕಾಸ್‌ ಖನ್ನಾರವರು.

ಅನಿರೀಕ್ಷಿತವಾಗಿ ಎರಗಿದ ಲಾಕ್‌ಡೌನ್‌ ವೇಳೆ ತುತ್ತು ಊಟಕ್ಕಾಗಿ ಪರದಾಡುತ್ತಿದ್ದ ಲಕ್ಷಾಂತರ ಜನರ ಪಾಲಿಗೆ ವಿಕಾಸ್ ಖನ್ನಾ ಆಪತ್ಬಾಂಧವರಾಗಿದ್ದಾರೆ. ಭಾರತದ ಪ್ರಖ್ಯಾತ ಬಾಣಸಿಗರಾದ ಅವರು ತಮ್ಮ ಎಲ್ಲಾ ಖ್ಯಾತಿ ಪ್ರತಿಷ್ಠೆಗಳನ್ನು ಬದಿಗೊತ್ತಿ ತಮ್ಮ ‘ಫೀಡ್ ಇಂಡಿಯಾ ಇನಿಷಿಯೇಟಿವ್’ ಮೂಲಕ 2 ಕೋಟಿ ಜನರಿಗೆ ಆಹಾರವನ್ನು ಇದುವರೆಗೂ ಹಂಚಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಲಾಕ್‌ಡೌನ್ ಸಮಯದಲ್ಲಿ ಸಿಕ್ಕಿಕೊಂಡ ಹತ್ತಾರು ಸಾವಿರ ಜನರನ್ನು ತಮ್ಮ ಊರುಗಳಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾದಂತೆಯೇ ವಿಕಾಸ್ ಖನ್ನಾ ಬಹಲಷ್ಟು ಜನರಿಗೆ ಆಹಾರ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಮಾನವೀಯ ಕೃತ್ಯಗಳಿಗಾಗಿ ಹಾರ್ಮನಿ ಫೌಂಡೇಶನ್ ಅವರನ್ನು ಗೌರವಿಸಿದೆ.

ವಿಕಾಸ್ ಖನ್ನಾ ಪಂಜಾಬ್ ಮೂಲದವರು. ನವೆಂಬರ್ 14, 1971ರಲ್ಲಿ ಅಮೃತ್‌ಸರದಲ್ಲಿ ಜನಿಸಿದ ಅವರು, 17ನೇ ವಯಸ್ಸಿನಿಂದಲೇ ಸ್ವಂತ ಕಂಪನಿ ಆರಂಭಿಸಿದರು. ಸದ್ಯಕ್ಕೆ ಅಮೇರಿಕಾ ಹಾಟೆಸ್ಟ್ ಶೆಫ್ ಎಂದು ಕರೆಸಿಕೊಳ್ಳುವ ಅವರು ಹಲವು ಹೋಟೆಲ್‌ಗಳ ಮಾಲೀಕರಾಗಿದ್ದಾರೆ. ಪ್ರಪಂಚದ ಅತ್ಯುತ್ತಮ ಶೆಫ್‌ಗಳಲ್ಲಿ ಒಬ್ಬರಾಗಿದ್ದಾರೆ. ಪಂಜಾಬ್‌ನಲ್ಲಿ ಲಂಗರ್‌ಗಳನ್ನು (ಉಚಿತ ಸಾಮುದಾಯಿಕ ಅಡುಗೆ ಕೇಂದ್ರ) ನಡೆಸಲಾಗುತ್ತದೆ. ಆ ಮೂಲಕ ಹಸಿದವರಿಗೆ ಉಚಿತ ಊಟ ಒದಗಿಸುವುದು ಅವರ ಕಾಯಕ. ಆ ಹಿನ್ನೆಲೆಯಲ್ಲಿ ಬೆಳೆದುಬಂದ ವಿಕಾಸ್ ಇಂದು ಭಾರತದ ಬಹುಜನರಿಗೆ ಊಟ ಹಾಕುತ್ತಿದ್ದಾರೆ.

ಅಮೃತಸರದ ಲಂಗಾರ್‌ಗಳ ಪ್ರಭಾವದಿಂದ ಮತ್ತು ಅವರ ತಾಯಿಯಿಂದ ಪ್ರಭಾವಿತವಾಗಿದ್ದ ವಿಕಾಸ್ ಸಮಾಜಕ್ಕೆ ಮರಳಿ ನೀಡುವ ನೀತಿಯನ್ನು ಅನುಸರಿಸಿ ಫೀಡ್ ಇಂಡಿಯಾ ಇನಿಷಿಯೇಟಿವ್ ಆರಂಭಿಸಿದ್ದಾರೆ.

ಅನಾಥಾಶ್ರಮಗಳು, ವೃದ್ಧಾಶ್ರಮಗಳು ಮತ್ತು ಕುಷ್ಠರೋಗ ಕೇಂದ್ರಗಳಿಗೆ ಪಡಿತರವನ್ನು ಒದಗಿಸುವ ಮೂಲಕ ಫೀಡ್‌ಇಂಡಿಯಾ ಇನಿಶಿಯೇಟಿವ್ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಯಿತು. ಅಂತಿಮವಾಗಿ, ಹೆದ್ದಾರಿಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬೇಯಿಸಿದ ಊಟವನ್ನು ಒದಗಿಸುವ ಮೂಲಕ ದೊಡ್ಡದಾಗಿ ಬೆಳೆಯಿತು. ಇಂದು ಅವರು ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಆಹಾರ ಒದಗಿಸಲು ವಿವಿಧ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ವಾಲಂಟೀಯರ್ ಆಗಿರುವ ಅವರು ಇದುವರೆಗೂ ಭಾರತದ 100 ಕ್ಕೂ ಹೆಚ್ಚು ನಗರಗಳಲ್ಲಿ 70 ಲಕ್ಷ ಪ್ಯಾಕೆಟ್ ಪಡಿತರ ವಿತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸುಮಾರು ಒಂದೂವರೆ ಕೋಟಿ ಜನರಿಗೆ ಬೇಯಿಸಿದ ಆಹಾರ ವಿತರಿಸಿದ್ದಾರೆ.

ನಾನು ಹುಟ್ಟಿ ಬೆಳೆದಿದ್ದು ಭಾರತದಲ್ಲಿಯೇ ಆದರೂ ನನಗೆ ಹಸಿವಿನ ಪರಿಚಯವಾದುದ್ದು ನ್ಯೂಯಾರ್ಕ್‌ನಲ್ಲಿ ಎಂದು ಇತ್ತೀಚೆಗೆ ವಿಕಾಸ್ ಖನ್ನಾ ಹೇಳಿದ್ದ ಮಾತುಗಳು ವೈರಲ್ ಆಗಿದ್ದವು. ಅಷ್ಟೇ ಅಲ್ಲದೇ ಆಂಧ್ರಪ್ರದೇಶದ ಜನಪ್ರಿಯ ತಿನಿಸಾದ ದಿಬ್ಬಾ ರೊಟ್ಟಿ ಮಾಡುವುದನ್ನು ಯೂಟ್ಯೂಬ್ ನಿಂದ ನೋಡಿ ಕಲಿತ ಅವರು, ಅದಕ್ಕಾಗಿ ಅದನ್ನು ಕಲಿಸಿದ ಗುರುಗಳಿಗೆ ಗುರುದಕ್ಷಿಣೆ ಸಲ್ಲಿಸುವ ಮೂಲಕವೂ ಸುದ್ದಿಯಾಗಿದ್ದರು.

2020 ರಲ್ಲಿ ಏಷ್ಯಾದ  ಅತ್ಯಂತ ಪ್ರಭಾವಶಾಲಿ 100 ಜನರಲ್ಲಿ ಒಬ್ಬರಾಗಿ ವಿಕಾಸ್ ಖನ್ನಾ ಆಯ್ಕೆಯಾಗಿದ್ದಾರೆ. ಅವರ ಕುರಿತು ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯರವರು ಬರೆದ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನ ವಿಕಾಸ್ ಖನ್ನಾರವರ ನಿಸ್ವಾರ್ಥ ಕಾಳಜಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...