Homeಮುಖಪುಟ2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.

- Advertisement -
- Advertisement -

‘ನನ್ನ ಮೊಮ್ಮಗನಿಗೆ ಹೇಗೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿದ್ದೇನೆ; ನೀನು ಅವನಿಗೆ ಯಾಕೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿಕೊಡು’. ಇದು ಮಲೆಯಾಳಂನ ಖ್ಯಾತ ಸಿನೆಮಾ ಉಸ್ತಾದ್ ಹೋಟೆಲ್ ನಲ್ಲಿ ಬರುವ ಸಂಭಾಷಣೆ… ಜಗತ್ತಿನಲ್ಲಿ ಇಂದಿಗೂ ಲಕ್ಷಾಂತರ ಜನ ಹಸಿವಿನಿಂದ ಸಾಯುತ್ತಿರುವಾಗ ಈ ಸಂಭಾಷಣೆಗೆ ತನ್ನದೇ ಆದ ಮಹತ್ವವಿದೆ.

ನಿಜ ಜೀವನದಲ್ಲಿ ಹೇಗೆ ಅಡುಗೆ ಮಾಡಬೇಕು ಎಂಬುದರ ಜೊತೆಗೆ ಏಕೆ ಅಡುಗೆ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟವರು ಭಾರತದ ಪ್ರಖ್ಯಾತ ಬಾಣಸಿಗರಾದ ವಿಕಾಸ್‌ ಖನ್ನಾರವರು.

ಅನಿರೀಕ್ಷಿತವಾಗಿ ಎರಗಿದ ಲಾಕ್‌ಡೌನ್‌ ವೇಳೆ ತುತ್ತು ಊಟಕ್ಕಾಗಿ ಪರದಾಡುತ್ತಿದ್ದ ಲಕ್ಷಾಂತರ ಜನರ ಪಾಲಿಗೆ ವಿಕಾಸ್ ಖನ್ನಾ ಆಪತ್ಬಾಂಧವರಾಗಿದ್ದಾರೆ. ಭಾರತದ ಪ್ರಖ್ಯಾತ ಬಾಣಸಿಗರಾದ ಅವರು ತಮ್ಮ ಎಲ್ಲಾ ಖ್ಯಾತಿ ಪ್ರತಿಷ್ಠೆಗಳನ್ನು ಬದಿಗೊತ್ತಿ ತಮ್ಮ ‘ಫೀಡ್ ಇಂಡಿಯಾ ಇನಿಷಿಯೇಟಿವ್’ ಮೂಲಕ 2 ಕೋಟಿ ಜನರಿಗೆ ಆಹಾರವನ್ನು ಇದುವರೆಗೂ ಹಂಚಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಲಾಕ್‌ಡೌನ್ ಸಮಯದಲ್ಲಿ ಸಿಕ್ಕಿಕೊಂಡ ಹತ್ತಾರು ಸಾವಿರ ಜನರನ್ನು ತಮ್ಮ ಊರುಗಳಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾದಂತೆಯೇ ವಿಕಾಸ್ ಖನ್ನಾ ಬಹಲಷ್ಟು ಜನರಿಗೆ ಆಹಾರ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಮಾನವೀಯ ಕೃತ್ಯಗಳಿಗಾಗಿ ಹಾರ್ಮನಿ ಫೌಂಡೇಶನ್ ಅವರನ್ನು ಗೌರವಿಸಿದೆ.

ವಿಕಾಸ್ ಖನ್ನಾ ಪಂಜಾಬ್ ಮೂಲದವರು. ನವೆಂಬರ್ 14, 1971ರಲ್ಲಿ ಅಮೃತ್‌ಸರದಲ್ಲಿ ಜನಿಸಿದ ಅವರು, 17ನೇ ವಯಸ್ಸಿನಿಂದಲೇ ಸ್ವಂತ ಕಂಪನಿ ಆರಂಭಿಸಿದರು. ಸದ್ಯಕ್ಕೆ ಅಮೇರಿಕಾ ಹಾಟೆಸ್ಟ್ ಶೆಫ್ ಎಂದು ಕರೆಸಿಕೊಳ್ಳುವ ಅವರು ಹಲವು ಹೋಟೆಲ್‌ಗಳ ಮಾಲೀಕರಾಗಿದ್ದಾರೆ. ಪ್ರಪಂಚದ ಅತ್ಯುತ್ತಮ ಶೆಫ್‌ಗಳಲ್ಲಿ ಒಬ್ಬರಾಗಿದ್ದಾರೆ. ಪಂಜಾಬ್‌ನಲ್ಲಿ ಲಂಗರ್‌ಗಳನ್ನು (ಉಚಿತ ಸಾಮುದಾಯಿಕ ಅಡುಗೆ ಕೇಂದ್ರ) ನಡೆಸಲಾಗುತ್ತದೆ. ಆ ಮೂಲಕ ಹಸಿದವರಿಗೆ ಉಚಿತ ಊಟ ಒದಗಿಸುವುದು ಅವರ ಕಾಯಕ. ಆ ಹಿನ್ನೆಲೆಯಲ್ಲಿ ಬೆಳೆದುಬಂದ ವಿಕಾಸ್ ಇಂದು ಭಾರತದ ಬಹುಜನರಿಗೆ ಊಟ ಹಾಕುತ್ತಿದ್ದಾರೆ.

ಅಮೃತಸರದ ಲಂಗಾರ್‌ಗಳ ಪ್ರಭಾವದಿಂದ ಮತ್ತು ಅವರ ತಾಯಿಯಿಂದ ಪ್ರಭಾವಿತವಾಗಿದ್ದ ವಿಕಾಸ್ ಸಮಾಜಕ್ಕೆ ಮರಳಿ ನೀಡುವ ನೀತಿಯನ್ನು ಅನುಸರಿಸಿ ಫೀಡ್ ಇಂಡಿಯಾ ಇನಿಷಿಯೇಟಿವ್ ಆರಂಭಿಸಿದ್ದಾರೆ.

ಅನಾಥಾಶ್ರಮಗಳು, ವೃದ್ಧಾಶ್ರಮಗಳು ಮತ್ತು ಕುಷ್ಠರೋಗ ಕೇಂದ್ರಗಳಿಗೆ ಪಡಿತರವನ್ನು ಒದಗಿಸುವ ಮೂಲಕ ಫೀಡ್‌ಇಂಡಿಯಾ ಇನಿಶಿಯೇಟಿವ್ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಯಿತು. ಅಂತಿಮವಾಗಿ, ಹೆದ್ದಾರಿಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬೇಯಿಸಿದ ಊಟವನ್ನು ಒದಗಿಸುವ ಮೂಲಕ ದೊಡ್ಡದಾಗಿ ಬೆಳೆಯಿತು. ಇಂದು ಅವರು ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಆಹಾರ ಒದಗಿಸಲು ವಿವಿಧ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ವಾಲಂಟೀಯರ್ ಆಗಿರುವ ಅವರು ಇದುವರೆಗೂ ಭಾರತದ 100 ಕ್ಕೂ ಹೆಚ್ಚು ನಗರಗಳಲ್ಲಿ 70 ಲಕ್ಷ ಪ್ಯಾಕೆಟ್ ಪಡಿತರ ವಿತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸುಮಾರು ಒಂದೂವರೆ ಕೋಟಿ ಜನರಿಗೆ ಬೇಯಿಸಿದ ಆಹಾರ ವಿತರಿಸಿದ್ದಾರೆ.

ನಾನು ಹುಟ್ಟಿ ಬೆಳೆದಿದ್ದು ಭಾರತದಲ್ಲಿಯೇ ಆದರೂ ನನಗೆ ಹಸಿವಿನ ಪರಿಚಯವಾದುದ್ದು ನ್ಯೂಯಾರ್ಕ್‌ನಲ್ಲಿ ಎಂದು ಇತ್ತೀಚೆಗೆ ವಿಕಾಸ್ ಖನ್ನಾ ಹೇಳಿದ್ದ ಮಾತುಗಳು ವೈರಲ್ ಆಗಿದ್ದವು. ಅಷ್ಟೇ ಅಲ್ಲದೇ ಆಂಧ್ರಪ್ರದೇಶದ ಜನಪ್ರಿಯ ತಿನಿಸಾದ ದಿಬ್ಬಾ ರೊಟ್ಟಿ ಮಾಡುವುದನ್ನು ಯೂಟ್ಯೂಬ್ ನಿಂದ ನೋಡಿ ಕಲಿತ ಅವರು, ಅದಕ್ಕಾಗಿ ಅದನ್ನು ಕಲಿಸಿದ ಗುರುಗಳಿಗೆ ಗುರುದಕ್ಷಿಣೆ ಸಲ್ಲಿಸುವ ಮೂಲಕವೂ ಸುದ್ದಿಯಾಗಿದ್ದರು.

2020 ರಲ್ಲಿ ಏಷ್ಯಾದ  ಅತ್ಯಂತ ಪ್ರಭಾವಶಾಲಿ 100 ಜನರಲ್ಲಿ ಒಬ್ಬರಾಗಿ ವಿಕಾಸ್ ಖನ್ನಾ ಆಯ್ಕೆಯಾಗಿದ್ದಾರೆ. ಅವರ ಕುರಿತು ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯರವರು ಬರೆದ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನ ವಿಕಾಸ್ ಖನ್ನಾರವರ ನಿಸ್ವಾರ್ಥ ಕಾಳಜಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...