Homeಮುಖಪುಟ2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.

- Advertisement -
- Advertisement -

‘ನನ್ನ ಮೊಮ್ಮಗನಿಗೆ ಹೇಗೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿದ್ದೇನೆ; ನೀನು ಅವನಿಗೆ ಯಾಕೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿಕೊಡು’. ಇದು ಮಲೆಯಾಳಂನ ಖ್ಯಾತ ಸಿನೆಮಾ ಉಸ್ತಾದ್ ಹೋಟೆಲ್ ನಲ್ಲಿ ಬರುವ ಸಂಭಾಷಣೆ… ಜಗತ್ತಿನಲ್ಲಿ ಇಂದಿಗೂ ಲಕ್ಷಾಂತರ ಜನ ಹಸಿವಿನಿಂದ ಸಾಯುತ್ತಿರುವಾಗ ಈ ಸಂಭಾಷಣೆಗೆ ತನ್ನದೇ ಆದ ಮಹತ್ವವಿದೆ.

ನಿಜ ಜೀವನದಲ್ಲಿ ಹೇಗೆ ಅಡುಗೆ ಮಾಡಬೇಕು ಎಂಬುದರ ಜೊತೆಗೆ ಏಕೆ ಅಡುಗೆ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟವರು ಭಾರತದ ಪ್ರಖ್ಯಾತ ಬಾಣಸಿಗರಾದ ವಿಕಾಸ್‌ ಖನ್ನಾರವರು.

ಅನಿರೀಕ್ಷಿತವಾಗಿ ಎರಗಿದ ಲಾಕ್‌ಡೌನ್‌ ವೇಳೆ ತುತ್ತು ಊಟಕ್ಕಾಗಿ ಪರದಾಡುತ್ತಿದ್ದ ಲಕ್ಷಾಂತರ ಜನರ ಪಾಲಿಗೆ ವಿಕಾಸ್ ಖನ್ನಾ ಆಪತ್ಬಾಂಧವರಾಗಿದ್ದಾರೆ. ಭಾರತದ ಪ್ರಖ್ಯಾತ ಬಾಣಸಿಗರಾದ ಅವರು ತಮ್ಮ ಎಲ್ಲಾ ಖ್ಯಾತಿ ಪ್ರತಿಷ್ಠೆಗಳನ್ನು ಬದಿಗೊತ್ತಿ ತಮ್ಮ ‘ಫೀಡ್ ಇಂಡಿಯಾ ಇನಿಷಿಯೇಟಿವ್’ ಮೂಲಕ 2 ಕೋಟಿ ಜನರಿಗೆ ಆಹಾರವನ್ನು ಇದುವರೆಗೂ ಹಂಚಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಲಾಕ್‌ಡೌನ್ ಸಮಯದಲ್ಲಿ ಸಿಕ್ಕಿಕೊಂಡ ಹತ್ತಾರು ಸಾವಿರ ಜನರನ್ನು ತಮ್ಮ ಊರುಗಳಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾದಂತೆಯೇ ವಿಕಾಸ್ ಖನ್ನಾ ಬಹಲಷ್ಟು ಜನರಿಗೆ ಆಹಾರ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಮಾನವೀಯ ಕೃತ್ಯಗಳಿಗಾಗಿ ಹಾರ್ಮನಿ ಫೌಂಡೇಶನ್ ಅವರನ್ನು ಗೌರವಿಸಿದೆ.

ವಿಕಾಸ್ ಖನ್ನಾ ಪಂಜಾಬ್ ಮೂಲದವರು. ನವೆಂಬರ್ 14, 1971ರಲ್ಲಿ ಅಮೃತ್‌ಸರದಲ್ಲಿ ಜನಿಸಿದ ಅವರು, 17ನೇ ವಯಸ್ಸಿನಿಂದಲೇ ಸ್ವಂತ ಕಂಪನಿ ಆರಂಭಿಸಿದರು. ಸದ್ಯಕ್ಕೆ ಅಮೇರಿಕಾ ಹಾಟೆಸ್ಟ್ ಶೆಫ್ ಎಂದು ಕರೆಸಿಕೊಳ್ಳುವ ಅವರು ಹಲವು ಹೋಟೆಲ್‌ಗಳ ಮಾಲೀಕರಾಗಿದ್ದಾರೆ. ಪ್ರಪಂಚದ ಅತ್ಯುತ್ತಮ ಶೆಫ್‌ಗಳಲ್ಲಿ ಒಬ್ಬರಾಗಿದ್ದಾರೆ. ಪಂಜಾಬ್‌ನಲ್ಲಿ ಲಂಗರ್‌ಗಳನ್ನು (ಉಚಿತ ಸಾಮುದಾಯಿಕ ಅಡುಗೆ ಕೇಂದ್ರ) ನಡೆಸಲಾಗುತ್ತದೆ. ಆ ಮೂಲಕ ಹಸಿದವರಿಗೆ ಉಚಿತ ಊಟ ಒದಗಿಸುವುದು ಅವರ ಕಾಯಕ. ಆ ಹಿನ್ನೆಲೆಯಲ್ಲಿ ಬೆಳೆದುಬಂದ ವಿಕಾಸ್ ಇಂದು ಭಾರತದ ಬಹುಜನರಿಗೆ ಊಟ ಹಾಕುತ್ತಿದ್ದಾರೆ.

ಅಮೃತಸರದ ಲಂಗಾರ್‌ಗಳ ಪ್ರಭಾವದಿಂದ ಮತ್ತು ಅವರ ತಾಯಿಯಿಂದ ಪ್ರಭಾವಿತವಾಗಿದ್ದ ವಿಕಾಸ್ ಸಮಾಜಕ್ಕೆ ಮರಳಿ ನೀಡುವ ನೀತಿಯನ್ನು ಅನುಸರಿಸಿ ಫೀಡ್ ಇಂಡಿಯಾ ಇನಿಷಿಯೇಟಿವ್ ಆರಂಭಿಸಿದ್ದಾರೆ.

ಅನಾಥಾಶ್ರಮಗಳು, ವೃದ್ಧಾಶ್ರಮಗಳು ಮತ್ತು ಕುಷ್ಠರೋಗ ಕೇಂದ್ರಗಳಿಗೆ ಪಡಿತರವನ್ನು ಒದಗಿಸುವ ಮೂಲಕ ಫೀಡ್‌ಇಂಡಿಯಾ ಇನಿಶಿಯೇಟಿವ್ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಯಿತು. ಅಂತಿಮವಾಗಿ, ಹೆದ್ದಾರಿಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬೇಯಿಸಿದ ಊಟವನ್ನು ಒದಗಿಸುವ ಮೂಲಕ ದೊಡ್ಡದಾಗಿ ಬೆಳೆಯಿತು. ಇಂದು ಅವರು ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಆಹಾರ ಒದಗಿಸಲು ವಿವಿಧ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ವಾಲಂಟೀಯರ್ ಆಗಿರುವ ಅವರು ಇದುವರೆಗೂ ಭಾರತದ 100 ಕ್ಕೂ ಹೆಚ್ಚು ನಗರಗಳಲ್ಲಿ 70 ಲಕ್ಷ ಪ್ಯಾಕೆಟ್ ಪಡಿತರ ವಿತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸುಮಾರು ಒಂದೂವರೆ ಕೋಟಿ ಜನರಿಗೆ ಬೇಯಿಸಿದ ಆಹಾರ ವಿತರಿಸಿದ್ದಾರೆ.

ನಾನು ಹುಟ್ಟಿ ಬೆಳೆದಿದ್ದು ಭಾರತದಲ್ಲಿಯೇ ಆದರೂ ನನಗೆ ಹಸಿವಿನ ಪರಿಚಯವಾದುದ್ದು ನ್ಯೂಯಾರ್ಕ್‌ನಲ್ಲಿ ಎಂದು ಇತ್ತೀಚೆಗೆ ವಿಕಾಸ್ ಖನ್ನಾ ಹೇಳಿದ್ದ ಮಾತುಗಳು ವೈರಲ್ ಆಗಿದ್ದವು. ಅಷ್ಟೇ ಅಲ್ಲದೇ ಆಂಧ್ರಪ್ರದೇಶದ ಜನಪ್ರಿಯ ತಿನಿಸಾದ ದಿಬ್ಬಾ ರೊಟ್ಟಿ ಮಾಡುವುದನ್ನು ಯೂಟ್ಯೂಬ್ ನಿಂದ ನೋಡಿ ಕಲಿತ ಅವರು, ಅದಕ್ಕಾಗಿ ಅದನ್ನು ಕಲಿಸಿದ ಗುರುಗಳಿಗೆ ಗುರುದಕ್ಷಿಣೆ ಸಲ್ಲಿಸುವ ಮೂಲಕವೂ ಸುದ್ದಿಯಾಗಿದ್ದರು.

2020 ರಲ್ಲಿ ಏಷ್ಯಾದ  ಅತ್ಯಂತ ಪ್ರಭಾವಶಾಲಿ 100 ಜನರಲ್ಲಿ ಒಬ್ಬರಾಗಿ ವಿಕಾಸ್ ಖನ್ನಾ ಆಯ್ಕೆಯಾಗಿದ್ದಾರೆ. ಅವರ ಕುರಿತು ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯರವರು ಬರೆದ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನ ವಿಕಾಸ್ ಖನ್ನಾರವರ ನಿಸ್ವಾರ್ಥ ಕಾಳಜಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...