Homeಮುಖಪುಟ2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.

- Advertisement -
- Advertisement -

‘ನನ್ನ ಮೊಮ್ಮಗನಿಗೆ ಹೇಗೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿದ್ದೇನೆ; ನೀನು ಅವನಿಗೆ ಯಾಕೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿಕೊಡು’. ಇದು ಮಲೆಯಾಳಂನ ಖ್ಯಾತ ಸಿನೆಮಾ ಉಸ್ತಾದ್ ಹೋಟೆಲ್ ನಲ್ಲಿ ಬರುವ ಸಂಭಾಷಣೆ… ಜಗತ್ತಿನಲ್ಲಿ ಇಂದಿಗೂ ಲಕ್ಷಾಂತರ ಜನ ಹಸಿವಿನಿಂದ ಸಾಯುತ್ತಿರುವಾಗ ಈ ಸಂಭಾಷಣೆಗೆ ತನ್ನದೇ ಆದ ಮಹತ್ವವಿದೆ.

ನಿಜ ಜೀವನದಲ್ಲಿ ಹೇಗೆ ಅಡುಗೆ ಮಾಡಬೇಕು ಎಂಬುದರ ಜೊತೆಗೆ ಏಕೆ ಅಡುಗೆ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟವರು ಭಾರತದ ಪ್ರಖ್ಯಾತ ಬಾಣಸಿಗರಾದ ವಿಕಾಸ್‌ ಖನ್ನಾರವರು.

ಅನಿರೀಕ್ಷಿತವಾಗಿ ಎರಗಿದ ಲಾಕ್‌ಡೌನ್‌ ವೇಳೆ ತುತ್ತು ಊಟಕ್ಕಾಗಿ ಪರದಾಡುತ್ತಿದ್ದ ಲಕ್ಷಾಂತರ ಜನರ ಪಾಲಿಗೆ ವಿಕಾಸ್ ಖನ್ನಾ ಆಪತ್ಬಾಂಧವರಾಗಿದ್ದಾರೆ. ಭಾರತದ ಪ್ರಖ್ಯಾತ ಬಾಣಸಿಗರಾದ ಅವರು ತಮ್ಮ ಎಲ್ಲಾ ಖ್ಯಾತಿ ಪ್ರತಿಷ್ಠೆಗಳನ್ನು ಬದಿಗೊತ್ತಿ ತಮ್ಮ ‘ಫೀಡ್ ಇಂಡಿಯಾ ಇನಿಷಿಯೇಟಿವ್’ ಮೂಲಕ 2 ಕೋಟಿ ಜನರಿಗೆ ಆಹಾರವನ್ನು ಇದುವರೆಗೂ ಹಂಚಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಲಾಕ್‌ಡೌನ್ ಸಮಯದಲ್ಲಿ ಸಿಕ್ಕಿಕೊಂಡ ಹತ್ತಾರು ಸಾವಿರ ಜನರನ್ನು ತಮ್ಮ ಊರುಗಳಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾದಂತೆಯೇ ವಿಕಾಸ್ ಖನ್ನಾ ಬಹಲಷ್ಟು ಜನರಿಗೆ ಆಹಾರ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಮಾನವೀಯ ಕೃತ್ಯಗಳಿಗಾಗಿ ಹಾರ್ಮನಿ ಫೌಂಡೇಶನ್ ಅವರನ್ನು ಗೌರವಿಸಿದೆ.

ವಿಕಾಸ್ ಖನ್ನಾ ಪಂಜಾಬ್ ಮೂಲದವರು. ನವೆಂಬರ್ 14, 1971ರಲ್ಲಿ ಅಮೃತ್‌ಸರದಲ್ಲಿ ಜನಿಸಿದ ಅವರು, 17ನೇ ವಯಸ್ಸಿನಿಂದಲೇ ಸ್ವಂತ ಕಂಪನಿ ಆರಂಭಿಸಿದರು. ಸದ್ಯಕ್ಕೆ ಅಮೇರಿಕಾ ಹಾಟೆಸ್ಟ್ ಶೆಫ್ ಎಂದು ಕರೆಸಿಕೊಳ್ಳುವ ಅವರು ಹಲವು ಹೋಟೆಲ್‌ಗಳ ಮಾಲೀಕರಾಗಿದ್ದಾರೆ. ಪ್ರಪಂಚದ ಅತ್ಯುತ್ತಮ ಶೆಫ್‌ಗಳಲ್ಲಿ ಒಬ್ಬರಾಗಿದ್ದಾರೆ. ಪಂಜಾಬ್‌ನಲ್ಲಿ ಲಂಗರ್‌ಗಳನ್ನು (ಉಚಿತ ಸಾಮುದಾಯಿಕ ಅಡುಗೆ ಕೇಂದ್ರ) ನಡೆಸಲಾಗುತ್ತದೆ. ಆ ಮೂಲಕ ಹಸಿದವರಿಗೆ ಉಚಿತ ಊಟ ಒದಗಿಸುವುದು ಅವರ ಕಾಯಕ. ಆ ಹಿನ್ನೆಲೆಯಲ್ಲಿ ಬೆಳೆದುಬಂದ ವಿಕಾಸ್ ಇಂದು ಭಾರತದ ಬಹುಜನರಿಗೆ ಊಟ ಹಾಕುತ್ತಿದ್ದಾರೆ.

ಅಮೃತಸರದ ಲಂಗಾರ್‌ಗಳ ಪ್ರಭಾವದಿಂದ ಮತ್ತು ಅವರ ತಾಯಿಯಿಂದ ಪ್ರಭಾವಿತವಾಗಿದ್ದ ವಿಕಾಸ್ ಸಮಾಜಕ್ಕೆ ಮರಳಿ ನೀಡುವ ನೀತಿಯನ್ನು ಅನುಸರಿಸಿ ಫೀಡ್ ಇಂಡಿಯಾ ಇನಿಷಿಯೇಟಿವ್ ಆರಂಭಿಸಿದ್ದಾರೆ.

ಅನಾಥಾಶ್ರಮಗಳು, ವೃದ್ಧಾಶ್ರಮಗಳು ಮತ್ತು ಕುಷ್ಠರೋಗ ಕೇಂದ್ರಗಳಿಗೆ ಪಡಿತರವನ್ನು ಒದಗಿಸುವ ಮೂಲಕ ಫೀಡ್‌ಇಂಡಿಯಾ ಇನಿಶಿಯೇಟಿವ್ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಯಿತು. ಅಂತಿಮವಾಗಿ, ಹೆದ್ದಾರಿಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬೇಯಿಸಿದ ಊಟವನ್ನು ಒದಗಿಸುವ ಮೂಲಕ ದೊಡ್ಡದಾಗಿ ಬೆಳೆಯಿತು. ಇಂದು ಅವರು ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಆಹಾರ ಒದಗಿಸಲು ವಿವಿಧ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ವಾಲಂಟೀಯರ್ ಆಗಿರುವ ಅವರು ಇದುವರೆಗೂ ಭಾರತದ 100 ಕ್ಕೂ ಹೆಚ್ಚು ನಗರಗಳಲ್ಲಿ 70 ಲಕ್ಷ ಪ್ಯಾಕೆಟ್ ಪಡಿತರ ವಿತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸುಮಾರು ಒಂದೂವರೆ ಕೋಟಿ ಜನರಿಗೆ ಬೇಯಿಸಿದ ಆಹಾರ ವಿತರಿಸಿದ್ದಾರೆ.

ನಾನು ಹುಟ್ಟಿ ಬೆಳೆದಿದ್ದು ಭಾರತದಲ್ಲಿಯೇ ಆದರೂ ನನಗೆ ಹಸಿವಿನ ಪರಿಚಯವಾದುದ್ದು ನ್ಯೂಯಾರ್ಕ್‌ನಲ್ಲಿ ಎಂದು ಇತ್ತೀಚೆಗೆ ವಿಕಾಸ್ ಖನ್ನಾ ಹೇಳಿದ್ದ ಮಾತುಗಳು ವೈರಲ್ ಆಗಿದ್ದವು. ಅಷ್ಟೇ ಅಲ್ಲದೇ ಆಂಧ್ರಪ್ರದೇಶದ ಜನಪ್ರಿಯ ತಿನಿಸಾದ ದಿಬ್ಬಾ ರೊಟ್ಟಿ ಮಾಡುವುದನ್ನು ಯೂಟ್ಯೂಬ್ ನಿಂದ ನೋಡಿ ಕಲಿತ ಅವರು, ಅದಕ್ಕಾಗಿ ಅದನ್ನು ಕಲಿಸಿದ ಗುರುಗಳಿಗೆ ಗುರುದಕ್ಷಿಣೆ ಸಲ್ಲಿಸುವ ಮೂಲಕವೂ ಸುದ್ದಿಯಾಗಿದ್ದರು.

2020 ರಲ್ಲಿ ಏಷ್ಯಾದ  ಅತ್ಯಂತ ಪ್ರಭಾವಶಾಲಿ 100 ಜನರಲ್ಲಿ ಒಬ್ಬರಾಗಿ ವಿಕಾಸ್ ಖನ್ನಾ ಆಯ್ಕೆಯಾಗಿದ್ದಾರೆ. ಅವರ ಕುರಿತು ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯರವರು ಬರೆದ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನ ವಿಕಾಸ್ ಖನ್ನಾರವರ ನಿಸ್ವಾರ್ಥ ಕಾಳಜಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...