Homeಮುಖಪುಟ2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

2 ಕೋಟಿ ಜನಕ್ಕೆ ಆಹಾರ ಹಂಚಿದ ವಿಕಾಸ್ ಖನ್ನಾ: ಸೆಲ್ಯೂಟ್ ಎಂದ ನೆಟ್ಟಿಗರು

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.

- Advertisement -
- Advertisement -

‘ನನ್ನ ಮೊಮ್ಮಗನಿಗೆ ಹೇಗೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿದ್ದೇನೆ; ನೀನು ಅವನಿಗೆ ಯಾಕೆ ಅಡುಗೆ ಮಾಡಬೇಕು ಅನ್ನೋದನ್ನು ಕಲಿಸಿಕೊಡು’. ಇದು ಮಲೆಯಾಳಂನ ಖ್ಯಾತ ಸಿನೆಮಾ ಉಸ್ತಾದ್ ಹೋಟೆಲ್ ನಲ್ಲಿ ಬರುವ ಸಂಭಾಷಣೆ… ಜಗತ್ತಿನಲ್ಲಿ ಇಂದಿಗೂ ಲಕ್ಷಾಂತರ ಜನ ಹಸಿವಿನಿಂದ ಸಾಯುತ್ತಿರುವಾಗ ಈ ಸಂಭಾಷಣೆಗೆ ತನ್ನದೇ ಆದ ಮಹತ್ವವಿದೆ.

ನಿಜ ಜೀವನದಲ್ಲಿ ಹೇಗೆ ಅಡುಗೆ ಮಾಡಬೇಕು ಎಂಬುದರ ಜೊತೆಗೆ ಏಕೆ ಅಡುಗೆ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟವರು ಭಾರತದ ಪ್ರಖ್ಯಾತ ಬಾಣಸಿಗರಾದ ವಿಕಾಸ್‌ ಖನ್ನಾರವರು.

ಅನಿರೀಕ್ಷಿತವಾಗಿ ಎರಗಿದ ಲಾಕ್‌ಡೌನ್‌ ವೇಳೆ ತುತ್ತು ಊಟಕ್ಕಾಗಿ ಪರದಾಡುತ್ತಿದ್ದ ಲಕ್ಷಾಂತರ ಜನರ ಪಾಲಿಗೆ ವಿಕಾಸ್ ಖನ್ನಾ ಆಪತ್ಬಾಂಧವರಾಗಿದ್ದಾರೆ. ಭಾರತದ ಪ್ರಖ್ಯಾತ ಬಾಣಸಿಗರಾದ ಅವರು ತಮ್ಮ ಎಲ್ಲಾ ಖ್ಯಾತಿ ಪ್ರತಿಷ್ಠೆಗಳನ್ನು ಬದಿಗೊತ್ತಿ ತಮ್ಮ ‘ಫೀಡ್ ಇಂಡಿಯಾ ಇನಿಷಿಯೇಟಿವ್’ ಮೂಲಕ 2 ಕೋಟಿ ಜನರಿಗೆ ಆಹಾರವನ್ನು ಇದುವರೆಗೂ ಹಂಚಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಲಾಕ್‌ಡೌನ್ ಸಮಯದಲ್ಲಿ ಸಿಕ್ಕಿಕೊಂಡ ಹತ್ತಾರು ಸಾವಿರ ಜನರನ್ನು ತಮ್ಮ ಊರುಗಳಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾದಂತೆಯೇ ವಿಕಾಸ್ ಖನ್ನಾ ಬಹಲಷ್ಟು ಜನರಿಗೆ ಆಹಾರ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಈ ಮಾನವೀಯ ಕೃತ್ಯಗಳಿಗಾಗಿ ಹಾರ್ಮನಿ ಫೌಂಡೇಶನ್ ಅವರನ್ನು ಗೌರವಿಸಿದೆ.

ವಿಕಾಸ್ ಖನ್ನಾ ಪಂಜಾಬ್ ಮೂಲದವರು. ನವೆಂಬರ್ 14, 1971ರಲ್ಲಿ ಅಮೃತ್‌ಸರದಲ್ಲಿ ಜನಿಸಿದ ಅವರು, 17ನೇ ವಯಸ್ಸಿನಿಂದಲೇ ಸ್ವಂತ ಕಂಪನಿ ಆರಂಭಿಸಿದರು. ಸದ್ಯಕ್ಕೆ ಅಮೇರಿಕಾ ಹಾಟೆಸ್ಟ್ ಶೆಫ್ ಎಂದು ಕರೆಸಿಕೊಳ್ಳುವ ಅವರು ಹಲವು ಹೋಟೆಲ್‌ಗಳ ಮಾಲೀಕರಾಗಿದ್ದಾರೆ. ಪ್ರಪಂಚದ ಅತ್ಯುತ್ತಮ ಶೆಫ್‌ಗಳಲ್ಲಿ ಒಬ್ಬರಾಗಿದ್ದಾರೆ. ಪಂಜಾಬ್‌ನಲ್ಲಿ ಲಂಗರ್‌ಗಳನ್ನು (ಉಚಿತ ಸಾಮುದಾಯಿಕ ಅಡುಗೆ ಕೇಂದ್ರ) ನಡೆಸಲಾಗುತ್ತದೆ. ಆ ಮೂಲಕ ಹಸಿದವರಿಗೆ ಉಚಿತ ಊಟ ಒದಗಿಸುವುದು ಅವರ ಕಾಯಕ. ಆ ಹಿನ್ನೆಲೆಯಲ್ಲಿ ಬೆಳೆದುಬಂದ ವಿಕಾಸ್ ಇಂದು ಭಾರತದ ಬಹುಜನರಿಗೆ ಊಟ ಹಾಕುತ್ತಿದ್ದಾರೆ.

ಅಮೃತಸರದ ಲಂಗಾರ್‌ಗಳ ಪ್ರಭಾವದಿಂದ ಮತ್ತು ಅವರ ತಾಯಿಯಿಂದ ಪ್ರಭಾವಿತವಾಗಿದ್ದ ವಿಕಾಸ್ ಸಮಾಜಕ್ಕೆ ಮರಳಿ ನೀಡುವ ನೀತಿಯನ್ನು ಅನುಸರಿಸಿ ಫೀಡ್ ಇಂಡಿಯಾ ಇನಿಷಿಯೇಟಿವ್ ಆರಂಭಿಸಿದ್ದಾರೆ.

ಅನಾಥಾಶ್ರಮಗಳು, ವೃದ್ಧಾಶ್ರಮಗಳು ಮತ್ತು ಕುಷ್ಠರೋಗ ಕೇಂದ್ರಗಳಿಗೆ ಪಡಿತರವನ್ನು ಒದಗಿಸುವ ಮೂಲಕ ಫೀಡ್‌ಇಂಡಿಯಾ ಇನಿಶಿಯೇಟಿವ್ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಯಿತು. ಅಂತಿಮವಾಗಿ, ಹೆದ್ದಾರಿಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬೇಯಿಸಿದ ಊಟವನ್ನು ಒದಗಿಸುವ ಮೂಲಕ ದೊಡ್ಡದಾಗಿ ಬೆಳೆಯಿತು. ಇಂದು ಅವರು ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಆಹಾರ ಒದಗಿಸಲು ವಿವಿಧ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ವಾಲಂಟೀಯರ್ ಆಗಿರುವ ಅವರು ಇದುವರೆಗೂ ಭಾರತದ 100 ಕ್ಕೂ ಹೆಚ್ಚು ನಗರಗಳಲ್ಲಿ 70 ಲಕ್ಷ ಪ್ಯಾಕೆಟ್ ಪಡಿತರ ವಿತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸುಮಾರು ಒಂದೂವರೆ ಕೋಟಿ ಜನರಿಗೆ ಬೇಯಿಸಿದ ಆಹಾರ ವಿತರಿಸಿದ್ದಾರೆ.

ನಾನು ಹುಟ್ಟಿ ಬೆಳೆದಿದ್ದು ಭಾರತದಲ್ಲಿಯೇ ಆದರೂ ನನಗೆ ಹಸಿವಿನ ಪರಿಚಯವಾದುದ್ದು ನ್ಯೂಯಾರ್ಕ್‌ನಲ್ಲಿ ಎಂದು ಇತ್ತೀಚೆಗೆ ವಿಕಾಸ್ ಖನ್ನಾ ಹೇಳಿದ್ದ ಮಾತುಗಳು ವೈರಲ್ ಆಗಿದ್ದವು. ಅಷ್ಟೇ ಅಲ್ಲದೇ ಆಂಧ್ರಪ್ರದೇಶದ ಜನಪ್ರಿಯ ತಿನಿಸಾದ ದಿಬ್ಬಾ ರೊಟ್ಟಿ ಮಾಡುವುದನ್ನು ಯೂಟ್ಯೂಬ್ ನಿಂದ ನೋಡಿ ಕಲಿತ ಅವರು, ಅದಕ್ಕಾಗಿ ಅದನ್ನು ಕಲಿಸಿದ ಗುರುಗಳಿಗೆ ಗುರುದಕ್ಷಿಣೆ ಸಲ್ಲಿಸುವ ಮೂಲಕವೂ ಸುದ್ದಿಯಾಗಿದ್ದರು.

2020 ರಲ್ಲಿ ಏಷ್ಯಾದ  ಅತ್ಯಂತ ಪ್ರಭಾವಶಾಲಿ 100 ಜನರಲ್ಲಿ ಒಬ್ಬರಾಗಿ ವಿಕಾಸ್ ಖನ್ನಾ ಆಯ್ಕೆಯಾಗಿದ್ದಾರೆ. ಅವರ ಕುರಿತು ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯರವರು ಬರೆದ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಹಳಷ್ಟು ಜನ ವಿಕಾಸ್ ಖನ್ನಾರವರ ನಿಸ್ವಾರ್ಥ ಕಾಳಜಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕವು ಜನರಲ್ಲಿ ಭೀತಿ ಹುಟ್ಟಿಸಿ ದಿನೇ ದಿನೇ ಉಲ್ಭಣಿಸುತ್ತಿರುವಾಗ ಸೋನು ಸೂದ್, ವಿಕಾಸ್ ಖನ್ನಾ ಥರಹದ ಜನರ ದಿಟ್ಟ ಪ್ರಯತ್ನಗಳು ಭರವಸೆ ಮೂಡಿಸುತ್ತಿವೆ. ಅವರಿಗೆ ನಮ್ಮದೊಂದು ಸಲಾಂ ಇರಲಿ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...