Homeಮುಖಪುಟವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

- Advertisement -
- Advertisement -

ತಮಿಳು ಮಾಧ್ಯಮ ಆನಂದ ವಿಕಟನ್‌ ವೆಬ್‌ಸೈಟ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ಮದ್ರಾಸ್ ಹೈಕೋರ್ಟ್ ಗುರುವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಫೆಬ್ರವರಿ 25 ರಂದು ರಾಜಕೀಯ ವ್ಯಂಗ್ಯಚಿತ್ರವನ್ನು ಪ್ರಕಟಿಸಿದ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದಾಗ್ಯೂ, ವೆಬ್‌ಸೈಟ್‌ ಅನ್ನು ಪುನಃಸ್ಥಾಪಿಸುವ ಮೊದಲು ಕಾರ್ಟೂನ್ ಅನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ನ್ಯಾಯಾಲಯವು ವಿಕಟನ್‌ಗೆ ಸೂಚಿಸಿದೆ.

ಸಂಕೋಲೆಯಲ್ಲಿ ಬಂಧಿಸಲಾದ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕುಳಿತು ಮಾತನಾಡುತ್ತಿರುವ ಕಾರ್ಟೂನ್‌ ಅಲ್ಲಿ ಚಿತ್ರಿಸಲಾಗಿತ್ತು. ಕಾರ್ಟೂನ್ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿಕೊಂಡು ಸಚಿವಾಲಯ ವಿಕಟನ್‌ ವೆಬ್‌ಸೈಟ್ ಅನ್ನು ನಿರ್ಬಂಧಿಸಿತ್ತು. ವಿಕಟನ್‌ ವೆಬ್‌ಸೈಟ್

ಆನಂದ ವಿಕಟನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆನಂದ ವಿಕಟನ್ ಪಬ್ಲಿಷರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ ತೀರ್ಪು ನೀಡುವವರೆಗೆ ನಿಷೇಧವು ಜಾರಿಯಲ್ಲಿರಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆನಂದ ವಿಕಟನ್ ಪರವಾಗಿ ಹಾಜರಾದ ಹಿರಿಯ ವಕೀಲ ವಿಜಯ್ ನಾರಾಯಣ್, ಕಾರ್ಟೂನ್ ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಸಂವಿಧಾನದ 19(2) ನೇ ವಿಧಿಯಲ್ಲಿ ವಿವರಿಸಿರುವ ಯಾವುದೇ ನಿರ್ಬಂಧಗಳನ್ನು ಉಲ್ಲಂಘಿಸಿಲ್ಲ ಎಂದು ವಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ಒಂದೇ ಒಂದು ಕಾರ್ಟೂನ್‌ಗಾಗಿ ಇಡೀ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ತೀವ್ರವಾದ ಕ್ರಮ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾರ್ವಭೌಮತ್ವ, ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಅಥವಾ ವಿದೇಶಿ ಸಂಬಂಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾಕ್‌ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಅನುಮತಿಸುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅನ್ನು ಈ ಕಾರ್ಟೂನ್ ಉಲ್ಲಂಘಿಸಿಲ್ಲ ಎಂದು ನಾರಾಯಣ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಕಾರ್ಟೂನ್ ಭಾರತದ ಸಮಗ್ರತೆ ಅಥವಾ ಅಮೆರಿಕದೊಂದಿಗಿನ ರಾಜತಾಂತ್ರಿಕ ಸಂಬಂಧಗಳಿಗೆ ಹಾನಿ ಮಾಡಿಲ್ಲ. ಅಂತಹ ದಂಡನಾತ್ಮಕ ಕ್ರಮಗಳನ್ನು ಎದುರಿಸದೆ ಪ್ರಕಟಣೆಗಳು ರಾಜಕೀಯ ಕಾರ್ಟೂನ್‌ಗಳನ್ನು ಪ್ರದರ್ಶಿಸುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಅವರು ವಾದಿಸಿದ್ದಾರೆ. ಅಷ್ಟೆ ಅಲ್ಲದೆ, ವೆಬ್‌ಸೈಟ್ ಅನ್ನು ನಿರ್ಬಂಧಿಸಲು ಕಾರಣವಾದ ದೂರು ಯಾರದ್ದು ಎಂಬುದನ್ನು ಬಹಿರಂಗಪಡಿಸಲು ಕೇಂದ್ರವು ನಿರಾಕರಿಸಿದೆ ಎಂದು ನಾರಾಯಣ್ ಎತ್ತಿ ತೋರಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಆರ್‌ಎಲ್ ಸುಂದರೇಶನ್, ಕಾರ್ಟೂನ್ ಭಾರತ-ಅಮೆರಿಕ ಸಂಬಂಧಗಳಿಗೆ ಹಾನಿ ಮಾಡುತ್ತದೆ ಎಂದು ವಾದಿಸಿದ್ದು, ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವೆಬ್‌ಸೈಟ್ ನಿರ್ಬಂಧಿಸುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರವು ವಿವರವಾಗಿ ಪ್ರತಿಕ್ರಿಯಿಸುವ ಮೊದಲೆ ನಿಷೇಧವನ್ನು ತೆಗೆದುಹಾಕುವುದು ಎಂದರೆ ಮುಖ್ಯ ಅರ್ಜಿಯನ್ನು ಸ್ವತಃ ಅನುಮತಿಸುವುದಕ್ಕೆ ಸಮಾನವಾಗಿರುತ್ತದೆ ಎಂದು ಹೇಳುವ ಮೂಲಕ ಮಧ್ಯಂತರ ಜಾಮೀನನ್ನು ಅವರು ವಿರೋಧಿಸಿದರು. ಕಾರ್ಟೂನ್ ತೆಗೆದುಹಾಕಿದರೆ ವೆಬ್‌ಸೈಟ್ ಅನ್ನು ಪುನಃಸ್ಥಾಪಿಸಬಹುದು ಎಂದು ಸಚಿವಾಲಯ ನೇಮಿಸಿದ ಸಮಿತಿಯು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ವೆಬ್‌ಸೈಟ್‌ಗೆ ಮೇಲಿನ ನಿರ್ಬಂಧವನ್ನು ತೆಗೆದು ಹಾಕಿ ಅದನ್ನು ಪುನಃಸ್ಥಾಪಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿತು. ಮಾರ್ಚ್ 21 ರೊಳಗೆ ತನ್ನ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಸಚಿವಾಲಯಕ್ಕೆ ನಿರ್ದೇಶಿಸಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...