Homeಮುಖಪುಟವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

- Advertisement -
- Advertisement -

ತಮಿಳು ಮಾಧ್ಯಮ ಆನಂದ ವಿಕಟನ್‌ ವೆಬ್‌ಸೈಟ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ಮದ್ರಾಸ್ ಹೈಕೋರ್ಟ್ ಗುರುವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಫೆಬ್ರವರಿ 25 ರಂದು ರಾಜಕೀಯ ವ್ಯಂಗ್ಯಚಿತ್ರವನ್ನು ಪ್ರಕಟಿಸಿದ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದಾಗ್ಯೂ, ವೆಬ್‌ಸೈಟ್‌ ಅನ್ನು ಪುನಃಸ್ಥಾಪಿಸುವ ಮೊದಲು ಕಾರ್ಟೂನ್ ಅನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ನ್ಯಾಯಾಲಯವು ವಿಕಟನ್‌ಗೆ ಸೂಚಿಸಿದೆ.

ಸಂಕೋಲೆಯಲ್ಲಿ ಬಂಧಿಸಲಾದ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕುಳಿತು ಮಾತನಾಡುತ್ತಿರುವ ಕಾರ್ಟೂನ್‌ ಅಲ್ಲಿ ಚಿತ್ರಿಸಲಾಗಿತ್ತು. ಕಾರ್ಟೂನ್ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿಕೊಂಡು ಸಚಿವಾಲಯ ವಿಕಟನ್‌ ವೆಬ್‌ಸೈಟ್ ಅನ್ನು ನಿರ್ಬಂಧಿಸಿತ್ತು. ವಿಕಟನ್‌ ವೆಬ್‌ಸೈಟ್

ಆನಂದ ವಿಕಟನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆನಂದ ವಿಕಟನ್ ಪಬ್ಲಿಷರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ ತೀರ್ಪು ನೀಡುವವರೆಗೆ ನಿಷೇಧವು ಜಾರಿಯಲ್ಲಿರಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆನಂದ ವಿಕಟನ್ ಪರವಾಗಿ ಹಾಜರಾದ ಹಿರಿಯ ವಕೀಲ ವಿಜಯ್ ನಾರಾಯಣ್, ಕಾರ್ಟೂನ್ ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಸಂವಿಧಾನದ 19(2) ನೇ ವಿಧಿಯಲ್ಲಿ ವಿವರಿಸಿರುವ ಯಾವುದೇ ನಿರ್ಬಂಧಗಳನ್ನು ಉಲ್ಲಂಘಿಸಿಲ್ಲ ಎಂದು ವಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ಒಂದೇ ಒಂದು ಕಾರ್ಟೂನ್‌ಗಾಗಿ ಇಡೀ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ತೀವ್ರವಾದ ಕ್ರಮ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾರ್ವಭೌಮತ್ವ, ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಅಥವಾ ವಿದೇಶಿ ಸಂಬಂಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾಕ್‌ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಅನುಮತಿಸುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅನ್ನು ಈ ಕಾರ್ಟೂನ್ ಉಲ್ಲಂಘಿಸಿಲ್ಲ ಎಂದು ನಾರಾಯಣ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಕಾರ್ಟೂನ್ ಭಾರತದ ಸಮಗ್ರತೆ ಅಥವಾ ಅಮೆರಿಕದೊಂದಿಗಿನ ರಾಜತಾಂತ್ರಿಕ ಸಂಬಂಧಗಳಿಗೆ ಹಾನಿ ಮಾಡಿಲ್ಲ. ಅಂತಹ ದಂಡನಾತ್ಮಕ ಕ್ರಮಗಳನ್ನು ಎದುರಿಸದೆ ಪ್ರಕಟಣೆಗಳು ರಾಜಕೀಯ ಕಾರ್ಟೂನ್‌ಗಳನ್ನು ಪ್ರದರ್ಶಿಸುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಅವರು ವಾದಿಸಿದ್ದಾರೆ. ಅಷ್ಟೆ ಅಲ್ಲದೆ, ವೆಬ್‌ಸೈಟ್ ಅನ್ನು ನಿರ್ಬಂಧಿಸಲು ಕಾರಣವಾದ ದೂರು ಯಾರದ್ದು ಎಂಬುದನ್ನು ಬಹಿರಂಗಪಡಿಸಲು ಕೇಂದ್ರವು ನಿರಾಕರಿಸಿದೆ ಎಂದು ನಾರಾಯಣ್ ಎತ್ತಿ ತೋರಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಆರ್‌ಎಲ್ ಸುಂದರೇಶನ್, ಕಾರ್ಟೂನ್ ಭಾರತ-ಅಮೆರಿಕ ಸಂಬಂಧಗಳಿಗೆ ಹಾನಿ ಮಾಡುತ್ತದೆ ಎಂದು ವಾದಿಸಿದ್ದು, ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವೆಬ್‌ಸೈಟ್ ನಿರ್ಬಂಧಿಸುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರವು ವಿವರವಾಗಿ ಪ್ರತಿಕ್ರಿಯಿಸುವ ಮೊದಲೆ ನಿಷೇಧವನ್ನು ತೆಗೆದುಹಾಕುವುದು ಎಂದರೆ ಮುಖ್ಯ ಅರ್ಜಿಯನ್ನು ಸ್ವತಃ ಅನುಮತಿಸುವುದಕ್ಕೆ ಸಮಾನವಾಗಿರುತ್ತದೆ ಎಂದು ಹೇಳುವ ಮೂಲಕ ಮಧ್ಯಂತರ ಜಾಮೀನನ್ನು ಅವರು ವಿರೋಧಿಸಿದರು. ಕಾರ್ಟೂನ್ ತೆಗೆದುಹಾಕಿದರೆ ವೆಬ್‌ಸೈಟ್ ಅನ್ನು ಪುನಃಸ್ಥಾಪಿಸಬಹುದು ಎಂದು ಸಚಿವಾಲಯ ನೇಮಿಸಿದ ಸಮಿತಿಯು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ವೆಬ್‌ಸೈಟ್‌ಗೆ ಮೇಲಿನ ನಿರ್ಬಂಧವನ್ನು ತೆಗೆದು ಹಾಕಿ ಅದನ್ನು ಪುನಃಸ್ಥಾಪಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿತು. ಮಾರ್ಚ್ 21 ರೊಳಗೆ ತನ್ನ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಸಚಿವಾಲಯಕ್ಕೆ ನಿರ್ದೇಶಿಸಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...