Homeಮುಖಪುಟವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

- Advertisement -
- Advertisement -

ತಮಿಳು ಮಾಧ್ಯಮ ಆನಂದ ವಿಕಟನ್‌ ವೆಬ್‌ಸೈಟ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ಮದ್ರಾಸ್ ಹೈಕೋರ್ಟ್ ಗುರುವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಫೆಬ್ರವರಿ 25 ರಂದು ರಾಜಕೀಯ ವ್ಯಂಗ್ಯಚಿತ್ರವನ್ನು ಪ್ರಕಟಿಸಿದ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದಾಗ್ಯೂ, ವೆಬ್‌ಸೈಟ್‌ ಅನ್ನು ಪುನಃಸ್ಥಾಪಿಸುವ ಮೊದಲು ಕಾರ್ಟೂನ್ ಅನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ನ್ಯಾಯಾಲಯವು ವಿಕಟನ್‌ಗೆ ಸೂಚಿಸಿದೆ.

ಸಂಕೋಲೆಯಲ್ಲಿ ಬಂಧಿಸಲಾದ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕುಳಿತು ಮಾತನಾಡುತ್ತಿರುವ ಕಾರ್ಟೂನ್‌ ಅಲ್ಲಿ ಚಿತ್ರಿಸಲಾಗಿತ್ತು. ಕಾರ್ಟೂನ್ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿಕೊಂಡು ಸಚಿವಾಲಯ ವಿಕಟನ್‌ ವೆಬ್‌ಸೈಟ್ ಅನ್ನು ನಿರ್ಬಂಧಿಸಿತ್ತು. ವಿಕಟನ್‌ ವೆಬ್‌ಸೈಟ್

ಆನಂದ ವಿಕಟನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆನಂದ ವಿಕಟನ್ ಪಬ್ಲಿಷರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ ತೀರ್ಪು ನೀಡುವವರೆಗೆ ನಿಷೇಧವು ಜಾರಿಯಲ್ಲಿರಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆನಂದ ವಿಕಟನ್ ಪರವಾಗಿ ಹಾಜರಾದ ಹಿರಿಯ ವಕೀಲ ವಿಜಯ್ ನಾರಾಯಣ್, ಕಾರ್ಟೂನ್ ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಸಂವಿಧಾನದ 19(2) ನೇ ವಿಧಿಯಲ್ಲಿ ವಿವರಿಸಿರುವ ಯಾವುದೇ ನಿರ್ಬಂಧಗಳನ್ನು ಉಲ್ಲಂಘಿಸಿಲ್ಲ ಎಂದು ವಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ಒಂದೇ ಒಂದು ಕಾರ್ಟೂನ್‌ಗಾಗಿ ಇಡೀ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ತೀವ್ರವಾದ ಕ್ರಮ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾರ್ವಭೌಮತ್ವ, ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಅಥವಾ ವಿದೇಶಿ ಸಂಬಂಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾಕ್‌ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಅನುಮತಿಸುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅನ್ನು ಈ ಕಾರ್ಟೂನ್ ಉಲ್ಲಂಘಿಸಿಲ್ಲ ಎಂದು ನಾರಾಯಣ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಕಾರ್ಟೂನ್ ಭಾರತದ ಸಮಗ್ರತೆ ಅಥವಾ ಅಮೆರಿಕದೊಂದಿಗಿನ ರಾಜತಾಂತ್ರಿಕ ಸಂಬಂಧಗಳಿಗೆ ಹಾನಿ ಮಾಡಿಲ್ಲ. ಅಂತಹ ದಂಡನಾತ್ಮಕ ಕ್ರಮಗಳನ್ನು ಎದುರಿಸದೆ ಪ್ರಕಟಣೆಗಳು ರಾಜಕೀಯ ಕಾರ್ಟೂನ್‌ಗಳನ್ನು ಪ್ರದರ್ಶಿಸುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಅವರು ವಾದಿಸಿದ್ದಾರೆ. ಅಷ್ಟೆ ಅಲ್ಲದೆ, ವೆಬ್‌ಸೈಟ್ ಅನ್ನು ನಿರ್ಬಂಧಿಸಲು ಕಾರಣವಾದ ದೂರು ಯಾರದ್ದು ಎಂಬುದನ್ನು ಬಹಿರಂಗಪಡಿಸಲು ಕೇಂದ್ರವು ನಿರಾಕರಿಸಿದೆ ಎಂದು ನಾರಾಯಣ್ ಎತ್ತಿ ತೋರಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಆರ್‌ಎಲ್ ಸುಂದರೇಶನ್, ಕಾರ್ಟೂನ್ ಭಾರತ-ಅಮೆರಿಕ ಸಂಬಂಧಗಳಿಗೆ ಹಾನಿ ಮಾಡುತ್ತದೆ ಎಂದು ವಾದಿಸಿದ್ದು, ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವೆಬ್‌ಸೈಟ್ ನಿರ್ಬಂಧಿಸುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರವು ವಿವರವಾಗಿ ಪ್ರತಿಕ್ರಿಯಿಸುವ ಮೊದಲೆ ನಿಷೇಧವನ್ನು ತೆಗೆದುಹಾಕುವುದು ಎಂದರೆ ಮುಖ್ಯ ಅರ್ಜಿಯನ್ನು ಸ್ವತಃ ಅನುಮತಿಸುವುದಕ್ಕೆ ಸಮಾನವಾಗಿರುತ್ತದೆ ಎಂದು ಹೇಳುವ ಮೂಲಕ ಮಧ್ಯಂತರ ಜಾಮೀನನ್ನು ಅವರು ವಿರೋಧಿಸಿದರು. ಕಾರ್ಟೂನ್ ತೆಗೆದುಹಾಕಿದರೆ ವೆಬ್‌ಸೈಟ್ ಅನ್ನು ಪುನಃಸ್ಥಾಪಿಸಬಹುದು ಎಂದು ಸಚಿವಾಲಯ ನೇಮಿಸಿದ ಸಮಿತಿಯು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ವೆಬ್‌ಸೈಟ್‌ಗೆ ಮೇಲಿನ ನಿರ್ಬಂಧವನ್ನು ತೆಗೆದು ಹಾಕಿ ಅದನ್ನು ಪುನಃಸ್ಥಾಪಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿತು. ಮಾರ್ಚ್ 21 ರೊಳಗೆ ತನ್ನ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಸಚಿವಾಲಯಕ್ಕೆ ನಿರ್ದೇಶಿಸಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...