Homeಅಂಕಣಗಳುವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

ವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

- Advertisement -
- Advertisement -

| ಥೂತ್ತೇರಿ ಯಾಹೂ |

“ವಿಕ್ರಮ ಚಂದ್ರನ ಮೇಲೆ ಕಾಲೂರಿದ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು” ಪ್ರಜಾವಾಣಿಯಲ್ಲಿ ಈ ತಲೆಬರಹ ಓದಿದ ಜನಕ್ಕೆ ದಿಗ್ಭ್ರಮೆಯಾಯ್ತಂತಲ್ಲಾ. ರಾತ್ರಿಯೆಲ್ಲಾ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚಂದ್ರನ ಮೇಲೆ ವಿಕ್ರಮ ಇಳಿಯುವ ದೃಶ್ಯಕ್ಕಾಗಿ ಕಾದಿದ್ದ ಜನರು, ಅದು ಉಡುಪಿ ಕಡೆ ವಾಲುತ್ತ ಕಣ್ಮರೆಯಾದ ದೃಶ್ಯದಿಂದ ದುಗುಡಗೊಂಡ ಜನ ನಿರಾಶೆಯಿಂದ ನಿದ್ರೆಗೆ ಜಾರಿದರೆ, ಈ ಪ್ರಜಾವಾಣಿಯವರಿಗೆ ಏನಾಯ್ತು ಎಂದು ಪ್ರಜೆಗಳು ಶಾನೆ ಶಾಕ್‍ಗೆ ಒಳಗಾದರಂತಲ್ಲಾ. ಬಹುಶಃ ಹೀಗಾಗಿರಬೇಕು, ಇಸ್ರೋ ಅಧ್ಯಕ್ಷ ಕೆ. ಶಿವನ್ ಅಸಾಮಾನ್ಯ ವಿಜ್ಞಾನಿಗಳನ್ನು ಒಟ್ಟುಗೂಡಿಸಿ ಬಹುನಿಷ್ಠೆಯಿಂದ ವಿಕ್ರಮನನ್ನು ತಯಾರಿಸಿದ್ದಾರೆ. ಆದರೂ ಒಂದು ಸಣ್ಣ ಅಳುಕಿಗೆ ತುತ್ತಾಗಿ ಉಡುಪಿ ಮಠದ ಮಾಧ್ವ ಜಗತ್ತಿನ ಗುರುವರ್ಯರ ಆಶೀರ್ವಾದ ಪಡೆದರೆ ಹೇಗೆ ಅನ್ನಿಸಿದೆ. ಇದಕ್ಕೆ ಅವರ ಟೀಮು ಶಿರಸಾವಹಿಸಿ ಒಪ್ಪಿದೆ. ಅದರಂತೆ ಉಡುಪಿ ದಾರಿ ಹಿಡಿದ ವಿಜ್ಞಾನಿಗಳು ಅಷ್ಟಮಠದ ಅಧಿಪತಿಯ ಆಶೀರ್ವಾದ ಪಡೆದು ಕೈ ಸಡಿಲಬಿಟ್ಟು ಭೋಜನ ಭಾರಿಸಿ ವಾಪಸಾದದು, ಮುಂದೆ ಪ್ರಧಾನಿ ಬರಲು ಒಪ್ಪಿದ್ದು, ಇದೆಲ್ಲಾ ಆದ ಮೇಲೆ ವಿಕ್ರಮ ಚಂದ್ರನ ಮೇಲಿಳಿಯದೆ ಇನ್ನೆಲ್ಲಿ ಇಳಿಯಲು ಸಾಧ್ಯ ಎಂದು ಪ್ರಜಾವಾಣಿ ಶಿಖಾಮಣಿಗಳು ಭಾವಿಸಿದ್ದೇ ಅನಾಹುತಕ್ಕೆ ಕಾರಣವಂತಲ್ಲಾ ಥೂತ್ತೇರಿ.

ವಿಕ್ರಮ ಸೌರವ್ಯೂಹ ಭೇದಿಸಿ ಚಂದ್ರನ ಸುತ್ತ ಗಿರಕಿ ಹೊಡೆದಿರಬೇಕು. ಆದ್ದರಿಂದ ಮುಂದಿನ ಕೆಲವೇ ಕ್ಷಣಗಳಲ್ಲಿ ಚಂದ್ರನ ಮೇಲೆ ವಿಕ್ರಮ ಕಾಲೂರಿ ನಿಲ್ಲುವುದು ಮೋದಿ ಮಹಾತ್ಮನಾಣೆ ನಿಜ ಎಂದುಕೊಂಡ ಸಿಬ್ಬಂದಿ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು ಎಂದು ತಲೆಬರಹಗಳನ್ನು ಕೊಟ್ಟು ಅವನ್ನ ಮಾತ್ರ ಪುನಃ ಪುನಃ ಓದಿಕೊಂಡು ಹೊರಟವಂತಲ್ಲಾ. ಆದರೇನು ವಿಕ್ರಮ ಚಂದ್ರನ ಮೇಲೆ ಕಾಲೂರುವುದು ಬಿಟ್ಟು ಅಷ್ಟಮಠಗಳ ದಿಕ್ಕಿಗೆ ಜಾರಿ ಕಣ್ಮರೆಯಾದಾಗ ವಿಕ್ರಮನ ವಿಜ್ಞಾನಿಗಳ ಕಣ್ಣಂಚಿನಲ್ಲಿ ನೀರಾಡಿತು. ಆಗ ಮಾರಣಹೋಮ ದುರಂತವನ್ನೂ ನಾಯಿಮರಿ ಸಾವಿನಂತೆ ಭಾವಿಸುವ ಮೋದಿಯವರು ಕ್ಯಾಮೆರಾಗಳ ಮುಂದೆ ಶಿವನ್ ಭುಜ ಸವರಿ ಸವರಿ ಕಾವೇರುವಂತೆ ಮಾಡಿ ಸಾಂತ್ವಾನಗೊಳಿಸಿದರಂತಲ್ಲಾ, ಥೂತ್ತೇರಿ.

ವಿಕ್ರಮ ಆ ಕ್ಷಣಕ್ಕೆ ಯಶಸ್ವಿಯಾಗಿ ಚಂದ್ರನ ಮೇಲಿಳಿದಿದ್ದರೆ ಏನಾಗುತ್ತಿತ್ತು ಎಂದರೆ, ಮಾತಿನ ಮಲ್ಲನ ವರಸೆ ಬದಲಾಗುತ್ತಿತ್ತು. ಆರ್ಥಿಕವಾಗಿ ದಿವಾಳಿ ಏಳುತ್ತಿರುವ ಭಾರತವನ್ನು ವಿಕ್ರಮನ ಸಾಧನೆಯಿಂದ ತುಂಬಿಕೊಳ್ಳುತ್ತಿದ್ದರು. ಅತ್ತ ವಿಜ್ಞಾನಿಗಳ ದಂಡು ಉಡುಪಿ ಕಡೆಗೆ ಬಂದು ಒಂದು ಪುಟಾಣಿ ಚಿನ್ನದ ವಿಕ್ರಮನನ್ನು ಪೇಜಾವರನ ಪದತಳದಲ್ಲಿಟ್ಟು ಎಲ್ಲ ತಮ್ಮ ಕೃಪೆ ಎನ್ನುತ್ತಿದ್ದರು. ಆಗ ಪೇಜಾವರನ ದಿಕ್ಕಿನಿಂದ ರೇಡಿಯೋ ಶಬ್ದದ ದನಿಯೊಂದು ಹೊರಬಿದ್ದು “ಎಲ್ಲ ಕೃಷ್ಣನ ಮಹಿಮೆ, ಗೋವರ್ಧನ ಗಿರಿಎತ್ತಿ ನಿಲ್ಲಿಸಿದ ಆತನ ಸಂಕಲ್ಪ ಶಕ್ತಿಯೇ ವಿಕ್ರಮನಲ್ಲಿ ಸೇರಿಕೊಂಡು ಚಂದ್ರನ ಮೇಲೆ ನೆಲೆಗೊಳ್ಳುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಜೊತೆಯಾಗೇ ಹೋಗಬೇಕು. ಯಾವತ್ತೂ ಅವು ಒಂದನ್ನೊಂದು ಅಗಲುವಂತೆ ಮಾಡಬಾರದು” ಎಂದು ಬುದ್ದಿಜೀವಿಗಳ ಬಗ್ಗೆ ಕಟಕಿಯಾಡುತ್ತಿದ್ದರು. ಅದೆಲ್ಲಾ ಇರಲಿ ಕರ್ನಾಟಕದ ಸಂತ್ರಸ್ತರ ವಿಷಯದಲ್ಲಿ ಮೋದಿ ಬರುತ್ತಾರೆಂದು ತಮಟೆಯ ಜೊತೆಗೇ ಕೂಗಾಡಿದ್ದ ಬಿಜೆಪಿಗಳು ಮೋದಿ ಮಾಡಿದ ಕೆಲಸದಿಂದ ತಲೆ ತಗ್ಗಿಸಿಕೊಂಡು ಓಡಾಡುತ್ತಿವೆಯಂತಲ್ಲಾ, ಥೂತ್ತೇರಿ.

ಚಂದ್ರನ ಮೇಲೆ ಮುಖ ಮುಂದಾಗಿಯೇ ಬಿದ್ದು, ಓರೆಯಾಗಿ ನಿಂತಿರುವ ವಿಕ್ರಮ ಗೊರಗೊರ ಸದ್ದಿನೊಂದಿಗೆ ತಾನಿಲ್ಲಿರುವುದಾಗಿ ಕಳಿಸಿದವರಿಗೆ ಮಾಹಿತಿಕೊಟ್ಟ ಕೂಡಲೇ ಅದರ ಯೋಗಕ್ಷೇಮದ ವಿಚಾರಣೆಗೆ ಪರಿಶೀಲನಾ ಸಮಿತಿಯೊಂದು ನಿರ್ಮಾಣವಾಗುತ್ತಿರುವಾಗಲೇ, ಇತ್ತ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಶೆಡ್ಡುಗಳಲ್ಲಿನ ಜನರ ಕಣ್ಣುಗಳು ಮರಣದ ದಿಕ್ಕನ್ನ ದಿಟ್ಟಿಸುತ್ತಿವೆಯಂತಲ್ಲಾ. ಇವರ ಗೋಳು ಕೇಳಲು ನೋಡಲು ಇಷ್ಟಪಡದ ಬಿಜೆಪಿಗಳು ಅತ್ತ ತಲೆ ಹಾಕುವುದನ್ನೇ ಮರೆತು ಹೊಸದಾಗಿ ರಚನೆಗೊಂಡ ಸಂಘಟಿತ ಮಂತ್ರಿಗಳು ತಮಗೆ ಸೂಕ್ತವಾದ ಹೊಸ ಬಂಗಲೆಯೇ ಬೇಕು ಎಂದು ಹಟದಲ್ಲಿ ಹುಡುಕುತ್ತಿವೆಯಂತಲ್ಲಾ. ಜೊತೆಗೆ ಉಸ್ತುವಾರಿಗೆ ಸಿಗುವ ಜಿಲ್ಲೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿವೆಯಂತಲ್ಲಾ. ಇಂತಹ ಸಮಯದಲ್ಲಿ ಅತ್ತ ಮೋದಿ ಮಹಾತ್ಮನೂ ಸಂತ್ರಸ್ತರ ವಿಷಯದಲ್ಲಿ ಮಾತನಾಡಲಿಲ್ಲ. ಕೇಂದ್ರದಿಂದ ಕಾಸೂ ಬರಲಿಲ್ಲ. ಸಂತ್ರಸ್ತರ ಶೆಡ್ಡಿನಿಂದ ಸಾವು ನೋವಿನ ಆಕ್ರಂದನ ಕೇಳುತ್ತಿದೆ. ಜೊತೆಗೆ ಸರಕಾರ ರಚನೆಯಾಗುವಂತೆ ಮಾಡಿದ ಹದಿನೇಳು ಜನ ಶಾಸಕರ ಗೋಳು ನೋಡಲಾಗುತ್ತಿಲ್ಲ. ಇಂತಹ ದುಃಖ ತುಂಬಿಕೊಂಡ ಎಡೂರಪ್ಪನನ್ನ ನೋಡಿದರೆ ಸದಾ ಆಸ್ಪತ್ರೆಕಡೆಗೆ ನಡೆಯುತ್ತಿರುವ ಶ್ರೀಮಂತ ರೋಗಿಯಂತೆ ಕಾಣುತ್ತಾರಂತಲ್ಲಾ ಥೂತ್ತೇರಿ.

ಕಬೀರ್ ಎಂಬ ಪಂಜುರ್ಲಿಯನ್ನ ಕರ್ನಾಟಕದ ಭಾರತೀಯ ಜನತಾಪಾರ್ಟಿ ಅಧ್ಯಕ್ಷನನ್ನಾಗಿ ಮಾಡಿದಾಗಲೇ ಇದರಿಂದ ಆಗುವ ಅನಾಹುತವನ್ನ ಜನ ಊಹಿಸಿದ್ದರು. ಅದರಂತೆ ಇದರ ಬಾಯಲ್ಲಿ ಬರುತ್ತಿರುವ ಮಾತುಗಳು ಬಿಜೆಪಿ ಎಂಬ ಪಾರ್ಟಿಯ ಅಧ್ಯಕ್ಷನ ಬಾಯಿಂದ ಹೊರಡುವ ತಕ್ಕ ಮಾತುಗಳಂತಿವೆಯಂತಲ್ಲಾ. ತಮ್ಮ ಸ್ಥಾನಕ್ಕೆ ರಾಜಿನಾಮೆಯಿತ್ತ ಸೆಂಥಿಲ್ ಎಂಬ ದಕ್ಷ ಅಧಿಕಾರಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ರಾಜೀನಾಮೆ ಕೊಟ್ಟರೆ, ಹಾಗಾದರೆ ನೀನು ಪಾಕಿಸ್ತಾನಕ್ಕೆ ಹೋಗು ಎನ್ನುವ ಬಿಜೆಪಿಗಳ ತಲೆಯಲ್ಲಿ ಏನಿದೆ ಎಂಬುದು ಎಲ್ಲರಿಗೂ ಮನವರಿಕೆಯಾಗುತ್ತಿದೆಯಲ್ಲಾ. ಅದೇನದರಾಗಲಿ ಸುಸಂಸ್ಕøತರ ನಾಡಾದ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತಾಗಿದೆ. ಈ ಹಿಂದೆ ಮುದುಕರ ಶೆಟ್ಟರು ನೋವು ನುಂಗಿಕೊಂಡೇ ನಿಧನರಾದರು. ಅಣ್ಣಾಮಲೈ ಯಾರನ್ನ ದೂರದೆ ಹೊರಟುಹೋದರು. ಈಗ ಸಂಧಿಲ್ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಕಾರಣ ನೀಡಿ ಹೊರಟು ಹೋಗುತ್ತಿದ್ದಾರೆ. ಇದು ದಕ್ಷಿಣ ಕನ್ನಡ ಏನಾಗಿರಬಹುದು ಎಂಬ ಸೂಚನೆಯಂತಿದೆ. ಕರ್ನಾಟಕದ ಜನ ಈ ನಾಡು ದ.ಕ ಆಗದಂತೆ ನೋಡಿಕೊಳ್ಳುವ ತುರ್ತು ಈಗ ಬಂದಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...

ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್‌ಟಿಎಸ್‌ ವಿಶೇಷ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಿದ ಇಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸ ಎಫ್‌ಐಆರ್‌ ದಾಖಲಿಸಿದೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...

‘ಸಂಚಾರ ಸಾಥಿ’ ಆ್ಯಪ್‌ ಕಡ್ಡಾಯ: ಬಿಜೆಪಿ ದೇಶವನ್ನು ಸರ್ವಾಧಿಕಾರ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದೆ ಎಂದ ಪ್ರಿಯಾಂಕಾ ಗಾಂಧಿ 

ಮೊಬೈಲ್ ಫೋನ್ ತಯಾರಕರು ಹೊಸ ಹ್ಯಾಂಡ್‌ಸೆಟ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊದಲೇ ಸ್ಥಾಪಿಸುವಂತೆ ಟೆಲಿಕಾಂ ಇಲಾಖೆ ಕೇಳಿಕೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಇದನ್ನು "ಗೂಢಚಾರಿ ಅಪ್ಲಿಕೇಶನ್" ಎಂದು ಕರೆದಿದ್ದಾರೆ....

ಎಸ್‌ಐಆರ್ ಚರ್ಚೆಗೆ ಬಿಗಿಪಟ್ಟು ಹಿಡಿದ ಪ್ರತಿಪಕ್ಷಗಳು, ಉಭಯ ಸದನಗಳಲ್ಲಿ ಕೋಲಾಹಲ ; ಕಲಾಪ ಮುಂದೂಡಿಕೆ

ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದೂ (ಡಿ.2) ಕೂಡ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದೆ....

ಆಂಧ್ರಪ್ರದೇಶ| ‘ನೀವು ಕೊಳಕು ಜಾತಿಗೆ ಸೇರಿದವರು..’ ಎಂದು ದಲಿತ ವಿದ್ಯಾರ್ಥಿಗಳನ್ನು ನಿಂದಿಸಿದ ಇಂಗ್ಲಿಷ್ ಶಿಕ್ಷಕ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಿಂದ ಆಘಾತಕಾರಿ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಯಂಡಪಲ್ಲಿ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕರು ದಲಿತ ಸಮುದಾಯದ ವಿದ್ಯಾರ್ಥಿಗಳ ವಿರುದ್ಧ ಜಾತಿ ನಿಂದನೆ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು...