Homeಅಂಕಣಗಳುವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

ವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

- Advertisement -
- Advertisement -

| ಥೂತ್ತೇರಿ ಯಾಹೂ |

“ವಿಕ್ರಮ ಚಂದ್ರನ ಮೇಲೆ ಕಾಲೂರಿದ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು” ಪ್ರಜಾವಾಣಿಯಲ್ಲಿ ಈ ತಲೆಬರಹ ಓದಿದ ಜನಕ್ಕೆ ದಿಗ್ಭ್ರಮೆಯಾಯ್ತಂತಲ್ಲಾ. ರಾತ್ರಿಯೆಲ್ಲಾ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚಂದ್ರನ ಮೇಲೆ ವಿಕ್ರಮ ಇಳಿಯುವ ದೃಶ್ಯಕ್ಕಾಗಿ ಕಾದಿದ್ದ ಜನರು, ಅದು ಉಡುಪಿ ಕಡೆ ವಾಲುತ್ತ ಕಣ್ಮರೆಯಾದ ದೃಶ್ಯದಿಂದ ದುಗುಡಗೊಂಡ ಜನ ನಿರಾಶೆಯಿಂದ ನಿದ್ರೆಗೆ ಜಾರಿದರೆ, ಈ ಪ್ರಜಾವಾಣಿಯವರಿಗೆ ಏನಾಯ್ತು ಎಂದು ಪ್ರಜೆಗಳು ಶಾನೆ ಶಾಕ್‍ಗೆ ಒಳಗಾದರಂತಲ್ಲಾ. ಬಹುಶಃ ಹೀಗಾಗಿರಬೇಕು, ಇಸ್ರೋ ಅಧ್ಯಕ್ಷ ಕೆ. ಶಿವನ್ ಅಸಾಮಾನ್ಯ ವಿಜ್ಞಾನಿಗಳನ್ನು ಒಟ್ಟುಗೂಡಿಸಿ ಬಹುನಿಷ್ಠೆಯಿಂದ ವಿಕ್ರಮನನ್ನು ತಯಾರಿಸಿದ್ದಾರೆ. ಆದರೂ ಒಂದು ಸಣ್ಣ ಅಳುಕಿಗೆ ತುತ್ತಾಗಿ ಉಡುಪಿ ಮಠದ ಮಾಧ್ವ ಜಗತ್ತಿನ ಗುರುವರ್ಯರ ಆಶೀರ್ವಾದ ಪಡೆದರೆ ಹೇಗೆ ಅನ್ನಿಸಿದೆ. ಇದಕ್ಕೆ ಅವರ ಟೀಮು ಶಿರಸಾವಹಿಸಿ ಒಪ್ಪಿದೆ. ಅದರಂತೆ ಉಡುಪಿ ದಾರಿ ಹಿಡಿದ ವಿಜ್ಞಾನಿಗಳು ಅಷ್ಟಮಠದ ಅಧಿಪತಿಯ ಆಶೀರ್ವಾದ ಪಡೆದು ಕೈ ಸಡಿಲಬಿಟ್ಟು ಭೋಜನ ಭಾರಿಸಿ ವಾಪಸಾದದು, ಮುಂದೆ ಪ್ರಧಾನಿ ಬರಲು ಒಪ್ಪಿದ್ದು, ಇದೆಲ್ಲಾ ಆದ ಮೇಲೆ ವಿಕ್ರಮ ಚಂದ್ರನ ಮೇಲಿಳಿಯದೆ ಇನ್ನೆಲ್ಲಿ ಇಳಿಯಲು ಸಾಧ್ಯ ಎಂದು ಪ್ರಜಾವಾಣಿ ಶಿಖಾಮಣಿಗಳು ಭಾವಿಸಿದ್ದೇ ಅನಾಹುತಕ್ಕೆ ಕಾರಣವಂತಲ್ಲಾ ಥೂತ್ತೇರಿ.

ವಿಕ್ರಮ ಸೌರವ್ಯೂಹ ಭೇದಿಸಿ ಚಂದ್ರನ ಸುತ್ತ ಗಿರಕಿ ಹೊಡೆದಿರಬೇಕು. ಆದ್ದರಿಂದ ಮುಂದಿನ ಕೆಲವೇ ಕ್ಷಣಗಳಲ್ಲಿ ಚಂದ್ರನ ಮೇಲೆ ವಿಕ್ರಮ ಕಾಲೂರಿ ನಿಲ್ಲುವುದು ಮೋದಿ ಮಹಾತ್ಮನಾಣೆ ನಿಜ ಎಂದುಕೊಂಡ ಸಿಬ್ಬಂದಿ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು ಎಂದು ತಲೆಬರಹಗಳನ್ನು ಕೊಟ್ಟು ಅವನ್ನ ಮಾತ್ರ ಪುನಃ ಪುನಃ ಓದಿಕೊಂಡು ಹೊರಟವಂತಲ್ಲಾ. ಆದರೇನು ವಿಕ್ರಮ ಚಂದ್ರನ ಮೇಲೆ ಕಾಲೂರುವುದು ಬಿಟ್ಟು ಅಷ್ಟಮಠಗಳ ದಿಕ್ಕಿಗೆ ಜಾರಿ ಕಣ್ಮರೆಯಾದಾಗ ವಿಕ್ರಮನ ವಿಜ್ಞಾನಿಗಳ ಕಣ್ಣಂಚಿನಲ್ಲಿ ನೀರಾಡಿತು. ಆಗ ಮಾರಣಹೋಮ ದುರಂತವನ್ನೂ ನಾಯಿಮರಿ ಸಾವಿನಂತೆ ಭಾವಿಸುವ ಮೋದಿಯವರು ಕ್ಯಾಮೆರಾಗಳ ಮುಂದೆ ಶಿವನ್ ಭುಜ ಸವರಿ ಸವರಿ ಕಾವೇರುವಂತೆ ಮಾಡಿ ಸಾಂತ್ವಾನಗೊಳಿಸಿದರಂತಲ್ಲಾ, ಥೂತ್ತೇರಿ.

ವಿಕ್ರಮ ಆ ಕ್ಷಣಕ್ಕೆ ಯಶಸ್ವಿಯಾಗಿ ಚಂದ್ರನ ಮೇಲಿಳಿದಿದ್ದರೆ ಏನಾಗುತ್ತಿತ್ತು ಎಂದರೆ, ಮಾತಿನ ಮಲ್ಲನ ವರಸೆ ಬದಲಾಗುತ್ತಿತ್ತು. ಆರ್ಥಿಕವಾಗಿ ದಿವಾಳಿ ಏಳುತ್ತಿರುವ ಭಾರತವನ್ನು ವಿಕ್ರಮನ ಸಾಧನೆಯಿಂದ ತುಂಬಿಕೊಳ್ಳುತ್ತಿದ್ದರು. ಅತ್ತ ವಿಜ್ಞಾನಿಗಳ ದಂಡು ಉಡುಪಿ ಕಡೆಗೆ ಬಂದು ಒಂದು ಪುಟಾಣಿ ಚಿನ್ನದ ವಿಕ್ರಮನನ್ನು ಪೇಜಾವರನ ಪದತಳದಲ್ಲಿಟ್ಟು ಎಲ್ಲ ತಮ್ಮ ಕೃಪೆ ಎನ್ನುತ್ತಿದ್ದರು. ಆಗ ಪೇಜಾವರನ ದಿಕ್ಕಿನಿಂದ ರೇಡಿಯೋ ಶಬ್ದದ ದನಿಯೊಂದು ಹೊರಬಿದ್ದು “ಎಲ್ಲ ಕೃಷ್ಣನ ಮಹಿಮೆ, ಗೋವರ್ಧನ ಗಿರಿಎತ್ತಿ ನಿಲ್ಲಿಸಿದ ಆತನ ಸಂಕಲ್ಪ ಶಕ್ತಿಯೇ ವಿಕ್ರಮನಲ್ಲಿ ಸೇರಿಕೊಂಡು ಚಂದ್ರನ ಮೇಲೆ ನೆಲೆಗೊಳ್ಳುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಜೊತೆಯಾಗೇ ಹೋಗಬೇಕು. ಯಾವತ್ತೂ ಅವು ಒಂದನ್ನೊಂದು ಅಗಲುವಂತೆ ಮಾಡಬಾರದು” ಎಂದು ಬುದ್ದಿಜೀವಿಗಳ ಬಗ್ಗೆ ಕಟಕಿಯಾಡುತ್ತಿದ್ದರು. ಅದೆಲ್ಲಾ ಇರಲಿ ಕರ್ನಾಟಕದ ಸಂತ್ರಸ್ತರ ವಿಷಯದಲ್ಲಿ ಮೋದಿ ಬರುತ್ತಾರೆಂದು ತಮಟೆಯ ಜೊತೆಗೇ ಕೂಗಾಡಿದ್ದ ಬಿಜೆಪಿಗಳು ಮೋದಿ ಮಾಡಿದ ಕೆಲಸದಿಂದ ತಲೆ ತಗ್ಗಿಸಿಕೊಂಡು ಓಡಾಡುತ್ತಿವೆಯಂತಲ್ಲಾ, ಥೂತ್ತೇರಿ.

ಚಂದ್ರನ ಮೇಲೆ ಮುಖ ಮುಂದಾಗಿಯೇ ಬಿದ್ದು, ಓರೆಯಾಗಿ ನಿಂತಿರುವ ವಿಕ್ರಮ ಗೊರಗೊರ ಸದ್ದಿನೊಂದಿಗೆ ತಾನಿಲ್ಲಿರುವುದಾಗಿ ಕಳಿಸಿದವರಿಗೆ ಮಾಹಿತಿಕೊಟ್ಟ ಕೂಡಲೇ ಅದರ ಯೋಗಕ್ಷೇಮದ ವಿಚಾರಣೆಗೆ ಪರಿಶೀಲನಾ ಸಮಿತಿಯೊಂದು ನಿರ್ಮಾಣವಾಗುತ್ತಿರುವಾಗಲೇ, ಇತ್ತ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಶೆಡ್ಡುಗಳಲ್ಲಿನ ಜನರ ಕಣ್ಣುಗಳು ಮರಣದ ದಿಕ್ಕನ್ನ ದಿಟ್ಟಿಸುತ್ತಿವೆಯಂತಲ್ಲಾ. ಇವರ ಗೋಳು ಕೇಳಲು ನೋಡಲು ಇಷ್ಟಪಡದ ಬಿಜೆಪಿಗಳು ಅತ್ತ ತಲೆ ಹಾಕುವುದನ್ನೇ ಮರೆತು ಹೊಸದಾಗಿ ರಚನೆಗೊಂಡ ಸಂಘಟಿತ ಮಂತ್ರಿಗಳು ತಮಗೆ ಸೂಕ್ತವಾದ ಹೊಸ ಬಂಗಲೆಯೇ ಬೇಕು ಎಂದು ಹಟದಲ್ಲಿ ಹುಡುಕುತ್ತಿವೆಯಂತಲ್ಲಾ. ಜೊತೆಗೆ ಉಸ್ತುವಾರಿಗೆ ಸಿಗುವ ಜಿಲ್ಲೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿವೆಯಂತಲ್ಲಾ. ಇಂತಹ ಸಮಯದಲ್ಲಿ ಅತ್ತ ಮೋದಿ ಮಹಾತ್ಮನೂ ಸಂತ್ರಸ್ತರ ವಿಷಯದಲ್ಲಿ ಮಾತನಾಡಲಿಲ್ಲ. ಕೇಂದ್ರದಿಂದ ಕಾಸೂ ಬರಲಿಲ್ಲ. ಸಂತ್ರಸ್ತರ ಶೆಡ್ಡಿನಿಂದ ಸಾವು ನೋವಿನ ಆಕ್ರಂದನ ಕೇಳುತ್ತಿದೆ. ಜೊತೆಗೆ ಸರಕಾರ ರಚನೆಯಾಗುವಂತೆ ಮಾಡಿದ ಹದಿನೇಳು ಜನ ಶಾಸಕರ ಗೋಳು ನೋಡಲಾಗುತ್ತಿಲ್ಲ. ಇಂತಹ ದುಃಖ ತುಂಬಿಕೊಂಡ ಎಡೂರಪ್ಪನನ್ನ ನೋಡಿದರೆ ಸದಾ ಆಸ್ಪತ್ರೆಕಡೆಗೆ ನಡೆಯುತ್ತಿರುವ ಶ್ರೀಮಂತ ರೋಗಿಯಂತೆ ಕಾಣುತ್ತಾರಂತಲ್ಲಾ ಥೂತ್ತೇರಿ.

ಕಬೀರ್ ಎಂಬ ಪಂಜುರ್ಲಿಯನ್ನ ಕರ್ನಾಟಕದ ಭಾರತೀಯ ಜನತಾಪಾರ್ಟಿ ಅಧ್ಯಕ್ಷನನ್ನಾಗಿ ಮಾಡಿದಾಗಲೇ ಇದರಿಂದ ಆಗುವ ಅನಾಹುತವನ್ನ ಜನ ಊಹಿಸಿದ್ದರು. ಅದರಂತೆ ಇದರ ಬಾಯಲ್ಲಿ ಬರುತ್ತಿರುವ ಮಾತುಗಳು ಬಿಜೆಪಿ ಎಂಬ ಪಾರ್ಟಿಯ ಅಧ್ಯಕ್ಷನ ಬಾಯಿಂದ ಹೊರಡುವ ತಕ್ಕ ಮಾತುಗಳಂತಿವೆಯಂತಲ್ಲಾ. ತಮ್ಮ ಸ್ಥಾನಕ್ಕೆ ರಾಜಿನಾಮೆಯಿತ್ತ ಸೆಂಥಿಲ್ ಎಂಬ ದಕ್ಷ ಅಧಿಕಾರಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ರಾಜೀನಾಮೆ ಕೊಟ್ಟರೆ, ಹಾಗಾದರೆ ನೀನು ಪಾಕಿಸ್ತಾನಕ್ಕೆ ಹೋಗು ಎನ್ನುವ ಬಿಜೆಪಿಗಳ ತಲೆಯಲ್ಲಿ ಏನಿದೆ ಎಂಬುದು ಎಲ್ಲರಿಗೂ ಮನವರಿಕೆಯಾಗುತ್ತಿದೆಯಲ್ಲಾ. ಅದೇನದರಾಗಲಿ ಸುಸಂಸ್ಕøತರ ನಾಡಾದ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತಾಗಿದೆ. ಈ ಹಿಂದೆ ಮುದುಕರ ಶೆಟ್ಟರು ನೋವು ನುಂಗಿಕೊಂಡೇ ನಿಧನರಾದರು. ಅಣ್ಣಾಮಲೈ ಯಾರನ್ನ ದೂರದೆ ಹೊರಟುಹೋದರು. ಈಗ ಸಂಧಿಲ್ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಕಾರಣ ನೀಡಿ ಹೊರಟು ಹೋಗುತ್ತಿದ್ದಾರೆ. ಇದು ದಕ್ಷಿಣ ಕನ್ನಡ ಏನಾಗಿರಬಹುದು ಎಂಬ ಸೂಚನೆಯಂತಿದೆ. ಕರ್ನಾಟಕದ ಜನ ಈ ನಾಡು ದ.ಕ ಆಗದಂತೆ ನೋಡಿಕೊಳ್ಳುವ ತುರ್ತು ಈಗ ಬಂದಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...