Homeಅಂಕಣಗಳುವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

ವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

- Advertisement -
- Advertisement -

| ಥೂತ್ತೇರಿ ಯಾಹೂ |

“ವಿಕ್ರಮ ಚಂದ್ರನ ಮೇಲೆ ಕಾಲೂರಿದ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು” ಪ್ರಜಾವಾಣಿಯಲ್ಲಿ ಈ ತಲೆಬರಹ ಓದಿದ ಜನಕ್ಕೆ ದಿಗ್ಭ್ರಮೆಯಾಯ್ತಂತಲ್ಲಾ. ರಾತ್ರಿಯೆಲ್ಲಾ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚಂದ್ರನ ಮೇಲೆ ವಿಕ್ರಮ ಇಳಿಯುವ ದೃಶ್ಯಕ್ಕಾಗಿ ಕಾದಿದ್ದ ಜನರು, ಅದು ಉಡುಪಿ ಕಡೆ ವಾಲುತ್ತ ಕಣ್ಮರೆಯಾದ ದೃಶ್ಯದಿಂದ ದುಗುಡಗೊಂಡ ಜನ ನಿರಾಶೆಯಿಂದ ನಿದ್ರೆಗೆ ಜಾರಿದರೆ, ಈ ಪ್ರಜಾವಾಣಿಯವರಿಗೆ ಏನಾಯ್ತು ಎಂದು ಪ್ರಜೆಗಳು ಶಾನೆ ಶಾಕ್‍ಗೆ ಒಳಗಾದರಂತಲ್ಲಾ. ಬಹುಶಃ ಹೀಗಾಗಿರಬೇಕು, ಇಸ್ರೋ ಅಧ್ಯಕ್ಷ ಕೆ. ಶಿವನ್ ಅಸಾಮಾನ್ಯ ವಿಜ್ಞಾನಿಗಳನ್ನು ಒಟ್ಟುಗೂಡಿಸಿ ಬಹುನಿಷ್ಠೆಯಿಂದ ವಿಕ್ರಮನನ್ನು ತಯಾರಿಸಿದ್ದಾರೆ. ಆದರೂ ಒಂದು ಸಣ್ಣ ಅಳುಕಿಗೆ ತುತ್ತಾಗಿ ಉಡುಪಿ ಮಠದ ಮಾಧ್ವ ಜಗತ್ತಿನ ಗುರುವರ್ಯರ ಆಶೀರ್ವಾದ ಪಡೆದರೆ ಹೇಗೆ ಅನ್ನಿಸಿದೆ. ಇದಕ್ಕೆ ಅವರ ಟೀಮು ಶಿರಸಾವಹಿಸಿ ಒಪ್ಪಿದೆ. ಅದರಂತೆ ಉಡುಪಿ ದಾರಿ ಹಿಡಿದ ವಿಜ್ಞಾನಿಗಳು ಅಷ್ಟಮಠದ ಅಧಿಪತಿಯ ಆಶೀರ್ವಾದ ಪಡೆದು ಕೈ ಸಡಿಲಬಿಟ್ಟು ಭೋಜನ ಭಾರಿಸಿ ವಾಪಸಾದದು, ಮುಂದೆ ಪ್ರಧಾನಿ ಬರಲು ಒಪ್ಪಿದ್ದು, ಇದೆಲ್ಲಾ ಆದ ಮೇಲೆ ವಿಕ್ರಮ ಚಂದ್ರನ ಮೇಲಿಳಿಯದೆ ಇನ್ನೆಲ್ಲಿ ಇಳಿಯಲು ಸಾಧ್ಯ ಎಂದು ಪ್ರಜಾವಾಣಿ ಶಿಖಾಮಣಿಗಳು ಭಾವಿಸಿದ್ದೇ ಅನಾಹುತಕ್ಕೆ ಕಾರಣವಂತಲ್ಲಾ ಥೂತ್ತೇರಿ.

ವಿಕ್ರಮ ಸೌರವ್ಯೂಹ ಭೇದಿಸಿ ಚಂದ್ರನ ಸುತ್ತ ಗಿರಕಿ ಹೊಡೆದಿರಬೇಕು. ಆದ್ದರಿಂದ ಮುಂದಿನ ಕೆಲವೇ ಕ್ಷಣಗಳಲ್ಲಿ ಚಂದ್ರನ ಮೇಲೆ ವಿಕ್ರಮ ಕಾಲೂರಿ ನಿಲ್ಲುವುದು ಮೋದಿ ಮಹಾತ್ಮನಾಣೆ ನಿಜ ಎಂದುಕೊಂಡ ಸಿಬ್ಬಂದಿ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು ಎಂದು ತಲೆಬರಹಗಳನ್ನು ಕೊಟ್ಟು ಅವನ್ನ ಮಾತ್ರ ಪುನಃ ಪುನಃ ಓದಿಕೊಂಡು ಹೊರಟವಂತಲ್ಲಾ. ಆದರೇನು ವಿಕ್ರಮ ಚಂದ್ರನ ಮೇಲೆ ಕಾಲೂರುವುದು ಬಿಟ್ಟು ಅಷ್ಟಮಠಗಳ ದಿಕ್ಕಿಗೆ ಜಾರಿ ಕಣ್ಮರೆಯಾದಾಗ ವಿಕ್ರಮನ ವಿಜ್ಞಾನಿಗಳ ಕಣ್ಣಂಚಿನಲ್ಲಿ ನೀರಾಡಿತು. ಆಗ ಮಾರಣಹೋಮ ದುರಂತವನ್ನೂ ನಾಯಿಮರಿ ಸಾವಿನಂತೆ ಭಾವಿಸುವ ಮೋದಿಯವರು ಕ್ಯಾಮೆರಾಗಳ ಮುಂದೆ ಶಿವನ್ ಭುಜ ಸವರಿ ಸವರಿ ಕಾವೇರುವಂತೆ ಮಾಡಿ ಸಾಂತ್ವಾನಗೊಳಿಸಿದರಂತಲ್ಲಾ, ಥೂತ್ತೇರಿ.

ವಿಕ್ರಮ ಆ ಕ್ಷಣಕ್ಕೆ ಯಶಸ್ವಿಯಾಗಿ ಚಂದ್ರನ ಮೇಲಿಳಿದಿದ್ದರೆ ಏನಾಗುತ್ತಿತ್ತು ಎಂದರೆ, ಮಾತಿನ ಮಲ್ಲನ ವರಸೆ ಬದಲಾಗುತ್ತಿತ್ತು. ಆರ್ಥಿಕವಾಗಿ ದಿವಾಳಿ ಏಳುತ್ತಿರುವ ಭಾರತವನ್ನು ವಿಕ್ರಮನ ಸಾಧನೆಯಿಂದ ತುಂಬಿಕೊಳ್ಳುತ್ತಿದ್ದರು. ಅತ್ತ ವಿಜ್ಞಾನಿಗಳ ದಂಡು ಉಡುಪಿ ಕಡೆಗೆ ಬಂದು ಒಂದು ಪುಟಾಣಿ ಚಿನ್ನದ ವಿಕ್ರಮನನ್ನು ಪೇಜಾವರನ ಪದತಳದಲ್ಲಿಟ್ಟು ಎಲ್ಲ ತಮ್ಮ ಕೃಪೆ ಎನ್ನುತ್ತಿದ್ದರು. ಆಗ ಪೇಜಾವರನ ದಿಕ್ಕಿನಿಂದ ರೇಡಿಯೋ ಶಬ್ದದ ದನಿಯೊಂದು ಹೊರಬಿದ್ದು “ಎಲ್ಲ ಕೃಷ್ಣನ ಮಹಿಮೆ, ಗೋವರ್ಧನ ಗಿರಿಎತ್ತಿ ನಿಲ್ಲಿಸಿದ ಆತನ ಸಂಕಲ್ಪ ಶಕ್ತಿಯೇ ವಿಕ್ರಮನಲ್ಲಿ ಸೇರಿಕೊಂಡು ಚಂದ್ರನ ಮೇಲೆ ನೆಲೆಗೊಳ್ಳುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಜೊತೆಯಾಗೇ ಹೋಗಬೇಕು. ಯಾವತ್ತೂ ಅವು ಒಂದನ್ನೊಂದು ಅಗಲುವಂತೆ ಮಾಡಬಾರದು” ಎಂದು ಬುದ್ದಿಜೀವಿಗಳ ಬಗ್ಗೆ ಕಟಕಿಯಾಡುತ್ತಿದ್ದರು. ಅದೆಲ್ಲಾ ಇರಲಿ ಕರ್ನಾಟಕದ ಸಂತ್ರಸ್ತರ ವಿಷಯದಲ್ಲಿ ಮೋದಿ ಬರುತ್ತಾರೆಂದು ತಮಟೆಯ ಜೊತೆಗೇ ಕೂಗಾಡಿದ್ದ ಬಿಜೆಪಿಗಳು ಮೋದಿ ಮಾಡಿದ ಕೆಲಸದಿಂದ ತಲೆ ತಗ್ಗಿಸಿಕೊಂಡು ಓಡಾಡುತ್ತಿವೆಯಂತಲ್ಲಾ, ಥೂತ್ತೇರಿ.

ಚಂದ್ರನ ಮೇಲೆ ಮುಖ ಮುಂದಾಗಿಯೇ ಬಿದ್ದು, ಓರೆಯಾಗಿ ನಿಂತಿರುವ ವಿಕ್ರಮ ಗೊರಗೊರ ಸದ್ದಿನೊಂದಿಗೆ ತಾನಿಲ್ಲಿರುವುದಾಗಿ ಕಳಿಸಿದವರಿಗೆ ಮಾಹಿತಿಕೊಟ್ಟ ಕೂಡಲೇ ಅದರ ಯೋಗಕ್ಷೇಮದ ವಿಚಾರಣೆಗೆ ಪರಿಶೀಲನಾ ಸಮಿತಿಯೊಂದು ನಿರ್ಮಾಣವಾಗುತ್ತಿರುವಾಗಲೇ, ಇತ್ತ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಶೆಡ್ಡುಗಳಲ್ಲಿನ ಜನರ ಕಣ್ಣುಗಳು ಮರಣದ ದಿಕ್ಕನ್ನ ದಿಟ್ಟಿಸುತ್ತಿವೆಯಂತಲ್ಲಾ. ಇವರ ಗೋಳು ಕೇಳಲು ನೋಡಲು ಇಷ್ಟಪಡದ ಬಿಜೆಪಿಗಳು ಅತ್ತ ತಲೆ ಹಾಕುವುದನ್ನೇ ಮರೆತು ಹೊಸದಾಗಿ ರಚನೆಗೊಂಡ ಸಂಘಟಿತ ಮಂತ್ರಿಗಳು ತಮಗೆ ಸೂಕ್ತವಾದ ಹೊಸ ಬಂಗಲೆಯೇ ಬೇಕು ಎಂದು ಹಟದಲ್ಲಿ ಹುಡುಕುತ್ತಿವೆಯಂತಲ್ಲಾ. ಜೊತೆಗೆ ಉಸ್ತುವಾರಿಗೆ ಸಿಗುವ ಜಿಲ್ಲೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿವೆಯಂತಲ್ಲಾ. ಇಂತಹ ಸಮಯದಲ್ಲಿ ಅತ್ತ ಮೋದಿ ಮಹಾತ್ಮನೂ ಸಂತ್ರಸ್ತರ ವಿಷಯದಲ್ಲಿ ಮಾತನಾಡಲಿಲ್ಲ. ಕೇಂದ್ರದಿಂದ ಕಾಸೂ ಬರಲಿಲ್ಲ. ಸಂತ್ರಸ್ತರ ಶೆಡ್ಡಿನಿಂದ ಸಾವು ನೋವಿನ ಆಕ್ರಂದನ ಕೇಳುತ್ತಿದೆ. ಜೊತೆಗೆ ಸರಕಾರ ರಚನೆಯಾಗುವಂತೆ ಮಾಡಿದ ಹದಿನೇಳು ಜನ ಶಾಸಕರ ಗೋಳು ನೋಡಲಾಗುತ್ತಿಲ್ಲ. ಇಂತಹ ದುಃಖ ತುಂಬಿಕೊಂಡ ಎಡೂರಪ್ಪನನ್ನ ನೋಡಿದರೆ ಸದಾ ಆಸ್ಪತ್ರೆಕಡೆಗೆ ನಡೆಯುತ್ತಿರುವ ಶ್ರೀಮಂತ ರೋಗಿಯಂತೆ ಕಾಣುತ್ತಾರಂತಲ್ಲಾ ಥೂತ್ತೇರಿ.

ಕಬೀರ್ ಎಂಬ ಪಂಜುರ್ಲಿಯನ್ನ ಕರ್ನಾಟಕದ ಭಾರತೀಯ ಜನತಾಪಾರ್ಟಿ ಅಧ್ಯಕ್ಷನನ್ನಾಗಿ ಮಾಡಿದಾಗಲೇ ಇದರಿಂದ ಆಗುವ ಅನಾಹುತವನ್ನ ಜನ ಊಹಿಸಿದ್ದರು. ಅದರಂತೆ ಇದರ ಬಾಯಲ್ಲಿ ಬರುತ್ತಿರುವ ಮಾತುಗಳು ಬಿಜೆಪಿ ಎಂಬ ಪಾರ್ಟಿಯ ಅಧ್ಯಕ್ಷನ ಬಾಯಿಂದ ಹೊರಡುವ ತಕ್ಕ ಮಾತುಗಳಂತಿವೆಯಂತಲ್ಲಾ. ತಮ್ಮ ಸ್ಥಾನಕ್ಕೆ ರಾಜಿನಾಮೆಯಿತ್ತ ಸೆಂಥಿಲ್ ಎಂಬ ದಕ್ಷ ಅಧಿಕಾರಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ರಾಜೀನಾಮೆ ಕೊಟ್ಟರೆ, ಹಾಗಾದರೆ ನೀನು ಪಾಕಿಸ್ತಾನಕ್ಕೆ ಹೋಗು ಎನ್ನುವ ಬಿಜೆಪಿಗಳ ತಲೆಯಲ್ಲಿ ಏನಿದೆ ಎಂಬುದು ಎಲ್ಲರಿಗೂ ಮನವರಿಕೆಯಾಗುತ್ತಿದೆಯಲ್ಲಾ. ಅದೇನದರಾಗಲಿ ಸುಸಂಸ್ಕøತರ ನಾಡಾದ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತಾಗಿದೆ. ಈ ಹಿಂದೆ ಮುದುಕರ ಶೆಟ್ಟರು ನೋವು ನುಂಗಿಕೊಂಡೇ ನಿಧನರಾದರು. ಅಣ್ಣಾಮಲೈ ಯಾರನ್ನ ದೂರದೆ ಹೊರಟುಹೋದರು. ಈಗ ಸಂಧಿಲ್ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಕಾರಣ ನೀಡಿ ಹೊರಟು ಹೋಗುತ್ತಿದ್ದಾರೆ. ಇದು ದಕ್ಷಿಣ ಕನ್ನಡ ಏನಾಗಿರಬಹುದು ಎಂಬ ಸೂಚನೆಯಂತಿದೆ. ಕರ್ನಾಟಕದ ಜನ ಈ ನಾಡು ದ.ಕ ಆಗದಂತೆ ನೋಡಿಕೊಳ್ಳುವ ತುರ್ತು ಈಗ ಬಂದಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...