Homeಅಂಕಣಗಳುವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

ವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

- Advertisement -
- Advertisement -

| ಥೂತ್ತೇರಿ ಯಾಹೂ |

“ವಿಕ್ರಮ ಚಂದ್ರನ ಮೇಲೆ ಕಾಲೂರಿದ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು” ಪ್ರಜಾವಾಣಿಯಲ್ಲಿ ಈ ತಲೆಬರಹ ಓದಿದ ಜನಕ್ಕೆ ದಿಗ್ಭ್ರಮೆಯಾಯ್ತಂತಲ್ಲಾ. ರಾತ್ರಿಯೆಲ್ಲಾ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚಂದ್ರನ ಮೇಲೆ ವಿಕ್ರಮ ಇಳಿಯುವ ದೃಶ್ಯಕ್ಕಾಗಿ ಕಾದಿದ್ದ ಜನರು, ಅದು ಉಡುಪಿ ಕಡೆ ವಾಲುತ್ತ ಕಣ್ಮರೆಯಾದ ದೃಶ್ಯದಿಂದ ದುಗುಡಗೊಂಡ ಜನ ನಿರಾಶೆಯಿಂದ ನಿದ್ರೆಗೆ ಜಾರಿದರೆ, ಈ ಪ್ರಜಾವಾಣಿಯವರಿಗೆ ಏನಾಯ್ತು ಎಂದು ಪ್ರಜೆಗಳು ಶಾನೆ ಶಾಕ್‍ಗೆ ಒಳಗಾದರಂತಲ್ಲಾ. ಬಹುಶಃ ಹೀಗಾಗಿರಬೇಕು, ಇಸ್ರೋ ಅಧ್ಯಕ್ಷ ಕೆ. ಶಿವನ್ ಅಸಾಮಾನ್ಯ ವಿಜ್ಞಾನಿಗಳನ್ನು ಒಟ್ಟುಗೂಡಿಸಿ ಬಹುನಿಷ್ಠೆಯಿಂದ ವಿಕ್ರಮನನ್ನು ತಯಾರಿಸಿದ್ದಾರೆ. ಆದರೂ ಒಂದು ಸಣ್ಣ ಅಳುಕಿಗೆ ತುತ್ತಾಗಿ ಉಡುಪಿ ಮಠದ ಮಾಧ್ವ ಜಗತ್ತಿನ ಗುರುವರ್ಯರ ಆಶೀರ್ವಾದ ಪಡೆದರೆ ಹೇಗೆ ಅನ್ನಿಸಿದೆ. ಇದಕ್ಕೆ ಅವರ ಟೀಮು ಶಿರಸಾವಹಿಸಿ ಒಪ್ಪಿದೆ. ಅದರಂತೆ ಉಡುಪಿ ದಾರಿ ಹಿಡಿದ ವಿಜ್ಞಾನಿಗಳು ಅಷ್ಟಮಠದ ಅಧಿಪತಿಯ ಆಶೀರ್ವಾದ ಪಡೆದು ಕೈ ಸಡಿಲಬಿಟ್ಟು ಭೋಜನ ಭಾರಿಸಿ ವಾಪಸಾದದು, ಮುಂದೆ ಪ್ರಧಾನಿ ಬರಲು ಒಪ್ಪಿದ್ದು, ಇದೆಲ್ಲಾ ಆದ ಮೇಲೆ ವಿಕ್ರಮ ಚಂದ್ರನ ಮೇಲಿಳಿಯದೆ ಇನ್ನೆಲ್ಲಿ ಇಳಿಯಲು ಸಾಧ್ಯ ಎಂದು ಪ್ರಜಾವಾಣಿ ಶಿಖಾಮಣಿಗಳು ಭಾವಿಸಿದ್ದೇ ಅನಾಹುತಕ್ಕೆ ಕಾರಣವಂತಲ್ಲಾ ಥೂತ್ತೇರಿ.

ವಿಕ್ರಮ ಸೌರವ್ಯೂಹ ಭೇದಿಸಿ ಚಂದ್ರನ ಸುತ್ತ ಗಿರಕಿ ಹೊಡೆದಿರಬೇಕು. ಆದ್ದರಿಂದ ಮುಂದಿನ ಕೆಲವೇ ಕ್ಷಣಗಳಲ್ಲಿ ಚಂದ್ರನ ಮೇಲೆ ವಿಕ್ರಮ ಕಾಲೂರಿ ನಿಲ್ಲುವುದು ಮೋದಿ ಮಹಾತ್ಮನಾಣೆ ನಿಜ ಎಂದುಕೊಂಡ ಸಿಬ್ಬಂದಿ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು ಎಂದು ತಲೆಬರಹಗಳನ್ನು ಕೊಟ್ಟು ಅವನ್ನ ಮಾತ್ರ ಪುನಃ ಪುನಃ ಓದಿಕೊಂಡು ಹೊರಟವಂತಲ್ಲಾ. ಆದರೇನು ವಿಕ್ರಮ ಚಂದ್ರನ ಮೇಲೆ ಕಾಲೂರುವುದು ಬಿಟ್ಟು ಅಷ್ಟಮಠಗಳ ದಿಕ್ಕಿಗೆ ಜಾರಿ ಕಣ್ಮರೆಯಾದಾಗ ವಿಕ್ರಮನ ವಿಜ್ಞಾನಿಗಳ ಕಣ್ಣಂಚಿನಲ್ಲಿ ನೀರಾಡಿತು. ಆಗ ಮಾರಣಹೋಮ ದುರಂತವನ್ನೂ ನಾಯಿಮರಿ ಸಾವಿನಂತೆ ಭಾವಿಸುವ ಮೋದಿಯವರು ಕ್ಯಾಮೆರಾಗಳ ಮುಂದೆ ಶಿವನ್ ಭುಜ ಸವರಿ ಸವರಿ ಕಾವೇರುವಂತೆ ಮಾಡಿ ಸಾಂತ್ವಾನಗೊಳಿಸಿದರಂತಲ್ಲಾ, ಥೂತ್ತೇರಿ.

ವಿಕ್ರಮ ಆ ಕ್ಷಣಕ್ಕೆ ಯಶಸ್ವಿಯಾಗಿ ಚಂದ್ರನ ಮೇಲಿಳಿದಿದ್ದರೆ ಏನಾಗುತ್ತಿತ್ತು ಎಂದರೆ, ಮಾತಿನ ಮಲ್ಲನ ವರಸೆ ಬದಲಾಗುತ್ತಿತ್ತು. ಆರ್ಥಿಕವಾಗಿ ದಿವಾಳಿ ಏಳುತ್ತಿರುವ ಭಾರತವನ್ನು ವಿಕ್ರಮನ ಸಾಧನೆಯಿಂದ ತುಂಬಿಕೊಳ್ಳುತ್ತಿದ್ದರು. ಅತ್ತ ವಿಜ್ಞಾನಿಗಳ ದಂಡು ಉಡುಪಿ ಕಡೆಗೆ ಬಂದು ಒಂದು ಪುಟಾಣಿ ಚಿನ್ನದ ವಿಕ್ರಮನನ್ನು ಪೇಜಾವರನ ಪದತಳದಲ್ಲಿಟ್ಟು ಎಲ್ಲ ತಮ್ಮ ಕೃಪೆ ಎನ್ನುತ್ತಿದ್ದರು. ಆಗ ಪೇಜಾವರನ ದಿಕ್ಕಿನಿಂದ ರೇಡಿಯೋ ಶಬ್ದದ ದನಿಯೊಂದು ಹೊರಬಿದ್ದು “ಎಲ್ಲ ಕೃಷ್ಣನ ಮಹಿಮೆ, ಗೋವರ್ಧನ ಗಿರಿಎತ್ತಿ ನಿಲ್ಲಿಸಿದ ಆತನ ಸಂಕಲ್ಪ ಶಕ್ತಿಯೇ ವಿಕ್ರಮನಲ್ಲಿ ಸೇರಿಕೊಂಡು ಚಂದ್ರನ ಮೇಲೆ ನೆಲೆಗೊಳ್ಳುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಜೊತೆಯಾಗೇ ಹೋಗಬೇಕು. ಯಾವತ್ತೂ ಅವು ಒಂದನ್ನೊಂದು ಅಗಲುವಂತೆ ಮಾಡಬಾರದು” ಎಂದು ಬುದ್ದಿಜೀವಿಗಳ ಬಗ್ಗೆ ಕಟಕಿಯಾಡುತ್ತಿದ್ದರು. ಅದೆಲ್ಲಾ ಇರಲಿ ಕರ್ನಾಟಕದ ಸಂತ್ರಸ್ತರ ವಿಷಯದಲ್ಲಿ ಮೋದಿ ಬರುತ್ತಾರೆಂದು ತಮಟೆಯ ಜೊತೆಗೇ ಕೂಗಾಡಿದ್ದ ಬಿಜೆಪಿಗಳು ಮೋದಿ ಮಾಡಿದ ಕೆಲಸದಿಂದ ತಲೆ ತಗ್ಗಿಸಿಕೊಂಡು ಓಡಾಡುತ್ತಿವೆಯಂತಲ್ಲಾ, ಥೂತ್ತೇರಿ.

ಚಂದ್ರನ ಮೇಲೆ ಮುಖ ಮುಂದಾಗಿಯೇ ಬಿದ್ದು, ಓರೆಯಾಗಿ ನಿಂತಿರುವ ವಿಕ್ರಮ ಗೊರಗೊರ ಸದ್ದಿನೊಂದಿಗೆ ತಾನಿಲ್ಲಿರುವುದಾಗಿ ಕಳಿಸಿದವರಿಗೆ ಮಾಹಿತಿಕೊಟ್ಟ ಕೂಡಲೇ ಅದರ ಯೋಗಕ್ಷೇಮದ ವಿಚಾರಣೆಗೆ ಪರಿಶೀಲನಾ ಸಮಿತಿಯೊಂದು ನಿರ್ಮಾಣವಾಗುತ್ತಿರುವಾಗಲೇ, ಇತ್ತ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಶೆಡ್ಡುಗಳಲ್ಲಿನ ಜನರ ಕಣ್ಣುಗಳು ಮರಣದ ದಿಕ್ಕನ್ನ ದಿಟ್ಟಿಸುತ್ತಿವೆಯಂತಲ್ಲಾ. ಇವರ ಗೋಳು ಕೇಳಲು ನೋಡಲು ಇಷ್ಟಪಡದ ಬಿಜೆಪಿಗಳು ಅತ್ತ ತಲೆ ಹಾಕುವುದನ್ನೇ ಮರೆತು ಹೊಸದಾಗಿ ರಚನೆಗೊಂಡ ಸಂಘಟಿತ ಮಂತ್ರಿಗಳು ತಮಗೆ ಸೂಕ್ತವಾದ ಹೊಸ ಬಂಗಲೆಯೇ ಬೇಕು ಎಂದು ಹಟದಲ್ಲಿ ಹುಡುಕುತ್ತಿವೆಯಂತಲ್ಲಾ. ಜೊತೆಗೆ ಉಸ್ತುವಾರಿಗೆ ಸಿಗುವ ಜಿಲ್ಲೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿವೆಯಂತಲ್ಲಾ. ಇಂತಹ ಸಮಯದಲ್ಲಿ ಅತ್ತ ಮೋದಿ ಮಹಾತ್ಮನೂ ಸಂತ್ರಸ್ತರ ವಿಷಯದಲ್ಲಿ ಮಾತನಾಡಲಿಲ್ಲ. ಕೇಂದ್ರದಿಂದ ಕಾಸೂ ಬರಲಿಲ್ಲ. ಸಂತ್ರಸ್ತರ ಶೆಡ್ಡಿನಿಂದ ಸಾವು ನೋವಿನ ಆಕ್ರಂದನ ಕೇಳುತ್ತಿದೆ. ಜೊತೆಗೆ ಸರಕಾರ ರಚನೆಯಾಗುವಂತೆ ಮಾಡಿದ ಹದಿನೇಳು ಜನ ಶಾಸಕರ ಗೋಳು ನೋಡಲಾಗುತ್ತಿಲ್ಲ. ಇಂತಹ ದುಃಖ ತುಂಬಿಕೊಂಡ ಎಡೂರಪ್ಪನನ್ನ ನೋಡಿದರೆ ಸದಾ ಆಸ್ಪತ್ರೆಕಡೆಗೆ ನಡೆಯುತ್ತಿರುವ ಶ್ರೀಮಂತ ರೋಗಿಯಂತೆ ಕಾಣುತ್ತಾರಂತಲ್ಲಾ ಥೂತ್ತೇರಿ.

ಕಬೀರ್ ಎಂಬ ಪಂಜುರ್ಲಿಯನ್ನ ಕರ್ನಾಟಕದ ಭಾರತೀಯ ಜನತಾಪಾರ್ಟಿ ಅಧ್ಯಕ್ಷನನ್ನಾಗಿ ಮಾಡಿದಾಗಲೇ ಇದರಿಂದ ಆಗುವ ಅನಾಹುತವನ್ನ ಜನ ಊಹಿಸಿದ್ದರು. ಅದರಂತೆ ಇದರ ಬಾಯಲ್ಲಿ ಬರುತ್ತಿರುವ ಮಾತುಗಳು ಬಿಜೆಪಿ ಎಂಬ ಪಾರ್ಟಿಯ ಅಧ್ಯಕ್ಷನ ಬಾಯಿಂದ ಹೊರಡುವ ತಕ್ಕ ಮಾತುಗಳಂತಿವೆಯಂತಲ್ಲಾ. ತಮ್ಮ ಸ್ಥಾನಕ್ಕೆ ರಾಜಿನಾಮೆಯಿತ್ತ ಸೆಂಥಿಲ್ ಎಂಬ ದಕ್ಷ ಅಧಿಕಾರಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ರಾಜೀನಾಮೆ ಕೊಟ್ಟರೆ, ಹಾಗಾದರೆ ನೀನು ಪಾಕಿಸ್ತಾನಕ್ಕೆ ಹೋಗು ಎನ್ನುವ ಬಿಜೆಪಿಗಳ ತಲೆಯಲ್ಲಿ ಏನಿದೆ ಎಂಬುದು ಎಲ್ಲರಿಗೂ ಮನವರಿಕೆಯಾಗುತ್ತಿದೆಯಲ್ಲಾ. ಅದೇನದರಾಗಲಿ ಸುಸಂಸ್ಕøತರ ನಾಡಾದ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತಾಗಿದೆ. ಈ ಹಿಂದೆ ಮುದುಕರ ಶೆಟ್ಟರು ನೋವು ನುಂಗಿಕೊಂಡೇ ನಿಧನರಾದರು. ಅಣ್ಣಾಮಲೈ ಯಾರನ್ನ ದೂರದೆ ಹೊರಟುಹೋದರು. ಈಗ ಸಂಧಿಲ್ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಕಾರಣ ನೀಡಿ ಹೊರಟು ಹೋಗುತ್ತಿದ್ದಾರೆ. ಇದು ದಕ್ಷಿಣ ಕನ್ನಡ ಏನಾಗಿರಬಹುದು ಎಂಬ ಸೂಚನೆಯಂತಿದೆ. ಕರ್ನಾಟಕದ ಜನ ಈ ನಾಡು ದ.ಕ ಆಗದಂತೆ ನೋಡಿಕೊಳ್ಳುವ ತುರ್ತು ಈಗ ಬಂದಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...