Homeಅಂಕಣಗಳುವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

ವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

- Advertisement -
- Advertisement -

| ಥೂತ್ತೇರಿ ಯಾಹೂ |

“ವಿಕ್ರಮ ಚಂದ್ರನ ಮೇಲೆ ಕಾಲೂರಿದ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು” ಪ್ರಜಾವಾಣಿಯಲ್ಲಿ ಈ ತಲೆಬರಹ ಓದಿದ ಜನಕ್ಕೆ ದಿಗ್ಭ್ರಮೆಯಾಯ್ತಂತಲ್ಲಾ. ರಾತ್ರಿಯೆಲ್ಲಾ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚಂದ್ರನ ಮೇಲೆ ವಿಕ್ರಮ ಇಳಿಯುವ ದೃಶ್ಯಕ್ಕಾಗಿ ಕಾದಿದ್ದ ಜನರು, ಅದು ಉಡುಪಿ ಕಡೆ ವಾಲುತ್ತ ಕಣ್ಮರೆಯಾದ ದೃಶ್ಯದಿಂದ ದುಗುಡಗೊಂಡ ಜನ ನಿರಾಶೆಯಿಂದ ನಿದ್ರೆಗೆ ಜಾರಿದರೆ, ಈ ಪ್ರಜಾವಾಣಿಯವರಿಗೆ ಏನಾಯ್ತು ಎಂದು ಪ್ರಜೆಗಳು ಶಾನೆ ಶಾಕ್‍ಗೆ ಒಳಗಾದರಂತಲ್ಲಾ. ಬಹುಶಃ ಹೀಗಾಗಿರಬೇಕು, ಇಸ್ರೋ ಅಧ್ಯಕ್ಷ ಕೆ. ಶಿವನ್ ಅಸಾಮಾನ್ಯ ವಿಜ್ಞಾನಿಗಳನ್ನು ಒಟ್ಟುಗೂಡಿಸಿ ಬಹುನಿಷ್ಠೆಯಿಂದ ವಿಕ್ರಮನನ್ನು ತಯಾರಿಸಿದ್ದಾರೆ. ಆದರೂ ಒಂದು ಸಣ್ಣ ಅಳುಕಿಗೆ ತುತ್ತಾಗಿ ಉಡುಪಿ ಮಠದ ಮಾಧ್ವ ಜಗತ್ತಿನ ಗುರುವರ್ಯರ ಆಶೀರ್ವಾದ ಪಡೆದರೆ ಹೇಗೆ ಅನ್ನಿಸಿದೆ. ಇದಕ್ಕೆ ಅವರ ಟೀಮು ಶಿರಸಾವಹಿಸಿ ಒಪ್ಪಿದೆ. ಅದರಂತೆ ಉಡುಪಿ ದಾರಿ ಹಿಡಿದ ವಿಜ್ಞಾನಿಗಳು ಅಷ್ಟಮಠದ ಅಧಿಪತಿಯ ಆಶೀರ್ವಾದ ಪಡೆದು ಕೈ ಸಡಿಲಬಿಟ್ಟು ಭೋಜನ ಭಾರಿಸಿ ವಾಪಸಾದದು, ಮುಂದೆ ಪ್ರಧಾನಿ ಬರಲು ಒಪ್ಪಿದ್ದು, ಇದೆಲ್ಲಾ ಆದ ಮೇಲೆ ವಿಕ್ರಮ ಚಂದ್ರನ ಮೇಲಿಳಿಯದೆ ಇನ್ನೆಲ್ಲಿ ಇಳಿಯಲು ಸಾಧ್ಯ ಎಂದು ಪ್ರಜಾವಾಣಿ ಶಿಖಾಮಣಿಗಳು ಭಾವಿಸಿದ್ದೇ ಅನಾಹುತಕ್ಕೆ ಕಾರಣವಂತಲ್ಲಾ ಥೂತ್ತೇರಿ.

ವಿಕ್ರಮ ಸೌರವ್ಯೂಹ ಭೇದಿಸಿ ಚಂದ್ರನ ಸುತ್ತ ಗಿರಕಿ ಹೊಡೆದಿರಬೇಕು. ಆದ್ದರಿಂದ ಮುಂದಿನ ಕೆಲವೇ ಕ್ಷಣಗಳಲ್ಲಿ ಚಂದ್ರನ ಮೇಲೆ ವಿಕ್ರಮ ಕಾಲೂರಿ ನಿಲ್ಲುವುದು ಮೋದಿ ಮಹಾತ್ಮನಾಣೆ ನಿಜ ಎಂದುಕೊಂಡ ಸಿಬ್ಬಂದಿ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು ಎಂದು ತಲೆಬರಹಗಳನ್ನು ಕೊಟ್ಟು ಅವನ್ನ ಮಾತ್ರ ಪುನಃ ಪುನಃ ಓದಿಕೊಂಡು ಹೊರಟವಂತಲ್ಲಾ. ಆದರೇನು ವಿಕ್ರಮ ಚಂದ್ರನ ಮೇಲೆ ಕಾಲೂರುವುದು ಬಿಟ್ಟು ಅಷ್ಟಮಠಗಳ ದಿಕ್ಕಿಗೆ ಜಾರಿ ಕಣ್ಮರೆಯಾದಾಗ ವಿಕ್ರಮನ ವಿಜ್ಞಾನಿಗಳ ಕಣ್ಣಂಚಿನಲ್ಲಿ ನೀರಾಡಿತು. ಆಗ ಮಾರಣಹೋಮ ದುರಂತವನ್ನೂ ನಾಯಿಮರಿ ಸಾವಿನಂತೆ ಭಾವಿಸುವ ಮೋದಿಯವರು ಕ್ಯಾಮೆರಾಗಳ ಮುಂದೆ ಶಿವನ್ ಭುಜ ಸವರಿ ಸವರಿ ಕಾವೇರುವಂತೆ ಮಾಡಿ ಸಾಂತ್ವಾನಗೊಳಿಸಿದರಂತಲ್ಲಾ, ಥೂತ್ತೇರಿ.

ವಿಕ್ರಮ ಆ ಕ್ಷಣಕ್ಕೆ ಯಶಸ್ವಿಯಾಗಿ ಚಂದ್ರನ ಮೇಲಿಳಿದಿದ್ದರೆ ಏನಾಗುತ್ತಿತ್ತು ಎಂದರೆ, ಮಾತಿನ ಮಲ್ಲನ ವರಸೆ ಬದಲಾಗುತ್ತಿತ್ತು. ಆರ್ಥಿಕವಾಗಿ ದಿವಾಳಿ ಏಳುತ್ತಿರುವ ಭಾರತವನ್ನು ವಿಕ್ರಮನ ಸಾಧನೆಯಿಂದ ತುಂಬಿಕೊಳ್ಳುತ್ತಿದ್ದರು. ಅತ್ತ ವಿಜ್ಞಾನಿಗಳ ದಂಡು ಉಡುಪಿ ಕಡೆಗೆ ಬಂದು ಒಂದು ಪುಟಾಣಿ ಚಿನ್ನದ ವಿಕ್ರಮನನ್ನು ಪೇಜಾವರನ ಪದತಳದಲ್ಲಿಟ್ಟು ಎಲ್ಲ ತಮ್ಮ ಕೃಪೆ ಎನ್ನುತ್ತಿದ್ದರು. ಆಗ ಪೇಜಾವರನ ದಿಕ್ಕಿನಿಂದ ರೇಡಿಯೋ ಶಬ್ದದ ದನಿಯೊಂದು ಹೊರಬಿದ್ದು “ಎಲ್ಲ ಕೃಷ್ಣನ ಮಹಿಮೆ, ಗೋವರ್ಧನ ಗಿರಿಎತ್ತಿ ನಿಲ್ಲಿಸಿದ ಆತನ ಸಂಕಲ್ಪ ಶಕ್ತಿಯೇ ವಿಕ್ರಮನಲ್ಲಿ ಸೇರಿಕೊಂಡು ಚಂದ್ರನ ಮೇಲೆ ನೆಲೆಗೊಳ್ಳುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಜೊತೆಯಾಗೇ ಹೋಗಬೇಕು. ಯಾವತ್ತೂ ಅವು ಒಂದನ್ನೊಂದು ಅಗಲುವಂತೆ ಮಾಡಬಾರದು” ಎಂದು ಬುದ್ದಿಜೀವಿಗಳ ಬಗ್ಗೆ ಕಟಕಿಯಾಡುತ್ತಿದ್ದರು. ಅದೆಲ್ಲಾ ಇರಲಿ ಕರ್ನಾಟಕದ ಸಂತ್ರಸ್ತರ ವಿಷಯದಲ್ಲಿ ಮೋದಿ ಬರುತ್ತಾರೆಂದು ತಮಟೆಯ ಜೊತೆಗೇ ಕೂಗಾಡಿದ್ದ ಬಿಜೆಪಿಗಳು ಮೋದಿ ಮಾಡಿದ ಕೆಲಸದಿಂದ ತಲೆ ತಗ್ಗಿಸಿಕೊಂಡು ಓಡಾಡುತ್ತಿವೆಯಂತಲ್ಲಾ, ಥೂತ್ತೇರಿ.

ಚಂದ್ರನ ಮೇಲೆ ಮುಖ ಮುಂದಾಗಿಯೇ ಬಿದ್ದು, ಓರೆಯಾಗಿ ನಿಂತಿರುವ ವಿಕ್ರಮ ಗೊರಗೊರ ಸದ್ದಿನೊಂದಿಗೆ ತಾನಿಲ್ಲಿರುವುದಾಗಿ ಕಳಿಸಿದವರಿಗೆ ಮಾಹಿತಿಕೊಟ್ಟ ಕೂಡಲೇ ಅದರ ಯೋಗಕ್ಷೇಮದ ವಿಚಾರಣೆಗೆ ಪರಿಶೀಲನಾ ಸಮಿತಿಯೊಂದು ನಿರ್ಮಾಣವಾಗುತ್ತಿರುವಾಗಲೇ, ಇತ್ತ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಶೆಡ್ಡುಗಳಲ್ಲಿನ ಜನರ ಕಣ್ಣುಗಳು ಮರಣದ ದಿಕ್ಕನ್ನ ದಿಟ್ಟಿಸುತ್ತಿವೆಯಂತಲ್ಲಾ. ಇವರ ಗೋಳು ಕೇಳಲು ನೋಡಲು ಇಷ್ಟಪಡದ ಬಿಜೆಪಿಗಳು ಅತ್ತ ತಲೆ ಹಾಕುವುದನ್ನೇ ಮರೆತು ಹೊಸದಾಗಿ ರಚನೆಗೊಂಡ ಸಂಘಟಿತ ಮಂತ್ರಿಗಳು ತಮಗೆ ಸೂಕ್ತವಾದ ಹೊಸ ಬಂಗಲೆಯೇ ಬೇಕು ಎಂದು ಹಟದಲ್ಲಿ ಹುಡುಕುತ್ತಿವೆಯಂತಲ್ಲಾ. ಜೊತೆಗೆ ಉಸ್ತುವಾರಿಗೆ ಸಿಗುವ ಜಿಲ್ಲೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿವೆಯಂತಲ್ಲಾ. ಇಂತಹ ಸಮಯದಲ್ಲಿ ಅತ್ತ ಮೋದಿ ಮಹಾತ್ಮನೂ ಸಂತ್ರಸ್ತರ ವಿಷಯದಲ್ಲಿ ಮಾತನಾಡಲಿಲ್ಲ. ಕೇಂದ್ರದಿಂದ ಕಾಸೂ ಬರಲಿಲ್ಲ. ಸಂತ್ರಸ್ತರ ಶೆಡ್ಡಿನಿಂದ ಸಾವು ನೋವಿನ ಆಕ್ರಂದನ ಕೇಳುತ್ತಿದೆ. ಜೊತೆಗೆ ಸರಕಾರ ರಚನೆಯಾಗುವಂತೆ ಮಾಡಿದ ಹದಿನೇಳು ಜನ ಶಾಸಕರ ಗೋಳು ನೋಡಲಾಗುತ್ತಿಲ್ಲ. ಇಂತಹ ದುಃಖ ತುಂಬಿಕೊಂಡ ಎಡೂರಪ್ಪನನ್ನ ನೋಡಿದರೆ ಸದಾ ಆಸ್ಪತ್ರೆಕಡೆಗೆ ನಡೆಯುತ್ತಿರುವ ಶ್ರೀಮಂತ ರೋಗಿಯಂತೆ ಕಾಣುತ್ತಾರಂತಲ್ಲಾ ಥೂತ್ತೇರಿ.

ಕಬೀರ್ ಎಂಬ ಪಂಜುರ್ಲಿಯನ್ನ ಕರ್ನಾಟಕದ ಭಾರತೀಯ ಜನತಾಪಾರ್ಟಿ ಅಧ್ಯಕ್ಷನನ್ನಾಗಿ ಮಾಡಿದಾಗಲೇ ಇದರಿಂದ ಆಗುವ ಅನಾಹುತವನ್ನ ಜನ ಊಹಿಸಿದ್ದರು. ಅದರಂತೆ ಇದರ ಬಾಯಲ್ಲಿ ಬರುತ್ತಿರುವ ಮಾತುಗಳು ಬಿಜೆಪಿ ಎಂಬ ಪಾರ್ಟಿಯ ಅಧ್ಯಕ್ಷನ ಬಾಯಿಂದ ಹೊರಡುವ ತಕ್ಕ ಮಾತುಗಳಂತಿವೆಯಂತಲ್ಲಾ. ತಮ್ಮ ಸ್ಥಾನಕ್ಕೆ ರಾಜಿನಾಮೆಯಿತ್ತ ಸೆಂಥಿಲ್ ಎಂಬ ದಕ್ಷ ಅಧಿಕಾರಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ರಾಜೀನಾಮೆ ಕೊಟ್ಟರೆ, ಹಾಗಾದರೆ ನೀನು ಪಾಕಿಸ್ತಾನಕ್ಕೆ ಹೋಗು ಎನ್ನುವ ಬಿಜೆಪಿಗಳ ತಲೆಯಲ್ಲಿ ಏನಿದೆ ಎಂಬುದು ಎಲ್ಲರಿಗೂ ಮನವರಿಕೆಯಾಗುತ್ತಿದೆಯಲ್ಲಾ. ಅದೇನದರಾಗಲಿ ಸುಸಂಸ್ಕøತರ ನಾಡಾದ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತಾಗಿದೆ. ಈ ಹಿಂದೆ ಮುದುಕರ ಶೆಟ್ಟರು ನೋವು ನುಂಗಿಕೊಂಡೇ ನಿಧನರಾದರು. ಅಣ್ಣಾಮಲೈ ಯಾರನ್ನ ದೂರದೆ ಹೊರಟುಹೋದರು. ಈಗ ಸಂಧಿಲ್ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಕಾರಣ ನೀಡಿ ಹೊರಟು ಹೋಗುತ್ತಿದ್ದಾರೆ. ಇದು ದಕ್ಷಿಣ ಕನ್ನಡ ಏನಾಗಿರಬಹುದು ಎಂಬ ಸೂಚನೆಯಂತಿದೆ. ಕರ್ನಾಟಕದ ಜನ ಈ ನಾಡು ದ.ಕ ಆಗದಂತೆ ನೋಡಿಕೊಳ್ಳುವ ತುರ್ತು ಈಗ ಬಂದಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...