Homeಅಂಕಣಗಳುವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

ವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

- Advertisement -
- Advertisement -

| ಥೂತ್ತೇರಿ ಯಾಹೂ |

“ವಿಕ್ರಮ ಚಂದ್ರನ ಮೇಲೆ ಕಾಲೂರಿದ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು” ಪ್ರಜಾವಾಣಿಯಲ್ಲಿ ಈ ತಲೆಬರಹ ಓದಿದ ಜನಕ್ಕೆ ದಿಗ್ಭ್ರಮೆಯಾಯ್ತಂತಲ್ಲಾ. ರಾತ್ರಿಯೆಲ್ಲಾ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚಂದ್ರನ ಮೇಲೆ ವಿಕ್ರಮ ಇಳಿಯುವ ದೃಶ್ಯಕ್ಕಾಗಿ ಕಾದಿದ್ದ ಜನರು, ಅದು ಉಡುಪಿ ಕಡೆ ವಾಲುತ್ತ ಕಣ್ಮರೆಯಾದ ದೃಶ್ಯದಿಂದ ದುಗುಡಗೊಂಡ ಜನ ನಿರಾಶೆಯಿಂದ ನಿದ್ರೆಗೆ ಜಾರಿದರೆ, ಈ ಪ್ರಜಾವಾಣಿಯವರಿಗೆ ಏನಾಯ್ತು ಎಂದು ಪ್ರಜೆಗಳು ಶಾನೆ ಶಾಕ್‍ಗೆ ಒಳಗಾದರಂತಲ್ಲಾ. ಬಹುಶಃ ಹೀಗಾಗಿರಬೇಕು, ಇಸ್ರೋ ಅಧ್ಯಕ್ಷ ಕೆ. ಶಿವನ್ ಅಸಾಮಾನ್ಯ ವಿಜ್ಞಾನಿಗಳನ್ನು ಒಟ್ಟುಗೂಡಿಸಿ ಬಹುನಿಷ್ಠೆಯಿಂದ ವಿಕ್ರಮನನ್ನು ತಯಾರಿಸಿದ್ದಾರೆ. ಆದರೂ ಒಂದು ಸಣ್ಣ ಅಳುಕಿಗೆ ತುತ್ತಾಗಿ ಉಡುಪಿ ಮಠದ ಮಾಧ್ವ ಜಗತ್ತಿನ ಗುರುವರ್ಯರ ಆಶೀರ್ವಾದ ಪಡೆದರೆ ಹೇಗೆ ಅನ್ನಿಸಿದೆ. ಇದಕ್ಕೆ ಅವರ ಟೀಮು ಶಿರಸಾವಹಿಸಿ ಒಪ್ಪಿದೆ. ಅದರಂತೆ ಉಡುಪಿ ದಾರಿ ಹಿಡಿದ ವಿಜ್ಞಾನಿಗಳು ಅಷ್ಟಮಠದ ಅಧಿಪತಿಯ ಆಶೀರ್ವಾದ ಪಡೆದು ಕೈ ಸಡಿಲಬಿಟ್ಟು ಭೋಜನ ಭಾರಿಸಿ ವಾಪಸಾದದು, ಮುಂದೆ ಪ್ರಧಾನಿ ಬರಲು ಒಪ್ಪಿದ್ದು, ಇದೆಲ್ಲಾ ಆದ ಮೇಲೆ ವಿಕ್ರಮ ಚಂದ್ರನ ಮೇಲಿಳಿಯದೆ ಇನ್ನೆಲ್ಲಿ ಇಳಿಯಲು ಸಾಧ್ಯ ಎಂದು ಪ್ರಜಾವಾಣಿ ಶಿಖಾಮಣಿಗಳು ಭಾವಿಸಿದ್ದೇ ಅನಾಹುತಕ್ಕೆ ಕಾರಣವಂತಲ್ಲಾ ಥೂತ್ತೇರಿ.

ವಿಕ್ರಮ ಸೌರವ್ಯೂಹ ಭೇದಿಸಿ ಚಂದ್ರನ ಸುತ್ತ ಗಿರಕಿ ಹೊಡೆದಿರಬೇಕು. ಆದ್ದರಿಂದ ಮುಂದಿನ ಕೆಲವೇ ಕ್ಷಣಗಳಲ್ಲಿ ಚಂದ್ರನ ಮೇಲೆ ವಿಕ್ರಮ ಕಾಲೂರಿ ನಿಲ್ಲುವುದು ಮೋದಿ ಮಹಾತ್ಮನಾಣೆ ನಿಜ ಎಂದುಕೊಂಡ ಸಿಬ್ಬಂದಿ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು ಎಂದು ತಲೆಬರಹಗಳನ್ನು ಕೊಟ್ಟು ಅವನ್ನ ಮಾತ್ರ ಪುನಃ ಪುನಃ ಓದಿಕೊಂಡು ಹೊರಟವಂತಲ್ಲಾ. ಆದರೇನು ವಿಕ್ರಮ ಚಂದ್ರನ ಮೇಲೆ ಕಾಲೂರುವುದು ಬಿಟ್ಟು ಅಷ್ಟಮಠಗಳ ದಿಕ್ಕಿಗೆ ಜಾರಿ ಕಣ್ಮರೆಯಾದಾಗ ವಿಕ್ರಮನ ವಿಜ್ಞಾನಿಗಳ ಕಣ್ಣಂಚಿನಲ್ಲಿ ನೀರಾಡಿತು. ಆಗ ಮಾರಣಹೋಮ ದುರಂತವನ್ನೂ ನಾಯಿಮರಿ ಸಾವಿನಂತೆ ಭಾವಿಸುವ ಮೋದಿಯವರು ಕ್ಯಾಮೆರಾಗಳ ಮುಂದೆ ಶಿವನ್ ಭುಜ ಸವರಿ ಸವರಿ ಕಾವೇರುವಂತೆ ಮಾಡಿ ಸಾಂತ್ವಾನಗೊಳಿಸಿದರಂತಲ್ಲಾ, ಥೂತ್ತೇರಿ.

ವಿಕ್ರಮ ಆ ಕ್ಷಣಕ್ಕೆ ಯಶಸ್ವಿಯಾಗಿ ಚಂದ್ರನ ಮೇಲಿಳಿದಿದ್ದರೆ ಏನಾಗುತ್ತಿತ್ತು ಎಂದರೆ, ಮಾತಿನ ಮಲ್ಲನ ವರಸೆ ಬದಲಾಗುತ್ತಿತ್ತು. ಆರ್ಥಿಕವಾಗಿ ದಿವಾಳಿ ಏಳುತ್ತಿರುವ ಭಾರತವನ್ನು ವಿಕ್ರಮನ ಸಾಧನೆಯಿಂದ ತುಂಬಿಕೊಳ್ಳುತ್ತಿದ್ದರು. ಅತ್ತ ವಿಜ್ಞಾನಿಗಳ ದಂಡು ಉಡುಪಿ ಕಡೆಗೆ ಬಂದು ಒಂದು ಪುಟಾಣಿ ಚಿನ್ನದ ವಿಕ್ರಮನನ್ನು ಪೇಜಾವರನ ಪದತಳದಲ್ಲಿಟ್ಟು ಎಲ್ಲ ತಮ್ಮ ಕೃಪೆ ಎನ್ನುತ್ತಿದ್ದರು. ಆಗ ಪೇಜಾವರನ ದಿಕ್ಕಿನಿಂದ ರೇಡಿಯೋ ಶಬ್ದದ ದನಿಯೊಂದು ಹೊರಬಿದ್ದು “ಎಲ್ಲ ಕೃಷ್ಣನ ಮಹಿಮೆ, ಗೋವರ್ಧನ ಗಿರಿಎತ್ತಿ ನಿಲ್ಲಿಸಿದ ಆತನ ಸಂಕಲ್ಪ ಶಕ್ತಿಯೇ ವಿಕ್ರಮನಲ್ಲಿ ಸೇರಿಕೊಂಡು ಚಂದ್ರನ ಮೇಲೆ ನೆಲೆಗೊಳ್ಳುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಜೊತೆಯಾಗೇ ಹೋಗಬೇಕು. ಯಾವತ್ತೂ ಅವು ಒಂದನ್ನೊಂದು ಅಗಲುವಂತೆ ಮಾಡಬಾರದು” ಎಂದು ಬುದ್ದಿಜೀವಿಗಳ ಬಗ್ಗೆ ಕಟಕಿಯಾಡುತ್ತಿದ್ದರು. ಅದೆಲ್ಲಾ ಇರಲಿ ಕರ್ನಾಟಕದ ಸಂತ್ರಸ್ತರ ವಿಷಯದಲ್ಲಿ ಮೋದಿ ಬರುತ್ತಾರೆಂದು ತಮಟೆಯ ಜೊತೆಗೇ ಕೂಗಾಡಿದ್ದ ಬಿಜೆಪಿಗಳು ಮೋದಿ ಮಾಡಿದ ಕೆಲಸದಿಂದ ತಲೆ ತಗ್ಗಿಸಿಕೊಂಡು ಓಡಾಡುತ್ತಿವೆಯಂತಲ್ಲಾ, ಥೂತ್ತೇರಿ.

ಚಂದ್ರನ ಮೇಲೆ ಮುಖ ಮುಂದಾಗಿಯೇ ಬಿದ್ದು, ಓರೆಯಾಗಿ ನಿಂತಿರುವ ವಿಕ್ರಮ ಗೊರಗೊರ ಸದ್ದಿನೊಂದಿಗೆ ತಾನಿಲ್ಲಿರುವುದಾಗಿ ಕಳಿಸಿದವರಿಗೆ ಮಾಹಿತಿಕೊಟ್ಟ ಕೂಡಲೇ ಅದರ ಯೋಗಕ್ಷೇಮದ ವಿಚಾರಣೆಗೆ ಪರಿಶೀಲನಾ ಸಮಿತಿಯೊಂದು ನಿರ್ಮಾಣವಾಗುತ್ತಿರುವಾಗಲೇ, ಇತ್ತ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಶೆಡ್ಡುಗಳಲ್ಲಿನ ಜನರ ಕಣ್ಣುಗಳು ಮರಣದ ದಿಕ್ಕನ್ನ ದಿಟ್ಟಿಸುತ್ತಿವೆಯಂತಲ್ಲಾ. ಇವರ ಗೋಳು ಕೇಳಲು ನೋಡಲು ಇಷ್ಟಪಡದ ಬಿಜೆಪಿಗಳು ಅತ್ತ ತಲೆ ಹಾಕುವುದನ್ನೇ ಮರೆತು ಹೊಸದಾಗಿ ರಚನೆಗೊಂಡ ಸಂಘಟಿತ ಮಂತ್ರಿಗಳು ತಮಗೆ ಸೂಕ್ತವಾದ ಹೊಸ ಬಂಗಲೆಯೇ ಬೇಕು ಎಂದು ಹಟದಲ್ಲಿ ಹುಡುಕುತ್ತಿವೆಯಂತಲ್ಲಾ. ಜೊತೆಗೆ ಉಸ್ತುವಾರಿಗೆ ಸಿಗುವ ಜಿಲ್ಲೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿವೆಯಂತಲ್ಲಾ. ಇಂತಹ ಸಮಯದಲ್ಲಿ ಅತ್ತ ಮೋದಿ ಮಹಾತ್ಮನೂ ಸಂತ್ರಸ್ತರ ವಿಷಯದಲ್ಲಿ ಮಾತನಾಡಲಿಲ್ಲ. ಕೇಂದ್ರದಿಂದ ಕಾಸೂ ಬರಲಿಲ್ಲ. ಸಂತ್ರಸ್ತರ ಶೆಡ್ಡಿನಿಂದ ಸಾವು ನೋವಿನ ಆಕ್ರಂದನ ಕೇಳುತ್ತಿದೆ. ಜೊತೆಗೆ ಸರಕಾರ ರಚನೆಯಾಗುವಂತೆ ಮಾಡಿದ ಹದಿನೇಳು ಜನ ಶಾಸಕರ ಗೋಳು ನೋಡಲಾಗುತ್ತಿಲ್ಲ. ಇಂತಹ ದುಃಖ ತುಂಬಿಕೊಂಡ ಎಡೂರಪ್ಪನನ್ನ ನೋಡಿದರೆ ಸದಾ ಆಸ್ಪತ್ರೆಕಡೆಗೆ ನಡೆಯುತ್ತಿರುವ ಶ್ರೀಮಂತ ರೋಗಿಯಂತೆ ಕಾಣುತ್ತಾರಂತಲ್ಲಾ ಥೂತ್ತೇರಿ.

ಕಬೀರ್ ಎಂಬ ಪಂಜುರ್ಲಿಯನ್ನ ಕರ್ನಾಟಕದ ಭಾರತೀಯ ಜನತಾಪಾರ್ಟಿ ಅಧ್ಯಕ್ಷನನ್ನಾಗಿ ಮಾಡಿದಾಗಲೇ ಇದರಿಂದ ಆಗುವ ಅನಾಹುತವನ್ನ ಜನ ಊಹಿಸಿದ್ದರು. ಅದರಂತೆ ಇದರ ಬಾಯಲ್ಲಿ ಬರುತ್ತಿರುವ ಮಾತುಗಳು ಬಿಜೆಪಿ ಎಂಬ ಪಾರ್ಟಿಯ ಅಧ್ಯಕ್ಷನ ಬಾಯಿಂದ ಹೊರಡುವ ತಕ್ಕ ಮಾತುಗಳಂತಿವೆಯಂತಲ್ಲಾ. ತಮ್ಮ ಸ್ಥಾನಕ್ಕೆ ರಾಜಿನಾಮೆಯಿತ್ತ ಸೆಂಥಿಲ್ ಎಂಬ ದಕ್ಷ ಅಧಿಕಾರಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ರಾಜೀನಾಮೆ ಕೊಟ್ಟರೆ, ಹಾಗಾದರೆ ನೀನು ಪಾಕಿಸ್ತಾನಕ್ಕೆ ಹೋಗು ಎನ್ನುವ ಬಿಜೆಪಿಗಳ ತಲೆಯಲ್ಲಿ ಏನಿದೆ ಎಂಬುದು ಎಲ್ಲರಿಗೂ ಮನವರಿಕೆಯಾಗುತ್ತಿದೆಯಲ್ಲಾ. ಅದೇನದರಾಗಲಿ ಸುಸಂಸ್ಕøತರ ನಾಡಾದ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತಾಗಿದೆ. ಈ ಹಿಂದೆ ಮುದುಕರ ಶೆಟ್ಟರು ನೋವು ನುಂಗಿಕೊಂಡೇ ನಿಧನರಾದರು. ಅಣ್ಣಾಮಲೈ ಯಾರನ್ನ ದೂರದೆ ಹೊರಟುಹೋದರು. ಈಗ ಸಂಧಿಲ್ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಕಾರಣ ನೀಡಿ ಹೊರಟು ಹೋಗುತ್ತಿದ್ದಾರೆ. ಇದು ದಕ್ಷಿಣ ಕನ್ನಡ ಏನಾಗಿರಬಹುದು ಎಂಬ ಸೂಚನೆಯಂತಿದೆ. ಕರ್ನಾಟಕದ ಜನ ಈ ನಾಡು ದ.ಕ ಆಗದಂತೆ ನೋಡಿಕೊಳ್ಳುವ ತುರ್ತು ಈಗ ಬಂದಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...