Homeಕರ್ನಾಟಕಮಹಿಳಾ ಮೀಸಲಾತಿ ಪುಸ್ತಕದೊಳಗಿನ ಗಂಟು ಎಂದು ತೋರಿಸಿಕೊಟ್ಟ ಗ್ರಾಮ ಪಂಚಾಯ್ತಿ ಚುನಾವಣೆ

ಮಹಿಳಾ ಮೀಸಲಾತಿ ಪುಸ್ತಕದೊಳಗಿನ ಗಂಟು ಎಂದು ತೋರಿಸಿಕೊಟ್ಟ ಗ್ರಾಮ ಪಂಚಾಯ್ತಿ ಚುನಾವಣೆ

- Advertisement -
- Advertisement -

ಹಳ್ಳಿಯ ಹುರುಪಿನ ಹುರಿಯಾಳುಗಳ ಜಟಾಪಟಿಯ ಕ್ಷೇತ್ರ ಗ್ರಾಮ ಪಂಚಾಯತ್ ಚುನಾವಣೆ. ಇಲ್ಲಿಯೂ ಕೂಡ ಹೆಣ್ಣಿನ ಸ್ಥಾನ ಕೇವಲ ಮೀಸಲಾತಿಯ ನೆಪದಲ್ಲಿ ಹೆಸರು ಮತ್ತೊಂದು ಫೋಟೋಗಷ್ಟೆ ಸೀಮಿತ.

ಈ ಚುನಾವಣೆಗಳು ಜನರನ್ನು ಭ್ರಷ್ಟರನ್ನಾಗಿ ಮಾಡುವುದಷ್ಟೆಯಲ್ಲದೆ ಪುರುಷಪ್ರಾಧಾನ್ಯತೆಯ ಝಂಡಾಗಳನ್ನು ನೆಟ್ಟು ನೀರೆರೆಯುವಲ್ಲೂ ಪ್ರಮುಖ ಪಾತ್ರ ವಹಿಸುತ್ತವೆ.

1992ರ ಪಂಚಾಯತ್ ರಾಜ್ ತಿದ್ದುಪಡಿಯಲ್ಲಿ ಮಹಿಳೆಯರಿಗೆ 1/3 ಅನುಪಾತದಲ್ಲಿ ಸ್ಥಾನಗಳು ಮೀಸಲಾಗಿದ್ದವು. ಅಂದರೆ, ಮಹಿಳೆಯರ ಸಂಖ್ಯೆಯ ಅನುಪಾತದಲ್ಲಿ ಒಟ್ಟು 1/3 ಸೀಟುಗಳು ಮೀಸಲಿರಬೇಕು ಎಂದು. ರಾಜ್ಯದಲ್ಲಿ ಎಲ್ಲಾ ಹಂತಗಳಲ್ಲಿ ಮಹಿಳೆಯರಿಗೆ ಪಂಚಾಯತ್ ಅಧ್ಯಕ್ಷ ಸ್ಥಾನಗಳಲ್ಲಿ ಮೂರನೇ ಒಂದು ಭಾಗ ಮೀಸಲಾತಿ ನೀಡಲಾಯಿತು. ಆದರೆ ಇದಕ್ಕೊಪ್ಪದ ಮಹಿಳೆಯರ ದಶಕಗಳ ಹೋರಾಟದ ಫಲವಾಗಿ ಪಂಚಾಯಿತಿ ಚುನಾವಣೆಗಳಲ್ಲಿ ಶೇ 33ರಷ್ಟು ಇದ್ದ ಮಹಿಳಾ ಮೀಸಲಾತಿ ಇನ್ನೂ ಹೆಚ್ಚಾಯಿತು. ಭಾರತ ಸರ್ಕಾರದ ಕೇಂದ್ರ ಸಚಿವ ಸಂಪುಟ 27 ಆಗಸ್ಟ್ 2009ರಲ್ಲಿ ನೀಡಲಾದ ಅನುಮೋದನೆಯ ಪ್ರಕಾರ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ಒಪ್ಪಿಗೆ ನೀಡಿತು. ಮಧ್ಯಪ್ರದೇಶ, ಬಿಹಾರ, ಉತ್ತರಾಖಂಡ್, ಹಿಮಾಚಲ ಪ್ರದೇಶ, ಆಂಧ್ರ ಪ್ರದೇಶ, ಛತ್ತೀಸ್‌ಘಡ, ಜಾರ್ಖಂಡ್, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ ಮತ್ತು ತ್ರಿಪುರದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ಅಳವಡಿಸಲಾಯಿತು.

ಮಹಾತ್ಮಗಾಂಧಿಯವರ ಕನಸು ಗ್ರಾಮ ಸ್ವರಾಜ್ ಅಂದರೆ ಹಳ್ಳಿಯ ಜನಗಳಿಗೆ ಅಧಿಕಾರ ವರ್ಗಾವಣೆ ಮಾಡುವುದು. ಅವರ ಪ್ರಕಾರ ಹಳ್ಳಿಗಳು ಸಾಕಷ್ಟು ಸ್ವಾಯತ್ತವಾಗಲು, ಪಂಚಾಯತ್ ವ್ಯವಸ್ಥೆ ಮೂಲಕ ಗ್ರಾಮಗಳು ತಮ್ಮ ಆಡಳಿತ ಮಾಡಬೇಕು ಎಂಬುದು ಅವರ ಆಶಯವಾಗಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಮತ್ತು ಸ್ಥಳೀಯ ಸ್ವಾಯತ್ತತೆಯನ್ನು ಸಮನ್ವಯಗೊಳಿಸುವ ದೃಷ್ಟಿಯಿಂದ ಭಾರತೀಯ ಸರ್ಕಾರಿ ಆಡಳಿತವು ಆಧುನಿಕ ವ್ಯವಸ್ಥೆ ತರಲು ನಿರ್ಧರಿಸಿತು. ಅತಿಯಾಗಿ ಕೇಂದ್ರೀಕೃತವಾದ ಆಡಳಿತವನ್ನು ವಿಕೇಂದ್ರೀಕೃತಗೊಳಿಸಿ ಕೆಳ ಹಂತದ ಸ್ಥಳೀಯ ವಿವಿಧ ಸಮಿತಿಗಳು ಆಡಳಿತ ನಡೆಸುವುದರ ಮೂಲಕ ಎಲ್ಲಾ ಸ್ತರದ ಜನರಿಗೆ ಅನುಕೂಲ ಮಾಡಲೆಂದೆ ತಂದದ್ದು ಈ ಪಂಚಾಯತ್ ವ್ಯವಸ್ಥೆ. ಇವೆಲ್ಲದರ ಭಾಗವಾಗಿ ಬಂದ ಮಹಿಳಾ ಮೀಸಲಾತಿಗಳು ಕೇವಲ ಪುಸ್ತಕದಲ್ಲಿವೆಯಷ್ಟೇ! ಇನ್ನುಳಿದಂತೆ ಆಡಳಿತವೆಲ್ಲ ಗಂಡ, ಮಗ ಅಥವಾ ಮನೆಯ ಇತರ ಪುರುಷರೆ ನಿಭಾಯಿಸುತ್ತಾರೆ ಎಂಬ ನಿಚ್ಚಳ ಸತ್ಯ. ಕೆಲವು ದಿನಗಳ ಮೊದಲು ನಡೆದ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ನಾನೇ ಪ್ರತ್ಯಕ್ಷವಾಗಿ ಕಂಡಂತೆ, ನಾಮಿನೇಷನ್ ಸಲ್ಲಿಕೆಯ ಸಂದರ್ಭ ಜೊತೆಗೆ ಒಂದೆರಡು ದಿನ ಚುನಾವಣೆಯ ಪ್ರಚಾರದಲ್ಲಿ ಈ ಮಹಿಳೆಯರು ಕಾಣಿಸಿಕೊಂಡರೆ ಹೊರತು ಇನ್ನುಳಿದ ಯಾವ ಪ್ರಕ್ರಿಯೆಗಳಲ್ಲೂ ಅವರ ಪಾಲು ಇಲ್ಲವೆ ಇಲ್ಲ ಎನ್ನುವಷ್ಟು ಕಡಿಮೆ.

’ಹಳ್ಳಿ ರಾಜಕೀಯ ಕಲಿತರೆ ದೆಲ್ಲಿ ರಾಜಕೀಯ ಕಲಿತಂಗೆ’ ಎಂಬ ಆಡುಮಾತಿದೆ. ರಾಜಕೀಯ ಮತ್ತು ಚುನಾವಣಾ ಪ್ರಕ್ರಿಯೆಯ ಎಲ್ಲಾ ಮಜಲುಗಳನ್ನು ತಿಳಿಯಲೇಬೇಕೆಂಬ ಕಾರಣಕ್ಕೆ ಮತ ಎಣಿಕೆಯ ಏಜೆಂಟ್ ಆಗಿಯ ನಮ್ಮ ತಾಲೂಕು ಕೇಂದ್ರದ ಮತ ಎಣಿಕೆ ನಡೆಯುತ್ತಿದ್ದ ಕಾಂಪೌಂಡಿನೊಳಗೆ ಕಾಲಿಟ್ಟರೆ ಸಾವಿರಾರು ಗಂಡಸರೆ ತುಂಬಿದ್ದ ಆ ಶಾಲಾ ಮೈದಾನದಲ್ಲಿ ಕಂಡದ್ದು ಕೇವಲ ಇಬ್ಬರು ಹೆಂಗಸರು ಮಾತ್ರ ಮತ್ತು ನಾನು ಮೂರನೆಯವಳು.

PC : Dailyhunt

ತಮಗೆ ಬಿದ್ದ ಮತಗಳ ಲೆಕ್ಕವನ್ನು ನೋಡಲು ಸಹ ಹೆಣ್ಣಿಗೆ ಅವಕಾಶವನ್ನು ನೀಡದಿರುವ ಈ ಪುರುಷ ಪ್ರಧಾನ ವ್ಯವಸ್ಥೆಯು ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವೆಂದೆ ಕರೆಯಲ್ಪಡುವ ಪಂಚಾಯಿತಿ ಚುನಾವಣೆಗಳ ಮೂಲ ಆಶಯವಾದ ಸರ್ವರಿಗು ಸಮಾನ ಹಕ್ಕುಗಳನ್ನು ಮೊಟಕುಗೊಳಿಸಿ ಹಳ್ಳಿಯ ಮಟ್ಟದಲ್ಲೆ ಹೆಣ್ಣುಮಕ್ಕಳು ರಾಜಕೀಯ ಅಭಿಲಾಷೆಗಳನ್ನು ಚಿವುಟಿ ಹಾಕುತ್ತಿವೆ.

ಸ್ತ್ರೀ ಸಬಲೀಕರಣಕ್ಕಾಗಿ ಬಂದ ಈ ಮೀಸಲಾತಿ ಹೀಗೆ ದುರುಪಯೋಗವಾಗುತ್ತಿರುವಾಗ ಇದಕ್ಕೆ ಕಡಿವಾಣ ಹಾಕಲು ಹೊಸದೊಂದು ಕಾನೂನಿನ ಅಗತ್ಯಕ್ಕಿಂತ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ತಾವೆ ದುಡಿದು ಇಡೀ ಕುಟುಂಬ ನಿರ್ವಹಿಸುವ ಹೆಂಗಸರ ಬಳಿ ಮತಯಾಚನೆ ಮಾಡಲು ಹೋದಾಗ ಮುಲಾಜಿಲ್ಲದೆ “ನಮ್ಮ ಗಂಡ ಹೇಳಿದವರಿಗೆ ನಾನು ವೋಟ್ ಹಾಕೋದು” ಎನ್ನುವಾಗ ಪುಸ್ತಕದಲ್ಲಿ ಓದಿದ ಸ್ತ್ರೀ ಸ್ವಾತಂತ್ರ್ಯ ಮತ್ತು ಆರ್ಥಿಕ ಸ್ವಾವಲಂಬನೆಯ ಎಲ್ಲಾ ಕಲ್ಪನೆಗಳು ಬುಡಮೇಲಾಗುತ್ತಿದ್ದವು.

ಎಷ್ಟೇ ಅರ್ಥ ಮಾಡಿಸಿದರೂ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವವರು 50 ಪ್ರತಿಶತ ಜನರಿಗಿಂತಲೂ ಕಡಿಮೆ. ನಂಬಲಿಕ್ಕೆ ಸಾಧ್ಯವಾದಷ್ಟು ಮೊಂಡು ಹಿಡಿಸಿಬಿಟ್ಟಿದೆ ಈ ಚುನಾವಣಾ ವ್ಯವಸ್ಥೆ.

ಸಾಮಾಜಿಕ ಕಾರ್ಯಕರ್ತೆಯಾಗಿ ರಾಜಕೀಯವನ್ನು ವಿಶ್ಲೇಷಿಸುವುದೆ ಬೇರೆ. ಸಕ್ರಿಯ ರಾಜಕಾರಣಿಯಾಗಿ ರಾಜಕೀಯದೊಳಗಿನ ರಾಜಕೀಯ ಮಾಡುವುದೆ ಬೇರೆ ಎಂಬುದನ್ನು ನನ್ನ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ದಿನದಿಂದ ಹಿಡಿದು ಮತ ಎಣಿಕೆಯ ಕೊನೆ ಘಳಿಗೆಯವರೆಗು ನಡೆದ ಬೆಳವಣಿಗೆಗಳು ಪಾಠ ಕಲಿಸಿದವು.

“ಏನ್ ಹೇಳ್ತಿರಾ ಮೇಡಮ್ ದುಡ್ಡಿಲ್ದೆ ರಾಜಕೀಯ ಮಾಡಕ್ಕಾಯ್ತದ” ಎನ್ನುತ್ತಲೆ ಮನೆ ಚಿನ್ನ ಅಡವಿಟ್ಟು ಸೈಟುಗಳನ್ನು ಮಾರಿಯಾದರು ಗೆಲ್ಲಲೆಬೇಕೆಂಬ ಜಿದ್ದಿಗೆ ಬಿದ್ದು ಜೀವನವನ್ನೆ ಹರಾಜಿಗಿಟ್ಟವರನ್ನು ಕಣ್ಣಾರೆ ಕಂಡೆ.

ಮತದಾರರನ್ನು ಅತ್ಯಂತ ನಿಕೃಷ್ಟ ಮಟ್ಟಕ್ಕೆ ಭ್ರಷ್ಟರನ್ನಾಗಿ ಮಾಡಿದ ಸಕಲ ಕೀರ್ತಿಗಳು ಈ ಹಳ್ಳಿ ರಾಜಕೀಯಕ್ಕೆ ಸಲ್ಲುತ್ತದೆ ಎಂಬುದು ’ಅಂಗೈ ಹುಣ್ಣಿಗೆ ಕನ್ನಡಿ ಬೇಕೆ’ ಎನ್ನುವ ಗಾದೆಮಾತಿನ ತಿಳಿವಳಿಕೆಯಷ್ಟೇ ಸತ್ಯ. ಹಣ, ಹೆಂಡ, ಮೂಗುಬೊಟ್ಟುಗಳ ಸುತ್ತ ನಡೆಯುವ ರಾಜಕೀಯದ ಹೊಲಸಿನ ನಡುವೆ ವ್ಯಕ್ತಿಯ ದೂರದೃಷ್ಟಿಯ ಆಶಯಗಳು ಪೇಲವವಾಗಿಬಿಡುತ್ತವೆ.

ಇದರ ನಡುವೆಯು 50-50 ಎನ್ನುವಂತೆ ಇಂದಿನ ಯುವ ಸಮುದಾಯದ ವಿವೇಚನಾಯುತ ಹೆಜ್ಜೆಗಳು ಆಶಾದಾಯಕವೆನಿಸುತ್ತವೆ.

ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲು ಹಿಂದಿನ ಯಜಮಾನಿಕೆ ಪದ್ಧತಿಯಂತೆ ತನ್ನ ಮಾತು ಕೇಳುವವರನ್ನೆ ಅಭ್ಯರ್ಥಿಗಳನ್ನಾಗಿ ಸ್ಪರ್ಧೆಗಿಳಿಸಿ, ಗೆಲ್ಲಿಸಿ ವಂಶಪಾರಂಪರ್ಯದ ಯಜಮಾನಿಕೆ ಪದ್ಧತಿಯನ್ನು ನಡೆಸಿಕೊಂಡೆ ಬರುತ್ತಿದ್ದವರಿಗೆ ಈ ಬಾರಿಯ ಚುನಾವಣೆಯಲ್ಲಿ ಪಾಠ ಕಲಿಸಿ ಅವರನ್ನು ಅಧಿಕಾರ ವಂಚಿತರನ್ನಾಗಿ ಮಾಡಲು ಯುವಕರು ಶ್ರಮಿಸಿದ್ದಾರೆ.

ಒಂದೆಡೆ ನವ ಯುವ ರಾಜಕಾರಣದ ಅಲೆ ಸಮಾಧಾನ ತಂದರೂ ಕೂಡ ಹಣದ ಹೊಳೆ, ಮಹಿಳೆಯರನ್ನು ಚುನಾವಣಾ ದಾಳಗಳಾಗಿಯಷ್ಟೆ ಬಳಸಿಕೊಳ್ಳುತ್ತಿರುವ ವ್ಯವಸ್ಥೆಯ ಬಗ್ಗೆ ವಿದ್ರಾವಕ ಕೋಪವಂತೂ ಇದ್ದೆ ಇದೆ.


ಇದನ್ನೂ ಓದಿ: ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...