Homeಕರ್ನಾಟಕಮಹಿಳಾ ಮೀಸಲಾತಿ ಪುಸ್ತಕದೊಳಗಿನ ಗಂಟು ಎಂದು ತೋರಿಸಿಕೊಟ್ಟ ಗ್ರಾಮ ಪಂಚಾಯ್ತಿ ಚುನಾವಣೆ

ಮಹಿಳಾ ಮೀಸಲಾತಿ ಪುಸ್ತಕದೊಳಗಿನ ಗಂಟು ಎಂದು ತೋರಿಸಿಕೊಟ್ಟ ಗ್ರಾಮ ಪಂಚಾಯ್ತಿ ಚುನಾವಣೆ

- Advertisement -
- Advertisement -

ಹಳ್ಳಿಯ ಹುರುಪಿನ ಹುರಿಯಾಳುಗಳ ಜಟಾಪಟಿಯ ಕ್ಷೇತ್ರ ಗ್ರಾಮ ಪಂಚಾಯತ್ ಚುನಾವಣೆ. ಇಲ್ಲಿಯೂ ಕೂಡ ಹೆಣ್ಣಿನ ಸ್ಥಾನ ಕೇವಲ ಮೀಸಲಾತಿಯ ನೆಪದಲ್ಲಿ ಹೆಸರು ಮತ್ತೊಂದು ಫೋಟೋಗಷ್ಟೆ ಸೀಮಿತ.

ಈ ಚುನಾವಣೆಗಳು ಜನರನ್ನು ಭ್ರಷ್ಟರನ್ನಾಗಿ ಮಾಡುವುದಷ್ಟೆಯಲ್ಲದೆ ಪುರುಷಪ್ರಾಧಾನ್ಯತೆಯ ಝಂಡಾಗಳನ್ನು ನೆಟ್ಟು ನೀರೆರೆಯುವಲ್ಲೂ ಪ್ರಮುಖ ಪಾತ್ರ ವಹಿಸುತ್ತವೆ.

1992ರ ಪಂಚಾಯತ್ ರಾಜ್ ತಿದ್ದುಪಡಿಯಲ್ಲಿ ಮಹಿಳೆಯರಿಗೆ 1/3 ಅನುಪಾತದಲ್ಲಿ ಸ್ಥಾನಗಳು ಮೀಸಲಾಗಿದ್ದವು. ಅಂದರೆ, ಮಹಿಳೆಯರ ಸಂಖ್ಯೆಯ ಅನುಪಾತದಲ್ಲಿ ಒಟ್ಟು 1/3 ಸೀಟುಗಳು ಮೀಸಲಿರಬೇಕು ಎಂದು. ರಾಜ್ಯದಲ್ಲಿ ಎಲ್ಲಾ ಹಂತಗಳಲ್ಲಿ ಮಹಿಳೆಯರಿಗೆ ಪಂಚಾಯತ್ ಅಧ್ಯಕ್ಷ ಸ್ಥಾನಗಳಲ್ಲಿ ಮೂರನೇ ಒಂದು ಭಾಗ ಮೀಸಲಾತಿ ನೀಡಲಾಯಿತು. ಆದರೆ ಇದಕ್ಕೊಪ್ಪದ ಮಹಿಳೆಯರ ದಶಕಗಳ ಹೋರಾಟದ ಫಲವಾಗಿ ಪಂಚಾಯಿತಿ ಚುನಾವಣೆಗಳಲ್ಲಿ ಶೇ 33ರಷ್ಟು ಇದ್ದ ಮಹಿಳಾ ಮೀಸಲಾತಿ ಇನ್ನೂ ಹೆಚ್ಚಾಯಿತು. ಭಾರತ ಸರ್ಕಾರದ ಕೇಂದ್ರ ಸಚಿವ ಸಂಪುಟ 27 ಆಗಸ್ಟ್ 2009ರಲ್ಲಿ ನೀಡಲಾದ ಅನುಮೋದನೆಯ ಪ್ರಕಾರ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ಒಪ್ಪಿಗೆ ನೀಡಿತು. ಮಧ್ಯಪ್ರದೇಶ, ಬಿಹಾರ, ಉತ್ತರಾಖಂಡ್, ಹಿಮಾಚಲ ಪ್ರದೇಶ, ಆಂಧ್ರ ಪ್ರದೇಶ, ಛತ್ತೀಸ್‌ಘಡ, ಜಾರ್ಖಂಡ್, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ ಮತ್ತು ತ್ರಿಪುರದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ಅಳವಡಿಸಲಾಯಿತು.

ಮಹಾತ್ಮಗಾಂಧಿಯವರ ಕನಸು ಗ್ರಾಮ ಸ್ವರಾಜ್ ಅಂದರೆ ಹಳ್ಳಿಯ ಜನಗಳಿಗೆ ಅಧಿಕಾರ ವರ್ಗಾವಣೆ ಮಾಡುವುದು. ಅವರ ಪ್ರಕಾರ ಹಳ್ಳಿಗಳು ಸಾಕಷ್ಟು ಸ್ವಾಯತ್ತವಾಗಲು, ಪಂಚಾಯತ್ ವ್ಯವಸ್ಥೆ ಮೂಲಕ ಗ್ರಾಮಗಳು ತಮ್ಮ ಆಡಳಿತ ಮಾಡಬೇಕು ಎಂಬುದು ಅವರ ಆಶಯವಾಗಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಮತ್ತು ಸ್ಥಳೀಯ ಸ್ವಾಯತ್ತತೆಯನ್ನು ಸಮನ್ವಯಗೊಳಿಸುವ ದೃಷ್ಟಿಯಿಂದ ಭಾರತೀಯ ಸರ್ಕಾರಿ ಆಡಳಿತವು ಆಧುನಿಕ ವ್ಯವಸ್ಥೆ ತರಲು ನಿರ್ಧರಿಸಿತು. ಅತಿಯಾಗಿ ಕೇಂದ್ರೀಕೃತವಾದ ಆಡಳಿತವನ್ನು ವಿಕೇಂದ್ರೀಕೃತಗೊಳಿಸಿ ಕೆಳ ಹಂತದ ಸ್ಥಳೀಯ ವಿವಿಧ ಸಮಿತಿಗಳು ಆಡಳಿತ ನಡೆಸುವುದರ ಮೂಲಕ ಎಲ್ಲಾ ಸ್ತರದ ಜನರಿಗೆ ಅನುಕೂಲ ಮಾಡಲೆಂದೆ ತಂದದ್ದು ಈ ಪಂಚಾಯತ್ ವ್ಯವಸ್ಥೆ. ಇವೆಲ್ಲದರ ಭಾಗವಾಗಿ ಬಂದ ಮಹಿಳಾ ಮೀಸಲಾತಿಗಳು ಕೇವಲ ಪುಸ್ತಕದಲ್ಲಿವೆಯಷ್ಟೇ! ಇನ್ನುಳಿದಂತೆ ಆಡಳಿತವೆಲ್ಲ ಗಂಡ, ಮಗ ಅಥವಾ ಮನೆಯ ಇತರ ಪುರುಷರೆ ನಿಭಾಯಿಸುತ್ತಾರೆ ಎಂಬ ನಿಚ್ಚಳ ಸತ್ಯ. ಕೆಲವು ದಿನಗಳ ಮೊದಲು ನಡೆದ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ನಾನೇ ಪ್ರತ್ಯಕ್ಷವಾಗಿ ಕಂಡಂತೆ, ನಾಮಿನೇಷನ್ ಸಲ್ಲಿಕೆಯ ಸಂದರ್ಭ ಜೊತೆಗೆ ಒಂದೆರಡು ದಿನ ಚುನಾವಣೆಯ ಪ್ರಚಾರದಲ್ಲಿ ಈ ಮಹಿಳೆಯರು ಕಾಣಿಸಿಕೊಂಡರೆ ಹೊರತು ಇನ್ನುಳಿದ ಯಾವ ಪ್ರಕ್ರಿಯೆಗಳಲ್ಲೂ ಅವರ ಪಾಲು ಇಲ್ಲವೆ ಇಲ್ಲ ಎನ್ನುವಷ್ಟು ಕಡಿಮೆ.

’ಹಳ್ಳಿ ರಾಜಕೀಯ ಕಲಿತರೆ ದೆಲ್ಲಿ ರಾಜಕೀಯ ಕಲಿತಂಗೆ’ ಎಂಬ ಆಡುಮಾತಿದೆ. ರಾಜಕೀಯ ಮತ್ತು ಚುನಾವಣಾ ಪ್ರಕ್ರಿಯೆಯ ಎಲ್ಲಾ ಮಜಲುಗಳನ್ನು ತಿಳಿಯಲೇಬೇಕೆಂಬ ಕಾರಣಕ್ಕೆ ಮತ ಎಣಿಕೆಯ ಏಜೆಂಟ್ ಆಗಿಯ ನಮ್ಮ ತಾಲೂಕು ಕೇಂದ್ರದ ಮತ ಎಣಿಕೆ ನಡೆಯುತ್ತಿದ್ದ ಕಾಂಪೌಂಡಿನೊಳಗೆ ಕಾಲಿಟ್ಟರೆ ಸಾವಿರಾರು ಗಂಡಸರೆ ತುಂಬಿದ್ದ ಆ ಶಾಲಾ ಮೈದಾನದಲ್ಲಿ ಕಂಡದ್ದು ಕೇವಲ ಇಬ್ಬರು ಹೆಂಗಸರು ಮಾತ್ರ ಮತ್ತು ನಾನು ಮೂರನೆಯವಳು.

PC : Dailyhunt

ತಮಗೆ ಬಿದ್ದ ಮತಗಳ ಲೆಕ್ಕವನ್ನು ನೋಡಲು ಸಹ ಹೆಣ್ಣಿಗೆ ಅವಕಾಶವನ್ನು ನೀಡದಿರುವ ಈ ಪುರುಷ ಪ್ರಧಾನ ವ್ಯವಸ್ಥೆಯು ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವೆಂದೆ ಕರೆಯಲ್ಪಡುವ ಪಂಚಾಯಿತಿ ಚುನಾವಣೆಗಳ ಮೂಲ ಆಶಯವಾದ ಸರ್ವರಿಗು ಸಮಾನ ಹಕ್ಕುಗಳನ್ನು ಮೊಟಕುಗೊಳಿಸಿ ಹಳ್ಳಿಯ ಮಟ್ಟದಲ್ಲೆ ಹೆಣ್ಣುಮಕ್ಕಳು ರಾಜಕೀಯ ಅಭಿಲಾಷೆಗಳನ್ನು ಚಿವುಟಿ ಹಾಕುತ್ತಿವೆ.

ಸ್ತ್ರೀ ಸಬಲೀಕರಣಕ್ಕಾಗಿ ಬಂದ ಈ ಮೀಸಲಾತಿ ಹೀಗೆ ದುರುಪಯೋಗವಾಗುತ್ತಿರುವಾಗ ಇದಕ್ಕೆ ಕಡಿವಾಣ ಹಾಕಲು ಹೊಸದೊಂದು ಕಾನೂನಿನ ಅಗತ್ಯಕ್ಕಿಂತ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ತಾವೆ ದುಡಿದು ಇಡೀ ಕುಟುಂಬ ನಿರ್ವಹಿಸುವ ಹೆಂಗಸರ ಬಳಿ ಮತಯಾಚನೆ ಮಾಡಲು ಹೋದಾಗ ಮುಲಾಜಿಲ್ಲದೆ “ನಮ್ಮ ಗಂಡ ಹೇಳಿದವರಿಗೆ ನಾನು ವೋಟ್ ಹಾಕೋದು” ಎನ್ನುವಾಗ ಪುಸ್ತಕದಲ್ಲಿ ಓದಿದ ಸ್ತ್ರೀ ಸ್ವಾತಂತ್ರ್ಯ ಮತ್ತು ಆರ್ಥಿಕ ಸ್ವಾವಲಂಬನೆಯ ಎಲ್ಲಾ ಕಲ್ಪನೆಗಳು ಬುಡಮೇಲಾಗುತ್ತಿದ್ದವು.

ಎಷ್ಟೇ ಅರ್ಥ ಮಾಡಿಸಿದರೂ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವವರು 50 ಪ್ರತಿಶತ ಜನರಿಗಿಂತಲೂ ಕಡಿಮೆ. ನಂಬಲಿಕ್ಕೆ ಸಾಧ್ಯವಾದಷ್ಟು ಮೊಂಡು ಹಿಡಿಸಿಬಿಟ್ಟಿದೆ ಈ ಚುನಾವಣಾ ವ್ಯವಸ್ಥೆ.

ಸಾಮಾಜಿಕ ಕಾರ್ಯಕರ್ತೆಯಾಗಿ ರಾಜಕೀಯವನ್ನು ವಿಶ್ಲೇಷಿಸುವುದೆ ಬೇರೆ. ಸಕ್ರಿಯ ರಾಜಕಾರಣಿಯಾಗಿ ರಾಜಕೀಯದೊಳಗಿನ ರಾಜಕೀಯ ಮಾಡುವುದೆ ಬೇರೆ ಎಂಬುದನ್ನು ನನ್ನ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ದಿನದಿಂದ ಹಿಡಿದು ಮತ ಎಣಿಕೆಯ ಕೊನೆ ಘಳಿಗೆಯವರೆಗು ನಡೆದ ಬೆಳವಣಿಗೆಗಳು ಪಾಠ ಕಲಿಸಿದವು.

“ಏನ್ ಹೇಳ್ತಿರಾ ಮೇಡಮ್ ದುಡ್ಡಿಲ್ದೆ ರಾಜಕೀಯ ಮಾಡಕ್ಕಾಯ್ತದ” ಎನ್ನುತ್ತಲೆ ಮನೆ ಚಿನ್ನ ಅಡವಿಟ್ಟು ಸೈಟುಗಳನ್ನು ಮಾರಿಯಾದರು ಗೆಲ್ಲಲೆಬೇಕೆಂಬ ಜಿದ್ದಿಗೆ ಬಿದ್ದು ಜೀವನವನ್ನೆ ಹರಾಜಿಗಿಟ್ಟವರನ್ನು ಕಣ್ಣಾರೆ ಕಂಡೆ.

ಮತದಾರರನ್ನು ಅತ್ಯಂತ ನಿಕೃಷ್ಟ ಮಟ್ಟಕ್ಕೆ ಭ್ರಷ್ಟರನ್ನಾಗಿ ಮಾಡಿದ ಸಕಲ ಕೀರ್ತಿಗಳು ಈ ಹಳ್ಳಿ ರಾಜಕೀಯಕ್ಕೆ ಸಲ್ಲುತ್ತದೆ ಎಂಬುದು ’ಅಂಗೈ ಹುಣ್ಣಿಗೆ ಕನ್ನಡಿ ಬೇಕೆ’ ಎನ್ನುವ ಗಾದೆಮಾತಿನ ತಿಳಿವಳಿಕೆಯಷ್ಟೇ ಸತ್ಯ. ಹಣ, ಹೆಂಡ, ಮೂಗುಬೊಟ್ಟುಗಳ ಸುತ್ತ ನಡೆಯುವ ರಾಜಕೀಯದ ಹೊಲಸಿನ ನಡುವೆ ವ್ಯಕ್ತಿಯ ದೂರದೃಷ್ಟಿಯ ಆಶಯಗಳು ಪೇಲವವಾಗಿಬಿಡುತ್ತವೆ.

ಇದರ ನಡುವೆಯು 50-50 ಎನ್ನುವಂತೆ ಇಂದಿನ ಯುವ ಸಮುದಾಯದ ವಿವೇಚನಾಯುತ ಹೆಜ್ಜೆಗಳು ಆಶಾದಾಯಕವೆನಿಸುತ್ತವೆ.

ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲು ಹಿಂದಿನ ಯಜಮಾನಿಕೆ ಪದ್ಧತಿಯಂತೆ ತನ್ನ ಮಾತು ಕೇಳುವವರನ್ನೆ ಅಭ್ಯರ್ಥಿಗಳನ್ನಾಗಿ ಸ್ಪರ್ಧೆಗಿಳಿಸಿ, ಗೆಲ್ಲಿಸಿ ವಂಶಪಾರಂಪರ್ಯದ ಯಜಮಾನಿಕೆ ಪದ್ಧತಿಯನ್ನು ನಡೆಸಿಕೊಂಡೆ ಬರುತ್ತಿದ್ದವರಿಗೆ ಈ ಬಾರಿಯ ಚುನಾವಣೆಯಲ್ಲಿ ಪಾಠ ಕಲಿಸಿ ಅವರನ್ನು ಅಧಿಕಾರ ವಂಚಿತರನ್ನಾಗಿ ಮಾಡಲು ಯುವಕರು ಶ್ರಮಿಸಿದ್ದಾರೆ.

ಒಂದೆಡೆ ನವ ಯುವ ರಾಜಕಾರಣದ ಅಲೆ ಸಮಾಧಾನ ತಂದರೂ ಕೂಡ ಹಣದ ಹೊಳೆ, ಮಹಿಳೆಯರನ್ನು ಚುನಾವಣಾ ದಾಳಗಳಾಗಿಯಷ್ಟೆ ಬಳಸಿಕೊಳ್ಳುತ್ತಿರುವ ವ್ಯವಸ್ಥೆಯ ಬಗ್ಗೆ ವಿದ್ರಾವಕ ಕೋಪವಂತೂ ಇದ್ದೆ ಇದೆ.


ಇದನ್ನೂ ಓದಿ: ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...