Homeಕರ್ನಾಟಕಮಹಿಳಾ ಮೀಸಲಾತಿ ಪುಸ್ತಕದೊಳಗಿನ ಗಂಟು ಎಂದು ತೋರಿಸಿಕೊಟ್ಟ ಗ್ರಾಮ ಪಂಚಾಯ್ತಿ ಚುನಾವಣೆ

ಮಹಿಳಾ ಮೀಸಲಾತಿ ಪುಸ್ತಕದೊಳಗಿನ ಗಂಟು ಎಂದು ತೋರಿಸಿಕೊಟ್ಟ ಗ್ರಾಮ ಪಂಚಾಯ್ತಿ ಚುನಾವಣೆ

- Advertisement -
- Advertisement -

ಹಳ್ಳಿಯ ಹುರುಪಿನ ಹುರಿಯಾಳುಗಳ ಜಟಾಪಟಿಯ ಕ್ಷೇತ್ರ ಗ್ರಾಮ ಪಂಚಾಯತ್ ಚುನಾವಣೆ. ಇಲ್ಲಿಯೂ ಕೂಡ ಹೆಣ್ಣಿನ ಸ್ಥಾನ ಕೇವಲ ಮೀಸಲಾತಿಯ ನೆಪದಲ್ಲಿ ಹೆಸರು ಮತ್ತೊಂದು ಫೋಟೋಗಷ್ಟೆ ಸೀಮಿತ.

ಈ ಚುನಾವಣೆಗಳು ಜನರನ್ನು ಭ್ರಷ್ಟರನ್ನಾಗಿ ಮಾಡುವುದಷ್ಟೆಯಲ್ಲದೆ ಪುರುಷಪ್ರಾಧಾನ್ಯತೆಯ ಝಂಡಾಗಳನ್ನು ನೆಟ್ಟು ನೀರೆರೆಯುವಲ್ಲೂ ಪ್ರಮುಖ ಪಾತ್ರ ವಹಿಸುತ್ತವೆ.

1992ರ ಪಂಚಾಯತ್ ರಾಜ್ ತಿದ್ದುಪಡಿಯಲ್ಲಿ ಮಹಿಳೆಯರಿಗೆ 1/3 ಅನುಪಾತದಲ್ಲಿ ಸ್ಥಾನಗಳು ಮೀಸಲಾಗಿದ್ದವು. ಅಂದರೆ, ಮಹಿಳೆಯರ ಸಂಖ್ಯೆಯ ಅನುಪಾತದಲ್ಲಿ ಒಟ್ಟು 1/3 ಸೀಟುಗಳು ಮೀಸಲಿರಬೇಕು ಎಂದು. ರಾಜ್ಯದಲ್ಲಿ ಎಲ್ಲಾ ಹಂತಗಳಲ್ಲಿ ಮಹಿಳೆಯರಿಗೆ ಪಂಚಾಯತ್ ಅಧ್ಯಕ್ಷ ಸ್ಥಾನಗಳಲ್ಲಿ ಮೂರನೇ ಒಂದು ಭಾಗ ಮೀಸಲಾತಿ ನೀಡಲಾಯಿತು. ಆದರೆ ಇದಕ್ಕೊಪ್ಪದ ಮಹಿಳೆಯರ ದಶಕಗಳ ಹೋರಾಟದ ಫಲವಾಗಿ ಪಂಚಾಯಿತಿ ಚುನಾವಣೆಗಳಲ್ಲಿ ಶೇ 33ರಷ್ಟು ಇದ್ದ ಮಹಿಳಾ ಮೀಸಲಾತಿ ಇನ್ನೂ ಹೆಚ್ಚಾಯಿತು. ಭಾರತ ಸರ್ಕಾರದ ಕೇಂದ್ರ ಸಚಿವ ಸಂಪುಟ 27 ಆಗಸ್ಟ್ 2009ರಲ್ಲಿ ನೀಡಲಾದ ಅನುಮೋದನೆಯ ಪ್ರಕಾರ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ಒಪ್ಪಿಗೆ ನೀಡಿತು. ಮಧ್ಯಪ್ರದೇಶ, ಬಿಹಾರ, ಉತ್ತರಾಖಂಡ್, ಹಿಮಾಚಲ ಪ್ರದೇಶ, ಆಂಧ್ರ ಪ್ರದೇಶ, ಛತ್ತೀಸ್‌ಘಡ, ಜಾರ್ಖಂಡ್, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ ಮತ್ತು ತ್ರಿಪುರದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ಅಳವಡಿಸಲಾಯಿತು.

ಮಹಾತ್ಮಗಾಂಧಿಯವರ ಕನಸು ಗ್ರಾಮ ಸ್ವರಾಜ್ ಅಂದರೆ ಹಳ್ಳಿಯ ಜನಗಳಿಗೆ ಅಧಿಕಾರ ವರ್ಗಾವಣೆ ಮಾಡುವುದು. ಅವರ ಪ್ರಕಾರ ಹಳ್ಳಿಗಳು ಸಾಕಷ್ಟು ಸ್ವಾಯತ್ತವಾಗಲು, ಪಂಚಾಯತ್ ವ್ಯವಸ್ಥೆ ಮೂಲಕ ಗ್ರಾಮಗಳು ತಮ್ಮ ಆಡಳಿತ ಮಾಡಬೇಕು ಎಂಬುದು ಅವರ ಆಶಯವಾಗಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಮತ್ತು ಸ್ಥಳೀಯ ಸ್ವಾಯತ್ತತೆಯನ್ನು ಸಮನ್ವಯಗೊಳಿಸುವ ದೃಷ್ಟಿಯಿಂದ ಭಾರತೀಯ ಸರ್ಕಾರಿ ಆಡಳಿತವು ಆಧುನಿಕ ವ್ಯವಸ್ಥೆ ತರಲು ನಿರ್ಧರಿಸಿತು. ಅತಿಯಾಗಿ ಕೇಂದ್ರೀಕೃತವಾದ ಆಡಳಿತವನ್ನು ವಿಕೇಂದ್ರೀಕೃತಗೊಳಿಸಿ ಕೆಳ ಹಂತದ ಸ್ಥಳೀಯ ವಿವಿಧ ಸಮಿತಿಗಳು ಆಡಳಿತ ನಡೆಸುವುದರ ಮೂಲಕ ಎಲ್ಲಾ ಸ್ತರದ ಜನರಿಗೆ ಅನುಕೂಲ ಮಾಡಲೆಂದೆ ತಂದದ್ದು ಈ ಪಂಚಾಯತ್ ವ್ಯವಸ್ಥೆ. ಇವೆಲ್ಲದರ ಭಾಗವಾಗಿ ಬಂದ ಮಹಿಳಾ ಮೀಸಲಾತಿಗಳು ಕೇವಲ ಪುಸ್ತಕದಲ್ಲಿವೆಯಷ್ಟೇ! ಇನ್ನುಳಿದಂತೆ ಆಡಳಿತವೆಲ್ಲ ಗಂಡ, ಮಗ ಅಥವಾ ಮನೆಯ ಇತರ ಪುರುಷರೆ ನಿಭಾಯಿಸುತ್ತಾರೆ ಎಂಬ ನಿಚ್ಚಳ ಸತ್ಯ. ಕೆಲವು ದಿನಗಳ ಮೊದಲು ನಡೆದ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ನಾನೇ ಪ್ರತ್ಯಕ್ಷವಾಗಿ ಕಂಡಂತೆ, ನಾಮಿನೇಷನ್ ಸಲ್ಲಿಕೆಯ ಸಂದರ್ಭ ಜೊತೆಗೆ ಒಂದೆರಡು ದಿನ ಚುನಾವಣೆಯ ಪ್ರಚಾರದಲ್ಲಿ ಈ ಮಹಿಳೆಯರು ಕಾಣಿಸಿಕೊಂಡರೆ ಹೊರತು ಇನ್ನುಳಿದ ಯಾವ ಪ್ರಕ್ರಿಯೆಗಳಲ್ಲೂ ಅವರ ಪಾಲು ಇಲ್ಲವೆ ಇಲ್ಲ ಎನ್ನುವಷ್ಟು ಕಡಿಮೆ.

’ಹಳ್ಳಿ ರಾಜಕೀಯ ಕಲಿತರೆ ದೆಲ್ಲಿ ರಾಜಕೀಯ ಕಲಿತಂಗೆ’ ಎಂಬ ಆಡುಮಾತಿದೆ. ರಾಜಕೀಯ ಮತ್ತು ಚುನಾವಣಾ ಪ್ರಕ್ರಿಯೆಯ ಎಲ್ಲಾ ಮಜಲುಗಳನ್ನು ತಿಳಿಯಲೇಬೇಕೆಂಬ ಕಾರಣಕ್ಕೆ ಮತ ಎಣಿಕೆಯ ಏಜೆಂಟ್ ಆಗಿಯ ನಮ್ಮ ತಾಲೂಕು ಕೇಂದ್ರದ ಮತ ಎಣಿಕೆ ನಡೆಯುತ್ತಿದ್ದ ಕಾಂಪೌಂಡಿನೊಳಗೆ ಕಾಲಿಟ್ಟರೆ ಸಾವಿರಾರು ಗಂಡಸರೆ ತುಂಬಿದ್ದ ಆ ಶಾಲಾ ಮೈದಾನದಲ್ಲಿ ಕಂಡದ್ದು ಕೇವಲ ಇಬ್ಬರು ಹೆಂಗಸರು ಮಾತ್ರ ಮತ್ತು ನಾನು ಮೂರನೆಯವಳು.

PC : Dailyhunt

ತಮಗೆ ಬಿದ್ದ ಮತಗಳ ಲೆಕ್ಕವನ್ನು ನೋಡಲು ಸಹ ಹೆಣ್ಣಿಗೆ ಅವಕಾಶವನ್ನು ನೀಡದಿರುವ ಈ ಪುರುಷ ಪ್ರಧಾನ ವ್ಯವಸ್ಥೆಯು ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವೆಂದೆ ಕರೆಯಲ್ಪಡುವ ಪಂಚಾಯಿತಿ ಚುನಾವಣೆಗಳ ಮೂಲ ಆಶಯವಾದ ಸರ್ವರಿಗು ಸಮಾನ ಹಕ್ಕುಗಳನ್ನು ಮೊಟಕುಗೊಳಿಸಿ ಹಳ್ಳಿಯ ಮಟ್ಟದಲ್ಲೆ ಹೆಣ್ಣುಮಕ್ಕಳು ರಾಜಕೀಯ ಅಭಿಲಾಷೆಗಳನ್ನು ಚಿವುಟಿ ಹಾಕುತ್ತಿವೆ.

ಸ್ತ್ರೀ ಸಬಲೀಕರಣಕ್ಕಾಗಿ ಬಂದ ಈ ಮೀಸಲಾತಿ ಹೀಗೆ ದುರುಪಯೋಗವಾಗುತ್ತಿರುವಾಗ ಇದಕ್ಕೆ ಕಡಿವಾಣ ಹಾಕಲು ಹೊಸದೊಂದು ಕಾನೂನಿನ ಅಗತ್ಯಕ್ಕಿಂತ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ತಾವೆ ದುಡಿದು ಇಡೀ ಕುಟುಂಬ ನಿರ್ವಹಿಸುವ ಹೆಂಗಸರ ಬಳಿ ಮತಯಾಚನೆ ಮಾಡಲು ಹೋದಾಗ ಮುಲಾಜಿಲ್ಲದೆ “ನಮ್ಮ ಗಂಡ ಹೇಳಿದವರಿಗೆ ನಾನು ವೋಟ್ ಹಾಕೋದು” ಎನ್ನುವಾಗ ಪುಸ್ತಕದಲ್ಲಿ ಓದಿದ ಸ್ತ್ರೀ ಸ್ವಾತಂತ್ರ್ಯ ಮತ್ತು ಆರ್ಥಿಕ ಸ್ವಾವಲಂಬನೆಯ ಎಲ್ಲಾ ಕಲ್ಪನೆಗಳು ಬುಡಮೇಲಾಗುತ್ತಿದ್ದವು.

ಎಷ್ಟೇ ಅರ್ಥ ಮಾಡಿಸಿದರೂ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವವರು 50 ಪ್ರತಿಶತ ಜನರಿಗಿಂತಲೂ ಕಡಿಮೆ. ನಂಬಲಿಕ್ಕೆ ಸಾಧ್ಯವಾದಷ್ಟು ಮೊಂಡು ಹಿಡಿಸಿಬಿಟ್ಟಿದೆ ಈ ಚುನಾವಣಾ ವ್ಯವಸ್ಥೆ.

ಸಾಮಾಜಿಕ ಕಾರ್ಯಕರ್ತೆಯಾಗಿ ರಾಜಕೀಯವನ್ನು ವಿಶ್ಲೇಷಿಸುವುದೆ ಬೇರೆ. ಸಕ್ರಿಯ ರಾಜಕಾರಣಿಯಾಗಿ ರಾಜಕೀಯದೊಳಗಿನ ರಾಜಕೀಯ ಮಾಡುವುದೆ ಬೇರೆ ಎಂಬುದನ್ನು ನನ್ನ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ದಿನದಿಂದ ಹಿಡಿದು ಮತ ಎಣಿಕೆಯ ಕೊನೆ ಘಳಿಗೆಯವರೆಗು ನಡೆದ ಬೆಳವಣಿಗೆಗಳು ಪಾಠ ಕಲಿಸಿದವು.

“ಏನ್ ಹೇಳ್ತಿರಾ ಮೇಡಮ್ ದುಡ್ಡಿಲ್ದೆ ರಾಜಕೀಯ ಮಾಡಕ್ಕಾಯ್ತದ” ಎನ್ನುತ್ತಲೆ ಮನೆ ಚಿನ್ನ ಅಡವಿಟ್ಟು ಸೈಟುಗಳನ್ನು ಮಾರಿಯಾದರು ಗೆಲ್ಲಲೆಬೇಕೆಂಬ ಜಿದ್ದಿಗೆ ಬಿದ್ದು ಜೀವನವನ್ನೆ ಹರಾಜಿಗಿಟ್ಟವರನ್ನು ಕಣ್ಣಾರೆ ಕಂಡೆ.

ಮತದಾರರನ್ನು ಅತ್ಯಂತ ನಿಕೃಷ್ಟ ಮಟ್ಟಕ್ಕೆ ಭ್ರಷ್ಟರನ್ನಾಗಿ ಮಾಡಿದ ಸಕಲ ಕೀರ್ತಿಗಳು ಈ ಹಳ್ಳಿ ರಾಜಕೀಯಕ್ಕೆ ಸಲ್ಲುತ್ತದೆ ಎಂಬುದು ’ಅಂಗೈ ಹುಣ್ಣಿಗೆ ಕನ್ನಡಿ ಬೇಕೆ’ ಎನ್ನುವ ಗಾದೆಮಾತಿನ ತಿಳಿವಳಿಕೆಯಷ್ಟೇ ಸತ್ಯ. ಹಣ, ಹೆಂಡ, ಮೂಗುಬೊಟ್ಟುಗಳ ಸುತ್ತ ನಡೆಯುವ ರಾಜಕೀಯದ ಹೊಲಸಿನ ನಡುವೆ ವ್ಯಕ್ತಿಯ ದೂರದೃಷ್ಟಿಯ ಆಶಯಗಳು ಪೇಲವವಾಗಿಬಿಡುತ್ತವೆ.

ಇದರ ನಡುವೆಯು 50-50 ಎನ್ನುವಂತೆ ಇಂದಿನ ಯುವ ಸಮುದಾಯದ ವಿವೇಚನಾಯುತ ಹೆಜ್ಜೆಗಳು ಆಶಾದಾಯಕವೆನಿಸುತ್ತವೆ.

ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲು ಹಿಂದಿನ ಯಜಮಾನಿಕೆ ಪದ್ಧತಿಯಂತೆ ತನ್ನ ಮಾತು ಕೇಳುವವರನ್ನೆ ಅಭ್ಯರ್ಥಿಗಳನ್ನಾಗಿ ಸ್ಪರ್ಧೆಗಿಳಿಸಿ, ಗೆಲ್ಲಿಸಿ ವಂಶಪಾರಂಪರ್ಯದ ಯಜಮಾನಿಕೆ ಪದ್ಧತಿಯನ್ನು ನಡೆಸಿಕೊಂಡೆ ಬರುತ್ತಿದ್ದವರಿಗೆ ಈ ಬಾರಿಯ ಚುನಾವಣೆಯಲ್ಲಿ ಪಾಠ ಕಲಿಸಿ ಅವರನ್ನು ಅಧಿಕಾರ ವಂಚಿತರನ್ನಾಗಿ ಮಾಡಲು ಯುವಕರು ಶ್ರಮಿಸಿದ್ದಾರೆ.

ಒಂದೆಡೆ ನವ ಯುವ ರಾಜಕಾರಣದ ಅಲೆ ಸಮಾಧಾನ ತಂದರೂ ಕೂಡ ಹಣದ ಹೊಳೆ, ಮಹಿಳೆಯರನ್ನು ಚುನಾವಣಾ ದಾಳಗಳಾಗಿಯಷ್ಟೆ ಬಳಸಿಕೊಳ್ಳುತ್ತಿರುವ ವ್ಯವಸ್ಥೆಯ ಬಗ್ಗೆ ವಿದ್ರಾವಕ ಕೋಪವಂತೂ ಇದ್ದೆ ಇದೆ.


ಇದನ್ನೂ ಓದಿ: ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...