Homeಮುಖಪುಟಛತ್ತೀಸ್‌ಗಢ | 'ಹಸ್‌ದೇವ್ ಅರಣ್ಯ'ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಅದಾನಿ ಜೊತೆಗಿನ ಎರಡನೇ ಹಂತದ ಕಲ್ಲಿದ್ದಲು ಗಣಿಗಾರಿಕೆಗೆ ಅರಣ್ಯ ನಾಶ

- Advertisement -
- Advertisement -

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ ಬಳಿ ಮರಗಳನ್ನು ಕಡಿಯಲು ಸರ್ಕಾರ ಗುರುವಾರ ಮುಂದಾಗಿತ್ತು. ಇದಕ್ಕೆ ಸ್ಥಳೀಯ ಆದಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್‌ದೇವ್ ಅರಣ್ಯ ವ್ಯಾಪ್ತಿಯ ಆರು ಗ್ರಾಮಗಳ ಸುತ್ತಮುತ್ತಲಿನ ಸುಮಾರು 5,000 ಮರಗಳನ್ನು ಕಡಿಯಲು ನಿರ್ಧರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಗುರುವಾರ ಮರಗಳನ್ನು ಕಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುತ್ತಾರೆ ಎಂದು ತಿಳಿದ ಸ್ಥಳೀಯರು, ಬುಧವಾರ ರಾತ್ರಿಯಿಂದಲೇ ಉದ್ದೇಶಿತ ಮರ ಕಡಿಯುವ ಸ್ಥಳದಲ್ಲಿ ಜಮಾಯಿಸಿದ್ದರು. ಅವರನ್ನು ತಡೆಯಲು ಸುಮಾರು 400 ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳೀಯರು ದೊಣ್ಣೆ, ಕತ್ತಿ, ಬಾಣ ಮತ್ತು ಕೊಡಲಿಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂಬ ಆರೋಪವನ್ನು ಸುರ್ಗುಜಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್ ನಿರಾಕರಿಸಿದ್ದಾರೆ. “ಗ್ರಾಮಸ್ಥರು ಹಿಂಸಾತ್ಮಕವಾಗಿ ನಮ್ಮ ಮೇಲೆ ಹಲ್ಲೆ ನಡೆಸಿದರು. ಅವರನ್ನು ಎದುರಿಸಲು ಮತ್ತು ಸ್ಥಳದಿಂದ ಚದುರಿಸಲು ನಾವು ಪ್ರತಿಕ್ರಿಯಿಸಿದ್ದೇವೆ” ಎಂದಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಭೋಲಾರಾಮ್ ರಾಜ್‌ವಾಡೆ ಅವರ ಕಾಲಿಗೆ ಸ್ಥಳೀಯರು ಬಾಣ ಬಿಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಹಸ್‌ದೇವ್ ಅರಣ್ಯದಲ್ಲಿ ಪೊಲೀಸ್ ಬಲವನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಆದಿವಾಸಿಗಳ ಅರಣ್ಯ ಮತ್ತು ಭೂಮಿಯನ್ನು ಬಲವಂತವಾಗಿ ಕಬಳಿಸುವ ಪ್ರಯತ್ನವು ಆದಿವಾಸಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಸ್‌ದೇವ್ ಅರಣ್ಯದಲ್ಲಿ ಮರಗಳನ್ನು ಕಡಿಯದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸರ್ವಾನುಮತ ಎಂದರೆ ಅದಕ್ಕೆ ಬಿಜೆಪಿ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಅಧಿಕಾರಕ್ಕೆ ಬಂದ ತಕ್ಷಣ ಬಿಜೆಪಿ ನಿರ್ಣಯವನ್ನು ಮರೆತಿದೆ. ಹಸ್‌ದೇವ್‌ನ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ” ಎಂದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಶತಮಾನಗಳಿಂದ ಅರಣ್ಯಗಳ ಮಾಲೀಕರಾಗಿರುವ ಆದಿವಾಸಿಗಳನ್ನು ಅದಾನಿಯ ಗಣಿಗಾಗಿ ಹೊರಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಕಲ್ಲಿದ್ದಲು ಗಣಿಗಾರಿಕೆ? 

ದಶಕದ ಹಿಂದೆ ಹಸ್‌ದೇವ್ ಅರಣ್ಯದಲ್ಲಿ ಸುಮಾರು 5 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪವಿದೆ ಎಂಬ ಮಾಹಿತಿ ಬಯಲಾಗಿತ್ತು. ಆಗಲೇ ಅದಾನಿಯಂತಹ ಕಂಪನಿಗಳ ಕಣ್ಣು ದಟ್ಟ ಅರಣ್ಯದ ಮೇಲೆ ಬಿದ್ದಿತ್ತು. ಅಂದುಕೊಂಡಂತೆ ಅರಣ್ಯ ಪ್ರದೇಶದಲ್ಲಿ ಸುಮಾರು 23 ಕಲ್ಲಿದ್ದಲು ಗಣಿಗಳು ಪ್ರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಈ ಪೈಕಿ ಐದು ಗಣಿಗಳು ಈಗಾಗಲೇ ಕಾರ್ಯ ನಿರ್ವಹಣೆಯ ವಿವಿಧ ಹಂತಗಳಲ್ಲಿವೆ.

2023ರಲ್ಲಿ ಹಸ್‌ದೇವ್ ಅರಣ್ಯದ ಮಧ್ಯದಲ್ಲಿ ಒಂದು ಗಣಿಯು ಕಾರ್ಯಾರಂಭ ಮಾಡಿದೆ. ಅದಕ್ಕೆ ಪಾರ್ಸಾ ಈಸ್ಟ್ ಕೇಟೆ ಬಸನ್ (ಪಿಇಕೆಬಿ) ಎಂದು ಹೆಸರಿಸಲಾಗಿದೆ. ರಾಜಸ್ಥಾನ ರಾಜ್ಯ ಸರ್ಕಾರದ ವಿದ್ಯುತ್ ಉತ್ಪಾದನಾ ಕಂಪನಿಯಾದ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RVUNL) ಒಡೆತನ ಈ ಗಣಿಯಿಂದ ಕಲ್ಲಿದ್ದಲು ತೆಗೆಯುವ ಪ್ರಕ್ರಿಯೆಯನ್ನು ಅದಾನಿ ಕಂಪನಿಗೆ ಕೊಡಲಾಗಿದೆ. ಹೆಸರಿಗೆ ರಾಜಸ್ತಾನ ವಿದ್ಯುತ್ ನಿಗಮದ ಒಡೆತನ ಮಾಲೀಕತ್ವ ಇದ್ದರೂ, ಗಣಿಗಾರಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ಅದಾನಿ ಕಂಪನಿ ಮಾಡುತ್ತಿದೆ. 2026ರ ಹೊತ್ತಿಗೆ ಈ ಗಣಿಯ ಕಲ್ಲಿದ್ದಲು ಮುಗಿಯುವ ಸಾಧ್ಯತೆ ಇದೆ.

2020ರಲ್ಲಿ, ರಾಜಸ್ಥಾನ ವಿದ್ಯುತ್ ನಿಗಮ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಪಿಇಕೆಬಿಯಲ್ಲಿ ಕಲ್ಲಿದ್ದಲು ವೇಗವಾಗಿ ಕ್ಷೀಣಿಸುತ್ತಿದೆ. ಹಾಗಾಗಿ, ಎರಡನೇ ಹಂತದ ಗಣಿಗಾರಿಕೆ ಆರಂಭಕ್ಕೆ ಅನುಮೋದನೆ ಕೋರಿತ್ತು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ 2022ರಲ್ಲಿ ಎರಡನೇ ಹಂತದ ಗಣಿಗಾರಿಕೆಗೆ ಅನುಮೋದನೆ ನೀಡಲಾಗಿದೆ. ಈಗ ಗಣಿಗಾರಿಕೆ ಪ್ರಾರಂಭಿಸಲು ಮರಗಳನ್ನು ಕಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳಿದ್ದಂತೆ ಉತ್ತರ ಭಾರತದಲ್ಲಿ ಹಸ್‌ದೇವ್ ಅರಣ್ಯವಿದೆ. ಅದನ್ನು ಉತ್ತರದ ‘ಶ್ವಾಸಕೋಸ’ ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆದಿವಾಸಿಗಳು ಮತ್ತು ಸಾವಿರಾರು ವನ್ಯ ಜೀವಿಗಳ ನೆಲೆಯಾಗಿರುವ ಈ ಅರಣ್ಯವನ್ನು ಆದಿವಾಸಿಗಳು ‘ಪೂಜ್ಯನೀಯವಾಗಿ’ ಕಾಣುತ್ತಾರೆ. ಅಂತಹ ಅರಣ್ಯದ ನಾಶಕ್ಕೆ ಸರ್ಕಾರವೇ ಮುಂದಾಗಿರುವುದು ಆತಂಕದ ವಿಚಾರ.

ಇದನ್ನೂ ಓದಿ : ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...