Homeಮುಖಪುಟಛತ್ತೀಸ್‌ಗಢ | 'ಹಸ್‌ದೇವ್ ಅರಣ್ಯ'ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಅದಾನಿ ಜೊತೆಗಿನ ಎರಡನೇ ಹಂತದ ಕಲ್ಲಿದ್ದಲು ಗಣಿಗಾರಿಕೆಗೆ ಅರಣ್ಯ ನಾಶ

- Advertisement -
- Advertisement -

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ ಬಳಿ ಮರಗಳನ್ನು ಕಡಿಯಲು ಸರ್ಕಾರ ಗುರುವಾರ ಮುಂದಾಗಿತ್ತು. ಇದಕ್ಕೆ ಸ್ಥಳೀಯ ಆದಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್‌ದೇವ್ ಅರಣ್ಯ ವ್ಯಾಪ್ತಿಯ ಆರು ಗ್ರಾಮಗಳ ಸುತ್ತಮುತ್ತಲಿನ ಸುಮಾರು 5,000 ಮರಗಳನ್ನು ಕಡಿಯಲು ನಿರ್ಧರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಗುರುವಾರ ಮರಗಳನ್ನು ಕಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುತ್ತಾರೆ ಎಂದು ತಿಳಿದ ಸ್ಥಳೀಯರು, ಬುಧವಾರ ರಾತ್ರಿಯಿಂದಲೇ ಉದ್ದೇಶಿತ ಮರ ಕಡಿಯುವ ಸ್ಥಳದಲ್ಲಿ ಜಮಾಯಿಸಿದ್ದರು. ಅವರನ್ನು ತಡೆಯಲು ಸುಮಾರು 400 ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳೀಯರು ದೊಣ್ಣೆ, ಕತ್ತಿ, ಬಾಣ ಮತ್ತು ಕೊಡಲಿಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂಬ ಆರೋಪವನ್ನು ಸುರ್ಗುಜಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್ ನಿರಾಕರಿಸಿದ್ದಾರೆ. “ಗ್ರಾಮಸ್ಥರು ಹಿಂಸಾತ್ಮಕವಾಗಿ ನಮ್ಮ ಮೇಲೆ ಹಲ್ಲೆ ನಡೆಸಿದರು. ಅವರನ್ನು ಎದುರಿಸಲು ಮತ್ತು ಸ್ಥಳದಿಂದ ಚದುರಿಸಲು ನಾವು ಪ್ರತಿಕ್ರಿಯಿಸಿದ್ದೇವೆ” ಎಂದಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಭೋಲಾರಾಮ್ ರಾಜ್‌ವಾಡೆ ಅವರ ಕಾಲಿಗೆ ಸ್ಥಳೀಯರು ಬಾಣ ಬಿಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಹಸ್‌ದೇವ್ ಅರಣ್ಯದಲ್ಲಿ ಪೊಲೀಸ್ ಬಲವನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಆದಿವಾಸಿಗಳ ಅರಣ್ಯ ಮತ್ತು ಭೂಮಿಯನ್ನು ಬಲವಂತವಾಗಿ ಕಬಳಿಸುವ ಪ್ರಯತ್ನವು ಆದಿವಾಸಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಸ್‌ದೇವ್ ಅರಣ್ಯದಲ್ಲಿ ಮರಗಳನ್ನು ಕಡಿಯದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸರ್ವಾನುಮತ ಎಂದರೆ ಅದಕ್ಕೆ ಬಿಜೆಪಿ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಅಧಿಕಾರಕ್ಕೆ ಬಂದ ತಕ್ಷಣ ಬಿಜೆಪಿ ನಿರ್ಣಯವನ್ನು ಮರೆತಿದೆ. ಹಸ್‌ದೇವ್‌ನ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ” ಎಂದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಶತಮಾನಗಳಿಂದ ಅರಣ್ಯಗಳ ಮಾಲೀಕರಾಗಿರುವ ಆದಿವಾಸಿಗಳನ್ನು ಅದಾನಿಯ ಗಣಿಗಾಗಿ ಹೊರಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಕಲ್ಲಿದ್ದಲು ಗಣಿಗಾರಿಕೆ? 

ದಶಕದ ಹಿಂದೆ ಹಸ್‌ದೇವ್ ಅರಣ್ಯದಲ್ಲಿ ಸುಮಾರು 5 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪವಿದೆ ಎಂಬ ಮಾಹಿತಿ ಬಯಲಾಗಿತ್ತು. ಆಗಲೇ ಅದಾನಿಯಂತಹ ಕಂಪನಿಗಳ ಕಣ್ಣು ದಟ್ಟ ಅರಣ್ಯದ ಮೇಲೆ ಬಿದ್ದಿತ್ತು. ಅಂದುಕೊಂಡಂತೆ ಅರಣ್ಯ ಪ್ರದೇಶದಲ್ಲಿ ಸುಮಾರು 23 ಕಲ್ಲಿದ್ದಲು ಗಣಿಗಳು ಪ್ರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಈ ಪೈಕಿ ಐದು ಗಣಿಗಳು ಈಗಾಗಲೇ ಕಾರ್ಯ ನಿರ್ವಹಣೆಯ ವಿವಿಧ ಹಂತಗಳಲ್ಲಿವೆ.

2023ರಲ್ಲಿ ಹಸ್‌ದೇವ್ ಅರಣ್ಯದ ಮಧ್ಯದಲ್ಲಿ ಒಂದು ಗಣಿಯು ಕಾರ್ಯಾರಂಭ ಮಾಡಿದೆ. ಅದಕ್ಕೆ ಪಾರ್ಸಾ ಈಸ್ಟ್ ಕೇಟೆ ಬಸನ್ (ಪಿಇಕೆಬಿ) ಎಂದು ಹೆಸರಿಸಲಾಗಿದೆ. ರಾಜಸ್ಥಾನ ರಾಜ್ಯ ಸರ್ಕಾರದ ವಿದ್ಯುತ್ ಉತ್ಪಾದನಾ ಕಂಪನಿಯಾದ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RVUNL) ಒಡೆತನ ಈ ಗಣಿಯಿಂದ ಕಲ್ಲಿದ್ದಲು ತೆಗೆಯುವ ಪ್ರಕ್ರಿಯೆಯನ್ನು ಅದಾನಿ ಕಂಪನಿಗೆ ಕೊಡಲಾಗಿದೆ. ಹೆಸರಿಗೆ ರಾಜಸ್ತಾನ ವಿದ್ಯುತ್ ನಿಗಮದ ಒಡೆತನ ಮಾಲೀಕತ್ವ ಇದ್ದರೂ, ಗಣಿಗಾರಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ಅದಾನಿ ಕಂಪನಿ ಮಾಡುತ್ತಿದೆ. 2026ರ ಹೊತ್ತಿಗೆ ಈ ಗಣಿಯ ಕಲ್ಲಿದ್ದಲು ಮುಗಿಯುವ ಸಾಧ್ಯತೆ ಇದೆ.

2020ರಲ್ಲಿ, ರಾಜಸ್ಥಾನ ವಿದ್ಯುತ್ ನಿಗಮ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಪಿಇಕೆಬಿಯಲ್ಲಿ ಕಲ್ಲಿದ್ದಲು ವೇಗವಾಗಿ ಕ್ಷೀಣಿಸುತ್ತಿದೆ. ಹಾಗಾಗಿ, ಎರಡನೇ ಹಂತದ ಗಣಿಗಾರಿಕೆ ಆರಂಭಕ್ಕೆ ಅನುಮೋದನೆ ಕೋರಿತ್ತು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ 2022ರಲ್ಲಿ ಎರಡನೇ ಹಂತದ ಗಣಿಗಾರಿಕೆಗೆ ಅನುಮೋದನೆ ನೀಡಲಾಗಿದೆ. ಈಗ ಗಣಿಗಾರಿಕೆ ಪ್ರಾರಂಭಿಸಲು ಮರಗಳನ್ನು ಕಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳಿದ್ದಂತೆ ಉತ್ತರ ಭಾರತದಲ್ಲಿ ಹಸ್‌ದೇವ್ ಅರಣ್ಯವಿದೆ. ಅದನ್ನು ಉತ್ತರದ ‘ಶ್ವಾಸಕೋಸ’ ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆದಿವಾಸಿಗಳು ಮತ್ತು ಸಾವಿರಾರು ವನ್ಯ ಜೀವಿಗಳ ನೆಲೆಯಾಗಿರುವ ಈ ಅರಣ್ಯವನ್ನು ಆದಿವಾಸಿಗಳು ‘ಪೂಜ್ಯನೀಯವಾಗಿ’ ಕಾಣುತ್ತಾರೆ. ಅಂತಹ ಅರಣ್ಯದ ನಾಶಕ್ಕೆ ಸರ್ಕಾರವೇ ಮುಂದಾಗಿರುವುದು ಆತಂಕದ ವಿಚಾರ.

ಇದನ್ನೂ ಓದಿ : ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...