Homeಮುಖಪುಟಛತ್ತೀಸ್‌ಗಢ | 'ಹಸ್‌ದೇವ್ ಅರಣ್ಯ'ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಅದಾನಿ ಜೊತೆಗಿನ ಎರಡನೇ ಹಂತದ ಕಲ್ಲಿದ್ದಲು ಗಣಿಗಾರಿಕೆಗೆ ಅರಣ್ಯ ನಾಶ

- Advertisement -
- Advertisement -

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ ಬಳಿ ಮರಗಳನ್ನು ಕಡಿಯಲು ಸರ್ಕಾರ ಗುರುವಾರ ಮುಂದಾಗಿತ್ತು. ಇದಕ್ಕೆ ಸ್ಥಳೀಯ ಆದಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್‌ದೇವ್ ಅರಣ್ಯ ವ್ಯಾಪ್ತಿಯ ಆರು ಗ್ರಾಮಗಳ ಸುತ್ತಮುತ್ತಲಿನ ಸುಮಾರು 5,000 ಮರಗಳನ್ನು ಕಡಿಯಲು ನಿರ್ಧರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಗುರುವಾರ ಮರಗಳನ್ನು ಕಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುತ್ತಾರೆ ಎಂದು ತಿಳಿದ ಸ್ಥಳೀಯರು, ಬುಧವಾರ ರಾತ್ರಿಯಿಂದಲೇ ಉದ್ದೇಶಿತ ಮರ ಕಡಿಯುವ ಸ್ಥಳದಲ್ಲಿ ಜಮಾಯಿಸಿದ್ದರು. ಅವರನ್ನು ತಡೆಯಲು ಸುಮಾರು 400 ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳೀಯರು ದೊಣ್ಣೆ, ಕತ್ತಿ, ಬಾಣ ಮತ್ತು ಕೊಡಲಿಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂಬ ಆರೋಪವನ್ನು ಸುರ್ಗುಜಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್ ನಿರಾಕರಿಸಿದ್ದಾರೆ. “ಗ್ರಾಮಸ್ಥರು ಹಿಂಸಾತ್ಮಕವಾಗಿ ನಮ್ಮ ಮೇಲೆ ಹಲ್ಲೆ ನಡೆಸಿದರು. ಅವರನ್ನು ಎದುರಿಸಲು ಮತ್ತು ಸ್ಥಳದಿಂದ ಚದುರಿಸಲು ನಾವು ಪ್ರತಿಕ್ರಿಯಿಸಿದ್ದೇವೆ” ಎಂದಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಭೋಲಾರಾಮ್ ರಾಜ್‌ವಾಡೆ ಅವರ ಕಾಲಿಗೆ ಸ್ಥಳೀಯರು ಬಾಣ ಬಿಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಹಸ್‌ದೇವ್ ಅರಣ್ಯದಲ್ಲಿ ಪೊಲೀಸ್ ಬಲವನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಆದಿವಾಸಿಗಳ ಅರಣ್ಯ ಮತ್ತು ಭೂಮಿಯನ್ನು ಬಲವಂತವಾಗಿ ಕಬಳಿಸುವ ಪ್ರಯತ್ನವು ಆದಿವಾಸಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಸ್‌ದೇವ್ ಅರಣ್ಯದಲ್ಲಿ ಮರಗಳನ್ನು ಕಡಿಯದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸರ್ವಾನುಮತ ಎಂದರೆ ಅದಕ್ಕೆ ಬಿಜೆಪಿ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಅಧಿಕಾರಕ್ಕೆ ಬಂದ ತಕ್ಷಣ ಬಿಜೆಪಿ ನಿರ್ಣಯವನ್ನು ಮರೆತಿದೆ. ಹಸ್‌ದೇವ್‌ನ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ” ಎಂದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಶತಮಾನಗಳಿಂದ ಅರಣ್ಯಗಳ ಮಾಲೀಕರಾಗಿರುವ ಆದಿವಾಸಿಗಳನ್ನು ಅದಾನಿಯ ಗಣಿಗಾಗಿ ಹೊರಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಕಲ್ಲಿದ್ದಲು ಗಣಿಗಾರಿಕೆ? 

ದಶಕದ ಹಿಂದೆ ಹಸ್‌ದೇವ್ ಅರಣ್ಯದಲ್ಲಿ ಸುಮಾರು 5 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪವಿದೆ ಎಂಬ ಮಾಹಿತಿ ಬಯಲಾಗಿತ್ತು. ಆಗಲೇ ಅದಾನಿಯಂತಹ ಕಂಪನಿಗಳ ಕಣ್ಣು ದಟ್ಟ ಅರಣ್ಯದ ಮೇಲೆ ಬಿದ್ದಿತ್ತು. ಅಂದುಕೊಂಡಂತೆ ಅರಣ್ಯ ಪ್ರದೇಶದಲ್ಲಿ ಸುಮಾರು 23 ಕಲ್ಲಿದ್ದಲು ಗಣಿಗಳು ಪ್ರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಈ ಪೈಕಿ ಐದು ಗಣಿಗಳು ಈಗಾಗಲೇ ಕಾರ್ಯ ನಿರ್ವಹಣೆಯ ವಿವಿಧ ಹಂತಗಳಲ್ಲಿವೆ.

2023ರಲ್ಲಿ ಹಸ್‌ದೇವ್ ಅರಣ್ಯದ ಮಧ್ಯದಲ್ಲಿ ಒಂದು ಗಣಿಯು ಕಾರ್ಯಾರಂಭ ಮಾಡಿದೆ. ಅದಕ್ಕೆ ಪಾರ್ಸಾ ಈಸ್ಟ್ ಕೇಟೆ ಬಸನ್ (ಪಿಇಕೆಬಿ) ಎಂದು ಹೆಸರಿಸಲಾಗಿದೆ. ರಾಜಸ್ಥಾನ ರಾಜ್ಯ ಸರ್ಕಾರದ ವಿದ್ಯುತ್ ಉತ್ಪಾದನಾ ಕಂಪನಿಯಾದ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RVUNL) ಒಡೆತನ ಈ ಗಣಿಯಿಂದ ಕಲ್ಲಿದ್ದಲು ತೆಗೆಯುವ ಪ್ರಕ್ರಿಯೆಯನ್ನು ಅದಾನಿ ಕಂಪನಿಗೆ ಕೊಡಲಾಗಿದೆ. ಹೆಸರಿಗೆ ರಾಜಸ್ತಾನ ವಿದ್ಯುತ್ ನಿಗಮದ ಒಡೆತನ ಮಾಲೀಕತ್ವ ಇದ್ದರೂ, ಗಣಿಗಾರಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ಅದಾನಿ ಕಂಪನಿ ಮಾಡುತ್ತಿದೆ. 2026ರ ಹೊತ್ತಿಗೆ ಈ ಗಣಿಯ ಕಲ್ಲಿದ್ದಲು ಮುಗಿಯುವ ಸಾಧ್ಯತೆ ಇದೆ.

2020ರಲ್ಲಿ, ರಾಜಸ್ಥಾನ ವಿದ್ಯುತ್ ನಿಗಮ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಪಿಇಕೆಬಿಯಲ್ಲಿ ಕಲ್ಲಿದ್ದಲು ವೇಗವಾಗಿ ಕ್ಷೀಣಿಸುತ್ತಿದೆ. ಹಾಗಾಗಿ, ಎರಡನೇ ಹಂತದ ಗಣಿಗಾರಿಕೆ ಆರಂಭಕ್ಕೆ ಅನುಮೋದನೆ ಕೋರಿತ್ತು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ 2022ರಲ್ಲಿ ಎರಡನೇ ಹಂತದ ಗಣಿಗಾರಿಕೆಗೆ ಅನುಮೋದನೆ ನೀಡಲಾಗಿದೆ. ಈಗ ಗಣಿಗಾರಿಕೆ ಪ್ರಾರಂಭಿಸಲು ಮರಗಳನ್ನು ಕಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳಿದ್ದಂತೆ ಉತ್ತರ ಭಾರತದಲ್ಲಿ ಹಸ್‌ದೇವ್ ಅರಣ್ಯವಿದೆ. ಅದನ್ನು ಉತ್ತರದ ‘ಶ್ವಾಸಕೋಸ’ ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆದಿವಾಸಿಗಳು ಮತ್ತು ಸಾವಿರಾರು ವನ್ಯ ಜೀವಿಗಳ ನೆಲೆಯಾಗಿರುವ ಈ ಅರಣ್ಯವನ್ನು ಆದಿವಾಸಿಗಳು ‘ಪೂಜ್ಯನೀಯವಾಗಿ’ ಕಾಣುತ್ತಾರೆ. ಅಂತಹ ಅರಣ್ಯದ ನಾಶಕ್ಕೆ ಸರ್ಕಾರವೇ ಮುಂದಾಗಿರುವುದು ಆತಂಕದ ವಿಚಾರ.

ಇದನ್ನೂ ಓದಿ : ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...