Homeಮುಖಪುಟಛತ್ತೀಸ್‌ಗಢ | 'ಹಸ್‌ದೇವ್ ಅರಣ್ಯ'ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಅದಾನಿ ಜೊತೆಗಿನ ಎರಡನೇ ಹಂತದ ಕಲ್ಲಿದ್ದಲು ಗಣಿಗಾರಿಕೆಗೆ ಅರಣ್ಯ ನಾಶ

- Advertisement -
- Advertisement -

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ ಬಳಿ ಮರಗಳನ್ನು ಕಡಿಯಲು ಸರ್ಕಾರ ಗುರುವಾರ ಮುಂದಾಗಿತ್ತು. ಇದಕ್ಕೆ ಸ್ಥಳೀಯ ಆದಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್‌ದೇವ್ ಅರಣ್ಯ ವ್ಯಾಪ್ತಿಯ ಆರು ಗ್ರಾಮಗಳ ಸುತ್ತಮುತ್ತಲಿನ ಸುಮಾರು 5,000 ಮರಗಳನ್ನು ಕಡಿಯಲು ನಿರ್ಧರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಗುರುವಾರ ಮರಗಳನ್ನು ಕಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುತ್ತಾರೆ ಎಂದು ತಿಳಿದ ಸ್ಥಳೀಯರು, ಬುಧವಾರ ರಾತ್ರಿಯಿಂದಲೇ ಉದ್ದೇಶಿತ ಮರ ಕಡಿಯುವ ಸ್ಥಳದಲ್ಲಿ ಜಮಾಯಿಸಿದ್ದರು. ಅವರನ್ನು ತಡೆಯಲು ಸುಮಾರು 400 ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳೀಯರು ದೊಣ್ಣೆ, ಕತ್ತಿ, ಬಾಣ ಮತ್ತು ಕೊಡಲಿಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂಬ ಆರೋಪವನ್ನು ಸುರ್ಗುಜಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್ ನಿರಾಕರಿಸಿದ್ದಾರೆ. “ಗ್ರಾಮಸ್ಥರು ಹಿಂಸಾತ್ಮಕವಾಗಿ ನಮ್ಮ ಮೇಲೆ ಹಲ್ಲೆ ನಡೆಸಿದರು. ಅವರನ್ನು ಎದುರಿಸಲು ಮತ್ತು ಸ್ಥಳದಿಂದ ಚದುರಿಸಲು ನಾವು ಪ್ರತಿಕ್ರಿಯಿಸಿದ್ದೇವೆ” ಎಂದಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಭೋಲಾರಾಮ್ ರಾಜ್‌ವಾಡೆ ಅವರ ಕಾಲಿಗೆ ಸ್ಥಳೀಯರು ಬಾಣ ಬಿಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಹಸ್‌ದೇವ್ ಅರಣ್ಯದಲ್ಲಿ ಪೊಲೀಸ್ ಬಲವನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಆದಿವಾಸಿಗಳ ಅರಣ್ಯ ಮತ್ತು ಭೂಮಿಯನ್ನು ಬಲವಂತವಾಗಿ ಕಬಳಿಸುವ ಪ್ರಯತ್ನವು ಆದಿವಾಸಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಸ್‌ದೇವ್ ಅರಣ್ಯದಲ್ಲಿ ಮರಗಳನ್ನು ಕಡಿಯದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸರ್ವಾನುಮತ ಎಂದರೆ ಅದಕ್ಕೆ ಬಿಜೆಪಿ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಅಧಿಕಾರಕ್ಕೆ ಬಂದ ತಕ್ಷಣ ಬಿಜೆಪಿ ನಿರ್ಣಯವನ್ನು ಮರೆತಿದೆ. ಹಸ್‌ದೇವ್‌ನ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ” ಎಂದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಶತಮಾನಗಳಿಂದ ಅರಣ್ಯಗಳ ಮಾಲೀಕರಾಗಿರುವ ಆದಿವಾಸಿಗಳನ್ನು ಅದಾನಿಯ ಗಣಿಗಾಗಿ ಹೊರಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಕಲ್ಲಿದ್ದಲು ಗಣಿಗಾರಿಕೆ? 

ದಶಕದ ಹಿಂದೆ ಹಸ್‌ದೇವ್ ಅರಣ್ಯದಲ್ಲಿ ಸುಮಾರು 5 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪವಿದೆ ಎಂಬ ಮಾಹಿತಿ ಬಯಲಾಗಿತ್ತು. ಆಗಲೇ ಅದಾನಿಯಂತಹ ಕಂಪನಿಗಳ ಕಣ್ಣು ದಟ್ಟ ಅರಣ್ಯದ ಮೇಲೆ ಬಿದ್ದಿತ್ತು. ಅಂದುಕೊಂಡಂತೆ ಅರಣ್ಯ ಪ್ರದೇಶದಲ್ಲಿ ಸುಮಾರು 23 ಕಲ್ಲಿದ್ದಲು ಗಣಿಗಳು ಪ್ರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಈ ಪೈಕಿ ಐದು ಗಣಿಗಳು ಈಗಾಗಲೇ ಕಾರ್ಯ ನಿರ್ವಹಣೆಯ ವಿವಿಧ ಹಂತಗಳಲ್ಲಿವೆ.

2023ರಲ್ಲಿ ಹಸ್‌ದೇವ್ ಅರಣ್ಯದ ಮಧ್ಯದಲ್ಲಿ ಒಂದು ಗಣಿಯು ಕಾರ್ಯಾರಂಭ ಮಾಡಿದೆ. ಅದಕ್ಕೆ ಪಾರ್ಸಾ ಈಸ್ಟ್ ಕೇಟೆ ಬಸನ್ (ಪಿಇಕೆಬಿ) ಎಂದು ಹೆಸರಿಸಲಾಗಿದೆ. ರಾಜಸ್ಥಾನ ರಾಜ್ಯ ಸರ್ಕಾರದ ವಿದ್ಯುತ್ ಉತ್ಪಾದನಾ ಕಂಪನಿಯಾದ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RVUNL) ಒಡೆತನ ಈ ಗಣಿಯಿಂದ ಕಲ್ಲಿದ್ದಲು ತೆಗೆಯುವ ಪ್ರಕ್ರಿಯೆಯನ್ನು ಅದಾನಿ ಕಂಪನಿಗೆ ಕೊಡಲಾಗಿದೆ. ಹೆಸರಿಗೆ ರಾಜಸ್ತಾನ ವಿದ್ಯುತ್ ನಿಗಮದ ಒಡೆತನ ಮಾಲೀಕತ್ವ ಇದ್ದರೂ, ಗಣಿಗಾರಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ಅದಾನಿ ಕಂಪನಿ ಮಾಡುತ್ತಿದೆ. 2026ರ ಹೊತ್ತಿಗೆ ಈ ಗಣಿಯ ಕಲ್ಲಿದ್ದಲು ಮುಗಿಯುವ ಸಾಧ್ಯತೆ ಇದೆ.

2020ರಲ್ಲಿ, ರಾಜಸ್ಥಾನ ವಿದ್ಯುತ್ ನಿಗಮ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಪಿಇಕೆಬಿಯಲ್ಲಿ ಕಲ್ಲಿದ್ದಲು ವೇಗವಾಗಿ ಕ್ಷೀಣಿಸುತ್ತಿದೆ. ಹಾಗಾಗಿ, ಎರಡನೇ ಹಂತದ ಗಣಿಗಾರಿಕೆ ಆರಂಭಕ್ಕೆ ಅನುಮೋದನೆ ಕೋರಿತ್ತು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ 2022ರಲ್ಲಿ ಎರಡನೇ ಹಂತದ ಗಣಿಗಾರಿಕೆಗೆ ಅನುಮೋದನೆ ನೀಡಲಾಗಿದೆ. ಈಗ ಗಣಿಗಾರಿಕೆ ಪ್ರಾರಂಭಿಸಲು ಮರಗಳನ್ನು ಕಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳಿದ್ದಂತೆ ಉತ್ತರ ಭಾರತದಲ್ಲಿ ಹಸ್‌ದೇವ್ ಅರಣ್ಯವಿದೆ. ಅದನ್ನು ಉತ್ತರದ ‘ಶ್ವಾಸಕೋಸ’ ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆದಿವಾಸಿಗಳು ಮತ್ತು ಸಾವಿರಾರು ವನ್ಯ ಜೀವಿಗಳ ನೆಲೆಯಾಗಿರುವ ಈ ಅರಣ್ಯವನ್ನು ಆದಿವಾಸಿಗಳು ‘ಪೂಜ್ಯನೀಯವಾಗಿ’ ಕಾಣುತ್ತಾರೆ. ಅಂತಹ ಅರಣ್ಯದ ನಾಶಕ್ಕೆ ಸರ್ಕಾರವೇ ಮುಂದಾಗಿರುವುದು ಆತಂಕದ ವಿಚಾರ.

ಇದನ್ನೂ ಓದಿ : ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...