Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...