Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....