Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....